Homeಮುಖಪುಟನಮ್ಮ ಪುತ್ರ ಬಿಜೆಪಿ ಸೇರಿದ್ದು ನೋವು ತಂದಿದೆ: ಮಾಜಿ ಸಚಿವ ಎ.ಕೆ.ಆಂಟನಿ ಹೇಳಿಕೆ

ನಮ್ಮ ಪುತ್ರ ಬಿಜೆಪಿ ಸೇರಿದ್ದು ನೋವು ತಂದಿದೆ: ಮಾಜಿ ಸಚಿವ ಎ.ಕೆ.ಆಂಟನಿ ಹೇಳಿಕೆ

ಬಿಜೆಪಿಯವರು ಅನಿಲ್ ಆಂಟನಿಯನ್ನು ಬಳಸಿ ಬೀಸಾಡುತ್ತಾರೆಂದು ಅಜಿತ್ ಆಂಟನಿ ಆತಂಕ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಹಿರಿಯ ಕಾಂಗ್ರೆಸ್ ನಾಯಕ ಎ ಕೆ ಆಂಟನಿ ಅವರ ಪುತ್ರ ಅನಿಲ್ ಕೆ.ಆಂಟನಿಯವರು ಬಿಜೆಪಿಗೆ ಸೇರ್ಪಡೆಯಾಗಿರುವುದನ್ನು ಸ್ವತಃ ಎ.ಕೆ.ಆಂಟನಿಯವರೇ ವಿರೋಧಿಸಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ರಕ್ಷಣಾ ಸಚಿವ ಎ.ಕೆ.ಆಂಟನಿ ಅವರು ಪ್ರತಿಕ್ರಿಯಿಸಿ, “ಬಿಜೆಪಿ ಸೇರಿ ನನ್ನ ಮಗ ತಪ್ಪು ನಿರ್ಧಾರ ತೆಗೆದುಕೊಂಡಿದ್ದಾನೆ. ಇದರಿಂದ ನೋವಾಗಿದೆ” ಎಂದು ಹೇಳಿದ್ದಾರೆ.

ಅನಿಲ್ ಆಂಟನಿ ಬಿಜೆಪಿಗೆ ಸೇರ್ಪಡೆಗೊಂಡ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಎ.ಕೆ.ಆಂಟನಿ, “ನರೇಂದ್ರ ಮೋದಿ ಸರ್ಕಾರ ವ್ಯವಸ್ಥಿತವಾಗಿ ದೇಶದ ವೈವಿಧ್ಯತೆ ಮತ್ತು ಜಾತ್ಯತೀತತೆಯನ್ನು ದುರ್ಬಲಗೊಳಿಸುತ್ತಿದೆ. ದೇಶದ ಸಾಂವಿಧಾನಿಕ ಮೌಲ್ಯವನ್ನು ನಾಶಪಡಿಸುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಭಾರತದ ಮೂಲವೆಂದರೆ ಏಕತೆ ಮತ್ತು ಧಾರ್ಮಿಕ ಸಾಮರಸ್ಯ. 2014ರ ನಂತರ ಅಧಿಕಾರಕ್ಕೆ ಬಂದ ಮೋದಿ ಸರಕಾರವು ವೈವಿಧ್ಯತೆ ಮತ್ತು ಜಾತ್ಯತೀತತೆಯನ್ನು ವ್ಯವಸ್ಥಿತವಾಗಿ ದುರ್ಬಲಗೊಳಿಸುತ್ತಿದೆ. ವಿವಿಧತೆಯಲ್ಲಿ ಏಕತೆ ಎಂಬುದು ಭಾರತೀಯ ಪರಿಕಲ್ಪನೆಯಾಗಿದೆ. ಆದರೆ ಬಿಜೆಪಿ ಏಕರೂಪತೆಯನ್ನು ಮಾತ್ರ ಪ್ರತಿಪಾದಿಸುತ್ತದೆ. ಅವರು ದೇಶದ ಸಾಂವಿಧಾನಿಕ ಮೌಲ್ಯಗಳನ್ನು ನಾಶಪಡಿಸುತ್ತಿದ್ದಾರೆ” ಎಂದಿದ್ದಾರೆ.

“ಕೊನೆಯ ಉಸಿರು ಇರುವವರೆಗೂ ನಾನು ಆರ್‌ಎಸ್‌ಎಸ್ ಮತ್ತು ಬಿಜೆಪಿಯ ತಪ್ಪು ನೀತಿಗಳನ್ನು ವಿರೋಧಿಸುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರದ ಬಗ್ಗೆ ತಮ್ಮ ನಿಲುವು ವ್ಯಕ್ತಪಡಿಸಿದ್ದ ಅನಿಲ್ ಆಂಟನಿ, ಗುರುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ಸೇರುವ ಮುನ್ನ ತಮ್ಮ ತಂದೆಯವರನ್ನು ಸಂಪರ್ಕಿಸಿದ್ದೀರಾ ಎಂಬ ಪ್ರಶ್ನೆಗೆ, “ಇದು ವ್ಯಕ್ತಿಗೆ ಸಂಬಂಧಿಸಿದ್ದಲ್ಲ, ಭಿನ್ನಾಭಿಪ್ರಾಯ ಮತ್ತು ವಿಚಾರಗಳ ಬಗ್ಗೆ ಸಂಬಂಧಿಸಿದ್ದು. ನಾನು ಸರಿಯಾದ ಹೆಜ್ಜೆ ಇಟ್ಟಿದ್ದೇನೆ ಎಂದು ನಂಬುತ್ತೇನೆ. ನನ್ನ ತಂದೆಯ ಮೇಲಿನ ನನ್ನ ಗೌರವ ಹಾಗೆಯೇ ಉಳಿಯುತ್ತದೆ” ಎಂದು ತಿಳಿಸಿದ್ದಾರೆ.

ಬಿಜೆಪಿ ಸೇರಿದ್ದಕ್ಕಾಗಿ ಅನಿಲ್ ಆಂಟನಿ ವಿರುದ್ಧ ಕಾಂಗ್ರೆಸ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, “ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಎಕೆ ಆಂಟನಿ ಅವರಿಗೆ ದ್ರೋಹ ಮಾಡಿದ್ದಾರೆ” ಎಂದು ಆರೋಪಿಸಿದೆ. ಕೆಪಿಸಿಸಿ ಮುಖ್ಯಸ್ಥ ಕೆ ಸುಧಾಕರನ್ ಅವರು, “ಅನಿಲ್‌ಗೆ ಯಾವುದೇ ಪಕ್ಷದ ಜವಾಬ್ದಾರಿಗಳನ್ನು ನೀಡಿಲ್ಲ. ಹೀಗಾಗಿ ಹೋಗಿದ್ದಾರೆ” ಎಂದಿದ್ದಾರೆ.

ಅನಿಲ್ ಆಂಟೋನಿಯವರ ನಿರ್ಧಾರವನ್ನು ಅವರ ಕಿರಿಯ ಸಹೋದರ ಅಜಿತ್ ಆಂಟೋನಿ ವಿರೋಧಿಸಿದ್ದಾರೆ. “ಅನಿಲ್ ಅವರು ತಮ್ಮ ನಿರ್ಧಾರದ ಬಗ್ಗೆ ಕುಟುಂಬಕ್ಕೆ ಕಿಂಚಿತ್ತೂ ಸುಳಿವು ನೀಡಿಲ್ಲ, ಗುರುವಾರದ ಬೆಳವಣಿಗೆಯ ಬಗ್ಗೆ ಚಾನೆಲ್‌ಗಳಲ್ಲಿ ಸುದ್ದಿ ನೋಡಿ ಆಘಾತವಾಗಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಆಂಧ್ರಪ್ರದೇಶದ ಮಾಜಿ ಸಿಎಂ ಕಿರಣ್‌ಕುಮಾರ್‌ ರೆಡ್ಡಿ ಬಿಜೆಪಿಗೆ ಸೇರ್ಪಡೆ

“ಪಪ್ಪ (ಎ ಕೆ ಆಂಟನಿ) ಮನೆಯ ಮೂಲೆಯೊಂದರಲ್ಲಿ ಅತ್ಯಂತ ನೋವಿನಿಂದ ಕುಳಿತ್ತಿದ್ದರು. ನನ್ನ ಜೀವನದಲ್ಲಿ ನಾನು ಅವರನ್ನು ಈ ರೀತಿ ದುರ್ಬಲವಾಗಿ ನೋಡಿಲ್ಲ. ಅವರು ಕಣ್ಣೀರು ಹಾಕಲಿಲ್ಲ, ಅಷ್ಟೇ” ಎಂದು ಅಜಿತ್ ಹೇಳಿಕೊಂಡಿದ್ದಾರೆ.

ತನ್ನ ಸಹೋದರ ಬಿಜೆಪಿಗೆ ಸೇರಲು ತನ್ನದೇ ಆದ ಕಾರಣಗಳನ್ನು ಹೊಂದಿದ್ದಾನೆ. ಕಾಂಗ್ರೆಸ್ ಪಕ್ಷದ ಅಪರಿಚಿತ ಕಾರ್ಯಕರ್ತರಿಂದ ಆತನಿಗೆ ಹಲವಾರು ನಿಂದನೀಯ ಕರೆಗಳು ಬರುತ್ತಿದ್ದವು, ಅದು ತನಗೆ ನೋವುಂಟು ಮಾಡಿರಬಹುದು ಎಂದು ಶಂಕಿಸಿದ್ದಾರೆ.

“ಅವರು ಕೋಪದಿಂದ (ಕಾಂಗ್ರೆಸ್) ಪಕ್ಷ ತೊರೆದಿದ್ದಾರೆಂದು ನಾನು ಭಾವಿಸಿರುವೆ. ಆದರೆ ಅವರು ಬಿಜೆಪಿಗೆ ಹೋಗುತ್ತಾರೆ ಎಂದು ನಾನು ಎಂದಿಗೂ ಯೋಚಿಸಿರಲಿಲ್ಲ. ನಿರ್ಧಾರವು ಸಂಪೂರ್ಣವಾಗಿ ಅನಿರೀಕ್ಷಿತವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ತಮ್ಮ ತಪ್ಪುಗಳನ್ನು ಸರಿಪಡಿಸಿಕೊಂಡ ನಂತರ ಅವರು ಕಾಂಗ್ರೆಸ್ ಪಕ್ಷಕ್ಕೆ ಮರಳಬಹುದು. ಬಿಜೆಪಿಯವರು ಅನಿಲ್ ಅವರನ್ನು ಕರಿಬೇವಿನ ಎಲೆಗಳಂತೆ ಬಳಸಿ ಎಸೆಯುತ್ತಾರೆ” ಎಂದು ಅವರು ಭವಿಷ್ಯ ನುಡಿದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...