Homeಮುಖಪುಟ"ನಮ್ಮ ನಿಯಮಗಳು ಹಳೆಯವು": ಚೀನಾ ವಿರುದ್ಧ ಕ್ರಮಕ್ಕೆ ನಿತಿನ್ ಗಡ್ಕರಿ ಒತ್ತಾಯ

“ನಮ್ಮ ನಿಯಮಗಳು ಹಳೆಯವು”: ಚೀನಾ ವಿರುದ್ಧ ಕ್ರಮಕ್ಕೆ ನಿತಿನ್ ಗಡ್ಕರಿ ಒತ್ತಾಯ

"ಎರಡು ತಿಂಗಳ ಹಿಂದೆ, ನಾವು ಚೀನಾದಿಂದ ಪಿಪಿಇ (ವೈಯಕ್ತಿಕ ರಕ್ಷಣಾ ಸಾಧನಗಳು) ಕಿಟ್‌ಗಳನ್ನು ವಿಶೇಷ ವಿಮಾನಗಳ ಮೂಲಕ ಆಮದು ಮಾಡಿಕೊಳ್ಳಬೇಕಾಗಿತ್ತು. ಆದರೆ ಇಂದು ನಮ್ಮ ಎಂಎಸ್‌ಎಂಇಗಳು ಅತ್ಯಂತ ಉತ್ತಮ ಗುಣಮಟ್ಟದ ದಿನಕ್ಕೆ 5 ಲಕ್ಷ ಕಿಟ್‌ಗಳನ್ನು ಉತ್ಪಾದಿಸುತ್ತಿದ್ದೇವೆ.

- Advertisement -
- Advertisement -

ಚೀನಾದ ಕಂಪೆನಿಗಳಿಗೆ ಸಹಾಯ ಮಾಡುವ ಹಳತಾದ ನಿಯಮಗಳು ನಮ್ಮಲ್ಲಿವೆ. ಹಾಗಾಗಿ ರಾಷ್ಟ್ರೀಯ ಹಿತಾಸಕ್ತಿ ಮತ್ತು ಭಾರತೀಯ ಸಂಸ್ಥೆಗಳ ಹಿತದೃಷ್ಟಿಯಿಂದ ಇದನ್ನು ಪರಿಶೀಲಿಸಬೇಕು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಜಂಟಿ ಉದ್ಯಮಗಳು ಸೇರಿದಂತೆ ಹೆದ್ದಾರಿ ಯೋಜನೆಗಳಲ್ಲಿ ಭಾಗವಹಿಸಲು ಚೀನಾ ಕಂಪನಿಗಳಿಗೆ ಭಾರತ ಅವಕಾಶ ನೀಡುವುದಿಲ್ಲ ಎಂದು ರಸ್ತೆ ಮತ್ತು ಸಾರಿಗೆ ಸಚಿವರು ಹೇಳಿದ ಕೆಲ ದಿನಗಳ ನಂತರ, ವಿದ್ಯುತ್ ಸರಬರಾಜು ಉಪಕರಣಗಳು ಮತ್ತು ಘಟಕಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳಲು ಭಾರತೀಯ ಕಂಪನಿಗಳಿಗೆ ಸರ್ಕಾರದ ಅನುಮತಿ ಬೇಕಾಗುತ್ತದೆ ಎಂದು ವಿದ್ಯುತ್ ಸಚಿವಾಲಯ ಶುಕ್ರವಾರ ತಿಳಿಸಿದೆ.

ಕಳೆದ ತಿಂಗಳು ಲಡಾಖ್‌ನಲ್ಲಿ ನಡೆದ ಹಿಂಸಾತ್ಮಕ ಮುಖಾಮುಖಿಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದಾರೆ. ಉಭಯ ದೇಶಗಳ ನಡುವೆ ಹೆಚ್ಚುತ್ತಿರುವ ಮಿಲಿಟರಿ ಉದ್ವಿಗ್ನತೆಯ ಮಧ್ಯೆ ಚೀನಾದ ಮೂಲದ 59 ಉನ್ನತ ಅಪ್ಲಿಕೇಶನ್‌ಗಳನ್ನು ಭಾರತ ನಿಷೇಧಿಸಿದೆ.

ಚೀನಾ ವಿರುದ್ಧದ ಭಾರತ ಸರ್ಕಾರದ ಕ್ರಮಗಳನ್ನು ಬೆಂಬಲಿಸಿದ ನಿತಿನ್ ಗಡ್ಕರಿ, ಕಾರ್ಯಾನುಭವ ಅಥವಾ ಆರ್ಥಿಕ ಬೆಂಬಲವಿಲ್ಲದ ಕಾರಣದಿಂದಾಗಿ ಸರ್ಕಾರಿ ಗುತ್ತಿಗೆ ಪಡೆಯುವುದರಿಂದ ಹೊರಗುಳಿದಿರುವ ಭಾರತೀಯ ಉದ್ಯಮಿಗಳು ಮತ್ತು ಗುತ್ತಿಗೆದಾರರನ್ನು ಪ್ರೋತ್ಸಾಹಿಸುವತ್ತ ಗಮನ ಹರಿಸಲಾಗಿದೆ ಎಂದು ಹೇಳಿದರು.

“ನಮ್ಮ ನಿಯಮಗಳು ಹಳತಾಗಿವೆ. ಅವರು ಗುತ್ತಿಗೆದಾರರಿಗೆ ಕಟ್ಟುನಿಟ್ಟಾದ ಷರತ್ತುಗಳನ್ನು ವಿಧಿಸಿದ್ದಾರೆ. ಉದಾಹರಣೆಗೆ ಬೃಹತ್ ಹೆದ್ದಾರಿಗಳು ಮತ್ತು ಸೇತುವೆಗಳಿಗೆ, ಅಂತಹ ದೊಡ್ಡ ಯೋಜನೆಗಳ ಅನುಭವ ಹೊಂದಿರುವವರು ಮಾತ್ರ ಅನ್ವಯಿಸಬಹುದಾದ ಷರತ್ತುಗಳನ್ನು ನಾವು ಹೊಂದಿದ್ದೇವೆ. ನಮ್ಮ ದೇಶದಲ್ಲಿ ಈ ಮೊದಲು ಯಾರೂ ಅದನ್ನು ಮಾಡಿಲ್ಲ. ಆದ್ದರಿಂದ, ಆ ಒಪ್ಪಂದಗಳನ್ನು ನೀಡಲು ಯಾವುದೇ ಭಾರತೀಯ ಕಂಪನಿ ಇರಲಿಲ್ಲ” ಎಂದು ಗಡ್ಕರಿ ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.

“ನಾನು ನಮ್ಮ ಜನರಿಗೆ ಹೇಳಿದೆ, ನಮ್ಮ ನಿಯಮಗಳು ತಪ್ಪಾಗಿದೆ. ಭಾರತೀಯ ಗುತ್ತಿಗೆದಾರರು ಸಾಮರ್ಥ್ಯವನ್ನು ಹೊಂದಿದ್ದರೂ ಸಹ, ಅವರು ಹಣಕಾಸಿನ ಮತ್ತು ತಾಂತ್ರಿಕ ಅರ್ಹತೆಗಳ ಕಾರಣದಿಂದಾಗಿ ಜಂಟಿ ಉದ್ಯಮಗಳನ್ನು ರೂಪಿಸಬೇಕಾಗಿತ್ತು. ಆದರೆ ಪ್ರಸ್ತುತ ಪರಿಸ್ಥಿತಿಯನ್ನು ಗಮನಿಸಿದರೆ ಚೀನಾದ ಕಂಪನಿಗಳೊಂದಿಗೆ ಜಂಟಿಯಾಗಿರುವ ಕಂಪೆನಿಗಳಿಗೆ ಗುತ್ತಿಗೆ ನೀಡುವುದು ಸರಿಯಲ್ಲ. ಇದು ರಾಷ್ಟ್ರದ ಹಿತದೃಷ್ಟಿಯಿಂದ ಒಳ್ಳೆಯದು “ಎಂದು ಅವರು ಹೇಳಿದರು.

ಚೀನಾ ವಿರುದ್ಧ ಕಳೆದ ಕೆಲವು ವಾರಗಳಲ್ಲಿ ಭಾರತ ಕೈಗೊಂಡ ಕ್ರಮಗಳ ಸರಣಿ ಮತ್ತು ಸ್ವಾವಲಂಬನೆಯ ಉತ್ತೇಜಿತ ಆತ್ಮನಿರ್ಭರ್ ಭಾರತ್ ಕಾರ್ಯಕ್ರಮದ ಬಗ್ಗೆ ಕೇಳಿದಾಗ, ಭಾರತೀಯ ಕಂಪನಿಗಳು ಮತ್ತು ಸಣ್ಣ ಉದ್ಯಮಗಳನ್ನು ಉತ್ತೇಜಿಸುವ ಉದ್ದೇಶವಿದೆ ಎಂದು ನಿತಿನ್ ಗಡ್ಕರಿ ಹೇಳಿದರು.

“ಆತ್ಮನಿರ್ಭರ್ ಭಾರತ್ ಅನ್ನು ಚೀನಾದೊಟ್ಟಿಗೆ ಸಂಪರ್ಕ ಕಲ್ಪಿಸಬೇಡಿ. ನಾವು ಜಗತ್ತಿನಲ್ಲಿ ನಮ್ಮ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಬೇಕಾಗಿದೆ. ನಾವು ಎಲ್ಲಾ ತಾಂತ್ರಿಕ ಸಾಮರ್ಥ್ಯವನ್ನು ಹೊಂದಿದ್ದೇವೆ” ನಾವು ನಮ್ಮ ತಂತ್ರಜ್ಞಾನ ಮತ್ತು MSME (ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಉದ್ಯಮಗಳು) ವಿದೇಶಿ ಹೂಡಿಕೆಯನ್ನು ನವೀಕರಿಸಬೇಕಾಗಿದೆ. ಅದಕ್ಕಾಗಿ ನಮಗೆ ಕಡಿಮೆ-ವೆಚ್ಚದ ಬಂಡವಾಳ ಬೇಕು ಎಂದು ಅವರು ಹೇಳಿದರು.

“ಎರಡು ತಿಂಗಳ ಹಿಂದೆ, ನಾವು ಚೀನಾದಿಂದ ಪಿಪಿಇ (ವೈಯಕ್ತಿಕ ರಕ್ಷಣಾ ಸಾಧನಗಳು) ಕಿಟ್‌ಗಳನ್ನು ವಿಶೇಷ ವಿಮಾನಗಳ ಮೂಲಕ ಆಮದು ಮಾಡಿಕೊಳ್ಳಬೇಕಾಗಿತ್ತು. ಆದರೆ ಇಂದು ನಮ್ಮ ಎಂಎಸ್‌ಎಂಇಗಳು ಅತ್ಯಂತ ಉತ್ತಮ ಗುಣಮಟ್ಟದ ದಿನಕ್ಕೆ 5 ಲಕ್ಷ ಕಿಟ್‌ಗಳನ್ನು ಉತ್ಪಾದಿಸುತ್ತಿದ್ದೇವೆ. ಹಾಗಾಗಿ ನನ್ನ ವಿನಂತಿ, ನಮ್ಮ ಉತ್ಪಾದನೆಯು ತುಂಬಾ ಹೆಚ್ಚಾಗಿದ್ದು, ಅದನ್ನು ರಫ್ತು ಮಾಡಲು ನಾವು ಅವಕಾಶ ನೀಡಬೇಕು ಎಂದು ವಾಣಿಜ್ಯ ಸಚಿವಾಲಯವನ್ನು ಕೇಳಿಕೊಳ್ಳುತ್ತೇನೆ. ಹಾಗಾಗಿ ನಾವು ಅದನ್ನು ಪ್ರಪಂಚದಾದ್ಯಂತ ಕಳುಹಿಸಬಹುದು” ಎಂದು ಗಡ್ಕರಿ ಹೇಳಿದರು.


ಇದನ್ನೂ ಓದಿ: ಹೆದ್ದಾರಿ ಯೋಜನೆಗಳಲ್ಲಿ ಚೀನಾ ಕಂಪೆನಿಗಳಿಗೆ ಅನುಮತಿ ನೀಡುವುದಿಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...