Homeಮುಖಪುಟಈ ಬ್ರಹ್ಮಾಂಡದಾಗ ಇರೋ 200 ದೇಶಗಳಲ್ಲಿ 170 ದೇಶದೊಳಗ ಮೀಸಲಾತಿ ಐತಿ. ಇದರ ಬಗ್ಗೆ ನಿಮಗೆ...

ಈ ಬ್ರಹ್ಮಾಂಡದಾಗ ಇರೋ 200 ದೇಶಗಳಲ್ಲಿ 170 ದೇಶದೊಳಗ ಮೀಸಲಾತಿ ಐತಿ. ಇದರ ಬಗ್ಗೆ ನಿಮಗೆ ಗೊತ್ತೇನು?

ಎಲ್ಲೆಲ್ಲಿ ಪ್ರಜಾಪ್ರಭುತ್ವ ಅದನೋ ಅಲ್ಲೆಲ್ಲಾ ಮೀಸಲಾತಿ ಅದ. ಅದರ ಹೆಸರು ಬ್ಯಾರೆ ಬ್ಯಾರೆ ಇರಬಹುದು ಅಷ್ಟ. ಅಮೆರಿಕಾದ ಅದನ್ನು ಧನಾತ್ಮಕ ತಾರತಮ್ಯ ಅಂತಾರ. ಯುರೋಪಿನ್ಯಾಗ ಸಕಾರಾತ್ಮಕ ಕ್ರಿಯೆ ಅಂತಾರ, ಅನೇಕ ದೇಶದೊಳಗ ಕೋಟಾ ಅಂತಾರ. ಭಾರತದಾಗ ಸರಳವಾಗಿ ಮೀಸಲಾತಿ ಅಂತೇವಿ.

- Advertisement -
- Advertisement -

ಸುದ್ದಿಯೇನೇ ಮನೋಲ್ಲಾಸಿನಿ – ಐ.ವಿ ಗೌಲ್‌

ಸುಪ್ರೀಂಕೋರ್ಟು ಮೊನ್ನೆ ಮೊನ್ನೆ ಫ್ರೆಷ್ ಆಗಿ ಒಂದು ಟಪ್ಪಣಿ ಕೊಟ್ಟದ. ಅದು ಎಷ್ಟು ಬಿಸಿ ಬಿಸಿ ಸುದ್ದಿ ಅಂದರ ಅದನ್ನ ಬರೆದ ಕಾಗದ ಇನ್ನೂ ಸುಡು -ಸುಡು ಅನ್ನಲಿಕ್ಕೆ ಹತ್ತೇದ.

ಅದೇನಪಾ ಅಂದರ ಮೀಸಲಾತಿ ಅಂದರ ನಾಗರಿಕರ ಮೂಲಭೂತ ಹಕ್ಕೇನಲ್ಲ. ಅದು ಸರಕಾರದ ಜನ ಕಲ್ಯಾಣ ನೀತಿ. ಅದನ್ನು ಸರಕಾರಗಳು ಕೊಟ್ಟರ ಕೊಡಬಹುದು, ಇಲ್ಲಾಂದರ ಇಲ್ಲಾ. ಅವರ ಮ್ಯಾಲೆ ನೀವು ಈ ಸೌಲತ್ತು ಕೊಡಲೇಬೇಕು ಅಂತ ದಬಾಯಿಸಲಿಕ್ಕೆ ಬರಂಗಿಲ್ಲ ಅಂತ.

ಅದು ಅಂತಿಮ ತೀರ್ಪು ಅಲ್ಲ. ಅದಕ್ಕ ಸರಕಾರ ಇನ್ನೂ ಪ್ರತಿಕ್ರಿಯೆ ಕೊಟ್ಟಿಲ್ಲ. ಅದು ಏನಂತ ಪ್ರತಿಕ್ರಿಯೆ ಕೊಡತದ ಅನ್ನೋದರ ಮ್ಯಾಲೆ ನಾವು ಪ್ರತಿಕ್ರಿಯೆ ಕೊಡೋಣಂತ. ಆದರ ಅದರ ಹಿನ್ನೆಲೆ ತಿಳದು ಕೊಳ್ಳೋಣ.

ಈಗ ಮೀಸಲಾತಿ ಅನ್ನೋದು ಏನು ಅಂತ ತಿಳಕೋಕಿಂತಾ ಮೊದಲ ಮೂಲಭೂತ ಹಕ್ಕು ಅಂದರೇನು ಅಂತ ತಿಳಿಯೋಣು. ಮೂಲಭೂತ ಹಕ್ಕು ಅಂದರ ಹುಟ್ಟಿನಿಂದ ಬಂದ ಹಕ್ಕು. ಅದರ ಸಲುವಾಗಿ ಏನೂ ವಿಶೇಷ ಮಸಲತ್ತು ಮಾಡಬೇಕಿಲ್ಲ. ಯಾ ಮನುಷಾ ನಾಗರಿಕ ಇರತಾನೋ ಅವನಿಗೆ ಸಹಜವಾಗಿ ಬಂದ ಬಿಡೋ ಹಕ್ಕುಗಳು ಮೂಲಭೂತ ಹಕ್ಕುಗಳು. ಕೆಲವು ಎಲ್ಲಾ ಮನುಷ್ಯರಿಗೂ ಬರತಾವು. ಅವಕ್ಕ ಮಾನವ ಹಕ್ಕುಗಳು ಅಂತ ಅನಸಿಗೋತಾವು.

ಇನ್ನು ಕೆಲವು ಬರೇ ನಾಗರಿಕರಿಗೆ ಮಾತ್ರ ಸಿಗೋವು. ಅವು ಕಾನೂನಿನಿಂದ ಮಾತ್ರ ಸಿಗೋವಂಥವು. ಅವನ್ನು ಆಯಾ ದೇಶದ ಸಂವಿಧಾನದ ಒಳಗ ಬರದು ಇಡಲಾಗುತ್ತದೆ. ಅದರಾಗ ಬರದಾರ ಅಂದ ಮಾತ್ರಕ್ಕ ಅವು ಸಿಗತಾವು ಅಂತ ಅಲ್ಲ. ಅವು ನಿಸರ್ಗದ ನಿಯಮಗಳು. ಮಾನವ ಅಂತ ಅನ್ನಿಸಿಕೊಂಡವನು ಹಿಂಗ ಇರಬೇಕು ಅಂತ ಮಾನವ ಇತಿಹಾಸದ ಜೀವನಚಕ್ರದ ಅಲ್ಲಲ್ಲಿ ನಿಂತು ತೋರಸತದ. ಅದನ್ನು ಸಂವಿಧಾನದಾಗ ದಾಖಲಿಸಲಾಗತದ. ಸಂವಿಧಾನಕ್ಕ ಅಷ್ಟು ಯಾಕ ಇಂಪಾರ್ಟನ್ಸ ಕೊಡತೀರಿ? ಅದು ಒಂದು ಬುಕ್ಕು ಅಷ್ಟ. ಅಂತ ಮಾತಾಡೋರನ್ನ ವಾದದಾಗ ಸೋಲಸಲಿಕ್ಕೆ ಆಗಂಗಿಲ್ಲ. ಆದರ ಅವರಿಗೆ ಒಂದು ಮಾತು ಹೇಳಬೇಕು. ಸಂವಿಧಾನ ಅನ್ನೋದು ಒಂದು ಬುಕ್ಕು ಅಷ್ಟ. ಆದರ ಅದು ಸಮಗ್ರ ಮಾನವ ಜೀವ ವಿಕಾಸದ ಬುದ್ಧಿಮತ್ತೆ ಹಾಗೂ ವಿವೇಕವನ್ನು ದಾಖಲಿಸಿರುವ ಬುಕ್ಕು. ಅದನ್ನು ಬದಲು ಮಾಡಿದರ, ಮುಚ್ಚಿ ಇಟ್ಟರ, ಬೀಸಿ ಒಗದರ ಸಹಿತ ಅದರಲ್ಲಿರುವ ವಿವೇಕ ಹಾಳಾಗುವುದಿಲ್ಲ ಅಂತ.

ಇನ್ನು ಭಾರತದ ಸಂವಿಧಾನದಲ್ಲಿ ಇರುವ ಸುಮಾರು 20 ಮೂಲಭೂತ ಹಕ್ಕುಗಳಲ್ಲಿ ಪ್ರಮುಖವಾದ್ದು ಸಮಾನತೆಯ ಹಕ್ಕು. ಅಸಮಾನತೆ ತಳಹದಿಯ ಮೇಲೆ ನಿಂತಿರುವ ಸಮಾಜದಲ್ಲೆ ಸಮಾನತೆ ಸ್ಥಾಪಿಸೋದು ಹೆಂಗ ಹಂಗಾರ?

ಈ ದೇಶದ ರಾಜಕೀಯದ ಮೇಲೆ ಹಿಂದೆಂದೂ ಇಲ್ಲದ ಪ್ರಭಾವ ಬೀರಿ ಬದಲಾವಣೆ ತಂದದ್ದು ಮಂಡಲ ವರದಿ. ಅದರ ಶಿಫಾರಸು ಪುಸ್ತಕ ನೋಡಿದವರು ಕಮ್ಮಿ. ಅದರ ಹೆಸರಿನಲ್ಲಿ ಹೋರಾಟ ಮಾಡಿದವರು ಹೆಚ್ಚು. ಅದು ಆ ಕಡೆನೂ ಇರಬಹುದು, ಈ ಕಡೆನೂ ಇರಬಹುದು.

ಆ ವರದಿಯ ಮೊದಲ ಪುಟದ ಮೇಲೆ ಒಂದು ಮಾತು ಬರದದ. ಸಾವಿರ ವರ್ಷಕ್ಕೂ ಸಲ್ಲುವ ಮಾತು ಅದು. “ಅಸಮಾನನನ್ನು ಸಮಾನನ ಜೊತೆ ಸೇರಿಸಿ ನೋಡುವುದು, ಅಸಮಾನತೆಯನ್ನು ಮುಂದುವರೆಸಿದಂತೆ”. ಅಸಮಾನತೆಯನ್ನು ಮುರಿಯಲಿಕ್ಕೆ ಬೇರೆ ಬೇರೆ ಪ್ರಯತ್ನ ಮಾಡಿ ಅವು ಯಾವುವೂ ಯಶಸ್ಸು ಗಳಿಸದೇ ಹೋದಾಗ ಪ್ರಾರಂಭವಾಗಿದ್ದು, ತಕ್ಕಮಟ್ಟಿಗೆ ಯಶಸ್ಸು ಗಳಿಸಿದ್ದು ಮೀಸಲಾತಿ.

ಅದರ ಬಗ್ಗೆ ಕೆಲವು ಮೂಲಭೂತ ವಿಷಯಗಳನ್ನು ತಿಳಿದುಕೊಳ್ಳೋಣ. ಈ ಬ್ರಹ್ಮಾಂಡದಾಗ 200 ದೇಶ ಅವ. ಅದರಾಗ ಸುಮಾರು 170 ದೇಶದೊಳಗ ಪ್ರಜಾಪ್ರಭುತ್ವ ಅದ. ಎಲ್ಲೆಲ್ಲಿ ಪ್ರಜಾಪ್ರಭುತ್ವ ಅದನೋ ಅಲ್ಲೆಲ್ಲಾ ಮೀಸಲಾತಿ ಅದ. ಅದರ ಹೆಸರು ಬ್ಯಾರೆ ಬ್ಯಾರೆ ಇರಬಹುದು ಅಷ್ಟ. ಅಮೆರಿಕಾದ ಅದನ್ನು ಧನಾತ್ಮಕ ತಾರತಮ್ಯ ಅಂತಾರ. ಯುರೋಪಿನ್ಯಾಗ ಸಕಾರಾತ್ಮಕ ಕ್ರಿಯೆ ಅಂತಾರ, ಅನೇಕ ದೇಶದೊಳಗ ಕೋಟಾ ಅಂತಾರ. ಭಾರತದಾಗ ಸರಳವಾಗಿ ಮೀಸಲಾತಿ ಅಂತೇವಿ.

ಬಿಲ್ ಕ್ಲಿಂಟನ್ನಿನ ಕಚೇರಿಯೊಳಗ ಕರಿಯರು, ಮೆಕ್ಸಿಕೋದವರು, ಏಷಿಯಾದವರು, ಮಹಿಳೆಯರು ಕಮ್ಮಿ ಇದ್ದಾರೆ ಅಂತ ಅಲ್ಲಿನ ಧನಾತ್ಮಕ ತಾರತಮ್ಯ ಆಯೋಗ ಅಲ್ಲಿನ ಅಧ್ಯಕ್ಷನಿಗೆ ನೋಟಿಸು ಕೊಟ್ಟಿತ್ತು.

ಯುರೋಪಿನಲ್ಲಿ ಪ್ರತಿ ಸರಕಾರಿ ಹಾಗೂ ಸಾರ್ವಜನಿಕ ಕಚೇರಿಗಳಲ್ಲಿ, ಎಲ್ಲಾ ರೀತಿಯ ಜಾತಿ- ಜನಾಂಗ- ಲಿಂಗದವರಿಗೆ ಅವಕಾಶ ನೀಡಲೇಬೇಕು ಅಂತ ಒಂದು ಕಾನೂನು ಇದೆ. ಅದನ್ನು ತಪ್ಪಿದರೆ ವಾಗ್ದಂಡನೆ ಹಾಗೂ ಇತರ ಶಿಕ್ಷೆ ಅದ. ಇದು ನಮ್ಮ ಭಾಳ ಜಾನ ಎನ್‍ಆರ್‍ಐಗಳಿಗೆ ಅನಿವಾಸಿ ಭಾರತೀಯರಿಗೆ ಗೊತ್ತಿರೋದಿಲ್ಲ. ಭಾರತ ಹಾಳಾಗಿರುವುದು ಮೀಸಲಾತಿಯಿಂದ ಅಂತ ಅವರು ಘಂಟಾಘೋಷವಾಗಿ ಹೇಳತಾರ. ತಮ್ಮ ಅಜ್ಞಾನದ ಬಲದಿಂದ ತಿಳಿದವರನ್ನ ಗೋಳು ಹೊಯ್ಕೊತಾರ.

ಯಾಕಂದರ ಅವರು ತಮಗೆ ರೊಟ್ಟಿ – ಬ್ಯಾಳಿ ನೀಡಿದ ದೇಶದ ಸರಕಾರ ಹಾಗೂ ಸಂವಿಧಾನದ ಬಗ್ಗೆ ಆಳವಾದ ಜ್ಞಾನ ಬೆಳೆಸಿಕೊಳ್ಳಲಿಕ್ಕೆ ಹೋಗಿರೋದಿಲ್ಲ.

ಅವರು ಅಲ್ಲಿ ಇರೋತನಕಾ ಪ್ರವಾಸಿಗಳ ಥರಾ ಇದ್ದು, ತಮಗೆ ಕೆಲಸ ನೀಡಿದ ದೇಶದ ಬಗ್ಗೆ ಅಭಿಮಾನ ಹಾಗೂ ತಮಗೆ ಜನ್ಮ ನೀಡಿದ ದೇಶದ ಬಗ್ಗೆ ತಾತ್ಸಾರ ಬೆಳೆಸಿಕೊಂಡಿರತಾರ.

ನೀವು ಹಳ್ಳಿಯೊಳಗ ಜಂಗೀ ನಿಕಾಲಿ ಕುಸ್ತಿ ನೋಡಿರಬಹುದು. ಹಂಗಂದರ ಯುದ್ಧದಲ್ಲಿ ಕೊನೆಯಾಗುವ ಕುಸ್ತಿ ಅಂತ ಅರ್ಥ. ಅದರಾಗ ಎದುರಾಳಿಗಳನ್ನ ಹೆಂಗ ಹುಡುಕತಾರ, ಹೆಂಗ ಅವರ ನಡುವೆ ಸ್ಪರ್ಧೆ ಹಚ್ಚತಾರ ಅಂತ ನೋಡಬೇಕು .ಅದು ಅವರ ವಯಸ್ಸು ಅಥವಾ ಅನುಭವದ ಮ್ಯಾಲೆ ಇರಂಗಿಲ್ಲ. ಅವರ ದೇಹದ ತೂಕದ ಮ್ಯಾಲೆ ಇರತದ. ಯಾಕಂದರ ಸ್ಪರ್ಧೆ ಅನ್ನೋದು ಸಮಾನರ ನಡುವೆ ಇರಬೇಕು ಅಂತ. ಒಲಂಪಿಕ್ಸನ್ಯಾಗ ನಮ್ಮ ಹೆಮ್ಮೆಯ ಹುಡುಗಿ ಮೇರಿ ಕೋಮ ಅಂತಿಮ ಸುತ್ತಿನ್ಯಾಗ ಯಾಕ ಸೋತು ಹೋದಳು ಅಂದರ ಅಕಿನ್ನ ತನಗಿಂತ ಹೆಚ್ಚು ತೂಕದ ಹುಡುಗಿಯೊಂದಿಗೆ ಹೊಡದಾಡಲಿಕ್ಕೆ ಹಚ್ಚಿದರು.

ನಮ್ಮ ಸಮಾಜದಾಗ ಅಸಮಾನತೆ ಸಾವಿರಾರು ವರ್ಷಗಳಿಂದ ಅದ. ಅದನ್ನ ಪ್ರಜಾಪ್ರಭುತ್ವದ ನಂತರ ಅಳಿಸಬೇಕು ಅಂದರ ಸರಳ ಇಲ್ಲ. ಆದರೂ ಪ್ರಯತ್ನ ಕೈಬಿಡಬಾರದು. ಅದರಾಗುನೂ ಆ ಅಸಮಾನತೆ ಮಾನವ ನಿರ್ಮಿತವಾದ್ದರಿಂದ ಅದನ್ನು ಮಾನವರೇ ಅಳಿಸಬೇಕು. ಸಮಾನತೆ ಮೂಲಭೂತ ಹಕ್ಕು ಅಂದರ ಅದನ್ನು ನಿವಾರಿಸಲು ಬೇಕಾಗುವ ಪರಿಕರಗಳು ಮೂಲಭೂತ ಹಕ್ಕು ಯಾಕ ಆಗಂಗಿಲ್ಲ? ಆ ಪರಿಕರಗಳನ್ನ ಕಸಗೊಂಡರ ಯಾವ ರೀತಿ ಸಮಾನತೆ ಸಾಧಿಸಲಿಕ್ಕೆ ಸಾಧ್ಯ ಅದ?

ಘನ ಸರಕಾರಗಳು ನ್ಯಾಯಾಧೀಶರ ಮುಂದ ಇಡುವ ವಾದಗಳಲ್ಲಿ ಈ ಮಾತುಗಳು ಬರಬಹುದು ಅಂತ ಆಶೆ ಮಾಡೋಣ. ಪ್ರಾರ್ಥನೆಗಿಂತ ದೊಡ್ಡದು ಯಾವುದೂ ಇಲ್ಲ ಅನ್ನೋ ಮಾತನ್ನು ಬಂಗಾಳದ ಭಕ್ತಿ ಸಂತ ಕೃಷ್ಣ ಚೈತನ್ಯ ಹೇಳಿದರು. ಸದ್ಯಕ್ಕಂತೂ ನಮಗ ಪ್ರಾರ್ಥನೆ ಮಾಡೋದು ಬಿಟ್ಟು ಬ್ಯಾರೆ ದಾರಿನ ಇಲ್ಲ. ಅದು ದೇವರಿಗೆ ಇರಬಹುದು, ಸರಕಾರದಲ್ಲಿ ಇರೋ ನಮ್ಮ ದಾತಾರರಿಗೆ ಇರಬಹುದು. ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...