Homeಮುಖಪುಟನಿಮಗೆ ಗೂಂಡಾಗಿರಿ ಬೇಕಾದರೆ ಬಿಜೆಪಿಗೆ ಓಟು ಹಾಕಿ: ಉತ್ತಮ ಶಾಲೆ, ಆಸ್ಪತ್ರೆ ಬೇಕಾದರೆ ಆಪ್ ಗೆಲ್ಲಿಸಿ...

ನಿಮಗೆ ಗೂಂಡಾಗಿರಿ ಬೇಕಾದರೆ ಬಿಜೆಪಿಗೆ ಓಟು ಹಾಕಿ: ಉತ್ತಮ ಶಾಲೆ, ಆಸ್ಪತ್ರೆ ಬೇಕಾದರೆ ಆಪ್ ಗೆಲ್ಲಿಸಿ – ಅರವಿಂದ್ ಕೇಜ್ರಿವಾಲ್

ಇದುವರೆಗೂ ನಮ್ಮ ರಾಜ್ಯದಲ್ಲಿ 154 ರೈತರನ್ನು ಸರ್ಕಾರಗಳು ಗುಂಡು ಹಾರಿಸಿ ಕೊಂದಿವೆ. ಅಂತಹ ಸರ್ಕಾರಗಳನ್ನು ಕಿತ್ತೆಸೆಯುವ ಸಂದರ್ಭ ಬಂದಿದೆ - ಕೋಡಿಹಳ್ಳಿ ಚಂದ್ರಶೇಖರ್

- Advertisement -
- Advertisement -

ನಿಮಗೆ ಗೂಂಡಾಗಿರಿ, ದಂಗೆ ಬೇಕಾದರೆ ಬಿಜೆಪಿಗೆ ಓಟು ಹಾಕಿ. ಉತ್ತಮ ಶಾಲೆ, ಆಸ್ಪತ್ರೆ ಬೇಕಾದರೆ ಆಪ್ ಗೆಲ್ಲಿಸಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕರೆ ನೀಡಿದ್ದಾರೆ.

ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆಪ್ ವತಿಯಿಂದ ಏರ್ಪಡಿಸಿದ್ದ ಬೃಹತ್ ರೈತ ಸಮಾವೇಶದಲ್ಲಿ ಮಾತನಾಡಿದ ಅವರು, “ಕರ್ನಾಟಕದಲ್ಲಿ ಹಿಂದೆ 20% ಕಮಿಷನ್ ಸರ್ಕಾರವಿತ್ತು. ಈಗ 40% ಕಮಿಷನ್ ಸರ್ಕಾರ ಅಧಿಕಾರ ನಡೆಸುತ್ತಿವೆ. ಆದರೆ ನಮ್ಮ ದೆಹಲಿ ಸರ್ಕಾರ 0% ಕಮಿಷನ್ ಸರ್ಕಾರವಾಗಿದೆ. ಸಂಪೂರ್ಣ ಪ್ರಮಾಣಿಕ ಪಕ್ಷ ನಮ್ಮದು” ಎಂದರು.

ಇತಿಹಾಸದಲ್ಲಿ ರಾವಣ ಅಹಂಕಾರ ತೋರಿಸಿದ. ದೇವ ಸ್ವರೂಪಿ ರಾಮಚಂದ್ರರ ಜೊತೆ ದುಷ್ಮನ್ ಮಾಡಬೇಡ ಎಂದು ವಿಭೀಷಣ, ಮಂಡೋದರಿ ಮನವಿ ಮಾಡಿದರೂ ರಾವಣ ಕೇಳಲಿಲ್ಲ. ಅಂತ್ಯದಲ್ಲಿ ರಾವಣನಿಗೆ ಏನಾಯಿತು ನಾವೆಲ್ಲ ನೋಡಿದ್ದೇವೆ. ನಮ್ಮ ಕೇಂದ್ರ ಸರ್ಕಾರ ಕೂಡ ಅದೇ ರೀತಿ ವರ್ತಿಸಿತು. ಕೃಷಿ ಕಾನೂನುಗಳನ್ನು ತಂದು ರೈತರ ವಿರುದ್ಧ ನಡೆದುಕೊಂಡಿತು. ಆದರೆ ದಿಟ್ಟ ರೈತ ಹೋರಾಟದ ಮುಂದೆ ಅದು ಮಂಡಿಯೂರಿತು ಅಂದರು.

ಆಪ್ ಪಕ್ಷವನ್ನು ಸಂಪೂರ್ಣವಾಗಿ ಬೆಂಬಲಿಸುವುದಾಗಿ ಘೋಷಿಸಿದ ಕೋಡಿಹಳ್ಳಿ ಚಂದ್ರಶೇಖರ್‌ರವರಿಗೆ ಸ್ವಾಗತ ಕೋರಿದ ಅವರು, ಹೋರಾಡುತ್ತಿರುವ ಸಾವಿರಾರು ರೈತರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. “ದೇಶದ ಮೂಲೆ ಮೂಲೆಗಳಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರೈತನ ಮಕ್ಕಳು ರೈತರಾಗಲು ಬಯಸುತ್ತಿಲ್ಲ. ಇದನ್ನು ಬದಲಿಸಬೇಕಿದೆ. ಅದಕ್ಕೆ ಆಮ್ ಆದ್ಮಿ ಪಕ್ಷ ಬದ್ಧವಾಗಿದೆ” ಎಂದರು.

“ದಿಲ್ಲಿಯಲ್ಲಿ 0% ಸರ್ಕಾರವಿದೆ. ಕಟ್ಟರ್ ಪ್ರಾಮಾಣಿಕ ಸರ್ಕಾರವಿದೆ. ಒಂದು ಪೈಸೆ ಸಹ ಭ್ರಷ್ಟಾಚಾರ ನಡೆಯುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸಹ ಹೇಳುತ್ತಾರೆ. ಏಕೆಂದರೆ ಪ್ರಧಾನಿ ಮಂತ್ರಿ ನನ್ನ ಮನೆ ಮೇಲೆ ಸಿಬಿಐ ದಾಳಿ, ಐಟಿ ದಾಳಿ ನಡೆಯಿತು. ನನ್ನ ಬೆಡ್ ರೂಂ ಚೆಕ್ ಮಾಡಿದರು. ಅವರಿಗೆ ಏನು ಸಿಗಲಿಲ್ಲ. ಏಕೆಂದರೆ ನಾನು ಪ್ರಾಮಾಣಿಕ ಮುಖ್ಯಮಂತ್ರಿಯಾಗಿದ್ದೇನೆ.  ನಮ್ಮ ಉಪ ಮುಖ್ಯಮಂತ್ರಿ, ಎಲ್ಲಾ ಮಂತ್ರಿಗಳು ಮತ್ತು 20 ಶಾಸಕರ ಮನೆ ಮೇಲೆ ದಾಳಿಯಾಯತು. ಆದರೆ ಏನೂ ಸಿಗಲಿಲ್ಲ” ಎಂದು ತಿಳಿಸಿದರು.

ನಾನೊಬ್ಬ ಸಾಮಾನ್ಯ ಮನುಷ್ಯ. ನನಗೂ ಹೆಂಡತಿ ಮಕ್ಕಳು ತಂದೆ ತಾಯಿ ಇದ್ದಾರೆ. ಹಾಗಾಗಿ ಸಾಮಾನ್ಯ ಮನಷ್ಯರ ಕಷ್ಟಗಳು ನನಗೆ ಗೊತ್ತಿವೆ. ಸಾಮಾನ್ಯರಿಗೆ ಏನು ಬೇಕು ಎಂದು ನನಗೆ ಗೊತ್ತಿದೆ. ಹಿಂದೆ ದಿಲ್ಲಿಯಲ್ಲಿ ಸರ್ಕಾರಿ ಶಾಲೆಗಳು ಹೇಗಿದ್ದವು? ಆದರೆ ಇಂದು ಖಾಸಗಿ ಶಾಲೆಗಳಿಂತ ಚೆನ್ನಾಗಿವೆ. ಐದು ವರ್ಷಗಳಲ್ಲಿ ಅವುಗಳನ್ನು ಬದಲಿಸಿದ್ದೇವೆ. ಸರ್ಕಾರಿ ಶಾಲೆಗಳಲ್ಲಿ 99.7% ಫಲಿತಾಂಶ ಬಂದಿದೆ. ಅಲ್ಲಿ ಸ್ವಿಮ್ಮಿಂಗ್ ಫೂಲ್, ಲಿಫ್ಟ್, ಸಭಾಂಗಣ ಎಲ್ಲವೂ ಇದೆ. ಹಾಗಾಗಿ 4 ಲಕ್ಷ ಮಕ್ಕಳಿಗೆ ಖಾಸಗಿ ಶಾಲೆಯಿಂದ ಸರ್ಕಾರಿ ಶಾಲೆಗೆ ಬಂದಿದ್ದಾರೆ. ಇದು ಮ್ಯಾಜಿಕ್ ಎಂದರು.

ದೆಹಲಿಯಲ್ಲಿ ಕಿಡ್ನಿ ಟ್ರಾನ್ಸ್‌ಪ್ಲಾಂಟ್‌ ಮಾಡಲು 40-50 ಲಕ್ಷ ಖರ್ಚಾಗುತ್ತಿತ್ತು. ಈಗ ಸಂಪೂರ್ಣ ಉಚಿತವಾಗಿದೆ. 2 ಕೋಟಿ ಜನರಿಗೆ ಉಚಿತ ಆರೋಗ್ಯ ನೀಡುತ್ತಿದ್ದೇವೆ. ಇದೆಲ್ಲವೂ ಪ್ರಾಮಾಣಿಕ ಸರ್ಕಾರ ಹಣ ಉಳಿಸಿದ್ದರಿಂದ ಸಾಧ್ಯವಾಗಿದೆ ಎಂದರು. ದೆಹಲಿಯಲ್ಲಿ ಶಿಕ್ಷಣ ವೆಚ್ಚ ಉಚಿತ, ಆರೋಗ್ಯ ಉಚಿತ, ವಿದ್ಯುತ್, ಕುಡಿಯುವ ನೀರು ಮತ್ತು ಮಹಿಳೆಯರಿಗೆ ಸಾರಿಗೆ ಉಚಿತವಾಗಿದೆ ಎಂದರು.

ನನ್ನ ಮನೆ ಮೇಲೆ ಕೆಲ ಗೂಂಡಾಗಳು ದಾಳಿ ಮಾಡಿದರು. ನನಗೆ ಯಾವುದೇ ಭಯವಿಲ್ಲ. ನಾನು ದೇಶಕ್ಕಾಗಿ ಪ್ರಾಣ ಕೊಡಲು ಸಿದ್ದನಿದ್ದೇನೆ. ಆದರೆ ಆ ದಿನ ನನ್ನ ಮನೆ ಮೇಲೆ ದಾಳಿ ಮಾಡಿದಾಗ ನಾವು ಯಾರು ಇರಲಿಲ್ಲ. ನನ್ನ ತಂದೆ ತಾಯಿ ಇದ್ದರು. ಆ ಗೂಂಡಾಗಳಿಗೆ ಬಿಜೆಪಿ ಸನ್ಮಾನ ಮಾಡುತ್ತಿದೆ ಎಂದು ಕಿಡಿಕಾರಿದರು. ಅತ್ಯಾಚಾರಿ, ಗೂಂಡಾ, ಲಫಂಗರು ಎಲ್ಲಾರೂ ಒಂದೇ ಪಕ್ಷದಲ್ಲಿದ್ದರೆ. ಅದೇ ಬಿಜೆಪಿ ಪಕ್ಷ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರ ಮಕ್ಕಳು ವಿಧಾನಸಭೆ ಪ್ರವೇಶ ಮಾಡಬೇಕು – ಕೋಡಿಹಳ್ಳಿ ಚಂದ್ರಶೇಖರ್ ಆಶಯ

ನಮ್ಮ ಬದುಕಿಗೆ ರಾಜಕೀಯ ಪಕ್ಷಗಳು ಕೈಹಾಕಿದ ಮೇಲೆ, ನಿಮ್ಮ ಅಧಿಕಾರಕ್ಕೆ ನಾವು ಕೈ ಹಾಕುವುದು ಧರ್ಮ. ಹಾಗಾಗಿ ನಿಮ್ಮನ್ನು ಆಚೆಗೆ ಕಳಿಸಿ, ರೈತರ ಮಕ್ಕಳು ವಿಧಾನಸಭೆ ಪ್ರವೇಶ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ್ ಆಶಯ ವ್ಯಕ್ತಪಡಿಸಿದರು.

1980 ರಲ್ಲಿ ರೈತ ಚಳವಳಿ ಆರಂಭವಾಯಿತು. ಆರ್ ಗುಂಡೂರಾವ್ ಸರ್ಕಾರ ನೀರಿಗೆ ತೆರಿಗೆ ಹಾಕಿ, ವಸೂಲಿ ಮಾಡಲು ಹೋದಾಗ ನರಗುಂದದಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಗುಂಡು ಹಾರಿಸಿ ಕೊಂದರು. ಅಲ್ಲದೆ ಬೆಳಗಾವಿಯ ನಿಪ್ಪಾಣಿ, ಹಾಸನದ ದುದ್ದ, ಶಿವಮೊಗ್ಗದ ನಾಗಸಮುದ್ರ ಸೇರಿ ರಾಜ್ಯದಲ್ಲಿ 154 ರೈತರನ್ನು ಸರ್ಕಾರಗಳು ಗುಂಡು ಹಾರಿಸಿ ಕೊಂದಿವೆ. ಅಂತಹ ಸರ್ಕಾರಗಳನ್ನು ಕಿತ್ತೆಸೆಯುವ ಸಂದರ್ಭ ಬಂದಿದೆ ಎಂದರು.

ಕೇಂದ್ರ ಸರ್ಕಾರ ಕೊರೊನಾ ಸಂದರ್ಭದಲ್ಲಿ ಸುಗ್ರೀವಾಜ್ಞೆಯ ಮೂಲಕ ರೈತ ವಿರೋಧಿ ಕೃಷಿ ಕಾನೂನುಗಳನ್ನು ಜಾರಿಗೆ ತಂದಿತು. ಆದರೆ 13 ತಿಂಗಳ ನಂತರ ವಾಪಸ್ ತೆಗೆದುಕೊಂಡರು. ಕರ್ನಾಟಕದಲ್ಲಿ ಯಡಿಯೂರಪ್ಪನವರ ನೇತೃತ್ವದಲ್ಲಿ ಕಾನೂನಗಳನ್ನು ಜಾರಿಗೊಳಿಸಿ ಕುಂಟು ನೆಪ ಹೇಳಿ ವಾಪಸ್ ಪಡೆದಿಲ್ಲ. ಇದರ ವಿರುದ್ಧ ಹೋರಾಡಬೇಕಿದೆ ಎಂದರು.

ನಾಲ್ಕು ಅಪಾಯಕಾರಿ ಕಾನೂನುಗಳು ವಾಪಸ್ ಹೋಗಿಲ್ಲ. ಈಗ ವಿಧಾನಸಭೆಯಲ್ಲಿ ಕೂತಿರುವ 224 ಜನ ಶಾಸಕರು ರೈತರಿಗೆ ನ್ಯಾಯ ಕೊಡಿಸಿಲ್ಲ. ಬದಲಿಗೆ ರೈತರ ಸಾವಿಗೆ ಕಾರಣರಾಗಿದ್ದೀರಿ. 40% ಹಗಲು ದರೋಡೆಗೆ ಸಾಕ್ಷಿಯಾಗಿದ್ದೀರಿ. ನಿಮ್ಮನ್ನು ಮನೆಗೆ ಕಳುಹಿಸುವ ಸಮಯ ಬಂದಿದೆ. ಬೊಮ್ಮಾಯಿ ಸರ್ಕಾರದ ಅವಧಿ ಮುಗಿದಿದೆ ಎಂದರು.

ವಿರೋಧ ಪಕ್ಷದವರನ್ನು ಬೆಂಬಲಿಸಲು ಮಾನದಂಡವೇನು? ನಾವೇ ಒಂದು ಪಕ್ಷವನ್ನು ಕಟ್ಟಬೇಕು ಎಂದುಕೊಂಡೆವು. ನಾವು ಎಷ್ಟು ಸಮರ್ಥವಾಗಿ ಮಾಡಲಿಕ್ಕೆ ಸಾಧ್ಯ? ಎಲ್ಲಾ ಅಳೆದು ತೂಗಿದಾಗ ಕಳೆದ 8 ವರ್ಷಗಳಿಂದ ಅರವಿಂದ್ ಕೇಜ್ರಿವಾಲ್ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದಾರೆ. ಭ್ರಷ್ಟಾಚಾರಕ್ಕೆ ಇತಿಶ್ರೀ ಹಾಡಲು ಆಪ್ ಬೆಂಬಲಿಸಿಲು ತೀರ್ಮಾನಿಸಿದ್ದೇವೆ ಎಂದು ಘೋಷಿಸಿದರು.

ಇದನ್ನೂ ಓದಿ: 40% ಕಮಿಷನ್‌ನಿಂದ ಕರುನಾಡು ಕಳೆದುಕೊಳ್ಳುತ್ತಿರುವುದೇನು?

2023ರ ಚುನಾವಣೆಯಲ್ಲಿ ಆಪ್ ಆದ್ಮಿ ಪಕ್ಷದೊಂದಿಗೆ ನಾವು ಕರ್ನಾಟಕ ವಿಧಾನಸಭೆ ಪ್ರವೇಶಿಸಬೇಕು. ಶುದ್ಧ ಹಸ್ತರಾದ ಆಪ್ ಪಕ್ಷ ವನ್ನು ಸಂಪೂರ್ಣವಾಗಿ ಬೆಂಬಲಿಸುತ್ತಿದ್ದೇವೆ. ನಮ್ಮ ರಾಜಕೀಯ ಮುಖವಾಣಿ ಆಮ್ ಆದ್ಮಿ ಪಕ್ಷ: ನಮ್ಮ ಚುನಾವಣೆಯ ಅಸ್ತ್ರ ಪೊರಕೆ ಎಂದು ಸಾರಿದರು.

ರೈತ ಸಂಘ ಮುಂದೆಯೂ ಸ್ವತಂತ್ರವಾಗಿ ಇರುತ್ತದೆ. ಹಾಗಿದ್ದುಕೊಂಡೆ ಆಮ್ ಆದ್ಮಿ ಸರ್ಕಾರ ರಚಿಸಲು ಹಗಲು ರಾತ್ರಿ ದುಡಿಯತ್ತದೆ. ಇದಕ್ಕೆ ರೈತರು ಪ್ರಮಾಣ ಮಾಡಬೇಕು. ರೈತರು ಅನ್ನ ಕೊಟ್ಟು, ಹಾಲು ಕೊಟ್ಟು ಪವಿತ್ರ ಕೆಲಸ ಮಾಡುತ್ತೀವಿ. ಹೆಂಡ, ಹಣಕ್ಕೆ ವೋಟು ಹಾಕುವುದು ಬಿಡಬೇಕು. ಯಾರಾದರೂ ಜಾತಿ ಹೆಸರೇಳಿದರೆ ಉಗಿಯಬೇಕು. ನಮ್ಮ ನಡುವೆ ಧರ್ಮ ಪ್ರವೇಶ ಮಾಡಬಾರದು. ಏಕೆಂದರೆ ನಮ್ಮದು ಕಾಯಕ ಧರ್ಮ. ಇದು ಬಸವಣ್ಣನವರ ನಾಡು. ಕಾಯಕ ಧರ್ಮ ಶ್ರೇಷ್ಟ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾಧ್ಯಮಗಳು, ಹೊರರಾಜ್ಯದ ಪಕ್ಷಗಳಿಗೆ ಕೊಡುವ ಮಹತ್ವವನ್ನು ಕರ್ನಾಟಕ ರಾಜ್ಯದ ಪಕ್ಷಗಳಿಗೂ ಕೊಡಬೇಕು. ಕರ್ನಾಟಕ ರಾಜ್ಯಕ್ಕಾಗಿಯೇ ” ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ” ಹಗಲಿರುಳು ಶ್ರಮಿಸುತ್ತಾ ಇದೆ. ಏಪ್ರಿಲ್ 24 ರಂದು 10 : 00 ಗಂಟೆಗೆ ಜನ ಚೈತನ್ಯ ಯಾತ್ರೆ ಪ್ರಾರಂಭವಾದ್ರೆ ಮುಂದಿನ 2023 ರ ಮೇ ಎರಡನೇ ವಾರದ ವಿಧಾನ ಸಭಾ ಚುನಾವಣೆ ಮುಗಿಯುವವರೆಗೆ ಮನೆಯನ್ನು ಸೇರದೇ ರಾಜ್ಯಧ್ಯಕ್ಷರಾದ ರವಿ ಕೃಷ್ಣ ರೆಡ್ಡಿ ಯವರು ರಾಜ್ಯದಾದ್ಯಂತ ಪ್ರವಾಸ ಮಾಡುತ್ತಾರೆ. ಇದು ಕರ್ನಾಟಕದ ಇತಿಹಾಸದಲ್ಲಿ ಹಿಂದೆ ನಡೆದಿಲ್ಲ ಮುಂದೆ ನಡೆಯೋದಿಲ್ಲ. ಇದ್ರ ಬಗ್ಗೆ ಬರೆಯಿರಿ, ಮೇಡಂ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...