Homeಮುಖಪುಟರೈತರ ಹೋರಾಟವನ್ನು ಇಡೀ ದೇಶ ಇಂದು ಹೆಮ್ಮೆಯಿಂದ ಸ್ಮರಿಸುತ್ತಿದೆ: ಸಿದ್ದರಾಮಯ್ಯ

ರೈತರ ಹೋರಾಟವನ್ನು ಇಡೀ ದೇಶ ಇಂದು ಹೆಮ್ಮೆಯಿಂದ ಸ್ಮರಿಸುತ್ತಿದೆ: ಸಿದ್ದರಾಮಯ್ಯ

ನಮ್ಮ ರೈತರು ತಾವೂ ಗೆದ್ದು ಬಾಬಾ ಸಾಹೇಬರ ಸಂವಿಧಾನವನ್ನು ಮತ್ತು ಮಹಾತ್ಮ ಗಾಂಧಿಯವರ ಅಹಿಂಸಾತ್ಮಕ ಹೋರಾಟದ ಮಾದರಿಯನ್ನೂ ಗೆಲ್ಲಿಸಿದ್ದಾರೆ ಮತ್ತು ಜೀವಂತಗೊಳಿಸಿದ್ದಾರೆ.

- Advertisement -
- Advertisement -

ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಜನದ್ರೋಹಿಯಾದ ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆಯುವುದಾಗಿ ಹೇಳಿದ್ದಾರೆ. ಹಾಗಾಗಿ ರೈತರ ಹೋರಾಟವನ್ನು ಇಡೀ ದೇಶ ಇಂದು ಹೆಮ್ಮೆಯಿಂದ ಸ್ಮರಿಸುತ್ತಿದೆ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ.

ರೈತರ ದೀರ್ಘವಾದ ಹೋರಾಟಕ್ಕೆ ತಾತ್ಕಾಲಿಕ ಗೆಲವು ಲಭಿಸಿದೆ. ಇದು ತಾತ್ಕಾಲಿಕ ಗೆಲುವು ಯಾಕೆಂದರೆ ಕೇಂದ್ರ ಮತ್ತು ಹಲವು ರಾಜ್ಯಗಳಲ್ಲಿ ಚುನಾವಣೆಗಳ ಅಗ್ನಿ ಪರೀಕ್ಷೆ ಎದುರಾಗುತ್ತಿದೆ. ಹಿಟ್ಲರ್ ಶಾಹಿ ಆಡಳಿತ ಮಾಡಿದರೆ ಚುನಾವಣೆಗಳಲ್ಲಿ ನಾವು ಚಿಂದಿಯಾಗಿ ಹೋಗುತ್ತೇವೆ ಎಂದು ಮೋದಿ ಮತ್ತು ಅಮಿತ್ ಶಾ ಅವರಿಗೆ ಬಹುಶಃ ಇಂಟೆಲಿಜೆನ್ಸ್ ಮಾಹಿತಿ ದೊರೆತಿದೆ. ಹಾಗಾಗಿ ಚುನಾವಣೆಗಳು ಮುಗಿಯಲಿ ಆಮೇಲೆ ನೋಡೋಣ ಎಂದು ರೈತ ದ್ರೋಹಿ ಕಾಯ್ದೆಗಳನ್ನು ತಾತ್ಕಾಲಿಕವಾಗಿ ವಾಪಸ್ಸು ಪಡೆದಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯನವರು, “ಇವರು ಆಡಳಿತ ನಡೆಸುವುದು ಅಂಬಾನಿ, ಅದಾನಿ ಮುಂತಾದವರ ಹಿತಾಸಕ್ತಿಗೆ ಮಾತ್ರ ಆಗಿರುವುದರಿಂದ ಅವರ ಹಿತಾಸಕ್ತಿಯನ್ನು ರಕ್ಷಿಸುವುದು ಮೋದಿ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ರೈತ ದ್ರೋಹಿಯಾದ ಕಾನೂನುಗಳನ್ನು ವಾಪಸ್ಸು ಪಡೆದರೆ ಅಂಬಾನಿ, ಅದಾನಿ, ಧಮಾನಿ ಮುಂತಾದವರು ತುಸು ಬೇಜಾರು ಮಾಡಿಕೊಳ್ಳುತ್ತಾರೆ. ಹಾಗಾಗಿ ತಾತ್ಕಾಲಿಕವಾಗಿ ಹಿಂತೆಗೆದಂತೆ ಮಾಡಿ ಮತ್ತೆ ಇದಕ್ಕಿಂತಲೂ ಘೋರವಾದ ಕಾಯ್ದೆಗಳನ್ನು ದೇಶದ ಮೇಲೆ ಹೇರುತ್ತಾರೆ. ಈ ಕುರಿತು ದೇಶವಾಸಿಗಳು, ಅದರಲ್ಲೂ ರೈತರು ವಿಶೇಷ ಎಚ್ಚರಿಕೆ ವಹಿಸಬೇಕು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ನಮ್ಮ ಹೆಮ್ಮೆಯ ರೈತರು ತಾವೂ ಗೆದ್ದು ದೇಶವನ್ನೂ ತುಸು ಮಟ್ಟಿಗೆ ಗೆಲ್ಲಿಸಿದ್ದಾರೆ. ಈ ದೇಶದ್ರೋಹಿ ಕಾನೂನುಗಳನ್ನು ದೇಶದ ಜನರ ಮೇಲೆ ಹೇರಿದಾಗಿನಿಂದಲೂ ಈ ಕಾನೂನುಗಳು ರೈತರ ವಿರೋಧಿಗಳು ಮಾತ್ರವಲ್ಲ, ಇವು ನಗರ, ಪಟ್ಟಣಗಳ ಬಡವರು, ಮಧ್ಯಮ ವರ್ಗದವರನ್ನು ನಾಶ ಮಾಡುವ ಕಾನೂನುಗಳು. ದೇಶದ ಕೃಷಿ ಅಂಬಾನಿ, ಅದಾನಿಗಳ ಕೈಗೆ ಹೋದರೆ, ಅವರು ಮೊನೊಪಲಿ ಸಾಧಿಸಿ ದೇಶದ ಜನರನ್ನು, ಅವರ ಆರ್ಥಿಕತೆಯನ್ನು ನಾಶ ಮಾಡಿ ಬಿಡುತ್ತಾರೆಂದು ನಾನು ಹೇಳುತ್ತಾ ಬಂದಿದ್ದೆ. ಇದರ ಜೊತೆಗೆ ರೈತ ಹೋರಾಟವನ್ನು ಬೆಂಬಲಿಸಿ ಎಂದು ಮನವಿ ಮಾಡಿದ್ದೆ. ಅದಕ್ಕಾಗಿ ಹಲವು ಮನವಿ ಪತ್ರಗಳನ್ನು ಬರೆದು ರಾಜ್ಯದ ಜನರ ಮುಂದೆ ಇಟ್ಟಿದ್ದೆ. ಹಾಗೂ“ ಬಿಜೆಪಿ ಸರ್ಕಾರಗಳ ಐದು ಕಾಯ್ದೆಗಳು; ಅಸಂಖ್ಯಾತ ಸುಳ್ಳುಗಳು” ಎಂಬ ಕಿರು ಪುಸ್ತಕ ಬರೆದು ಜನರ ಮುಂದೆ ಇಟ್ಟಿದ್ದೆ ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟದ ನಂತರ ಅಹಿಂಸೆಯ ಮಾರ್ಗದಲ್ಲಿ ನಡೆದ ಬೃಹತ್ ಹೋರಾಟವನ್ನು ನಮ್ಮ ರೈತರು ಚಳಿ, ಮಳೆ, ಸುಡುವ ಬಿಸಿಲು, ಕೊಲೆಗಡುಕ ಕೊರೋನ ಎಲ್ಲವನ್ನು ನಿಗ್ರಹಿಸಿ ದೇಶದ ಜನರಿಗೆ ಹೋರಾಟ ಮತ್ತು ಗೆಲುವಿನ ಮಹತ್ವವೇನು ಎಂದು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಹೋರಾಟದಲ್ಲಿ ಅಪಾರ ಸಾವು ನೋವುಗಳು ಸಂಭವಿಸಿವೆ. 700 ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಶಾಂತಿಯುತವಾಗಿ ಹೋರಾಟ ಮಾಡುತ್ತಿದ್ದ ರೈತರ ಮೇಲೆ ಗುಂಡು ಹಾರಿಸಿ, ವಾಹನಗಳನ್ನು ನುಗ್ಗಿಸಿ ಕೊಲ್ಲಲಾಯಿತು. ಪೋಲೀಸ್ ಮುಂತಾದ ಶಕ್ತಿಗಳನ್ನು ಬಳಸಿ ದಮನಿಸಲು ಪ್ರಯತ್ನಿಸಲಾಯಿತು. ಆದರೂ ಕೂಡ ರೈತರು ಉಕ್ಕಿನಂತೆ ನಿಂತು ಸರ್ವಾಧಿಕಾರಿ ಪ್ರಭುತ್ವವನ್ನು ಸೋಲಿಸಿದ್ದಾರೆ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ನಮ್ಮ ರೈತರು ತಾವೂ ಗೆದ್ದು ಬಾಬಾ ಸಾಹೇಬರ ಸಂವಿಧಾನವನ್ನು ಮತ್ತು ಮಹಾತ್ಮ ಗಾಂಧಿಯವರ ಅಹಿಂಸಾತ್ಮಕ ಹೋರಾಟದ ಮಾದರಿಯನ್ನೂ ಗೆಲ್ಲಿಸಿದ್ದಾರೆ ಮತ್ತು ಜೀವಂತಗೊಳಿಸಿದ್ದಾರೆ. ಇದರ ಮೂಲಕ ಸರ್ವಾಧಿಕಾರದ ಹಿಟ್ಲರ್ ಗಿರಿಯನ್ನು ಸೋಲಿಸಿ ಪ್ರಜಾಪ್ರಭುತ್ವವನ್ನು ಗೆಲ್ಲಿಸಿದ್ದಾರೆ. ಈ ದೃಷ್ಟಿಯಿಂದಲೂ ರೈತರು ನಡೆಸಿದ ಹೋರಾಟ ಅವಿಸ್ಮರಣೀಯವಾಗಿದೆ ಎಂದು ಹೇಳಿದ್ದಾರೆ.

ಇಷ್ಟೆಲ್ಲ ಆದರೂ ಹೋರಾಟವಿನ್ನೂ ಮುಗಿದಿಲ್ಲ ಎಂದು ಜನರಿಗೆ ಗೊತ್ತಿದೆ. ಯಾಕೆಂದರೆ ಪ್ರಧಾನಿ ಮೋದಿಯವರು “ ಕಾಯ್ದೆಗಳು ಸರಿಯಾಗಿದ್ದವು, ಆದರೆ ಅವುಗಳನ್ನು ಅರ್ಥಮಾಡಿಸುವಲ್ಲಿ ಸೋತೆವು ಎಂದು ಹೇಳಿದ್ದಾರೆ”. ತಾವು ಕೆಟ್ಟ ಮತ್ತು ಜನದ್ರೋಹಿಯಾದ ಕಾಯ್ದೆಗಳನ್ನು ತಂದಿದ್ದೆವು ಎಂದು ಅವರಿಗೆ ಗೊತ್ತಿದ್ದರೂ ಈ ಮಾತುಗಳನ್ನು ಹೇಳಿದ್ದಾರೆ. ಹಾಗಾಗಿ ಕಾಯ್ದೆಗಳ ಹಿಂತೆಗೆತವೆಂಬುದು ತಾತ್ಕಾಲಿಕ ಎನ್ನಿಸುತ್ತಿದೆ. ಈಗ ನಾವು ಒತ್ತಾಯಿಸಬೇಕಿರುವುದು ಕೂಡಲೆ ಸ್ವಾಮಿನಾಥನ್ ಅವರ ವರದಿಯನ್ನು ಅಂಗೀಕರಿಸಿ ವೈಜ್ಞಾನಿಕ ಬೆಲೆಗಳನ್ನು ಜಾರಿಗೊಳಿಸಬೇಕು. ನಾನು ಹಿಂದಿನಿಂದಲೂ ಒತ್ತಾಯಿಸುತ್ತಾ ಬಂದಿರುವ ವಿಚಾರವನ್ನು ಈಗಲೂ ಒತ್ತಾಯಿಸುತ್ತೇನೆ. ರೈತರು ಬೆಳೆವ ಪ್ರತಿ ಉತ್ಪನ್ನಕ್ಕೂ ವೈಜ್ಞಾನಿಕ ಬೆಲೆ ನಿಗಧಿಗೊಳಿಸಿ ಆ ಬೆಲೆಗಳನ್ನು ಕಾನೂನುಬದ್ಧಗೊಳಿಸಬೇಕು. ಸರ್ಕಾರ ನಿಗಧಿಗೊಳಿಸಿದ ಬೆಲೆಗಳಿಗಿಂತ ಕಡಿಮೆ ದರಕ್ಕೆ ಕೊಳ್ಳುವುದನ್ನು ನಿರ್ಬಂದಿಸಬೇಕು ಅವರು ಒತ್ತಾಯಿಸಿದ್ದಾರೆ.

ವೈಜ್ಞಾನಿಕ ದರವು ಕೊಳ್ಳುವ ಗ್ರಾಹಕರಿಗೂ ಅನ್ವಯಿಸಬೇಕು. ಅದಾನಿ, ಅಂಬಾನಿ, ದಮಾನಿ ಮುಂತಾದ ಬೃಹತ್ ಕಾರ್ಪೊರೇಟ್ ಮಧ್ಯವರ್ತಿಗಳನ್ನು ಮುಲಾಜಿಲ್ಲದೆ ನಿರ್ಬಂಧಿಸಬೇಕು. ಇವರೆಲ್ಲ ರೈತನಿಂದ 10 ರೂಪಾಯಿಗೆ ಕೊಂಡು ಗ್ರಾಹಕರಿಗೆ 100 ರೂಪಾಯಿಗೆ ಮಾರುವ ಜನ. ಇಂಥ ದರ ಪದ್ಧತಿಯನ್ನು ಕಾನೂನಾತ್ಮಕವಾಗಿ ನಿಷೇಧಿಸಬೇಕು. ರೈತರು ಮತ್ತು ಗ್ರಾಹಕರನ್ನು ಒಂದೆ ವೇದಿಕೆಗೆ ತರುವ ವ್ಯವಸ್ಥೆಗಳನ್ನು ರೂಪಿಸಬೇಕು. ಹೋಬಳಿ, ದೊಡ್ಡ ಗ್ರಾಮ ಪಂಚಾಯತ್ ಕೇಂದ್ರಗಳಲ್ಲೂ ಎಪಿಎಂಸಿ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ರೈತರು ಬಳಸುವ ಬೀಜ, ಗೊಬ್ಬರ, ಔಷಧ ಮುಂತಾದವುಗಳ ವ್ಯಸ್ಥೆಯನ್ನು ಬಹುರಾಷ್ಟ್ರೀಯ ಕಂಪೆನಿಗಳ ಕಪಿ ಮುಷ್ಟಿಯಿಂದ ಬಿಡಿಸಿ ಆರೋಗ್ಯಕರವಾದ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೂಡಲೆ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ನಿಯಂತ್ರಿಸಿ ಕೇಂದ್ರ ಸರ್ಕಾರ ಅಡಿಷನಲ್ ಎಕ್ಸೈಜ್ ಡ್ಯೂಟಿಯ ಮೂಲಕ ಲೂಟಿ ಮಾಡುತ್ತಿರುವುದನ್ನು ಈ ಕೂಡಲೆ ನಿಲ್ಲಿಸಬೇಕು. ತೆರಿಗೆ ರಹಿತವಾಗಿ ಸರಬರಾಜು ಮಾಡಬೇಕು. ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವು ಖಾಸಗೀಕರಿಸಲು ಹೊರಟಿರುವ ವಿದ್ಯುತ್, ಇಂಧನ, ಕಲ್ಲಿದ್ದಲು ಮುಂತಾದ ರಾಷ್ಟ್ರದ ಹಿತಾಸಕ್ತಿಯನ್ನು ಕಾಪಾಡುವ ಯಾವುದೇ ರಂಗವನ್ನು ಖಾಸಗೀಕರಣಗೊಳಿಸುವುದನ್ನು ನಿಲ್ಲಿಸಬೇಕು.

ಮೋದಿಯವರು ಕೇವಲ ಬಾಯಿ ಮಾತಿನಲ್ಲಿ ಹೇಳದೆ, ಕೂಡಲೆ ಆದೇಶಗಳನ್ನು ಹೊರಡಿಸಿ ವಾಪಸ್ಸು ಪಡೆಯಬೇಕು. ಹುತಾತ್ಮ ರೈತರ ಕುಟುಂಬಗಳಿಗೆ ದೇಶ ಕಾಯುವ ಯೋಧರು ಹುತಾತ್ಮರಾದಾಗ ನೀಡುವ ಎಲ್ಲ ಸವಲತ್ತುಗಳನ್ನು ನೀಡಬೇಕು. ಮುಖ್ಯವಾಗಿ ಯೋಧರಿಗೆ ನೀಡಿದಷ್ಟೆ ಪರಿಹಾರ ನೀಡಬೇಕು. ಹುತಾತ್ಮರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಅವರ ಮಕ್ಕಳ ಶಿಕ್ಷಣವನ್ನು ಸರ್ಕಾರವೆ ನೋಡಿಕೊಳ್ಳಬೇಕು. ವೃದ್ಧ ತಂದೆ ತಾಯಿಗಳಿದ್ದರೆ ಅವರನ್ನು ಸರ್ಕಾರವೆ ಪೋಷಿಸಬೇಕು. ರೈತರನ್ನು, ಪ್ರತಿಭಟನಾಕಾರರನ್ನು, ವಿರೋಧ ಪಕ್ಷಗಳನ್ನು ಆಂದೋಲನ ಜೀವಿಗಳೆಂದು, ದೇಶದ್ರೋಹಿಗಳೆಂದು ಅಣಕಿಸಿದ ಬಿಜೆಪಿ ಸರ್ಕಾರಗಳು, ಬಿಜೆಪಿಯ ಮುಖಂಡರುಗಳು ದೇಶದ ಮುಂದೆ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

ಕರ್ನಾಟಕ ರಾಜ್ಯದ ಬಿಜೆಪಿ ಸರ್ಕಾರವು ಜಾರಿಗೆ ತಂದಿರುವ ರೈತದ್ರೋಹಿಯಾದ ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗಳನ್ನು ರದ್ದು ಮಾಡಬೇಕು. ಜಾನುವಾರು ಹತ್ಯಾ ಪ್ರತಿಬಂಧಕ ಕಾಯ್ದೆಗಳನ್ನು ಕೂಡಲೆ ಹಿಂಪಡೆಯಬೇಕೆದು ಆಗ್ರಹಿಸುತ್ತೇನೆ ಎಂದು  ಸಿದ್ದರಾಮಯ್ಯ ತಿಳಿಸಿದ್ದಾರೆ.


ಇದನ್ನೂ ಓದಿ: ಬರೆದಿಟ್ಟುಕೊಳ್ಳಿ, ಒತ್ತಾಯದಿಂದ ಈ ಕಾಯ್ದೆಗಳನ್ನು ಸರ್ಕಾರ ವಾಪಸ್ ಪಡೆಯುತ್ತದೆ: ರಾಹುಲ್ ಗಾಂಧಿ ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...