Homeಮುಖಪುಟಈ ಬ್ರಹ್ಮಾಂಡದಾಗ ಇರೋ 200 ದೇಶಗಳಲ್ಲಿ 170 ದೇಶದೊಳಗ ಮೀಸಲಾತಿ ಐತಿ. ಇದರ ಬಗ್ಗೆ ನಿಮಗೆ...

ಈ ಬ್ರಹ್ಮಾಂಡದಾಗ ಇರೋ 200 ದೇಶಗಳಲ್ಲಿ 170 ದೇಶದೊಳಗ ಮೀಸಲಾತಿ ಐತಿ. ಇದರ ಬಗ್ಗೆ ನಿಮಗೆ ಗೊತ್ತೇನು?

ಎಲ್ಲೆಲ್ಲಿ ಪ್ರಜಾಪ್ರಭುತ್ವ ಅದನೋ ಅಲ್ಲೆಲ್ಲಾ ಮೀಸಲಾತಿ ಅದ. ಅದರ ಹೆಸರು ಬ್ಯಾರೆ ಬ್ಯಾರೆ ಇರಬಹುದು ಅಷ್ಟ. ಅಮೆರಿಕಾದ ಅದನ್ನು ಧನಾತ್ಮಕ ತಾರತಮ್ಯ ಅಂತಾರ. ಯುರೋಪಿನ್ಯಾಗ ಸಕಾರಾತ್ಮಕ ಕ್ರಿಯೆ ಅಂತಾರ, ಅನೇಕ ದೇಶದೊಳಗ ಕೋಟಾ ಅಂತಾರ. ಭಾರತದಾಗ ಸರಳವಾಗಿ ಮೀಸಲಾತಿ ಅಂತೇವಿ.

- Advertisement -
- Advertisement -

ಸುದ್ದಿಯೇನೇ ಮನೋಲ್ಲಾಸಿನಿ – ಐ.ವಿ ಗೌಲ್‌

ಸುಪ್ರೀಂಕೋರ್ಟು ಮೊನ್ನೆ ಮೊನ್ನೆ ಫ್ರೆಷ್ ಆಗಿ ಒಂದು ಟಪ್ಪಣಿ ಕೊಟ್ಟದ. ಅದು ಎಷ್ಟು ಬಿಸಿ ಬಿಸಿ ಸುದ್ದಿ ಅಂದರ ಅದನ್ನ ಬರೆದ ಕಾಗದ ಇನ್ನೂ ಸುಡು -ಸುಡು ಅನ್ನಲಿಕ್ಕೆ ಹತ್ತೇದ.

ಅದೇನಪಾ ಅಂದರ ಮೀಸಲಾತಿ ಅಂದರ ನಾಗರಿಕರ ಮೂಲಭೂತ ಹಕ್ಕೇನಲ್ಲ. ಅದು ಸರಕಾರದ ಜನ ಕಲ್ಯಾಣ ನೀತಿ. ಅದನ್ನು ಸರಕಾರಗಳು ಕೊಟ್ಟರ ಕೊಡಬಹುದು, ಇಲ್ಲಾಂದರ ಇಲ್ಲಾ. ಅವರ ಮ್ಯಾಲೆ ನೀವು ಈ ಸೌಲತ್ತು ಕೊಡಲೇಬೇಕು ಅಂತ ದಬಾಯಿಸಲಿಕ್ಕೆ ಬರಂಗಿಲ್ಲ ಅಂತ.

ಅದು ಅಂತಿಮ ತೀರ್ಪು ಅಲ್ಲ. ಅದಕ್ಕ ಸರಕಾರ ಇನ್ನೂ ಪ್ರತಿಕ್ರಿಯೆ ಕೊಟ್ಟಿಲ್ಲ. ಅದು ಏನಂತ ಪ್ರತಿಕ್ರಿಯೆ ಕೊಡತದ ಅನ್ನೋದರ ಮ್ಯಾಲೆ ನಾವು ಪ್ರತಿಕ್ರಿಯೆ ಕೊಡೋಣಂತ. ಆದರ ಅದರ ಹಿನ್ನೆಲೆ ತಿಳದು ಕೊಳ್ಳೋಣ.

ಈಗ ಮೀಸಲಾತಿ ಅನ್ನೋದು ಏನು ಅಂತ ತಿಳಕೋಕಿಂತಾ ಮೊದಲ ಮೂಲಭೂತ ಹಕ್ಕು ಅಂದರೇನು ಅಂತ ತಿಳಿಯೋಣು. ಮೂಲಭೂತ ಹಕ್ಕು ಅಂದರ ಹುಟ್ಟಿನಿಂದ ಬಂದ ಹಕ್ಕು. ಅದರ ಸಲುವಾಗಿ ಏನೂ ವಿಶೇಷ ಮಸಲತ್ತು ಮಾಡಬೇಕಿಲ್ಲ. ಯಾ ಮನುಷಾ ನಾಗರಿಕ ಇರತಾನೋ ಅವನಿಗೆ ಸಹಜವಾಗಿ ಬಂದ ಬಿಡೋ ಹಕ್ಕುಗಳು ಮೂಲಭೂತ ಹಕ್ಕುಗಳು. ಕೆಲವು ಎಲ್ಲಾ ಮನುಷ್ಯರಿಗೂ ಬರತಾವು. ಅವಕ್ಕ ಮಾನವ ಹಕ್ಕುಗಳು ಅಂತ ಅನಸಿಗೋತಾವು.

ಇನ್ನು ಕೆಲವು ಬರೇ ನಾಗರಿಕರಿಗೆ ಮಾತ್ರ ಸಿಗೋವು. ಅವು ಕಾನೂನಿನಿಂದ ಮಾತ್ರ ಸಿಗೋವಂಥವು. ಅವನ್ನು ಆಯಾ ದೇಶದ ಸಂವಿಧಾನದ ಒಳಗ ಬರದು ಇಡಲಾಗುತ್ತದೆ. ಅದರಾಗ ಬರದಾರ ಅಂದ ಮಾತ್ರಕ್ಕ ಅವು ಸಿಗತಾವು ಅಂತ ಅಲ್ಲ. ಅವು ನಿಸರ್ಗದ ನಿಯಮಗಳು. ಮಾನವ ಅಂತ ಅನ್ನಿಸಿಕೊಂಡವನು ಹಿಂಗ ಇರಬೇಕು ಅಂತ ಮಾನವ ಇತಿಹಾಸದ ಜೀವನಚಕ್ರದ ಅಲ್ಲಲ್ಲಿ ನಿಂತು ತೋರಸತದ. ಅದನ್ನು ಸಂವಿಧಾನದಾಗ ದಾಖಲಿಸಲಾಗತದ. ಸಂವಿಧಾನಕ್ಕ ಅಷ್ಟು ಯಾಕ ಇಂಪಾರ್ಟನ್ಸ ಕೊಡತೀರಿ? ಅದು ಒಂದು ಬುಕ್ಕು ಅಷ್ಟ. ಅಂತ ಮಾತಾಡೋರನ್ನ ವಾದದಾಗ ಸೋಲಸಲಿಕ್ಕೆ ಆಗಂಗಿಲ್ಲ. ಆದರ ಅವರಿಗೆ ಒಂದು ಮಾತು ಹೇಳಬೇಕು. ಸಂವಿಧಾನ ಅನ್ನೋದು ಒಂದು ಬುಕ್ಕು ಅಷ್ಟ. ಆದರ ಅದು ಸಮಗ್ರ ಮಾನವ ಜೀವ ವಿಕಾಸದ ಬುದ್ಧಿಮತ್ತೆ ಹಾಗೂ ವಿವೇಕವನ್ನು ದಾಖಲಿಸಿರುವ ಬುಕ್ಕು. ಅದನ್ನು ಬದಲು ಮಾಡಿದರ, ಮುಚ್ಚಿ ಇಟ್ಟರ, ಬೀಸಿ ಒಗದರ ಸಹಿತ ಅದರಲ್ಲಿರುವ ವಿವೇಕ ಹಾಳಾಗುವುದಿಲ್ಲ ಅಂತ.

ಇನ್ನು ಭಾರತದ ಸಂವಿಧಾನದಲ್ಲಿ ಇರುವ ಸುಮಾರು 20 ಮೂಲಭೂತ ಹಕ್ಕುಗಳಲ್ಲಿ ಪ್ರಮುಖವಾದ್ದು ಸಮಾನತೆಯ ಹಕ್ಕು. ಅಸಮಾನತೆ ತಳಹದಿಯ ಮೇಲೆ ನಿಂತಿರುವ ಸಮಾಜದಲ್ಲೆ ಸಮಾನತೆ ಸ್ಥಾಪಿಸೋದು ಹೆಂಗ ಹಂಗಾರ?

ಈ ದೇಶದ ರಾಜಕೀಯದ ಮೇಲೆ ಹಿಂದೆಂದೂ ಇಲ್ಲದ ಪ್ರಭಾವ ಬೀರಿ ಬದಲಾವಣೆ ತಂದದ್ದು ಮಂಡಲ ವರದಿ. ಅದರ ಶಿಫಾರಸು ಪುಸ್ತಕ ನೋಡಿದವರು ಕಮ್ಮಿ. ಅದರ ಹೆಸರಿನಲ್ಲಿ ಹೋರಾಟ ಮಾಡಿದವರು ಹೆಚ್ಚು. ಅದು ಆ ಕಡೆನೂ ಇರಬಹುದು, ಈ ಕಡೆನೂ ಇರಬಹುದು.

ಆ ವರದಿಯ ಮೊದಲ ಪುಟದ ಮೇಲೆ ಒಂದು ಮಾತು ಬರದದ. ಸಾವಿರ ವರ್ಷಕ್ಕೂ ಸಲ್ಲುವ ಮಾತು ಅದು. “ಅಸಮಾನನನ್ನು ಸಮಾನನ ಜೊತೆ ಸೇರಿಸಿ ನೋಡುವುದು, ಅಸಮಾನತೆಯನ್ನು ಮುಂದುವರೆಸಿದಂತೆ”. ಅಸಮಾನತೆಯನ್ನು ಮುರಿಯಲಿಕ್ಕೆ ಬೇರೆ ಬೇರೆ ಪ್ರಯತ್ನ ಮಾಡಿ ಅವು ಯಾವುವೂ ಯಶಸ್ಸು ಗಳಿಸದೇ ಹೋದಾಗ ಪ್ರಾರಂಭವಾಗಿದ್ದು, ತಕ್ಕಮಟ್ಟಿಗೆ ಯಶಸ್ಸು ಗಳಿಸಿದ್ದು ಮೀಸಲಾತಿ.

ಅದರ ಬಗ್ಗೆ ಕೆಲವು ಮೂಲಭೂತ ವಿಷಯಗಳನ್ನು ತಿಳಿದುಕೊಳ್ಳೋಣ. ಈ ಬ್ರಹ್ಮಾಂಡದಾಗ 200 ದೇಶ ಅವ. ಅದರಾಗ ಸುಮಾರು 170 ದೇಶದೊಳಗ ಪ್ರಜಾಪ್ರಭುತ್ವ ಅದ. ಎಲ್ಲೆಲ್ಲಿ ಪ್ರಜಾಪ್ರಭುತ್ವ ಅದನೋ ಅಲ್ಲೆಲ್ಲಾ ಮೀಸಲಾತಿ ಅದ. ಅದರ ಹೆಸರು ಬ್ಯಾರೆ ಬ್ಯಾರೆ ಇರಬಹುದು ಅಷ್ಟ. ಅಮೆರಿಕಾದ ಅದನ್ನು ಧನಾತ್ಮಕ ತಾರತಮ್ಯ ಅಂತಾರ. ಯುರೋಪಿನ್ಯಾಗ ಸಕಾರಾತ್ಮಕ ಕ್ರಿಯೆ ಅಂತಾರ, ಅನೇಕ ದೇಶದೊಳಗ ಕೋಟಾ ಅಂತಾರ. ಭಾರತದಾಗ ಸರಳವಾಗಿ ಮೀಸಲಾತಿ ಅಂತೇವಿ.

ಬಿಲ್ ಕ್ಲಿಂಟನ್ನಿನ ಕಚೇರಿಯೊಳಗ ಕರಿಯರು, ಮೆಕ್ಸಿಕೋದವರು, ಏಷಿಯಾದವರು, ಮಹಿಳೆಯರು ಕಮ್ಮಿ ಇದ್ದಾರೆ ಅಂತ ಅಲ್ಲಿನ ಧನಾತ್ಮಕ ತಾರತಮ್ಯ ಆಯೋಗ ಅಲ್ಲಿನ ಅಧ್ಯಕ್ಷನಿಗೆ ನೋಟಿಸು ಕೊಟ್ಟಿತ್ತು.

ಯುರೋಪಿನಲ್ಲಿ ಪ್ರತಿ ಸರಕಾರಿ ಹಾಗೂ ಸಾರ್ವಜನಿಕ ಕಚೇರಿಗಳಲ್ಲಿ, ಎಲ್ಲಾ ರೀತಿಯ ಜಾತಿ- ಜನಾಂಗ- ಲಿಂಗದವರಿಗೆ ಅವಕಾಶ ನೀಡಲೇಬೇಕು ಅಂತ ಒಂದು ಕಾನೂನು ಇದೆ. ಅದನ್ನು ತಪ್ಪಿದರೆ ವಾಗ್ದಂಡನೆ ಹಾಗೂ ಇತರ ಶಿಕ್ಷೆ ಅದ. ಇದು ನಮ್ಮ ಭಾಳ ಜಾನ ಎನ್‍ಆರ್‍ಐಗಳಿಗೆ ಅನಿವಾಸಿ ಭಾರತೀಯರಿಗೆ ಗೊತ್ತಿರೋದಿಲ್ಲ. ಭಾರತ ಹಾಳಾಗಿರುವುದು ಮೀಸಲಾತಿಯಿಂದ ಅಂತ ಅವರು ಘಂಟಾಘೋಷವಾಗಿ ಹೇಳತಾರ. ತಮ್ಮ ಅಜ್ಞಾನದ ಬಲದಿಂದ ತಿಳಿದವರನ್ನ ಗೋಳು ಹೊಯ್ಕೊತಾರ.

ಯಾಕಂದರ ಅವರು ತಮಗೆ ರೊಟ್ಟಿ – ಬ್ಯಾಳಿ ನೀಡಿದ ದೇಶದ ಸರಕಾರ ಹಾಗೂ ಸಂವಿಧಾನದ ಬಗ್ಗೆ ಆಳವಾದ ಜ್ಞಾನ ಬೆಳೆಸಿಕೊಳ್ಳಲಿಕ್ಕೆ ಹೋಗಿರೋದಿಲ್ಲ.

ಅವರು ಅಲ್ಲಿ ಇರೋತನಕಾ ಪ್ರವಾಸಿಗಳ ಥರಾ ಇದ್ದು, ತಮಗೆ ಕೆಲಸ ನೀಡಿದ ದೇಶದ ಬಗ್ಗೆ ಅಭಿಮಾನ ಹಾಗೂ ತಮಗೆ ಜನ್ಮ ನೀಡಿದ ದೇಶದ ಬಗ್ಗೆ ತಾತ್ಸಾರ ಬೆಳೆಸಿಕೊಂಡಿರತಾರ.

ನೀವು ಹಳ್ಳಿಯೊಳಗ ಜಂಗೀ ನಿಕಾಲಿ ಕುಸ್ತಿ ನೋಡಿರಬಹುದು. ಹಂಗಂದರ ಯುದ್ಧದಲ್ಲಿ ಕೊನೆಯಾಗುವ ಕುಸ್ತಿ ಅಂತ ಅರ್ಥ. ಅದರಾಗ ಎದುರಾಳಿಗಳನ್ನ ಹೆಂಗ ಹುಡುಕತಾರ, ಹೆಂಗ ಅವರ ನಡುವೆ ಸ್ಪರ್ಧೆ ಹಚ್ಚತಾರ ಅಂತ ನೋಡಬೇಕು .ಅದು ಅವರ ವಯಸ್ಸು ಅಥವಾ ಅನುಭವದ ಮ್ಯಾಲೆ ಇರಂಗಿಲ್ಲ. ಅವರ ದೇಹದ ತೂಕದ ಮ್ಯಾಲೆ ಇರತದ. ಯಾಕಂದರ ಸ್ಪರ್ಧೆ ಅನ್ನೋದು ಸಮಾನರ ನಡುವೆ ಇರಬೇಕು ಅಂತ. ಒಲಂಪಿಕ್ಸನ್ಯಾಗ ನಮ್ಮ ಹೆಮ್ಮೆಯ ಹುಡುಗಿ ಮೇರಿ ಕೋಮ ಅಂತಿಮ ಸುತ್ತಿನ್ಯಾಗ ಯಾಕ ಸೋತು ಹೋದಳು ಅಂದರ ಅಕಿನ್ನ ತನಗಿಂತ ಹೆಚ್ಚು ತೂಕದ ಹುಡುಗಿಯೊಂದಿಗೆ ಹೊಡದಾಡಲಿಕ್ಕೆ ಹಚ್ಚಿದರು.

ನಮ್ಮ ಸಮಾಜದಾಗ ಅಸಮಾನತೆ ಸಾವಿರಾರು ವರ್ಷಗಳಿಂದ ಅದ. ಅದನ್ನ ಪ್ರಜಾಪ್ರಭುತ್ವದ ನಂತರ ಅಳಿಸಬೇಕು ಅಂದರ ಸರಳ ಇಲ್ಲ. ಆದರೂ ಪ್ರಯತ್ನ ಕೈಬಿಡಬಾರದು. ಅದರಾಗುನೂ ಆ ಅಸಮಾನತೆ ಮಾನವ ನಿರ್ಮಿತವಾದ್ದರಿಂದ ಅದನ್ನು ಮಾನವರೇ ಅಳಿಸಬೇಕು. ಸಮಾನತೆ ಮೂಲಭೂತ ಹಕ್ಕು ಅಂದರ ಅದನ್ನು ನಿವಾರಿಸಲು ಬೇಕಾಗುವ ಪರಿಕರಗಳು ಮೂಲಭೂತ ಹಕ್ಕು ಯಾಕ ಆಗಂಗಿಲ್ಲ? ಆ ಪರಿಕರಗಳನ್ನ ಕಸಗೊಂಡರ ಯಾವ ರೀತಿ ಸಮಾನತೆ ಸಾಧಿಸಲಿಕ್ಕೆ ಸಾಧ್ಯ ಅದ?

ಘನ ಸರಕಾರಗಳು ನ್ಯಾಯಾಧೀಶರ ಮುಂದ ಇಡುವ ವಾದಗಳಲ್ಲಿ ಈ ಮಾತುಗಳು ಬರಬಹುದು ಅಂತ ಆಶೆ ಮಾಡೋಣ. ಪ್ರಾರ್ಥನೆಗಿಂತ ದೊಡ್ಡದು ಯಾವುದೂ ಇಲ್ಲ ಅನ್ನೋ ಮಾತನ್ನು ಬಂಗಾಳದ ಭಕ್ತಿ ಸಂತ ಕೃಷ್ಣ ಚೈತನ್ಯ ಹೇಳಿದರು. ಸದ್ಯಕ್ಕಂತೂ ನಮಗ ಪ್ರಾರ್ಥನೆ ಮಾಡೋದು ಬಿಟ್ಟು ಬ್ಯಾರೆ ದಾರಿನ ಇಲ್ಲ. ಅದು ದೇವರಿಗೆ ಇರಬಹುದು, ಸರಕಾರದಲ್ಲಿ ಇರೋ ನಮ್ಮ ದಾತಾರರಿಗೆ ಇರಬಹುದು. ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...