Homeಮುಖಪುಟಟೆಲಿಕಾಂ ಕುರಿತ ನಮ್ಮ ತೀರ್ಪು ದುರುಪಯೋಗವಾಗುತ್ತಿದೆ : ಕೇಂದ್ರಕ್ಕೆ ಸುಪ್ರೀಂ ಚಾಟಿ

ಟೆಲಿಕಾಂ ಕುರಿತ ನಮ್ಮ ತೀರ್ಪು ದುರುಪಯೋಗವಾಗುತ್ತಿದೆ : ಕೇಂದ್ರಕ್ಕೆ ಸುಪ್ರೀಂ ಚಾಟಿ

- Advertisement -
- Advertisement -

ಖಾಸಗಿ ಟೆಲಿಕಾಂ ಕಂಪನಿಗಳು ಕಟ್ಟಬೇಕಿರುವ 4 ಲಕ್ಷ ಕೋಟಿ ರೂ.ಗಳನ್ನು ಸರ್ಕಾರಿ ಸಂಸ್ಥೆಗಳಿಂದ ತುಂಬಿಕೊಡಲು ಮುಂದಾಗಿರುವ ದೂರಸಂಪರ್ಕ ಇಲಾಖೆಯ ಕ್ರಮವನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ಖಂಡಿಸಿದ್ದು, ತನ್ನ ಹಿಂದಿನ ತೀರ್ಪನ್ನು ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಕಿಡಿಕಾರಿದೆ.

4 ಲಕ್ಷ ಕೋಟಿ ರೂಗಳನ್ನು ಆಯಿಲ್ ಇಂಡಿಯಾ, ದೆಹಲಿ ಮೆಟ್ರೋ ರೈಲು ನಿಗಮ ಮತ್ತು ಪವರ್ ಗ್ರಿಡ್ ಕಾರ್ಪೊರೇಶನ್‌ನಂತಹ ಸಾರ್ವಜನಿಕ ವಲಯದ ಘಟಕಗಳಿಂದ ಕೊಡಬೇಕೆಂದು ಸರ್ಕಾರದ ದೂರಸಂಪರ್ಕ ಇಲಾಖೆ ಕೋರಿರುವುದನ್ನು ಉಲ್ಲೇಖಿಸಿದ ಕೋರ್ಟ್ ಇದನ್ನು ಯಾವುದೇ ಕಾರಣಕ್ಕೂ ಅನುಮತಿಸುವುದಿಲ್ಲ ಎಂದು ಹೇಳಿದೆ.

ಸುಪ್ರೀಂನ ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ಅಬ್ದುಲ್ ನಜೀರ್ ಮತ್ತು ಎಂ.ಆರ್ ಶಾ ಇದ್ದ ತ್ರಿದಸ್ಯ ಪೀಠವನ್ನು ಪ್ರಕರಣವನ್ನು ವಿಚಾರನೆ ನಡೆಸುತ್ತಿದ್ದು, ಈ ಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ತಿರಸ್ಕಾರ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ತನ್ನ ಈ ನಿರ್ಧಾರವನ್ನು ಮೂರು ದಿನಗಳೊಳಗೆ ಮರುಪರಿಶೀಲಿಸುವಂತೆ ಸರ್ಕಾರವನ್ನು ಕೇಳಿದೆ.

ಈ ಮೊದಲು ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವು ವೊಡಾಫೋನ್ ಐಡಿಯಾ ಸೇರಿದಂತೆ ಹಲವಾರು ದೂರಸಂಪರ್ಕ ಸಂಸ್ಥೆಗಳಿಗೆ 20 ವರ್ಷಗಳಲ್ಲಿ 1.4 ಲಕ್ಷ ಕೋಟಿ ರೂ. ಮೌಲ್ಯದ ಬ್ಯಾಕ್-ಶುಲ್ಕವನ್ನು ಪಾವತಿಸಲು ಅನುಮೋದನೆ ಕೋರಿತ್ತು. ಇದನ್ನು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.

ದೂರಸಂಪರ್ಕ ಇಲಾಖೆಯ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ಬೇಲ್‌ ಔಟ್ ಯೋಜನೆಯನ್ನು ಸರ್ಕಾರ ಹೊರತಂದಿದೆ. ಕಂಪೆನಿಗಳಿಗೆ ಒಂದೇ ಸಮಯದಲ್ಲಿ ಮೊತ್ತವನ್ನು ಪಾವತಿಸುವುದು ಕಷ್ಟಕರವಾಗಿರುತ್ತದೆ. ನ್ಯಾಯಾಲಯವು ಆಕ್ಷೇಪಿಸಿದರೆ ಅದು ಟೆಲಿಕಾಂ ಕ್ಷೇತ್ರದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ, ನೆಟ್‌ವರ್ಕ್ ಮೇಲೆ ಪರಿಣಾಮ ಬೀರುತ್ತದೆ ಮತ್ತು ಗ್ರಾಹಕರು ಅಂತಿಮವಾಗಿ ತೊಂದರೆ ಅನುಭವಿಸುತ್ತಾರೆ. ಸಾರ್ವಜನಿಕ ವಲಯದ ಉದ್ಯಮಗಳಿಂದ ಬಾಕಿ ಹಣವನ್ನು ಏಕೆ ಸಂಗ್ರಹಿಸಲಾಗಿದೆ ಎಂಬುದರ ಕುರಿತು ಸರ್ಕಾರ ಅಫಿಡವಿಟ್ ಸಲ್ಲಿಸಲಿದೆ” ಎಂದು ಅವರು ಹೇಳಿದರು.

“ಭವಿಷ್ಯದ 20 ವರ್ಷಗಳನ್ನು ಯಾರು ನೋಡಿದ್ದಾರೆ?” ಎಂದು ಕಟುವಾಗಿ ಪ್ರತಿಕ್ರಿಯಿಸಿದ ನ್ಯಾಯಾಲಯ, ಆ ಬೇಡಿಕೆಯನ್ನು ನಿರಾಕರಿಸಿದೆ.


ಇದನ್ನೂ ಓದಿ: ಕೂಡಲೇ ಹಣ ಪಾವತಿಸಿ : ಟೆಲಿಕಾಂ ಕಂಪನಿಗಳಿಗೆ ಸುಪ್ರೀಂ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...