Homeಮುಖಪುಟರೈತರ ಹೋರಾಟವನ್ನು ಇಡೀ ದೇಶ ಇಂದು ಹೆಮ್ಮೆಯಿಂದ ಸ್ಮರಿಸುತ್ತಿದೆ: ಸಿದ್ದರಾಮಯ್ಯ

ರೈತರ ಹೋರಾಟವನ್ನು ಇಡೀ ದೇಶ ಇಂದು ಹೆಮ್ಮೆಯಿಂದ ಸ್ಮರಿಸುತ್ತಿದೆ: ಸಿದ್ದರಾಮಯ್ಯ

ನಮ್ಮ ರೈತರು ತಾವೂ ಗೆದ್ದು ಬಾಬಾ ಸಾಹೇಬರ ಸಂವಿಧಾನವನ್ನು ಮತ್ತು ಮಹಾತ್ಮ ಗಾಂಧಿಯವರ ಅಹಿಂಸಾತ್ಮಕ ಹೋರಾಟದ ಮಾದರಿಯನ್ನೂ ಗೆಲ್ಲಿಸಿದ್ದಾರೆ ಮತ್ತು ಜೀವಂತಗೊಳಿಸಿದ್ದಾರೆ.

- Advertisement -
- Advertisement -

ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಜನದ್ರೋಹಿಯಾದ ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆಯುವುದಾಗಿ ಹೇಳಿದ್ದಾರೆ. ಹಾಗಾಗಿ ರೈತರ ಹೋರಾಟವನ್ನು ಇಡೀ ದೇಶ ಇಂದು ಹೆಮ್ಮೆಯಿಂದ ಸ್ಮರಿಸುತ್ತಿದೆ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ.

ರೈತರ ದೀರ್ಘವಾದ ಹೋರಾಟಕ್ಕೆ ತಾತ್ಕಾಲಿಕ ಗೆಲವು ಲಭಿಸಿದೆ. ಇದು ತಾತ್ಕಾಲಿಕ ಗೆಲುವು ಯಾಕೆಂದರೆ ಕೇಂದ್ರ ಮತ್ತು ಹಲವು ರಾಜ್ಯಗಳಲ್ಲಿ ಚುನಾವಣೆಗಳ ಅಗ್ನಿ ಪರೀಕ್ಷೆ ಎದುರಾಗುತ್ತಿದೆ. ಹಿಟ್ಲರ್ ಶಾಹಿ ಆಡಳಿತ ಮಾಡಿದರೆ ಚುನಾವಣೆಗಳಲ್ಲಿ ನಾವು ಚಿಂದಿಯಾಗಿ ಹೋಗುತ್ತೇವೆ ಎಂದು ಮೋದಿ ಮತ್ತು ಅಮಿತ್ ಶಾ ಅವರಿಗೆ ಬಹುಶಃ ಇಂಟೆಲಿಜೆನ್ಸ್ ಮಾಹಿತಿ ದೊರೆತಿದೆ. ಹಾಗಾಗಿ ಚುನಾವಣೆಗಳು ಮುಗಿಯಲಿ ಆಮೇಲೆ ನೋಡೋಣ ಎಂದು ರೈತ ದ್ರೋಹಿ ಕಾಯ್ದೆಗಳನ್ನು ತಾತ್ಕಾಲಿಕವಾಗಿ ವಾಪಸ್ಸು ಪಡೆದಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯನವರು, “ಇವರು ಆಡಳಿತ ನಡೆಸುವುದು ಅಂಬಾನಿ, ಅದಾನಿ ಮುಂತಾದವರ ಹಿತಾಸಕ್ತಿಗೆ ಮಾತ್ರ ಆಗಿರುವುದರಿಂದ ಅವರ ಹಿತಾಸಕ್ತಿಯನ್ನು ರಕ್ಷಿಸುವುದು ಮೋದಿ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ರೈತ ದ್ರೋಹಿಯಾದ ಕಾನೂನುಗಳನ್ನು ವಾಪಸ್ಸು ಪಡೆದರೆ ಅಂಬಾನಿ, ಅದಾನಿ, ಧಮಾನಿ ಮುಂತಾದವರು ತುಸು ಬೇಜಾರು ಮಾಡಿಕೊಳ್ಳುತ್ತಾರೆ. ಹಾಗಾಗಿ ತಾತ್ಕಾಲಿಕವಾಗಿ ಹಿಂತೆಗೆದಂತೆ ಮಾಡಿ ಮತ್ತೆ ಇದಕ್ಕಿಂತಲೂ ಘೋರವಾದ ಕಾಯ್ದೆಗಳನ್ನು ದೇಶದ ಮೇಲೆ ಹೇರುತ್ತಾರೆ. ಈ ಕುರಿತು ದೇಶವಾಸಿಗಳು, ಅದರಲ್ಲೂ ರೈತರು ವಿಶೇಷ ಎಚ್ಚರಿಕೆ ವಹಿಸಬೇಕು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ನಮ್ಮ ಹೆಮ್ಮೆಯ ರೈತರು ತಾವೂ ಗೆದ್ದು ದೇಶವನ್ನೂ ತುಸು ಮಟ್ಟಿಗೆ ಗೆಲ್ಲಿಸಿದ್ದಾರೆ. ಈ ದೇಶದ್ರೋಹಿ ಕಾನೂನುಗಳನ್ನು ದೇಶದ ಜನರ ಮೇಲೆ ಹೇರಿದಾಗಿನಿಂದಲೂ ಈ ಕಾನೂನುಗಳು ರೈತರ ವಿರೋಧಿಗಳು ಮಾತ್ರವಲ್ಲ, ಇವು ನಗರ, ಪಟ್ಟಣಗಳ ಬಡವರು, ಮಧ್ಯಮ ವರ್ಗದವರನ್ನು ನಾಶ ಮಾಡುವ ಕಾನೂನುಗಳು. ದೇಶದ ಕೃಷಿ ಅಂಬಾನಿ, ಅದಾನಿಗಳ ಕೈಗೆ ಹೋದರೆ, ಅವರು ಮೊನೊಪಲಿ ಸಾಧಿಸಿ ದೇಶದ ಜನರನ್ನು, ಅವರ ಆರ್ಥಿಕತೆಯನ್ನು ನಾಶ ಮಾಡಿ ಬಿಡುತ್ತಾರೆಂದು ನಾನು ಹೇಳುತ್ತಾ ಬಂದಿದ್ದೆ. ಇದರ ಜೊತೆಗೆ ರೈತ ಹೋರಾಟವನ್ನು ಬೆಂಬಲಿಸಿ ಎಂದು ಮನವಿ ಮಾಡಿದ್ದೆ. ಅದಕ್ಕಾಗಿ ಹಲವು ಮನವಿ ಪತ್ರಗಳನ್ನು ಬರೆದು ರಾಜ್ಯದ ಜನರ ಮುಂದೆ ಇಟ್ಟಿದ್ದೆ. ಹಾಗೂ“ ಬಿಜೆಪಿ ಸರ್ಕಾರಗಳ ಐದು ಕಾಯ್ದೆಗಳು; ಅಸಂಖ್ಯಾತ ಸುಳ್ಳುಗಳು” ಎಂಬ ಕಿರು ಪುಸ್ತಕ ಬರೆದು ಜನರ ಮುಂದೆ ಇಟ್ಟಿದ್ದೆ ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟದ ನಂತರ ಅಹಿಂಸೆಯ ಮಾರ್ಗದಲ್ಲಿ ನಡೆದ ಬೃಹತ್ ಹೋರಾಟವನ್ನು ನಮ್ಮ ರೈತರು ಚಳಿ, ಮಳೆ, ಸುಡುವ ಬಿಸಿಲು, ಕೊಲೆಗಡುಕ ಕೊರೋನ ಎಲ್ಲವನ್ನು ನಿಗ್ರಹಿಸಿ ದೇಶದ ಜನರಿಗೆ ಹೋರಾಟ ಮತ್ತು ಗೆಲುವಿನ ಮಹತ್ವವೇನು ಎಂದು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಹೋರಾಟದಲ್ಲಿ ಅಪಾರ ಸಾವು ನೋವುಗಳು ಸಂಭವಿಸಿವೆ. 700 ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಶಾಂತಿಯುತವಾಗಿ ಹೋರಾಟ ಮಾಡುತ್ತಿದ್ದ ರೈತರ ಮೇಲೆ ಗುಂಡು ಹಾರಿಸಿ, ವಾಹನಗಳನ್ನು ನುಗ್ಗಿಸಿ ಕೊಲ್ಲಲಾಯಿತು. ಪೋಲೀಸ್ ಮುಂತಾದ ಶಕ್ತಿಗಳನ್ನು ಬಳಸಿ ದಮನಿಸಲು ಪ್ರಯತ್ನಿಸಲಾಯಿತು. ಆದರೂ ಕೂಡ ರೈತರು ಉಕ್ಕಿನಂತೆ ನಿಂತು ಸರ್ವಾಧಿಕಾರಿ ಪ್ರಭುತ್ವವನ್ನು ಸೋಲಿಸಿದ್ದಾರೆ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ನಮ್ಮ ರೈತರು ತಾವೂ ಗೆದ್ದು ಬಾಬಾ ಸಾಹೇಬರ ಸಂವಿಧಾನವನ್ನು ಮತ್ತು ಮಹಾತ್ಮ ಗಾಂಧಿಯವರ ಅಹಿಂಸಾತ್ಮಕ ಹೋರಾಟದ ಮಾದರಿಯನ್ನೂ ಗೆಲ್ಲಿಸಿದ್ದಾರೆ ಮತ್ತು ಜೀವಂತಗೊಳಿಸಿದ್ದಾರೆ. ಇದರ ಮೂಲಕ ಸರ್ವಾಧಿಕಾರದ ಹಿಟ್ಲರ್ ಗಿರಿಯನ್ನು ಸೋಲಿಸಿ ಪ್ರಜಾಪ್ರಭುತ್ವವನ್ನು ಗೆಲ್ಲಿಸಿದ್ದಾರೆ. ಈ ದೃಷ್ಟಿಯಿಂದಲೂ ರೈತರು ನಡೆಸಿದ ಹೋರಾಟ ಅವಿಸ್ಮರಣೀಯವಾಗಿದೆ ಎಂದು ಹೇಳಿದ್ದಾರೆ.

ಇಷ್ಟೆಲ್ಲ ಆದರೂ ಹೋರಾಟವಿನ್ನೂ ಮುಗಿದಿಲ್ಲ ಎಂದು ಜನರಿಗೆ ಗೊತ್ತಿದೆ. ಯಾಕೆಂದರೆ ಪ್ರಧಾನಿ ಮೋದಿಯವರು “ ಕಾಯ್ದೆಗಳು ಸರಿಯಾಗಿದ್ದವು, ಆದರೆ ಅವುಗಳನ್ನು ಅರ್ಥಮಾಡಿಸುವಲ್ಲಿ ಸೋತೆವು ಎಂದು ಹೇಳಿದ್ದಾರೆ”. ತಾವು ಕೆಟ್ಟ ಮತ್ತು ಜನದ್ರೋಹಿಯಾದ ಕಾಯ್ದೆಗಳನ್ನು ತಂದಿದ್ದೆವು ಎಂದು ಅವರಿಗೆ ಗೊತ್ತಿದ್ದರೂ ಈ ಮಾತುಗಳನ್ನು ಹೇಳಿದ್ದಾರೆ. ಹಾಗಾಗಿ ಕಾಯ್ದೆಗಳ ಹಿಂತೆಗೆತವೆಂಬುದು ತಾತ್ಕಾಲಿಕ ಎನ್ನಿಸುತ್ತಿದೆ. ಈಗ ನಾವು ಒತ್ತಾಯಿಸಬೇಕಿರುವುದು ಕೂಡಲೆ ಸ್ವಾಮಿನಾಥನ್ ಅವರ ವರದಿಯನ್ನು ಅಂಗೀಕರಿಸಿ ವೈಜ್ಞಾನಿಕ ಬೆಲೆಗಳನ್ನು ಜಾರಿಗೊಳಿಸಬೇಕು. ನಾನು ಹಿಂದಿನಿಂದಲೂ ಒತ್ತಾಯಿಸುತ್ತಾ ಬಂದಿರುವ ವಿಚಾರವನ್ನು ಈಗಲೂ ಒತ್ತಾಯಿಸುತ್ತೇನೆ. ರೈತರು ಬೆಳೆವ ಪ್ರತಿ ಉತ್ಪನ್ನಕ್ಕೂ ವೈಜ್ಞಾನಿಕ ಬೆಲೆ ನಿಗಧಿಗೊಳಿಸಿ ಆ ಬೆಲೆಗಳನ್ನು ಕಾನೂನುಬದ್ಧಗೊಳಿಸಬೇಕು. ಸರ್ಕಾರ ನಿಗಧಿಗೊಳಿಸಿದ ಬೆಲೆಗಳಿಗಿಂತ ಕಡಿಮೆ ದರಕ್ಕೆ ಕೊಳ್ಳುವುದನ್ನು ನಿರ್ಬಂದಿಸಬೇಕು ಅವರು ಒತ್ತಾಯಿಸಿದ್ದಾರೆ.

ವೈಜ್ಞಾನಿಕ ದರವು ಕೊಳ್ಳುವ ಗ್ರಾಹಕರಿಗೂ ಅನ್ವಯಿಸಬೇಕು. ಅದಾನಿ, ಅಂಬಾನಿ, ದಮಾನಿ ಮುಂತಾದ ಬೃಹತ್ ಕಾರ್ಪೊರೇಟ್ ಮಧ್ಯವರ್ತಿಗಳನ್ನು ಮುಲಾಜಿಲ್ಲದೆ ನಿರ್ಬಂಧಿಸಬೇಕು. ಇವರೆಲ್ಲ ರೈತನಿಂದ 10 ರೂಪಾಯಿಗೆ ಕೊಂಡು ಗ್ರಾಹಕರಿಗೆ 100 ರೂಪಾಯಿಗೆ ಮಾರುವ ಜನ. ಇಂಥ ದರ ಪದ್ಧತಿಯನ್ನು ಕಾನೂನಾತ್ಮಕವಾಗಿ ನಿಷೇಧಿಸಬೇಕು. ರೈತರು ಮತ್ತು ಗ್ರಾಹಕರನ್ನು ಒಂದೆ ವೇದಿಕೆಗೆ ತರುವ ವ್ಯವಸ್ಥೆಗಳನ್ನು ರೂಪಿಸಬೇಕು. ಹೋಬಳಿ, ದೊಡ್ಡ ಗ್ರಾಮ ಪಂಚಾಯತ್ ಕೇಂದ್ರಗಳಲ್ಲೂ ಎಪಿಎಂಸಿ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ರೈತರು ಬಳಸುವ ಬೀಜ, ಗೊಬ್ಬರ, ಔಷಧ ಮುಂತಾದವುಗಳ ವ್ಯಸ್ಥೆಯನ್ನು ಬಹುರಾಷ್ಟ್ರೀಯ ಕಂಪೆನಿಗಳ ಕಪಿ ಮುಷ್ಟಿಯಿಂದ ಬಿಡಿಸಿ ಆರೋಗ್ಯಕರವಾದ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೂಡಲೆ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ನಿಯಂತ್ರಿಸಿ ಕೇಂದ್ರ ಸರ್ಕಾರ ಅಡಿಷನಲ್ ಎಕ್ಸೈಜ್ ಡ್ಯೂಟಿಯ ಮೂಲಕ ಲೂಟಿ ಮಾಡುತ್ತಿರುವುದನ್ನು ಈ ಕೂಡಲೆ ನಿಲ್ಲಿಸಬೇಕು. ತೆರಿಗೆ ರಹಿತವಾಗಿ ಸರಬರಾಜು ಮಾಡಬೇಕು. ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವು ಖಾಸಗೀಕರಿಸಲು ಹೊರಟಿರುವ ವಿದ್ಯುತ್, ಇಂಧನ, ಕಲ್ಲಿದ್ದಲು ಮುಂತಾದ ರಾಷ್ಟ್ರದ ಹಿತಾಸಕ್ತಿಯನ್ನು ಕಾಪಾಡುವ ಯಾವುದೇ ರಂಗವನ್ನು ಖಾಸಗೀಕರಣಗೊಳಿಸುವುದನ್ನು ನಿಲ್ಲಿಸಬೇಕು.

ಮೋದಿಯವರು ಕೇವಲ ಬಾಯಿ ಮಾತಿನಲ್ಲಿ ಹೇಳದೆ, ಕೂಡಲೆ ಆದೇಶಗಳನ್ನು ಹೊರಡಿಸಿ ವಾಪಸ್ಸು ಪಡೆಯಬೇಕು. ಹುತಾತ್ಮ ರೈತರ ಕುಟುಂಬಗಳಿಗೆ ದೇಶ ಕಾಯುವ ಯೋಧರು ಹುತಾತ್ಮರಾದಾಗ ನೀಡುವ ಎಲ್ಲ ಸವಲತ್ತುಗಳನ್ನು ನೀಡಬೇಕು. ಮುಖ್ಯವಾಗಿ ಯೋಧರಿಗೆ ನೀಡಿದಷ್ಟೆ ಪರಿಹಾರ ನೀಡಬೇಕು. ಹುತಾತ್ಮರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಅವರ ಮಕ್ಕಳ ಶಿಕ್ಷಣವನ್ನು ಸರ್ಕಾರವೆ ನೋಡಿಕೊಳ್ಳಬೇಕು. ವೃದ್ಧ ತಂದೆ ತಾಯಿಗಳಿದ್ದರೆ ಅವರನ್ನು ಸರ್ಕಾರವೆ ಪೋಷಿಸಬೇಕು. ರೈತರನ್ನು, ಪ್ರತಿಭಟನಾಕಾರರನ್ನು, ವಿರೋಧ ಪಕ್ಷಗಳನ್ನು ಆಂದೋಲನ ಜೀವಿಗಳೆಂದು, ದೇಶದ್ರೋಹಿಗಳೆಂದು ಅಣಕಿಸಿದ ಬಿಜೆಪಿ ಸರ್ಕಾರಗಳು, ಬಿಜೆಪಿಯ ಮುಖಂಡರುಗಳು ದೇಶದ ಮುಂದೆ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

ಕರ್ನಾಟಕ ರಾಜ್ಯದ ಬಿಜೆಪಿ ಸರ್ಕಾರವು ಜಾರಿಗೆ ತಂದಿರುವ ರೈತದ್ರೋಹಿಯಾದ ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗಳನ್ನು ರದ್ದು ಮಾಡಬೇಕು. ಜಾನುವಾರು ಹತ್ಯಾ ಪ್ರತಿಬಂಧಕ ಕಾಯ್ದೆಗಳನ್ನು ಕೂಡಲೆ ಹಿಂಪಡೆಯಬೇಕೆದು ಆಗ್ರಹಿಸುತ್ತೇನೆ ಎಂದು  ಸಿದ್ದರಾಮಯ್ಯ ತಿಳಿಸಿದ್ದಾರೆ.


ಇದನ್ನೂ ಓದಿ: ಬರೆದಿಟ್ಟುಕೊಳ್ಳಿ, ಒತ್ತಾಯದಿಂದ ಈ ಕಾಯ್ದೆಗಳನ್ನು ಸರ್ಕಾರ ವಾಪಸ್ ಪಡೆಯುತ್ತದೆ: ರಾಹುಲ್ ಗಾಂಧಿ ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...