Homeಮುಖಪುಟಸಾಲಿಟರ್‌ ಜನರಲ್‌ ಹುದ್ದೆಯಿಂದ ತುಷಾರ್‌ ಮೆಹ್ತಾರನ್ನು ಕಿತ್ತು ಹಾಕಿ: ಮೋದಿಗೆ ಟಿಎಂಸಿ ಪತ್ರ

ಸಾಲಿಟರ್‌ ಜನರಲ್‌ ಹುದ್ದೆಯಿಂದ ತುಷಾರ್‌ ಮೆಹ್ತಾರನ್ನು ಕಿತ್ತು ಹಾಕಿ: ಮೋದಿಗೆ ಟಿಎಂಸಿ ಪತ್ರ

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ, ಬಿಜೆಪಿಯ ಸುವೆಂದು ಅಧಿಕಾರಿಯನ್ನು, ಭಾರತದ ಸಾಲಿಟರ್‌‌ ಜನರಲ್‌‌ ತುಷಾರ್ ಮೆಹ್ತಾ ಅವರು ಭೇಟಿಯಾಗಿದ್ದು ಅವರನ್ನು ‘ಸಾಲಿಟರ್‌‌ ಜನರಲ್’ ಹುದ್ದೆಯಿಂದ ತೆಗೆದು ಹಾಕಬೇಕೆಂದು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಶುಕ್ರವಾರ ಒತ್ತಾಯಿಸಿದೆ. ಈ ನಿಟ್ಟಿನಲ್ಲಿ ತೃಣಮೂಲ ಪಕ್ಷವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ.

“ಸಾಲಿಸಿಟರ್‌ ಜನರಲ್ ತುಷಾರ್ ಮೆಹ್ತಾ ಅವರು ಬಿಜೆಪಿ ಮುಖಂಡ ಸುವೆಂದು ಅಧಿಕಾರಿಯನ್ನು ಭೇಟಿಯಾಗಿದ್ದು ಅವರ ಹುದ್ದೆಯ ಬದ್ಧತೆಯ ಬಗ್ಗೆ ಕೆಲವು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ” ಎಂದು ತೃಣಮೂಲ ಪಕ್ಷವು ಹೇಳಿದೆ. ಸಾಲಿಸಿಟರ್ ಜನರಲ್ ಅವರನ್ನು ತೆಗೆದುಹಾಕಬೇಕೆಂದು ಕೋರಿ ಪ್ರಧಾನಿ ಮೋದಿಗೆ ಕಳುಹಿಸಿದ ಪತ್ರಕ್ಕೆ ಮೂವರು ಟಿಎಂಸಿ ಸಂಸದರಾದ ಡೆರೆಕ್ ಒ’ಬ್ರಿಯೆನ್, ಸುಖೇಂದು ಶೇಖರ್ ರಾಯ್ ಮತ್ತು ಮಹುವ ಮೊಯಿತ್ರಾ ಸಹಿ ಹಾಕಿದ್ದಾರೆ.

 

ಸುವೆಂದು ಅಧಿಕಾರಿಯು ಬಿಜೆಪಿ ನಾಯಕನಾಗಿರುವುದರ ಜೊತೆಗೆ ಅವರ ವಿರುದ್ದ ಸಿಬಿಐ ಮತ್ತು ಇಡಿ ತನಿಖೆ ನಡೆಸುತ್ತಿರುವ ವಿವಿಧ ಅಪರಾಧಗಳ ಆರೋಪವೂ ಇದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಸಣ್ಣ ಪಕ್ಷಗಳೊಂದಿಗೆ ‘ಎಸ್‌ಪಿ’ ಮೈತ್ರಿ: ‘ಅಸಹಾಯಕತೆ’ ಎಂದ ಮಾಯಾವತಿ!

ದೇಶದಾದ್ಯಂತ ಸುದ್ದಿಯಾಗಿದ್ದ ‘ನಾರದಾ ಸ್ಟಿಂಗ್ ಆಪರೇಷನ್’ ಪ್ರಕರಣದ ವಿಡಿಯೊದಲ್ಲಿ ಸುವೆಂದು ಅಧಿಕಾರಿ ಲಂಚ ತೆಗೆದು ಕೊಳ್ಳುವುದು ದಾಖಲಾಗಿತ್ತು. ಈ ವಿಡಿಯೊವನ್ನು ಸ್ವತಃ ಬಿಜೆಪಿಯೆ ಈ ಹಿಂದೆ ಸಾರ್ವಜನಿಕವಾಗಿ ಪ್ರಸಾರ ಮಾಡಿತ್ತು. ಇನ್ನೊಂದು ಶಾರದಾ ಚಿಟ್ ಫಂಡ್ ಪ್ರಕರಣವಾಗಿದ್ದು, ಇದರಲ್ಲಿ ಪ್ರಕರಣದ ಪ್ರಮುಖ ಆರೋಪಿ ಸುದೀಪ್ತಾ ಸೇನ್ ಅವರು ಸುವೆಂದು ಅಧಿಕಾರಿಯ ವಿರುದ್ಧ ಗಂಭೀರ ಆರೋಪಗಳನ್ನು ಎತ್ತಿದ್ದರು.

ಈ ಎರಡೂ ಪ್ರಕರಣಗಳಲ್ಲಿ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸಿಬಿಐ ಅನ್ನು ಪ್ರತಿನಿಧಿಸಿ, ನ್ಯಾಯಾಂಗದ ಮುಂದೆ ಹಾಜರಾಗಿದ್ದಾರೆ ಎಂದು ಟಿಎಂಸಿ ಹೇಳಿದೆ.

ಸಿಬಿಐ ಮತ್ತು ಇಡಿಯಂತಹ ತನಿಖಾ ಸಂಸ್ಥೆಗಳಿಗೆ ಸಲಹೆ ನೀಡುತ್ತಿರುವ ತುಷಾರ್‌‌ ಮೆಹ್ತಾ ಅವರು ಸುವೆಂದು ಅಧಿಕಾರಿ ನಡುವೆ ನಡೆದಿರುವ ಆಪಾದಿತ ಭೇಟಿಯು, ಭಾರತದ ಸಾಲಿಸಿಟರ್ ಜನರಲ್‌‌ನ ಶಾಸನಬದ್ಧ ಕರ್ತವ್ಯಗಳೊಂದಿಗೆ “ಆಸಕ್ತಿಯ ನೇರ ಸಂಘರ್ಷ” ಇದೆ ಎಂದು ತೋರಿಸುತ್ತದೆ ಎಂದು ಟಿಎಂಸಿ ಹೇಳಿದೆ. ಅಲ್ಲದೆ ಒಕ್ಕೂಟ ಸರ್ಕಾರದ ಗೃಹಸಚಿವ ಅಮಿತ್‌ ಶಾ ಅವರನ್ನು ಸುವೆಂದು ಅಧಿಕಾರಿ ಭೇಟಿಯಾದ ಬಗ್ಗೆಯೆ ಟಿಎಂಸಿ ಆಶ್ಚರ್ಯ ವ್ಯಕ್ತಪಡಿಸಿದೆ.

“ಸಾಲಿಸಿಟರ್ ಜನರಲ್‌‌ ಉನ್ನತ ಕಚೇರಿಗಳನ್ನು ಬಳಸಿಕೊಂಡು ಸುವೆಂದು ಅಧಿಕಾರಿಯು ಆರೋಪಿಯಾಗಿರುವ ಪ್ರಕರಣಗಳ ಮೇಲೆ ಪ್ರಭಾವ ಬೀರಲು ಇಂತಹ ಸಭೆಯನ್ನು ಆಯೋಜಿಸಲಾಗಿದೆ ಎಂದು ನಾವು ನಂಬುತ್ತೇವೆ” ಎಂದು ಟಿಎಂಸಿ ಪತ್ರದಲ್ಲಿ ಉಲ್ಲೇಖಿಸಿದೆ. ಆದ್ದರಿಂದ ಈ ಬೆಳವಣಿಗೆಗಳ ಹಿನ್ನಲೆಯಲ್ಲಿ ತುಷಾರ್ ಮೆಹ್ತಾ ಅವರನ್ನು ಅವರ ಹುದ್ದೆಗಳಿಂದ ಕಿತ್ತು ಹಾಕಬೇಕೆಂದು ಪಕ್ಷವು ಪ್ರಧಾನಮಂತ್ರಿಯನ್ನು ಒತ್ತಾಯಿಸಿದೆ.

ಇದನ್ನೂ ಓದಿ: ಹರಿಯಾಣದ ಮಾಜಿ ಮುಖ್ಯಮಂತ್ರಿ ತಿಹಾರ್‌ ಜೈಲಿನಿಂದ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...