Homeಮುಖಪುಟನಮ್ಮ ಪುತ್ರ ಬಿಜೆಪಿ ಸೇರಿದ್ದು ನೋವು ತಂದಿದೆ: ಮಾಜಿ ಸಚಿವ ಎ.ಕೆ.ಆಂಟನಿ ಹೇಳಿಕೆ

ನಮ್ಮ ಪುತ್ರ ಬಿಜೆಪಿ ಸೇರಿದ್ದು ನೋವು ತಂದಿದೆ: ಮಾಜಿ ಸಚಿವ ಎ.ಕೆ.ಆಂಟನಿ ಹೇಳಿಕೆ

ಬಿಜೆಪಿಯವರು ಅನಿಲ್ ಆಂಟನಿಯನ್ನು ಬಳಸಿ ಬೀಸಾಡುತ್ತಾರೆಂದು ಅಜಿತ್ ಆಂಟನಿ ಆತಂಕ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಹಿರಿಯ ಕಾಂಗ್ರೆಸ್ ನಾಯಕ ಎ ಕೆ ಆಂಟನಿ ಅವರ ಪುತ್ರ ಅನಿಲ್ ಕೆ.ಆಂಟನಿಯವರು ಬಿಜೆಪಿಗೆ ಸೇರ್ಪಡೆಯಾಗಿರುವುದನ್ನು ಸ್ವತಃ ಎ.ಕೆ.ಆಂಟನಿಯವರೇ ವಿರೋಧಿಸಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ರಕ್ಷಣಾ ಸಚಿವ ಎ.ಕೆ.ಆಂಟನಿ ಅವರು ಪ್ರತಿಕ್ರಿಯಿಸಿ, “ಬಿಜೆಪಿ ಸೇರಿ ನನ್ನ ಮಗ ತಪ್ಪು ನಿರ್ಧಾರ ತೆಗೆದುಕೊಂಡಿದ್ದಾನೆ. ಇದರಿಂದ ನೋವಾಗಿದೆ” ಎಂದು ಹೇಳಿದ್ದಾರೆ.

ಅನಿಲ್ ಆಂಟನಿ ಬಿಜೆಪಿಗೆ ಸೇರ್ಪಡೆಗೊಂಡ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಎ.ಕೆ.ಆಂಟನಿ, “ನರೇಂದ್ರ ಮೋದಿ ಸರ್ಕಾರ ವ್ಯವಸ್ಥಿತವಾಗಿ ದೇಶದ ವೈವಿಧ್ಯತೆ ಮತ್ತು ಜಾತ್ಯತೀತತೆಯನ್ನು ದುರ್ಬಲಗೊಳಿಸುತ್ತಿದೆ. ದೇಶದ ಸಾಂವಿಧಾನಿಕ ಮೌಲ್ಯವನ್ನು ನಾಶಪಡಿಸುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಭಾರತದ ಮೂಲವೆಂದರೆ ಏಕತೆ ಮತ್ತು ಧಾರ್ಮಿಕ ಸಾಮರಸ್ಯ. 2014ರ ನಂತರ ಅಧಿಕಾರಕ್ಕೆ ಬಂದ ಮೋದಿ ಸರಕಾರವು ವೈವಿಧ್ಯತೆ ಮತ್ತು ಜಾತ್ಯತೀತತೆಯನ್ನು ವ್ಯವಸ್ಥಿತವಾಗಿ ದುರ್ಬಲಗೊಳಿಸುತ್ತಿದೆ. ವಿವಿಧತೆಯಲ್ಲಿ ಏಕತೆ ಎಂಬುದು ಭಾರತೀಯ ಪರಿಕಲ್ಪನೆಯಾಗಿದೆ. ಆದರೆ ಬಿಜೆಪಿ ಏಕರೂಪತೆಯನ್ನು ಮಾತ್ರ ಪ್ರತಿಪಾದಿಸುತ್ತದೆ. ಅವರು ದೇಶದ ಸಾಂವಿಧಾನಿಕ ಮೌಲ್ಯಗಳನ್ನು ನಾಶಪಡಿಸುತ್ತಿದ್ದಾರೆ” ಎಂದಿದ್ದಾರೆ.

“ಕೊನೆಯ ಉಸಿರು ಇರುವವರೆಗೂ ನಾನು ಆರ್‌ಎಸ್‌ಎಸ್ ಮತ್ತು ಬಿಜೆಪಿಯ ತಪ್ಪು ನೀತಿಗಳನ್ನು ವಿರೋಧಿಸುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರದ ಬಗ್ಗೆ ತಮ್ಮ ನಿಲುವು ವ್ಯಕ್ತಪಡಿಸಿದ್ದ ಅನಿಲ್ ಆಂಟನಿ, ಗುರುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ಸೇರುವ ಮುನ್ನ ತಮ್ಮ ತಂದೆಯವರನ್ನು ಸಂಪರ್ಕಿಸಿದ್ದೀರಾ ಎಂಬ ಪ್ರಶ್ನೆಗೆ, “ಇದು ವ್ಯಕ್ತಿಗೆ ಸಂಬಂಧಿಸಿದ್ದಲ್ಲ, ಭಿನ್ನಾಭಿಪ್ರಾಯ ಮತ್ತು ವಿಚಾರಗಳ ಬಗ್ಗೆ ಸಂಬಂಧಿಸಿದ್ದು. ನಾನು ಸರಿಯಾದ ಹೆಜ್ಜೆ ಇಟ್ಟಿದ್ದೇನೆ ಎಂದು ನಂಬುತ್ತೇನೆ. ನನ್ನ ತಂದೆಯ ಮೇಲಿನ ನನ್ನ ಗೌರವ ಹಾಗೆಯೇ ಉಳಿಯುತ್ತದೆ” ಎಂದು ತಿಳಿಸಿದ್ದಾರೆ.

ಬಿಜೆಪಿ ಸೇರಿದ್ದಕ್ಕಾಗಿ ಅನಿಲ್ ಆಂಟನಿ ವಿರುದ್ಧ ಕಾಂಗ್ರೆಸ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, “ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಎಕೆ ಆಂಟನಿ ಅವರಿಗೆ ದ್ರೋಹ ಮಾಡಿದ್ದಾರೆ” ಎಂದು ಆರೋಪಿಸಿದೆ. ಕೆಪಿಸಿಸಿ ಮುಖ್ಯಸ್ಥ ಕೆ ಸುಧಾಕರನ್ ಅವರು, “ಅನಿಲ್‌ಗೆ ಯಾವುದೇ ಪಕ್ಷದ ಜವಾಬ್ದಾರಿಗಳನ್ನು ನೀಡಿಲ್ಲ. ಹೀಗಾಗಿ ಹೋಗಿದ್ದಾರೆ” ಎಂದಿದ್ದಾರೆ.

ಅನಿಲ್ ಆಂಟೋನಿಯವರ ನಿರ್ಧಾರವನ್ನು ಅವರ ಕಿರಿಯ ಸಹೋದರ ಅಜಿತ್ ಆಂಟೋನಿ ವಿರೋಧಿಸಿದ್ದಾರೆ. “ಅನಿಲ್ ಅವರು ತಮ್ಮ ನಿರ್ಧಾರದ ಬಗ್ಗೆ ಕುಟುಂಬಕ್ಕೆ ಕಿಂಚಿತ್ತೂ ಸುಳಿವು ನೀಡಿಲ್ಲ, ಗುರುವಾರದ ಬೆಳವಣಿಗೆಯ ಬಗ್ಗೆ ಚಾನೆಲ್‌ಗಳಲ್ಲಿ ಸುದ್ದಿ ನೋಡಿ ಆಘಾತವಾಗಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಆಂಧ್ರಪ್ರದೇಶದ ಮಾಜಿ ಸಿಎಂ ಕಿರಣ್‌ಕುಮಾರ್‌ ರೆಡ್ಡಿ ಬಿಜೆಪಿಗೆ ಸೇರ್ಪಡೆ

“ಪಪ್ಪ (ಎ ಕೆ ಆಂಟನಿ) ಮನೆಯ ಮೂಲೆಯೊಂದರಲ್ಲಿ ಅತ್ಯಂತ ನೋವಿನಿಂದ ಕುಳಿತ್ತಿದ್ದರು. ನನ್ನ ಜೀವನದಲ್ಲಿ ನಾನು ಅವರನ್ನು ಈ ರೀತಿ ದುರ್ಬಲವಾಗಿ ನೋಡಿಲ್ಲ. ಅವರು ಕಣ್ಣೀರು ಹಾಕಲಿಲ್ಲ, ಅಷ್ಟೇ” ಎಂದು ಅಜಿತ್ ಹೇಳಿಕೊಂಡಿದ್ದಾರೆ.

ತನ್ನ ಸಹೋದರ ಬಿಜೆಪಿಗೆ ಸೇರಲು ತನ್ನದೇ ಆದ ಕಾರಣಗಳನ್ನು ಹೊಂದಿದ್ದಾನೆ. ಕಾಂಗ್ರೆಸ್ ಪಕ್ಷದ ಅಪರಿಚಿತ ಕಾರ್ಯಕರ್ತರಿಂದ ಆತನಿಗೆ ಹಲವಾರು ನಿಂದನೀಯ ಕರೆಗಳು ಬರುತ್ತಿದ್ದವು, ಅದು ತನಗೆ ನೋವುಂಟು ಮಾಡಿರಬಹುದು ಎಂದು ಶಂಕಿಸಿದ್ದಾರೆ.

“ಅವರು ಕೋಪದಿಂದ (ಕಾಂಗ್ರೆಸ್) ಪಕ್ಷ ತೊರೆದಿದ್ದಾರೆಂದು ನಾನು ಭಾವಿಸಿರುವೆ. ಆದರೆ ಅವರು ಬಿಜೆಪಿಗೆ ಹೋಗುತ್ತಾರೆ ಎಂದು ನಾನು ಎಂದಿಗೂ ಯೋಚಿಸಿರಲಿಲ್ಲ. ನಿರ್ಧಾರವು ಸಂಪೂರ್ಣವಾಗಿ ಅನಿರೀಕ್ಷಿತವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ತಮ್ಮ ತಪ್ಪುಗಳನ್ನು ಸರಿಪಡಿಸಿಕೊಂಡ ನಂತರ ಅವರು ಕಾಂಗ್ರೆಸ್ ಪಕ್ಷಕ್ಕೆ ಮರಳಬಹುದು. ಬಿಜೆಪಿಯವರು ಅನಿಲ್ ಅವರನ್ನು ಕರಿಬೇವಿನ ಎಲೆಗಳಂತೆ ಬಳಸಿ ಎಸೆಯುತ್ತಾರೆ” ಎಂದು ಅವರು ಭವಿಷ್ಯ ನುಡಿದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...