Homeಮುಖಪುಟನಮ್ಮ ಪುತ್ರ ಬಿಜೆಪಿ ಸೇರಿದ್ದು ನೋವು ತಂದಿದೆ: ಮಾಜಿ ಸಚಿವ ಎ.ಕೆ.ಆಂಟನಿ ಹೇಳಿಕೆ

ನಮ್ಮ ಪುತ್ರ ಬಿಜೆಪಿ ಸೇರಿದ್ದು ನೋವು ತಂದಿದೆ: ಮಾಜಿ ಸಚಿವ ಎ.ಕೆ.ಆಂಟನಿ ಹೇಳಿಕೆ

ಬಿಜೆಪಿಯವರು ಅನಿಲ್ ಆಂಟನಿಯನ್ನು ಬಳಸಿ ಬೀಸಾಡುತ್ತಾರೆಂದು ಅಜಿತ್ ಆಂಟನಿ ಆತಂಕ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಹಿರಿಯ ಕಾಂಗ್ರೆಸ್ ನಾಯಕ ಎ ಕೆ ಆಂಟನಿ ಅವರ ಪುತ್ರ ಅನಿಲ್ ಕೆ.ಆಂಟನಿಯವರು ಬಿಜೆಪಿಗೆ ಸೇರ್ಪಡೆಯಾಗಿರುವುದನ್ನು ಸ್ವತಃ ಎ.ಕೆ.ಆಂಟನಿಯವರೇ ವಿರೋಧಿಸಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ರಕ್ಷಣಾ ಸಚಿವ ಎ.ಕೆ.ಆಂಟನಿ ಅವರು ಪ್ರತಿಕ್ರಿಯಿಸಿ, “ಬಿಜೆಪಿ ಸೇರಿ ನನ್ನ ಮಗ ತಪ್ಪು ನಿರ್ಧಾರ ತೆಗೆದುಕೊಂಡಿದ್ದಾನೆ. ಇದರಿಂದ ನೋವಾಗಿದೆ” ಎಂದು ಹೇಳಿದ್ದಾರೆ.

ಅನಿಲ್ ಆಂಟನಿ ಬಿಜೆಪಿಗೆ ಸೇರ್ಪಡೆಗೊಂಡ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಎ.ಕೆ.ಆಂಟನಿ, “ನರೇಂದ್ರ ಮೋದಿ ಸರ್ಕಾರ ವ್ಯವಸ್ಥಿತವಾಗಿ ದೇಶದ ವೈವಿಧ್ಯತೆ ಮತ್ತು ಜಾತ್ಯತೀತತೆಯನ್ನು ದುರ್ಬಲಗೊಳಿಸುತ್ತಿದೆ. ದೇಶದ ಸಾಂವಿಧಾನಿಕ ಮೌಲ್ಯವನ್ನು ನಾಶಪಡಿಸುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಭಾರತದ ಮೂಲವೆಂದರೆ ಏಕತೆ ಮತ್ತು ಧಾರ್ಮಿಕ ಸಾಮರಸ್ಯ. 2014ರ ನಂತರ ಅಧಿಕಾರಕ್ಕೆ ಬಂದ ಮೋದಿ ಸರಕಾರವು ವೈವಿಧ್ಯತೆ ಮತ್ತು ಜಾತ್ಯತೀತತೆಯನ್ನು ವ್ಯವಸ್ಥಿತವಾಗಿ ದುರ್ಬಲಗೊಳಿಸುತ್ತಿದೆ. ವಿವಿಧತೆಯಲ್ಲಿ ಏಕತೆ ಎಂಬುದು ಭಾರತೀಯ ಪರಿಕಲ್ಪನೆಯಾಗಿದೆ. ಆದರೆ ಬಿಜೆಪಿ ಏಕರೂಪತೆಯನ್ನು ಮಾತ್ರ ಪ್ರತಿಪಾದಿಸುತ್ತದೆ. ಅವರು ದೇಶದ ಸಾಂವಿಧಾನಿಕ ಮೌಲ್ಯಗಳನ್ನು ನಾಶಪಡಿಸುತ್ತಿದ್ದಾರೆ” ಎಂದಿದ್ದಾರೆ.

“ಕೊನೆಯ ಉಸಿರು ಇರುವವರೆಗೂ ನಾನು ಆರ್‌ಎಸ್‌ಎಸ್ ಮತ್ತು ಬಿಜೆಪಿಯ ತಪ್ಪು ನೀತಿಗಳನ್ನು ವಿರೋಧಿಸುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರದ ಬಗ್ಗೆ ತಮ್ಮ ನಿಲುವು ವ್ಯಕ್ತಪಡಿಸಿದ್ದ ಅನಿಲ್ ಆಂಟನಿ, ಗುರುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ಸೇರುವ ಮುನ್ನ ತಮ್ಮ ತಂದೆಯವರನ್ನು ಸಂಪರ್ಕಿಸಿದ್ದೀರಾ ಎಂಬ ಪ್ರಶ್ನೆಗೆ, “ಇದು ವ್ಯಕ್ತಿಗೆ ಸಂಬಂಧಿಸಿದ್ದಲ್ಲ, ಭಿನ್ನಾಭಿಪ್ರಾಯ ಮತ್ತು ವಿಚಾರಗಳ ಬಗ್ಗೆ ಸಂಬಂಧಿಸಿದ್ದು. ನಾನು ಸರಿಯಾದ ಹೆಜ್ಜೆ ಇಟ್ಟಿದ್ದೇನೆ ಎಂದು ನಂಬುತ್ತೇನೆ. ನನ್ನ ತಂದೆಯ ಮೇಲಿನ ನನ್ನ ಗೌರವ ಹಾಗೆಯೇ ಉಳಿಯುತ್ತದೆ” ಎಂದು ತಿಳಿಸಿದ್ದಾರೆ.

ಬಿಜೆಪಿ ಸೇರಿದ್ದಕ್ಕಾಗಿ ಅನಿಲ್ ಆಂಟನಿ ವಿರುದ್ಧ ಕಾಂಗ್ರೆಸ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, “ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಎಕೆ ಆಂಟನಿ ಅವರಿಗೆ ದ್ರೋಹ ಮಾಡಿದ್ದಾರೆ” ಎಂದು ಆರೋಪಿಸಿದೆ. ಕೆಪಿಸಿಸಿ ಮುಖ್ಯಸ್ಥ ಕೆ ಸುಧಾಕರನ್ ಅವರು, “ಅನಿಲ್‌ಗೆ ಯಾವುದೇ ಪಕ್ಷದ ಜವಾಬ್ದಾರಿಗಳನ್ನು ನೀಡಿಲ್ಲ. ಹೀಗಾಗಿ ಹೋಗಿದ್ದಾರೆ” ಎಂದಿದ್ದಾರೆ.

ಅನಿಲ್ ಆಂಟೋನಿಯವರ ನಿರ್ಧಾರವನ್ನು ಅವರ ಕಿರಿಯ ಸಹೋದರ ಅಜಿತ್ ಆಂಟೋನಿ ವಿರೋಧಿಸಿದ್ದಾರೆ. “ಅನಿಲ್ ಅವರು ತಮ್ಮ ನಿರ್ಧಾರದ ಬಗ್ಗೆ ಕುಟುಂಬಕ್ಕೆ ಕಿಂಚಿತ್ತೂ ಸುಳಿವು ನೀಡಿಲ್ಲ, ಗುರುವಾರದ ಬೆಳವಣಿಗೆಯ ಬಗ್ಗೆ ಚಾನೆಲ್‌ಗಳಲ್ಲಿ ಸುದ್ದಿ ನೋಡಿ ಆಘಾತವಾಗಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಆಂಧ್ರಪ್ರದೇಶದ ಮಾಜಿ ಸಿಎಂ ಕಿರಣ್‌ಕುಮಾರ್‌ ರೆಡ್ಡಿ ಬಿಜೆಪಿಗೆ ಸೇರ್ಪಡೆ

“ಪಪ್ಪ (ಎ ಕೆ ಆಂಟನಿ) ಮನೆಯ ಮೂಲೆಯೊಂದರಲ್ಲಿ ಅತ್ಯಂತ ನೋವಿನಿಂದ ಕುಳಿತ್ತಿದ್ದರು. ನನ್ನ ಜೀವನದಲ್ಲಿ ನಾನು ಅವರನ್ನು ಈ ರೀತಿ ದುರ್ಬಲವಾಗಿ ನೋಡಿಲ್ಲ. ಅವರು ಕಣ್ಣೀರು ಹಾಕಲಿಲ್ಲ, ಅಷ್ಟೇ” ಎಂದು ಅಜಿತ್ ಹೇಳಿಕೊಂಡಿದ್ದಾರೆ.

ತನ್ನ ಸಹೋದರ ಬಿಜೆಪಿಗೆ ಸೇರಲು ತನ್ನದೇ ಆದ ಕಾರಣಗಳನ್ನು ಹೊಂದಿದ್ದಾನೆ. ಕಾಂಗ್ರೆಸ್ ಪಕ್ಷದ ಅಪರಿಚಿತ ಕಾರ್ಯಕರ್ತರಿಂದ ಆತನಿಗೆ ಹಲವಾರು ನಿಂದನೀಯ ಕರೆಗಳು ಬರುತ್ತಿದ್ದವು, ಅದು ತನಗೆ ನೋವುಂಟು ಮಾಡಿರಬಹುದು ಎಂದು ಶಂಕಿಸಿದ್ದಾರೆ.

“ಅವರು ಕೋಪದಿಂದ (ಕಾಂಗ್ರೆಸ್) ಪಕ್ಷ ತೊರೆದಿದ್ದಾರೆಂದು ನಾನು ಭಾವಿಸಿರುವೆ. ಆದರೆ ಅವರು ಬಿಜೆಪಿಗೆ ಹೋಗುತ್ತಾರೆ ಎಂದು ನಾನು ಎಂದಿಗೂ ಯೋಚಿಸಿರಲಿಲ್ಲ. ನಿರ್ಧಾರವು ಸಂಪೂರ್ಣವಾಗಿ ಅನಿರೀಕ್ಷಿತವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ತಮ್ಮ ತಪ್ಪುಗಳನ್ನು ಸರಿಪಡಿಸಿಕೊಂಡ ನಂತರ ಅವರು ಕಾಂಗ್ರೆಸ್ ಪಕ್ಷಕ್ಕೆ ಮರಳಬಹುದು. ಬಿಜೆಪಿಯವರು ಅನಿಲ್ ಅವರನ್ನು ಕರಿಬೇವಿನ ಎಲೆಗಳಂತೆ ಬಳಸಿ ಎಸೆಯುತ್ತಾರೆ” ಎಂದು ಅವರು ಭವಿಷ್ಯ ನುಡಿದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...