Homeಮುಖಪುಟಸಾಲಿಟರ್‌ ಜನರಲ್‌ ಹುದ್ದೆಯಿಂದ ತುಷಾರ್‌ ಮೆಹ್ತಾರನ್ನು ಕಿತ್ತು ಹಾಕಿ: ಮೋದಿಗೆ ಟಿಎಂಸಿ ಪತ್ರ

ಸಾಲಿಟರ್‌ ಜನರಲ್‌ ಹುದ್ದೆಯಿಂದ ತುಷಾರ್‌ ಮೆಹ್ತಾರನ್ನು ಕಿತ್ತು ಹಾಕಿ: ಮೋದಿಗೆ ಟಿಎಂಸಿ ಪತ್ರ

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ, ಬಿಜೆಪಿಯ ಸುವೆಂದು ಅಧಿಕಾರಿಯನ್ನು, ಭಾರತದ ಸಾಲಿಟರ್‌‌ ಜನರಲ್‌‌ ತುಷಾರ್ ಮೆಹ್ತಾ ಅವರು ಭೇಟಿಯಾಗಿದ್ದು ಅವರನ್ನು ‘ಸಾಲಿಟರ್‌‌ ಜನರಲ್’ ಹುದ್ದೆಯಿಂದ ತೆಗೆದು ಹಾಕಬೇಕೆಂದು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಶುಕ್ರವಾರ ಒತ್ತಾಯಿಸಿದೆ. ಈ ನಿಟ್ಟಿನಲ್ಲಿ ತೃಣಮೂಲ ಪಕ್ಷವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ.

“ಸಾಲಿಸಿಟರ್‌ ಜನರಲ್ ತುಷಾರ್ ಮೆಹ್ತಾ ಅವರು ಬಿಜೆಪಿ ಮುಖಂಡ ಸುವೆಂದು ಅಧಿಕಾರಿಯನ್ನು ಭೇಟಿಯಾಗಿದ್ದು ಅವರ ಹುದ್ದೆಯ ಬದ್ಧತೆಯ ಬಗ್ಗೆ ಕೆಲವು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ” ಎಂದು ತೃಣಮೂಲ ಪಕ್ಷವು ಹೇಳಿದೆ. ಸಾಲಿಸಿಟರ್ ಜನರಲ್ ಅವರನ್ನು ತೆಗೆದುಹಾಕಬೇಕೆಂದು ಕೋರಿ ಪ್ರಧಾನಿ ಮೋದಿಗೆ ಕಳುಹಿಸಿದ ಪತ್ರಕ್ಕೆ ಮೂವರು ಟಿಎಂಸಿ ಸಂಸದರಾದ ಡೆರೆಕ್ ಒ’ಬ್ರಿಯೆನ್, ಸುಖೇಂದು ಶೇಖರ್ ರಾಯ್ ಮತ್ತು ಮಹುವ ಮೊಯಿತ್ರಾ ಸಹಿ ಹಾಕಿದ್ದಾರೆ.

 

ಸುವೆಂದು ಅಧಿಕಾರಿಯು ಬಿಜೆಪಿ ನಾಯಕನಾಗಿರುವುದರ ಜೊತೆಗೆ ಅವರ ವಿರುದ್ದ ಸಿಬಿಐ ಮತ್ತು ಇಡಿ ತನಿಖೆ ನಡೆಸುತ್ತಿರುವ ವಿವಿಧ ಅಪರಾಧಗಳ ಆರೋಪವೂ ಇದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಸಣ್ಣ ಪಕ್ಷಗಳೊಂದಿಗೆ ‘ಎಸ್‌ಪಿ’ ಮೈತ್ರಿ: ‘ಅಸಹಾಯಕತೆ’ ಎಂದ ಮಾಯಾವತಿ!

ದೇಶದಾದ್ಯಂತ ಸುದ್ದಿಯಾಗಿದ್ದ ‘ನಾರದಾ ಸ್ಟಿಂಗ್ ಆಪರೇಷನ್’ ಪ್ರಕರಣದ ವಿಡಿಯೊದಲ್ಲಿ ಸುವೆಂದು ಅಧಿಕಾರಿ ಲಂಚ ತೆಗೆದು ಕೊಳ್ಳುವುದು ದಾಖಲಾಗಿತ್ತು. ಈ ವಿಡಿಯೊವನ್ನು ಸ್ವತಃ ಬಿಜೆಪಿಯೆ ಈ ಹಿಂದೆ ಸಾರ್ವಜನಿಕವಾಗಿ ಪ್ರಸಾರ ಮಾಡಿತ್ತು. ಇನ್ನೊಂದು ಶಾರದಾ ಚಿಟ್ ಫಂಡ್ ಪ್ರಕರಣವಾಗಿದ್ದು, ಇದರಲ್ಲಿ ಪ್ರಕರಣದ ಪ್ರಮುಖ ಆರೋಪಿ ಸುದೀಪ್ತಾ ಸೇನ್ ಅವರು ಸುವೆಂದು ಅಧಿಕಾರಿಯ ವಿರುದ್ಧ ಗಂಭೀರ ಆರೋಪಗಳನ್ನು ಎತ್ತಿದ್ದರು.

ಈ ಎರಡೂ ಪ್ರಕರಣಗಳಲ್ಲಿ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸಿಬಿಐ ಅನ್ನು ಪ್ರತಿನಿಧಿಸಿ, ನ್ಯಾಯಾಂಗದ ಮುಂದೆ ಹಾಜರಾಗಿದ್ದಾರೆ ಎಂದು ಟಿಎಂಸಿ ಹೇಳಿದೆ.

ಸಿಬಿಐ ಮತ್ತು ಇಡಿಯಂತಹ ತನಿಖಾ ಸಂಸ್ಥೆಗಳಿಗೆ ಸಲಹೆ ನೀಡುತ್ತಿರುವ ತುಷಾರ್‌‌ ಮೆಹ್ತಾ ಅವರು ಸುವೆಂದು ಅಧಿಕಾರಿ ನಡುವೆ ನಡೆದಿರುವ ಆಪಾದಿತ ಭೇಟಿಯು, ಭಾರತದ ಸಾಲಿಸಿಟರ್ ಜನರಲ್‌‌ನ ಶಾಸನಬದ್ಧ ಕರ್ತವ್ಯಗಳೊಂದಿಗೆ “ಆಸಕ್ತಿಯ ನೇರ ಸಂಘರ್ಷ” ಇದೆ ಎಂದು ತೋರಿಸುತ್ತದೆ ಎಂದು ಟಿಎಂಸಿ ಹೇಳಿದೆ. ಅಲ್ಲದೆ ಒಕ್ಕೂಟ ಸರ್ಕಾರದ ಗೃಹಸಚಿವ ಅಮಿತ್‌ ಶಾ ಅವರನ್ನು ಸುವೆಂದು ಅಧಿಕಾರಿ ಭೇಟಿಯಾದ ಬಗ್ಗೆಯೆ ಟಿಎಂಸಿ ಆಶ್ಚರ್ಯ ವ್ಯಕ್ತಪಡಿಸಿದೆ.

“ಸಾಲಿಸಿಟರ್ ಜನರಲ್‌‌ ಉನ್ನತ ಕಚೇರಿಗಳನ್ನು ಬಳಸಿಕೊಂಡು ಸುವೆಂದು ಅಧಿಕಾರಿಯು ಆರೋಪಿಯಾಗಿರುವ ಪ್ರಕರಣಗಳ ಮೇಲೆ ಪ್ರಭಾವ ಬೀರಲು ಇಂತಹ ಸಭೆಯನ್ನು ಆಯೋಜಿಸಲಾಗಿದೆ ಎಂದು ನಾವು ನಂಬುತ್ತೇವೆ” ಎಂದು ಟಿಎಂಸಿ ಪತ್ರದಲ್ಲಿ ಉಲ್ಲೇಖಿಸಿದೆ. ಆದ್ದರಿಂದ ಈ ಬೆಳವಣಿಗೆಗಳ ಹಿನ್ನಲೆಯಲ್ಲಿ ತುಷಾರ್ ಮೆಹ್ತಾ ಅವರನ್ನು ಅವರ ಹುದ್ದೆಗಳಿಂದ ಕಿತ್ತು ಹಾಕಬೇಕೆಂದು ಪಕ್ಷವು ಪ್ರಧಾನಮಂತ್ರಿಯನ್ನು ಒತ್ತಾಯಿಸಿದೆ.

ಇದನ್ನೂ ಓದಿ: ಹರಿಯಾಣದ ಮಾಜಿ ಮುಖ್ಯಮಂತ್ರಿ ತಿಹಾರ್‌ ಜೈಲಿನಿಂದ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...