Homeಮುಖಪುಟ'ನಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ತಡೆಹಿಡಿಯಲಾಗಿದೆ..'; ಕೇಂದ್ರದ ಜತೆಗಿನ ಸಭೆ ಬಹಿಷ್ಕರಿಸಲು ರೈತರ ನಿರ್ಧಾರ

‘ನಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ತಡೆಹಿಡಿಯಲಾಗಿದೆ..’; ಕೇಂದ್ರದ ಜತೆಗಿನ ಸಭೆ ಬಹಿಷ್ಕರಿಸಲು ರೈತರ ನಿರ್ಧಾರ

- Advertisement -
- Advertisement -

ತಮ್ಮ ‘ದೆಹಲಿ ಚಲೋ’ ಪ್ರತಿಭಟನೆಗೆ ಮುಂಚಿತವಾಗಿ ರೈತರ ಸಂಘಟನೆಗಳು ಮತ್ತು ಒಕ್ಕೂಟಗಳ ಅಧಿಕೃತ ಪುಟಗಳಾಗಿ ಕಾರ್ಯನಿರ್ವಹಿಸುತ್ತಿದ್ದ ಎಕ್ಸ್‌ ಮತ್ತು ಫೇಸ್‌ಬುಕ್ ನಲ್ಲಿನ ಹನ್ನೆರಡು ಖಾತೆಗಳನ್ನು ಕೇಂದ್ರ ಸರ್ಕಾರದ ಕೋರಿಕೆಯ ಮೇರೆಗೆ ಭಾರತದಲ್ಲಿ ತಡೆಹಿಡಿಯಲಾಗಿದೆ ಎಂದು ‘ದೆಹಲಿ ಚಲೋ ಮೆರವಣಿಗೆ’ ನಡೆಸುತ್ತಿರುವ ರೈತರು ಆರೋಪ ಮಾಡಿದ್ದಾರೆ.

ಫೆಬ್ರವರಿ 13 ರಂದು ರೈತರು ತಮ್ಮ ಪ್ರತಿಭಟನೆಯನ್ನು ಪ್ರಾರಂಭಿಸುವ ಒಂದು ದಿನದ ಮೊದಲು ಅವರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ತಡೆಹಿಡಿಯಲಾಗಿದೆ. ಜಗ್ಜಿತ್ ಸಿಂಗ್ ದಲ್ಲೆವಾಲ್ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸಂಯೋಜಕ ನೇತೃತ್ವದ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಜಂಟಿಯಾಗಿ ಪ್ರತಿಭಟನೆಗೆ ಕರೆ ನೀಡಿತು.

ಫೆಬ್ರವರಿ 15 ರವರೆಗೆ ಹರಿಯಾಣದ ಏಳು ಜಿಲ್ಲೆಗಳಲ್ಲಿ ರೈತರ ಸಾಮಾಜಿಕ ಮಾಧ್ಯಮ ಖಾತೆಗಳ ಮೇಲಿನ ನಿಷೇಧ ಮತ್ತು ವಿಸ್ತೃತ ಇಂಟರ್ನೆಟ್ ನಿಷೇಧದ ಜೊತೆಗೆ, ಹರಿಯಾಣ ಪೊಲೀಸರು ಪಟಿಯಾಲಾ ಮತ್ತು ಖಾನೌರಿಯಿಂದ ಪಂಜಾಬ್-ಹರಿಯಾಣದ ಶಂಭು ಗಡಿಯಲ್ಲಿ ಪಂಜಾಬ್‌ನ ಸಂಗ್ರೂರ್ ಜಿಲ್ಲೆಯಿಂದ ಗಡಿಯವರೆಗೆ ಬಹು ಹಂತಗಳಲ್ಲಿ ದಿಗ್ಬಂಧನಗಳ ಮೂಲಕ ರೈತರ ದೆಹಲಿ ಪ್ರವೇಶವನ್ನು ನಿಷೇಧಿಸಿದ್ದಾರೆ.

ರೈತರು ಫೆಬ್ರವರಿ 13ರಿಂದ ರಾತ್ರಿ ಶಂಭು ಗಡಿಯಲ್ಲಿ ಕಳೆದಿದ್ದಾರೆ, ಹರಿಯಾಣದ ಗಡಿಯ ಇನ್ನೊಂದು ಭಾಗದಲ್ಲಿ ಅರೆಸೇನಾ ಪಡೆಗಳ ಭಾರೀ ನಿಯೋಜನೆ ಇದೆ. ಅವರನ್ನು ಹರಿಯಾಣಕ್ಕೆ ದಾಟದಂತೆ ತಡೆಯುವುದರ ಜೊತೆಗೆ, ಹರಿಯಾಣ ಪೊಲೀಸರು ಶಂಭು ಗಡಿಯಲ್ಲಿ ಪ್ರತಿಭಟನಾಕಾರರ ರೈತರನ್ನು ಹತ್ತಿಕ್ಕಲು ಅಶ್ರುವಾಯು ಪ್ರಯೋಗಿಸಿದ್ದಾರೆ. ಅಶೃವಾಯು ಸಿಡಿಸಲು ಡ್ರೋನ್‌ಗಳನ್ನು ಬಳಸಿದ್ದರಿಮದ 100ಕ್ಕೂ ಹೆಚ್ಚು ರೈತರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸಾಮಾಜಿಕ ಮಾಧ್ಯಮ ಖಾತೆಗಳಿಗೆ ತಡೆ:

ಕಿಸಾನ್ ಮಜ್ದೂರ್ ಮೋರ್ಚಾದ (ಕೆಎಂಎಂ) ಸಂಯೋಜಕ ಸರ್ವನ್ ಸಿಂಗ್ ಪಂಧೇರ್, ಬಿಕೆಯು ವಕ್ತಾರ ತೇಜ್ವೀರ್ ಸಿಂಗ್ ಅಂಬಾಲಾ (ಶಹೀದ್ ಭಗತ್ ಸಿಂಗ್), ರೈತ ನಾಯಕ ರಮಣದೀಪ್ ಸಿಂಗ್ ಮಾನ್, ಬಿಕೆಯು ಕ್ರಾಂತಿಕಾರಿಯಿಂದ ಸುರ್ಜಿತ್ ಸಿಂಗ್ ಫುಲ್ ಅವರಂತಹ ಪ್ರಮುಖ ರೈತ ನಾಯಕರ ಎಕ್ಸ್ ಖಾತೆಗಳು ಮತ್ತು ಫೇಸ್‌ಬುಕ್ ಪುಟಗಳು , ರೈತ ಮುಖಂಡ ಹರ್ಪಾಲ್ ಸಂಘ, ಹರಿಯಾಣದ ಅಶೋಕ್ ದಾನೋಡ ಸೇರಿದಂತೆ ಅನೇಕರ ಖಾತೆಗಳನ್ನು ತಡೆಹಿಡಿಯಲಾಗಿದೆ.

ರೈತರ ಆಂದೋಲನವನ್ನು ಬೆಂಬಲಿಸುವ ಮತ್ತು ಅದರ ಬಗ್ಗೆ ನವೀಕರಣಗಳನ್ನು ಪೋಸ್ಟ್ ಮಾಡಿದ ಅಧಿಕೃತ ಪುಟಗಳನ್ನು ಸರ್ಕಾರವು ನಿಷೇಧಿಸಿದೆ. ಅಂದರೆ, ಭಾವಜಿತ್ ಸಿಂಗ್ ನಡೆಸುತ್ತಿರುವ ‘Tractor2twitr_P’, ಭಾರತೀಯ ಕಿಸಾನ್ ಯೂನಿಯನ್ (ಶಹೀದ್ ಭಗತ್ ಸಿಂಗ್) ಮತ್ತು ಗುರಮ್ನೀತ್ ಸಿಂಗ್ ಮಂಗತ್ ನಡೆಸುತ್ತಿರುವ ಪ್ರಗತಿಪರ ರೈತರ ಫ್ರಂಟ್ ಖಾತೆಗಳನ್ನು ತಡೆಹಿಡಿಯಲಾಗಿದೆ.

ಬಿಕೆಯು (ಎಸ್‌ಬಿಎಸ್) ಹರಿಯಾಣದ ಅಂಬಾಲಾದಿಂದ ರೈತರ ಪ್ರತಿಭಟನೆಯನ್ನು ಮುನ್ನಡೆಸುತ್ತಿದ್ದ ಪ್ರಮುಖ ರೈತ ಸಂಘಗಳಲ್ಲಿ ಒಂದಾಗಿದೆ. ಸ್ವತಂತ್ರ ಪತ್ರಕರ್ತ ಮಂದೀಪ್ ಪುನಿಯಾ ನಡೆಸುತ್ತಿದ್ದ ‘ಗಾಂವ್ ಸವೇರಾ’ ಪುಟವನ್ನು ತಡೆಹಿಡಿಯಲಾಗಿದೆ. ಹಾಗೆಯೇ ಮಂದೀಪ್ ಅವರ ವೈಯಕ್ತಿಕ ಪುಟವನ್ನು ತಡೆಹಿಡಿಯಲಾಗಿದೆ. ಮಂದೀಪ್ ರೈತರ ಪ್ರತಿಭಟನೆಯನ್ನು ಬೆಂಬಲಿಸುವ ಪ್ರಮುಖ ಹೆಸರು ಮತ್ತು 2020ರಲ್ಲಿ ಅವರನ್ನು ಬಂಧಿಸಲಾಗಿತ್ತು. ಜೈಲಿನಲ್ಲಿ, ಮಂದೀಪ್ ತನ್ನ ಕಾಲುಗಳ ಮೇಲೆ ಟಿಪ್ಪಣಿಗಳನ್ನು ದಾಖಲಿಸಿಕೊಂಡು ನಂತರ ದಿ ಕ್ಯಾರವಾನ್‌ಗೆ ವರದಿ ಬರೆದಿದ್ದರು.

ಈ ಖಾತೆಗಳನ್ನು ತಡೆಹಿಡಿಯುವ ಪ್ರಕ್ರಿಯೆಯು ಹೆಚ್ಚಾಗಿ ಅಪಾರದರ್ಶಕವಾಗಿದೆ ಎಂದು ತಿಳಿಯಲಾಗಿದೆ. ಜಗಜಿತ್ ಸಿಂಗ್ ದಲ್ಲೆವಾಲ್ ಅವರ ಎಕ್ಸ್‌ ಖಾತೆಯಂತೆ ಗುರಮ್ನೀತ್ ಅವರ ವೈಯಕ್ತಿಕ ಎಕ್ಸ್‌ ಖಾತೆಯು ಇನ್ನೂ ಮುಂದುವರೆದಿದೆ. ಆದರೆ, ದಲ್ಲೆವಾಲ್ ಅವರ ಫೇಸ್‌ಬುಕ್ ಪುಟವನ್ನು ನಿಷೇಧಿಸಲಾಗಿದೆ.

ಖಾತೆಗಳು ಎಕ್ಸ್‌ ನಿಂದ ಸಂದೇಶ ಸ್ವೀಕರಿಸಿದ್ದು, ಕಾನೂನು ಬೇಡಿಕೆಗೆ ಪ್ರತಿಕ್ರಿಯೆಯಾಗಿ ನಿಮ್ಮ ಖಾತೆಯನ್ನು [ಭಾರತದಲ್ಲಿ] ತಡೆಹಿಡಿಯಲಾಗಿದೆ ಎಂದು ಹೇಳಿದೆ.

ಕುತೂಹಲವೆಂದರೆ, ದೆಹಲಿ ಚಲೋ ಪ್ರತಿಭಟನೆಗೆ ಮುಂಚಿತವಾಗಿ ಇತ್ತೀಚೆಗೆ ಪ್ರಾರಂಭಿಸಲಾದ ಕಿಸಾನ್ ಮಜ್ದೂರ್ ಮೋರ್ಚಾದ ಅಧಿಕೃತ ಪುಟವು ಇನ್ನೂ ಚಾಲನೆಯಲ್ಲಿದೆ. ಈ ಹಿಂದೆ 2020-2021ರಲ್ಲಿ ರೈತರ ಪ್ರತಿಭಟನೆಯ ಸಂದರ್ಭದಲ್ಲಿ, ಕೇಂದ್ರ ಸರ್ಕಾರವು ಕಿಸಾನ್ ಏಕ್ತಾ ಮೋರ್ಚಾದ ಅಧಿಕೃತ ಪುಟ ಸೇರಿದಂತೆ ಅನೇಕ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿಷೇಧಿಸಿತ್ತು. ಇದು ಹೆಚ್ಚಾಗಿ ಎಸ್‌ಕೆಎಂನ ಡಿಜಿಟಲ್ ಔಟ್‌ಪೋಸ್ಟ್‌ನಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಇಲ್ಲಿ ಉಲ್ಲೇಖಿಸುವುದು ಸೂಕ್ತವಾಗಿದೆ.

ಆಗ ಪಂಜಾಬಿ ಗಾಯಕ ಜಾಝಿ ಬಿ ಮತ್ತು ಖಾಲ್ಸಾ ಏಡ್‌ನ ರವಿ ಸಿಂಗ್ ಅವರಂತಹ ಉನ್ನತ ಬೆಂಬಲಿಗರು, ಸ್ವತಂತ್ರ ಪತ್ರಕರ್ತ ಸಂದೀಪ್ ಸಿಂಗ್ ಅವರ ಖಾತೆಗಳನ್ನು ತಡೆಹಿಡಿಯಲಾಗಿತ್ತು ಮತ್ತು ಲಾಕ್ ಮತ್ತು ಕೀ ಅಡಿಯಲ್ಲಿ ಮುಂದುವರಿಯಿತು.

‘ದಿ ವೈರ್‌’ನೊಂದಿಗೆ ಮಾತನಾಡಿರುವ, ಭಾವಜಿತ್ ಸಿಂಗ್, ‘ಫೆಬ್ರವರಿ 12 ರಂದು ಮಂತ್ರಿಗಳ ಜತೆಗೆ ರೈತ ಮುಖಂಡರು ಸಭೆಯಲ್ಲಿ ಕುಳಿತಿದ್ದ ಎಲ್ಲರ ಖಾತೆಗಳನ್ನು ತಡೆಹಿಡಿಯಲಾಗಿದೆ’ ಎಂದು ಹೇಳಿದರು.  ‘ಕೇಂದ್ರ ಸರ್ಕಾರ ಮಾತ್ರವಲ್ಲ, ಪಂಜಾಬ್ ಸರ್ಕಾರವೂ ರೈತ ಸಂಘದ ನಾಯಕರ ಖಾತೆಗಳನ್ನು ಪ್ರತ್ಯೇಕಿಸುವಲ್ಲಿ ತೊಡಗಿಸಿಕೊಂಡಿದೆ ಎಂದು ನಾವು ಭಾವಿಸುತ್ತೇವೆ. ಇದು ಅಪಾಯಕಾರಿ ಪ್ರವೃತ್ತಿಯಾಗಿದೆ. ಏಕೆಂದರೆ, ರೈತರ ವಿರುದ್ಧ ಅಪಪ್ರಚಾರ ನಡೆಸುತ್ತಿರುವ ಖಾತೆಗಳಿಗೆ ಬೆಂಬಲ ಸಿಗುತ್ತಿದೆ. ಆದರೆ ರೈತರ ಅಧಿಕೃತ ಮುಖವಾಣಿಗಳು ಪ್ರಚಾರ ಮತ್ತು ತಪ್ಪು ಮಾಹಿತಿಯನ್ನು ಹೊರಹಾಕಲು ಉದ್ದೇಶಿಸುತ್ತಿವೆ’ ಎಂದು ಅವರು ಹೇಳಿದರು.

2024ರ ಲೋಕಸಭೆ ಚುನಾವಣೆಯೊಂದಿಗೆ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾತನಾಡುವ ಅಥವಾ ಪ್ರಶ್ನಿಸುವ ಧೈರ್ಯವಿರುವ ಎಲ್ಲರನ್ನೂ ಮೌನಗೊಳಿಸುವುದು ಸರ್ಕಾರದ ಕಾರ್ಯಸೂಚಿಯಾಗಿದೆ. ಏಕೆಂದರೆ ಅದು ಅವರ ಇಮೇಜ್ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಭಾವಜಿತ್ ಹೇಳಿದರು.

ಸಾಮಾಜಿಕ ಮಾಧ್ಯಮ ಖಾತೆಗಳನ್ನು ಮರುಸ್ಥಾಪಿಸಿದರೆ ಮಾತ್ರ ಸಭೆ:

ರೈತರು ಮತ್ತು ಆಂದೋಲನದ ಬೆಂಬಲಿಗರ ಖಾತೆಗಳನ್ನು ಮರುಸ್ಥಾಪಿಸುವವರೆಗೆ ಮುಂದಿನ ಸಭೆಗಳನ್ನು ಬಹಿಷ್ಕರಿಸಲು ನಾಯಕರು ನಿರ್ಧರಿಸಿದ್ದಾರೆ ಎಂದು ಭಾವಜಿತ್ ಹೇಳಿದರು. ‘ಸರ್ಕಾರವು ಈ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಮರುಪ್ರಾರಂಭಿಸಿದರೆ ಮಾತ್ರ ಮೂರನೇ ಸುತ್ತಿನ ಸಭೆಗಳಿಗೆ ಆಹ್ವಾನವನ್ನು ಸ್ವೀಕರಿಸಲಾಗುವುದು’ ಎಂದು ರೈತ ಸಂಘದ ಮುಖಂಡರು ನಿರ್ಧರಿಸಿದ್ದಾರೆ

ರೈತ ನಾಯಕ ರಮಣದೀಪ್ ಸಿಂಗ್ ಮಾನ್ ಅವರು ಫೆಬ್ರವರಿ 12 ರ ರಾತ್ರಿ ರೈತರು ಮತ್ತು ಕೇಂದ್ರ ಸಚಿವರ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಹಂಚಿಕೊಂಡಿದ್ದಾರೆ. ಆದರೆ, ಅವರ ಎಕ್ಸ್ ಖಾತೆಯನ್ನು ತಡೆಹಿಡಿಯಲಾಗಿದೆ ಎಂದು ವಾಟ್ಸಾಪ್‌ನಲ್ಲಿ ಸಂದೇಶ ಬಂದಿದೆ.

‘ನಾನು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಗೆ ಸಂದೇಶವನ್ನು ತೋರಿಸಿದೆ. ಆದರೆ ಅವರು ಅಜ್ಞಾನವನ್ನು ತೋರಿಸಿದರು ಮತ್ತು ಈ ಕ್ರಮದ ಬಗ್ಗೆ ತನಗೆ ತಿಳಿದಿಲ್ಲ ಎಂದು ಹೇಳಿದರು. ಹೀಗಾದರೆ ಹೇಗೆ ಎಂದು ನಾನು ಪಿಯೂಷ್ ಗೋಯಲ್ ಅವರನ್ನು ಕೇಳಿದೆ’ ಎಂದು ಹೇಳಿದ್ದಾರೆ.

‘ಕೇದ್ರ ಸರ್ಕಾರವು ನಮ್ಮನ್ನು ನಂಬುವಂತೆ ಕೇಳಬಹುದು, ಪಂಜಾಬ್ ಸರ್ಕಾರವನ್ನು ಪ್ರತಿನಿಧಿಸುತ್ತಿದ್ದ ಪಂಜಾಬ್ ಎನ್‌ಆರ್‌ಐ ವ್ಯವಹಾರಗಳ ಸಚಿವ ಕುಲದೀಪ್ ಸಿಂಗ್ ಧಲಿವಾಲ್ ಅವರನ್ನೂ ನಾನು ಕೇಳಿದೆ; ಇದು ಆಪ್ ಸರ್ಕಾರವೇ ನಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸುತ್ತಿದೆಯೇ ಎಂದು. ಆದರೆ ಅವರು ಉತ್ತರಿಸಲು ನಿರಾಕರಿಸಿದರು’ ಎಂದು ಅವರು ಹೇಳಿದರು. ‘ರೈತರ ಮೇಲೆ ಒತ್ತಡ ಹೇರುವ ಸ್ಪಷ್ಟ ಪ್ರಯತ್ನ ಇದಾಗಿದೆ’ ಎಂದು ರಮಣದೀಪ್ ಹೇಳಿದರು.

‘ವಾಸ್ತವವೆಂದರೆ ಕೇಂದ್ರ ಸರ್ಕಾರವು ರೈತರ ಶಕ್ತಿಗೆ ಹೆದರುತ್ತಿದೆ. ಅವರು ಈಗಾಗಲೇ 2020 ರಲ್ಲಿ ರೈತರ ಪ್ರತಿಭಟನೆಯ ಸಮಯದಲ್ಲಿ ಇದನ್ನು ನೋಡಿದ್ದಾರೆ. ಅವರು ಏನು ಬೇಕಾದರೂ ಪ್ರಯತ್ನಿಸಲಿ, ರೈತರು ಒಗ್ಗಟ್ಟಾಗಿದ್ದಾರೆ ಮತ್ತು ಅವರ ಉದ್ದೇಶಕ್ಕೆ ಬದ್ಧರಾಗಿದ್ದಾರೆ’ ಎಂದು ಹೇಳಿದರು.

ಇದನ್ನೂ ಓದಿ; ಮೂರನೆ ದಿನಕ್ಕೆ ಕಾಲಿಟ್ಟ ‘ದೆಹಲಿ ಚಲೋ’ ರೈತರ ಮೆರವಣಿಗೆ; ಇಂದು ಮತ್ತೊಂದು ಸುತ್ತಿನ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...