Homeಮುಖಪುಟಸಾಲಿಟರ್‌ ಜನರಲ್‌ ಹುದ್ದೆಯಿಂದ ತುಷಾರ್‌ ಮೆಹ್ತಾರನ್ನು ಕಿತ್ತು ಹಾಕಿ: ಮೋದಿಗೆ ಟಿಎಂಸಿ ಪತ್ರ

ಸಾಲಿಟರ್‌ ಜನರಲ್‌ ಹುದ್ದೆಯಿಂದ ತುಷಾರ್‌ ಮೆಹ್ತಾರನ್ನು ಕಿತ್ತು ಹಾಕಿ: ಮೋದಿಗೆ ಟಿಎಂಸಿ ಪತ್ರ

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ, ಬಿಜೆಪಿಯ ಸುವೆಂದು ಅಧಿಕಾರಿಯನ್ನು, ಭಾರತದ ಸಾಲಿಟರ್‌‌ ಜನರಲ್‌‌ ತುಷಾರ್ ಮೆಹ್ತಾ ಅವರು ಭೇಟಿಯಾಗಿದ್ದು ಅವರನ್ನು ‘ಸಾಲಿಟರ್‌‌ ಜನರಲ್’ ಹುದ್ದೆಯಿಂದ ತೆಗೆದು ಹಾಕಬೇಕೆಂದು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಶುಕ್ರವಾರ ಒತ್ತಾಯಿಸಿದೆ. ಈ ನಿಟ್ಟಿನಲ್ಲಿ ತೃಣಮೂಲ ಪಕ್ಷವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ.

“ಸಾಲಿಸಿಟರ್‌ ಜನರಲ್ ತುಷಾರ್ ಮೆಹ್ತಾ ಅವರು ಬಿಜೆಪಿ ಮುಖಂಡ ಸುವೆಂದು ಅಧಿಕಾರಿಯನ್ನು ಭೇಟಿಯಾಗಿದ್ದು ಅವರ ಹುದ್ದೆಯ ಬದ್ಧತೆಯ ಬಗ್ಗೆ ಕೆಲವು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ” ಎಂದು ತೃಣಮೂಲ ಪಕ್ಷವು ಹೇಳಿದೆ. ಸಾಲಿಸಿಟರ್ ಜನರಲ್ ಅವರನ್ನು ತೆಗೆದುಹಾಕಬೇಕೆಂದು ಕೋರಿ ಪ್ರಧಾನಿ ಮೋದಿಗೆ ಕಳುಹಿಸಿದ ಪತ್ರಕ್ಕೆ ಮೂವರು ಟಿಎಂಸಿ ಸಂಸದರಾದ ಡೆರೆಕ್ ಒ’ಬ್ರಿಯೆನ್, ಸುಖೇಂದು ಶೇಖರ್ ರಾಯ್ ಮತ್ತು ಮಹುವ ಮೊಯಿತ್ರಾ ಸಹಿ ಹಾಕಿದ್ದಾರೆ.

 

ಸುವೆಂದು ಅಧಿಕಾರಿಯು ಬಿಜೆಪಿ ನಾಯಕನಾಗಿರುವುದರ ಜೊತೆಗೆ ಅವರ ವಿರುದ್ದ ಸಿಬಿಐ ಮತ್ತು ಇಡಿ ತನಿಖೆ ನಡೆಸುತ್ತಿರುವ ವಿವಿಧ ಅಪರಾಧಗಳ ಆರೋಪವೂ ಇದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಸಣ್ಣ ಪಕ್ಷಗಳೊಂದಿಗೆ ‘ಎಸ್‌ಪಿ’ ಮೈತ್ರಿ: ‘ಅಸಹಾಯಕತೆ’ ಎಂದ ಮಾಯಾವತಿ!

ದೇಶದಾದ್ಯಂತ ಸುದ್ದಿಯಾಗಿದ್ದ ‘ನಾರದಾ ಸ್ಟಿಂಗ್ ಆಪರೇಷನ್’ ಪ್ರಕರಣದ ವಿಡಿಯೊದಲ್ಲಿ ಸುವೆಂದು ಅಧಿಕಾರಿ ಲಂಚ ತೆಗೆದು ಕೊಳ್ಳುವುದು ದಾಖಲಾಗಿತ್ತು. ಈ ವಿಡಿಯೊವನ್ನು ಸ್ವತಃ ಬಿಜೆಪಿಯೆ ಈ ಹಿಂದೆ ಸಾರ್ವಜನಿಕವಾಗಿ ಪ್ರಸಾರ ಮಾಡಿತ್ತು. ಇನ್ನೊಂದು ಶಾರದಾ ಚಿಟ್ ಫಂಡ್ ಪ್ರಕರಣವಾಗಿದ್ದು, ಇದರಲ್ಲಿ ಪ್ರಕರಣದ ಪ್ರಮುಖ ಆರೋಪಿ ಸುದೀಪ್ತಾ ಸೇನ್ ಅವರು ಸುವೆಂದು ಅಧಿಕಾರಿಯ ವಿರುದ್ಧ ಗಂಭೀರ ಆರೋಪಗಳನ್ನು ಎತ್ತಿದ್ದರು.

ಈ ಎರಡೂ ಪ್ರಕರಣಗಳಲ್ಲಿ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸಿಬಿಐ ಅನ್ನು ಪ್ರತಿನಿಧಿಸಿ, ನ್ಯಾಯಾಂಗದ ಮುಂದೆ ಹಾಜರಾಗಿದ್ದಾರೆ ಎಂದು ಟಿಎಂಸಿ ಹೇಳಿದೆ.

ಸಿಬಿಐ ಮತ್ತು ಇಡಿಯಂತಹ ತನಿಖಾ ಸಂಸ್ಥೆಗಳಿಗೆ ಸಲಹೆ ನೀಡುತ್ತಿರುವ ತುಷಾರ್‌‌ ಮೆಹ್ತಾ ಅವರು ಸುವೆಂದು ಅಧಿಕಾರಿ ನಡುವೆ ನಡೆದಿರುವ ಆಪಾದಿತ ಭೇಟಿಯು, ಭಾರತದ ಸಾಲಿಸಿಟರ್ ಜನರಲ್‌‌ನ ಶಾಸನಬದ್ಧ ಕರ್ತವ್ಯಗಳೊಂದಿಗೆ “ಆಸಕ್ತಿಯ ನೇರ ಸಂಘರ್ಷ” ಇದೆ ಎಂದು ತೋರಿಸುತ್ತದೆ ಎಂದು ಟಿಎಂಸಿ ಹೇಳಿದೆ. ಅಲ್ಲದೆ ಒಕ್ಕೂಟ ಸರ್ಕಾರದ ಗೃಹಸಚಿವ ಅಮಿತ್‌ ಶಾ ಅವರನ್ನು ಸುವೆಂದು ಅಧಿಕಾರಿ ಭೇಟಿಯಾದ ಬಗ್ಗೆಯೆ ಟಿಎಂಸಿ ಆಶ್ಚರ್ಯ ವ್ಯಕ್ತಪಡಿಸಿದೆ.

“ಸಾಲಿಸಿಟರ್ ಜನರಲ್‌‌ ಉನ್ನತ ಕಚೇರಿಗಳನ್ನು ಬಳಸಿಕೊಂಡು ಸುವೆಂದು ಅಧಿಕಾರಿಯು ಆರೋಪಿಯಾಗಿರುವ ಪ್ರಕರಣಗಳ ಮೇಲೆ ಪ್ರಭಾವ ಬೀರಲು ಇಂತಹ ಸಭೆಯನ್ನು ಆಯೋಜಿಸಲಾಗಿದೆ ಎಂದು ನಾವು ನಂಬುತ್ತೇವೆ” ಎಂದು ಟಿಎಂಸಿ ಪತ್ರದಲ್ಲಿ ಉಲ್ಲೇಖಿಸಿದೆ. ಆದ್ದರಿಂದ ಈ ಬೆಳವಣಿಗೆಗಳ ಹಿನ್ನಲೆಯಲ್ಲಿ ತುಷಾರ್ ಮೆಹ್ತಾ ಅವರನ್ನು ಅವರ ಹುದ್ದೆಗಳಿಂದ ಕಿತ್ತು ಹಾಕಬೇಕೆಂದು ಪಕ್ಷವು ಪ್ರಧಾನಮಂತ್ರಿಯನ್ನು ಒತ್ತಾಯಿಸಿದೆ.

ಇದನ್ನೂ ಓದಿ: ಹರಿಯಾಣದ ಮಾಜಿ ಮುಖ್ಯಮಂತ್ರಿ ತಿಹಾರ್‌ ಜೈಲಿನಿಂದ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...