Homeಕರ್ನಾಟಕ'ನಮ್ಮದು ಪ್ರಜಾಪ್ರಭುತ್ವ; ಪ್ರಧಾನಮಂತ್ರಿ ಏಕಚಕ್ರಾಧಿಪತಿ ಅಲ್ಲ..'; ದೇವೇಗೌಡರಿಗೆ 'ಫೆಡರಲಿಸಂ' ಪಾಠ ಮಾಡಿದ ಸಿಎಂ

‘ನಮ್ಮದು ಪ್ರಜಾಪ್ರಭುತ್ವ; ಪ್ರಧಾನಮಂತ್ರಿ ಏಕಚಕ್ರಾಧಿಪತಿ ಅಲ್ಲ..’; ದೇವೇಗೌಡರಿಗೆ ‘ಫೆಡರಲಿಸಂ’ ಪಾಠ ಮಾಡಿದ ಸಿಎಂ

- Advertisement -
- Advertisement -

‘ನಮ್ಮದು ಒಕ್ಕೂಟ ವ್ಯವಸ್ಥೆಯ ಪ್ರಜಾಪ್ರಭುತ್ವ. ಇಲ್ಲಿ ಪ್ರಧಾನನಮಂತ್ರಿ ಏಕಚಕ್ರಾಧಿಪತಿಯೂ ಅಲ್ಲ, ಮುಖ್ಯಮಂತ್ರಿ ಮಾಂಡಲೀಕನೂ ಅಲ್ಲ. ಇಬ್ಬರು ಅವರವರ ಸ್ಥಾನಮಾನದಲ್ಲಿ ಸಮಾನರು’ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರಿಗೆ ಒಕ್ಕೂಟ ವ್ಯವಸ್ಥೆಯ (ಫೆಡರಲಿಸಂ) ಮಾಠ ಮಾಡಿದ್ದಾರೆ.

ಏಪ್ರಿಲ್ 14 ರಂದು ಮೈಸೂರಿನಲ್ಲಿ ನಡೆದ ಎನ್‌ಡಿಎ ರ್ಯಾಲಿಯಲ್ಲಿ ಮಾಜಿ ಪ್ರಧಾನಿ ಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದರು. ಈ ಕುರಿತು ತಮ್ಮ ಆಕ್ರೋಶ ಹೊರಹಾಕಿರುವ ಸಿಎಂ, ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಸನ್ಮಾನ್ಯ ಎಚ್.ಡಿ. ದೇವೇಗೌಡರೇ, ನೂರು ಕೋಟಿ ಜನರ ಪ್ರತಿನಿಧಿಯಾಗಿರುವ ಪ್ರಧಾನಮಂತ್ರಿಯವರನ್ನು ಆರು ಕೋಟಿ ಜನರ ಪ್ರತಿನಿಧಿಯಾದ ಮುಖ್ಯಮಂತ್ರಿ ಪ್ರಶ್ನೆ ಮಾಡಬಾರದು ಎಂಬ ನಿಮ್ಮ ಮಾತು ನನ್ನಲ್ಲಿ ಅತ್ಯಾಶ್ಚರ್ಯವನ್ನು ಮಾತ್ರವಲ್ಲ, ನಿಮ್ಮ ಬಗ್ಗೆ ಕನಿಕರವನ್ನೂ ಉಂಟು ಮಾಡಿದೆ. ಒಂದು ಪ್ರಾದೇಶಿಕ ಪಕ್ಷವನ್ನು ಇಷ್ಟು ವರ್ಷಗಳ ಕಾಲ ಮುನ್ನಡೆಸುತ್ತಾ ಬಂದ ನೀವು ನಿರಂತರವಾಗಿ ಕೇಂದ್ರ ಸರ್ಕಾರ ಮತ್ತು ಪ್ರಧಾನಮಂತ್ರಿಯವರನ್ನು ಟೀಕಿಸುತ್ತಾ ಬಂದವರು. ಇದೀಗ ಈ ಇಳಿವಯಸ್ಸಿನಲ್ಲಿ ಈ ಬಗೆಯ ಶರಣಾಗತಿಯ ಸ್ಥಿತಿ ಯಾಕೆ ಬಂತು’ ಎಂದು ಪ್ರಶ್ನಿಸಿದ್ದಾರೆ.

‘ನಮ್ಮದು ಒಕ್ಕೂಟ ವ್ಯವಸ್ಥೆಯ ಪ್ರಜಾಪ್ರಭುತ್ವ. ಇಲ್ಲಿ ಪ್ರಧಾನನಮಂತ್ರಿ ಏಕಚಕ್ರಾಧಿಪತಿಯೂ ಅಲ್ಲ, ಮುಖ್ಯಮಂತ್ರಿ ಮಾಂಡಲೀಕನೂ ಅಲ್ಲ. ಇಬ್ಬರು ಅವರವರ ಸ್ಥಾನಮಾನದಲ್ಲಿ ಸಮಾನರು. ಎರಡೂ ಪದವಿಗಳು ಸಮಾನವಾದುದು, ವಯಸ್ಸಿನ ಹಿರಿ-ಕಿರಿತನಗಳು ಪದವಿಗಳಿಗೆ ಅನ್ವಯವಾಗುವುದಿಲ್ಲ. ಅತಿ ಸಣ್ಣ ವಯಸ್ಸಿಗೆ ಪ್ರಧಾನಿಯಾದ ರಾಜೀವ್ ಗಾಂಧಿಯವರಿದ್ದಾಗಲೂ ಅವರಿಗಿಂತ ಹಿರಿಯರಾದ ಮುಖ್ಯಮಂತ್ರಿಗಳೂ ಇದ್ದರು. ಆಗಲೂ ಪರಸ್ಪರ ಟೀಕೆ-ಟಿಪ್ಪಣಿಗಳು ವಿನಿಮಯವಾಗುತ್ತಿದ್ದವು. ಇಲ್ಲಿಯ ವರೆಗೆ ಯಾರೂ ಕೂಡಾ ನಿಮ್ಮ ರೀತಿಯ ಉಪದ್ವಾಪ್ಯತನದ ಪ್ರಶ್ನೆಗಳನ್ನು ಎತ್ತಿರಲಿಲ್ಲ. ನೀವು ಹಿಂದಿನ ಪ್ರಧಾನಿಗಳನ್ನು ಯಾವ ಯಾವ ರೀತಿಯಲ್ಲಿ ಪ್ರಶ್ನಿಸಿದ್ದೀರಿ, ದೂರಿದ್ದೀರಿ, ಕೆಣಕಿದ್ದೀರಿ ಎನ್ನುವ ಪಟ್ಟಿಯನ್ನು ನಾನು ನಿಮಗೆ ಕೊಡಬಲ್ಲೆ’ ಎಂದು ಹೇಳಿರುವ ಮುಖ್ಯಮಂತ್ರಿಗಳು, ಪ್ರಧಾನಿ ಮೋದಿ ಕುರಿತು ದೇವೇಗೌಡರು ಮಾಡಿರುವ ಟೀಕೆಗಳ ಪತ್ರಿಕಾ ತುಣುಕುಗಳನ್ನು ಹಂಚಿಕೊಂಡಿದ್ದಾರೆ.

‘2002ರ ಗುಜರಾತ್ ಗಲಭೆಯ ಬಗ್ಗೆ ಲೋಕಸಭೆಯಲ್ಲಿ ನಡುರಾತ್ರಿವರೆಗೆ ನಡೆದ ಚರ್ಚೆಯಲ್ಲಿ ನೀವು ಆಗಿನ ಪ್ರಧಾನಿ ಅಟಲ್‌ಬಿಹಾರಿ ವಾಜಪೇಯಿ ಅವರ ವಿರುದ್ಧ ಪ್ರಯೋಗ ಮಾಡಿರುವ ಟೀಕಾಸ್ತ್ರಗಳು ಸದನದ ದಾಖಲೆಯಲ್ಲಿರಬಹುದು. ಇದನ್ನು ಈಗಲೂ ನಾನು ತಪ್ಪೆಂದು ಹೇಳುವುದಿಲ್ಲ. ಇವೆಲ್ಲವೂ ಸಂಸದೀಯ ಪ್ರಜಾಪ್ರಭುತ್ವದ ನಡವಳಿಕೆಗಳ ಭಾಗವಾಗಿರುತ್ತದೆ. ಆಗ ನೀವು ಮುಖ್ಯಮಂತ್ರಿಯೂ ಆಗಿರಲಿಲ್ಲ, ನೀವು ಕೇವಲ ಒಂದು ಲೋಕಸಭಾ ಕ್ಷೇತ್ರದ ಪ್ರತಿನಿಧಿಯಾಗಿದ್ದವರು. ಆಗ ಈ ನೂರು ಕೋಟಿ, ಆರು ಕೋಟಿ ವ್ಯತ್ಯಾಸಗಳು ಬಾಧಿಸಿರಲಿಲ್ಲವೇ’ ಎಂದು ಪ್ರಶ್ನಿಸಿದ್ದಾರೆ.

‘ಕೆಲವೇ ತಿಂಗಳುಗಳ ಹಿಂದೆ ನರೇಂದ್ರ ಮೋದಿ ಅವರಿಗಿಂತ ಕನಿಷ್ಠ ಹತ್ತು ವರ್ಷ ಸಣ್ಣವರಾಗಿರುವ ಮತ್ತು ಕೇವಲ ಒಬ್ಬ ಶಾಸಕರಾಗಿರುವ ನಿಮ್ಮ ಮಗ ಎಚ್.ಡಿ.ಕುಮಾರಸ್ವಾಮಿಯವರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಯಾವ ಭಾಷೆ ಬಳಸಿ ತರಾಟೆಗೆ ತೆಗೆದುಕೊಂಡಿದ್ದರೆನ್ನುವುದನ್ನು ನಾಡಿನ ಜನ ಇನ್ನೂ ಮರೆತಿಲ್ಲ, ನಿಮ್ಮ ನೆನಪಲ್ಲಿಯೂ ಇರಬಹುದು. ಆಗ ಯಾಕೆ ನೀವು ನೂರು ಕೋಟಿ ಜನರನ್ನು ಪ್ರತಿನಿಧಿಸುವ ಪ್ರಧಾನಮಂತ್ರಿಯವರನ್ನು ಟೀಕಿಸಬಾರದು ಎಂದು ಮಗನಿಗೆ ಕಿವಿ ಹಿಂಡಿ ಬುದ್ದಿ ಹೇಳಿರಲಿಲ್ಲ? ಇವೆಲ್ಲವೂ ಅನುಕೂಲಶಾಸ್ತ್ರ ಅಷ್ಟೆ ಎನ್ನುವುದು ರಾಜ್ಯದ ಜನರಿಗೆ ತಿಳಿದಿದೆ’ ಎಂದು ಹೇಳಿದ್ದಾರೆ.

‘ರಾಜ್ಯ ಸರ್ಕಾರಕ್ಕೆ ಅನ್ಯಾಯವಾದಾಗ ಅದನ್ನು ವಿರೋಧಿಸಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿಯವರನ್ನು ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೆ. ಇದೇ ನರೇಂದ್ರ ಮೋದಿ ಅವರು ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ದೇಶ ಕಂಡ ಅತ್ಯಂತ ಸಭ್ಯ ಮತ್ತು ಗೌರವಾರ್ಹ ರಾಜಕೀಯ ನಾಯಕರಾಗಿರುವ ಮನಮೋಹನ್ ಸಿಂಗ್ ವಿರುದ್ಧ ಯಾವ ಭಾಷೆ ಬಳಸಿದ್ದರೆನ್ನುವುದು ನಿಮಗೆ ನೆನಪಿರಬಹುದೆಂದು ಭಾವಿಸಿದ್ದೇನೆ.
ನೀವು ದೇಶದ ಪ್ರಧಾನಿಯಾಗಿದ್ದಾಗ ಕನ್ನಡಿಗರು ಎದೆಯುಬ್ಬಿಸಿ ಖುಷಿಪಟ್ಟರು. ನೀವು ರಾಜ್ಯದ ನೆಲ-ಜಲ-ಭಾಷೆಯ ರಕ್ಷಣೆಗಾಗಿ ಕೇಂದ್ರ ಸರ್ಕಾರದ ವಿರುದ್ಧ ಆಯಾ ಕಾಲಗಳ ಪ್ರಧಾನಿಗಳ ವಿರುದ್ಧ ಹೋರಾಟಕ್ಕಿಳಿದಾಗಲೂ ಕನ್ನಡಿಗರು ನಿಮ್ಮನ್ನು ತಲೆಮೇಲೆ ಕೂರಿಸಿ ಕೊಂಡಾಡಿದರು’ ಎಂದಿದ್ದಾರೆ.

‘ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳು ತಮ್ಮ ಪಕ್ಷವನ್ನು ಬೆಂಬಲಿಸುತ್ತಿಲ್ಲ ಎಂಬ ಏಕೈಕ ಕಾರಣಕ್ಕಾಗಿ ಪ್ರಧಾನ ಮಂತ್ರಿಗಳು ಈ ರಾಜ್ಯಗಳ ವಿರುದ್ಧ ಸೇಡು ತೀರಿಸಿಕೊಳ್ಳುವವರಂತೆ ನಡೆದುಕೊಳ್ಳುತ್ತಿರುವ ಸಂದರ್ಭದಲ್ಲಿ ನೀವು ಕೇಂದ್ರದ ವಿರುದ್ಧದ ಹೋರಾಟದ ಮುಂಚೂಣಿಯಲ್ಲಿರಬೇಕಾಗಿತ್ತು. ದುರ್ದೈವದ ಸಂಗತಿ ಎಂದರೆ ಈಗ ನೀವು ಕೇವಲ ನಿಮ್ಮ ಪಕ್ಷ ಮತ್ತು ಕುಟುಂಬದ ರಾಜಕೀಯ ಉಳಿವಿಗಾಗಿ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿರುವ ಪ್ರಧಾನಮಂತ್ರಿಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ಅವರ ಪರವಾಗಿ ನಮ್ಮ ವಿರುದ್ಧ ಕತ್ತಿ ಬೀಸುತ್ತಿದ್ದೀರಿ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘ಈಗಲೂ ಕಾಲ ಮಿಂಚಿಲ್ಲ, ನಿಮ್ಮ ತಪ್ಪನ್ನು ತಿದ್ದಿಕೊಂಡು ಕನ್ನಡಿಗರಿಗೆ ಕೇಂದ್ರ ಬಿಜೆಪಿ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಿ. ತೆರಿಗೆ ಹಂಚಿಕೆ, ಬರ ಪರಿಹಾರ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ನರೇಂದ್ರ ಮೋದಿ ಸರ್ಕಾರ ಕನ್ನಡಿಗರ ಕತ್ತು ಕುಯ್ಯುತ್ತಿದೆ. ಇದರ ವಿರುದ್ಧ ನೀವು ದನಿ ಎತ್ತದೆ ಇರುವುದರಿಂದ ವರ್ತಮಾನದಲ್ಲಿ ನಿಮ್ಮ ಪಕ್ಷಕ್ಕೆ ಒಂದಷ್ಟು ಲಾಭವಾಗಲೂ ಬಹುದು. ಆದರೆ ಇತಿಹಾಸ ನಿಮ್ಮನ್ನು ಖಂಡಿತಾ ಕ್ಷಮಿಸುವುದಿಲ್ಲ’ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ; ಬಿಜೆಪಿ-ಆರೆಸ್ಸೆಸ್ ಕಾರ್ಯಕರ್ತರ ಬಗ್ಗೆ ಮತದಾರರು ಜಾಗರೂಕರಾಗಿರಿ: ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...