Homeಮುಖಪುಟನಮ್ಮ ಪುತ್ರ ಬಿಜೆಪಿ ಸೇರಿದ್ದು ನೋವು ತಂದಿದೆ: ಮಾಜಿ ಸಚಿವ ಎ.ಕೆ.ಆಂಟನಿ ಹೇಳಿಕೆ

ನಮ್ಮ ಪುತ್ರ ಬಿಜೆಪಿ ಸೇರಿದ್ದು ನೋವು ತಂದಿದೆ: ಮಾಜಿ ಸಚಿವ ಎ.ಕೆ.ಆಂಟನಿ ಹೇಳಿಕೆ

ಬಿಜೆಪಿಯವರು ಅನಿಲ್ ಆಂಟನಿಯನ್ನು ಬಳಸಿ ಬೀಸಾಡುತ್ತಾರೆಂದು ಅಜಿತ್ ಆಂಟನಿ ಆತಂಕ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಹಿರಿಯ ಕಾಂಗ್ರೆಸ್ ನಾಯಕ ಎ ಕೆ ಆಂಟನಿ ಅವರ ಪುತ್ರ ಅನಿಲ್ ಕೆ.ಆಂಟನಿಯವರು ಬಿಜೆಪಿಗೆ ಸೇರ್ಪಡೆಯಾಗಿರುವುದನ್ನು ಸ್ವತಃ ಎ.ಕೆ.ಆಂಟನಿಯವರೇ ವಿರೋಧಿಸಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ರಕ್ಷಣಾ ಸಚಿವ ಎ.ಕೆ.ಆಂಟನಿ ಅವರು ಪ್ರತಿಕ್ರಿಯಿಸಿ, “ಬಿಜೆಪಿ ಸೇರಿ ನನ್ನ ಮಗ ತಪ್ಪು ನಿರ್ಧಾರ ತೆಗೆದುಕೊಂಡಿದ್ದಾನೆ. ಇದರಿಂದ ನೋವಾಗಿದೆ” ಎಂದು ಹೇಳಿದ್ದಾರೆ.

ಅನಿಲ್ ಆಂಟನಿ ಬಿಜೆಪಿಗೆ ಸೇರ್ಪಡೆಗೊಂಡ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಎ.ಕೆ.ಆಂಟನಿ, “ನರೇಂದ್ರ ಮೋದಿ ಸರ್ಕಾರ ವ್ಯವಸ್ಥಿತವಾಗಿ ದೇಶದ ವೈವಿಧ್ಯತೆ ಮತ್ತು ಜಾತ್ಯತೀತತೆಯನ್ನು ದುರ್ಬಲಗೊಳಿಸುತ್ತಿದೆ. ದೇಶದ ಸಾಂವಿಧಾನಿಕ ಮೌಲ್ಯವನ್ನು ನಾಶಪಡಿಸುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಭಾರತದ ಮೂಲವೆಂದರೆ ಏಕತೆ ಮತ್ತು ಧಾರ್ಮಿಕ ಸಾಮರಸ್ಯ. 2014ರ ನಂತರ ಅಧಿಕಾರಕ್ಕೆ ಬಂದ ಮೋದಿ ಸರಕಾರವು ವೈವಿಧ್ಯತೆ ಮತ್ತು ಜಾತ್ಯತೀತತೆಯನ್ನು ವ್ಯವಸ್ಥಿತವಾಗಿ ದುರ್ಬಲಗೊಳಿಸುತ್ತಿದೆ. ವಿವಿಧತೆಯಲ್ಲಿ ಏಕತೆ ಎಂಬುದು ಭಾರತೀಯ ಪರಿಕಲ್ಪನೆಯಾಗಿದೆ. ಆದರೆ ಬಿಜೆಪಿ ಏಕರೂಪತೆಯನ್ನು ಮಾತ್ರ ಪ್ರತಿಪಾದಿಸುತ್ತದೆ. ಅವರು ದೇಶದ ಸಾಂವಿಧಾನಿಕ ಮೌಲ್ಯಗಳನ್ನು ನಾಶಪಡಿಸುತ್ತಿದ್ದಾರೆ” ಎಂದಿದ್ದಾರೆ.

“ಕೊನೆಯ ಉಸಿರು ಇರುವವರೆಗೂ ನಾನು ಆರ್‌ಎಸ್‌ಎಸ್ ಮತ್ತು ಬಿಜೆಪಿಯ ತಪ್ಪು ನೀತಿಗಳನ್ನು ವಿರೋಧಿಸುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರದ ಬಗ್ಗೆ ತಮ್ಮ ನಿಲುವು ವ್ಯಕ್ತಪಡಿಸಿದ್ದ ಅನಿಲ್ ಆಂಟನಿ, ಗುರುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ಸೇರುವ ಮುನ್ನ ತಮ್ಮ ತಂದೆಯವರನ್ನು ಸಂಪರ್ಕಿಸಿದ್ದೀರಾ ಎಂಬ ಪ್ರಶ್ನೆಗೆ, “ಇದು ವ್ಯಕ್ತಿಗೆ ಸಂಬಂಧಿಸಿದ್ದಲ್ಲ, ಭಿನ್ನಾಭಿಪ್ರಾಯ ಮತ್ತು ವಿಚಾರಗಳ ಬಗ್ಗೆ ಸಂಬಂಧಿಸಿದ್ದು. ನಾನು ಸರಿಯಾದ ಹೆಜ್ಜೆ ಇಟ್ಟಿದ್ದೇನೆ ಎಂದು ನಂಬುತ್ತೇನೆ. ನನ್ನ ತಂದೆಯ ಮೇಲಿನ ನನ್ನ ಗೌರವ ಹಾಗೆಯೇ ಉಳಿಯುತ್ತದೆ” ಎಂದು ತಿಳಿಸಿದ್ದಾರೆ.

ಬಿಜೆಪಿ ಸೇರಿದ್ದಕ್ಕಾಗಿ ಅನಿಲ್ ಆಂಟನಿ ವಿರುದ್ಧ ಕಾಂಗ್ರೆಸ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, “ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಎಕೆ ಆಂಟನಿ ಅವರಿಗೆ ದ್ರೋಹ ಮಾಡಿದ್ದಾರೆ” ಎಂದು ಆರೋಪಿಸಿದೆ. ಕೆಪಿಸಿಸಿ ಮುಖ್ಯಸ್ಥ ಕೆ ಸುಧಾಕರನ್ ಅವರು, “ಅನಿಲ್‌ಗೆ ಯಾವುದೇ ಪಕ್ಷದ ಜವಾಬ್ದಾರಿಗಳನ್ನು ನೀಡಿಲ್ಲ. ಹೀಗಾಗಿ ಹೋಗಿದ್ದಾರೆ” ಎಂದಿದ್ದಾರೆ.

ಅನಿಲ್ ಆಂಟೋನಿಯವರ ನಿರ್ಧಾರವನ್ನು ಅವರ ಕಿರಿಯ ಸಹೋದರ ಅಜಿತ್ ಆಂಟೋನಿ ವಿರೋಧಿಸಿದ್ದಾರೆ. “ಅನಿಲ್ ಅವರು ತಮ್ಮ ನಿರ್ಧಾರದ ಬಗ್ಗೆ ಕುಟುಂಬಕ್ಕೆ ಕಿಂಚಿತ್ತೂ ಸುಳಿವು ನೀಡಿಲ್ಲ, ಗುರುವಾರದ ಬೆಳವಣಿಗೆಯ ಬಗ್ಗೆ ಚಾನೆಲ್‌ಗಳಲ್ಲಿ ಸುದ್ದಿ ನೋಡಿ ಆಘಾತವಾಗಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಆಂಧ್ರಪ್ರದೇಶದ ಮಾಜಿ ಸಿಎಂ ಕಿರಣ್‌ಕುಮಾರ್‌ ರೆಡ್ಡಿ ಬಿಜೆಪಿಗೆ ಸೇರ್ಪಡೆ

“ಪಪ್ಪ (ಎ ಕೆ ಆಂಟನಿ) ಮನೆಯ ಮೂಲೆಯೊಂದರಲ್ಲಿ ಅತ್ಯಂತ ನೋವಿನಿಂದ ಕುಳಿತ್ತಿದ್ದರು. ನನ್ನ ಜೀವನದಲ್ಲಿ ನಾನು ಅವರನ್ನು ಈ ರೀತಿ ದುರ್ಬಲವಾಗಿ ನೋಡಿಲ್ಲ. ಅವರು ಕಣ್ಣೀರು ಹಾಕಲಿಲ್ಲ, ಅಷ್ಟೇ” ಎಂದು ಅಜಿತ್ ಹೇಳಿಕೊಂಡಿದ್ದಾರೆ.

ತನ್ನ ಸಹೋದರ ಬಿಜೆಪಿಗೆ ಸೇರಲು ತನ್ನದೇ ಆದ ಕಾರಣಗಳನ್ನು ಹೊಂದಿದ್ದಾನೆ. ಕಾಂಗ್ರೆಸ್ ಪಕ್ಷದ ಅಪರಿಚಿತ ಕಾರ್ಯಕರ್ತರಿಂದ ಆತನಿಗೆ ಹಲವಾರು ನಿಂದನೀಯ ಕರೆಗಳು ಬರುತ್ತಿದ್ದವು, ಅದು ತನಗೆ ನೋವುಂಟು ಮಾಡಿರಬಹುದು ಎಂದು ಶಂಕಿಸಿದ್ದಾರೆ.

“ಅವರು ಕೋಪದಿಂದ (ಕಾಂಗ್ರೆಸ್) ಪಕ್ಷ ತೊರೆದಿದ್ದಾರೆಂದು ನಾನು ಭಾವಿಸಿರುವೆ. ಆದರೆ ಅವರು ಬಿಜೆಪಿಗೆ ಹೋಗುತ್ತಾರೆ ಎಂದು ನಾನು ಎಂದಿಗೂ ಯೋಚಿಸಿರಲಿಲ್ಲ. ನಿರ್ಧಾರವು ಸಂಪೂರ್ಣವಾಗಿ ಅನಿರೀಕ್ಷಿತವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ತಮ್ಮ ತಪ್ಪುಗಳನ್ನು ಸರಿಪಡಿಸಿಕೊಂಡ ನಂತರ ಅವರು ಕಾಂಗ್ರೆಸ್ ಪಕ್ಷಕ್ಕೆ ಮರಳಬಹುದು. ಬಿಜೆಪಿಯವರು ಅನಿಲ್ ಅವರನ್ನು ಕರಿಬೇವಿನ ಎಲೆಗಳಂತೆ ಬಳಸಿ ಎಸೆಯುತ್ತಾರೆ” ಎಂದು ಅವರು ಭವಿಷ್ಯ ನುಡಿದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...