Homeಮುಖಪುಟಈ ಬ್ರಹ್ಮಾಂಡದಾಗ ಇರೋ 200 ದೇಶಗಳಲ್ಲಿ 170 ದೇಶದೊಳಗ ಮೀಸಲಾತಿ ಐತಿ. ಇದರ ಬಗ್ಗೆ ನಿಮಗೆ...

ಈ ಬ್ರಹ್ಮಾಂಡದಾಗ ಇರೋ 200 ದೇಶಗಳಲ್ಲಿ 170 ದೇಶದೊಳಗ ಮೀಸಲಾತಿ ಐತಿ. ಇದರ ಬಗ್ಗೆ ನಿಮಗೆ ಗೊತ್ತೇನು?

ಎಲ್ಲೆಲ್ಲಿ ಪ್ರಜಾಪ್ರಭುತ್ವ ಅದನೋ ಅಲ್ಲೆಲ್ಲಾ ಮೀಸಲಾತಿ ಅದ. ಅದರ ಹೆಸರು ಬ್ಯಾರೆ ಬ್ಯಾರೆ ಇರಬಹುದು ಅಷ್ಟ. ಅಮೆರಿಕಾದ ಅದನ್ನು ಧನಾತ್ಮಕ ತಾರತಮ್ಯ ಅಂತಾರ. ಯುರೋಪಿನ್ಯಾಗ ಸಕಾರಾತ್ಮಕ ಕ್ರಿಯೆ ಅಂತಾರ, ಅನೇಕ ದೇಶದೊಳಗ ಕೋಟಾ ಅಂತಾರ. ಭಾರತದಾಗ ಸರಳವಾಗಿ ಮೀಸಲಾತಿ ಅಂತೇವಿ.

- Advertisement -
- Advertisement -

ಸುದ್ದಿಯೇನೇ ಮನೋಲ್ಲಾಸಿನಿ – ಐ.ವಿ ಗೌಲ್‌

ಸುಪ್ರೀಂಕೋರ್ಟು ಮೊನ್ನೆ ಮೊನ್ನೆ ಫ್ರೆಷ್ ಆಗಿ ಒಂದು ಟಪ್ಪಣಿ ಕೊಟ್ಟದ. ಅದು ಎಷ್ಟು ಬಿಸಿ ಬಿಸಿ ಸುದ್ದಿ ಅಂದರ ಅದನ್ನ ಬರೆದ ಕಾಗದ ಇನ್ನೂ ಸುಡು -ಸುಡು ಅನ್ನಲಿಕ್ಕೆ ಹತ್ತೇದ.

ಅದೇನಪಾ ಅಂದರ ಮೀಸಲಾತಿ ಅಂದರ ನಾಗರಿಕರ ಮೂಲಭೂತ ಹಕ್ಕೇನಲ್ಲ. ಅದು ಸರಕಾರದ ಜನ ಕಲ್ಯಾಣ ನೀತಿ. ಅದನ್ನು ಸರಕಾರಗಳು ಕೊಟ್ಟರ ಕೊಡಬಹುದು, ಇಲ್ಲಾಂದರ ಇಲ್ಲಾ. ಅವರ ಮ್ಯಾಲೆ ನೀವು ಈ ಸೌಲತ್ತು ಕೊಡಲೇಬೇಕು ಅಂತ ದಬಾಯಿಸಲಿಕ್ಕೆ ಬರಂಗಿಲ್ಲ ಅಂತ.

ಅದು ಅಂತಿಮ ತೀರ್ಪು ಅಲ್ಲ. ಅದಕ್ಕ ಸರಕಾರ ಇನ್ನೂ ಪ್ರತಿಕ್ರಿಯೆ ಕೊಟ್ಟಿಲ್ಲ. ಅದು ಏನಂತ ಪ್ರತಿಕ್ರಿಯೆ ಕೊಡತದ ಅನ್ನೋದರ ಮ್ಯಾಲೆ ನಾವು ಪ್ರತಿಕ್ರಿಯೆ ಕೊಡೋಣಂತ. ಆದರ ಅದರ ಹಿನ್ನೆಲೆ ತಿಳದು ಕೊಳ್ಳೋಣ.

ಈಗ ಮೀಸಲಾತಿ ಅನ್ನೋದು ಏನು ಅಂತ ತಿಳಕೋಕಿಂತಾ ಮೊದಲ ಮೂಲಭೂತ ಹಕ್ಕು ಅಂದರೇನು ಅಂತ ತಿಳಿಯೋಣು. ಮೂಲಭೂತ ಹಕ್ಕು ಅಂದರ ಹುಟ್ಟಿನಿಂದ ಬಂದ ಹಕ್ಕು. ಅದರ ಸಲುವಾಗಿ ಏನೂ ವಿಶೇಷ ಮಸಲತ್ತು ಮಾಡಬೇಕಿಲ್ಲ. ಯಾ ಮನುಷಾ ನಾಗರಿಕ ಇರತಾನೋ ಅವನಿಗೆ ಸಹಜವಾಗಿ ಬಂದ ಬಿಡೋ ಹಕ್ಕುಗಳು ಮೂಲಭೂತ ಹಕ್ಕುಗಳು. ಕೆಲವು ಎಲ್ಲಾ ಮನುಷ್ಯರಿಗೂ ಬರತಾವು. ಅವಕ್ಕ ಮಾನವ ಹಕ್ಕುಗಳು ಅಂತ ಅನಸಿಗೋತಾವು.

ಇನ್ನು ಕೆಲವು ಬರೇ ನಾಗರಿಕರಿಗೆ ಮಾತ್ರ ಸಿಗೋವು. ಅವು ಕಾನೂನಿನಿಂದ ಮಾತ್ರ ಸಿಗೋವಂಥವು. ಅವನ್ನು ಆಯಾ ದೇಶದ ಸಂವಿಧಾನದ ಒಳಗ ಬರದು ಇಡಲಾಗುತ್ತದೆ. ಅದರಾಗ ಬರದಾರ ಅಂದ ಮಾತ್ರಕ್ಕ ಅವು ಸಿಗತಾವು ಅಂತ ಅಲ್ಲ. ಅವು ನಿಸರ್ಗದ ನಿಯಮಗಳು. ಮಾನವ ಅಂತ ಅನ್ನಿಸಿಕೊಂಡವನು ಹಿಂಗ ಇರಬೇಕು ಅಂತ ಮಾನವ ಇತಿಹಾಸದ ಜೀವನಚಕ್ರದ ಅಲ್ಲಲ್ಲಿ ನಿಂತು ತೋರಸತದ. ಅದನ್ನು ಸಂವಿಧಾನದಾಗ ದಾಖಲಿಸಲಾಗತದ. ಸಂವಿಧಾನಕ್ಕ ಅಷ್ಟು ಯಾಕ ಇಂಪಾರ್ಟನ್ಸ ಕೊಡತೀರಿ? ಅದು ಒಂದು ಬುಕ್ಕು ಅಷ್ಟ. ಅಂತ ಮಾತಾಡೋರನ್ನ ವಾದದಾಗ ಸೋಲಸಲಿಕ್ಕೆ ಆಗಂಗಿಲ್ಲ. ಆದರ ಅವರಿಗೆ ಒಂದು ಮಾತು ಹೇಳಬೇಕು. ಸಂವಿಧಾನ ಅನ್ನೋದು ಒಂದು ಬುಕ್ಕು ಅಷ್ಟ. ಆದರ ಅದು ಸಮಗ್ರ ಮಾನವ ಜೀವ ವಿಕಾಸದ ಬುದ್ಧಿಮತ್ತೆ ಹಾಗೂ ವಿವೇಕವನ್ನು ದಾಖಲಿಸಿರುವ ಬುಕ್ಕು. ಅದನ್ನು ಬದಲು ಮಾಡಿದರ, ಮುಚ್ಚಿ ಇಟ್ಟರ, ಬೀಸಿ ಒಗದರ ಸಹಿತ ಅದರಲ್ಲಿರುವ ವಿವೇಕ ಹಾಳಾಗುವುದಿಲ್ಲ ಅಂತ.

ಇನ್ನು ಭಾರತದ ಸಂವಿಧಾನದಲ್ಲಿ ಇರುವ ಸುಮಾರು 20 ಮೂಲಭೂತ ಹಕ್ಕುಗಳಲ್ಲಿ ಪ್ರಮುಖವಾದ್ದು ಸಮಾನತೆಯ ಹಕ್ಕು. ಅಸಮಾನತೆ ತಳಹದಿಯ ಮೇಲೆ ನಿಂತಿರುವ ಸಮಾಜದಲ್ಲೆ ಸಮಾನತೆ ಸ್ಥಾಪಿಸೋದು ಹೆಂಗ ಹಂಗಾರ?

ಈ ದೇಶದ ರಾಜಕೀಯದ ಮೇಲೆ ಹಿಂದೆಂದೂ ಇಲ್ಲದ ಪ್ರಭಾವ ಬೀರಿ ಬದಲಾವಣೆ ತಂದದ್ದು ಮಂಡಲ ವರದಿ. ಅದರ ಶಿಫಾರಸು ಪುಸ್ತಕ ನೋಡಿದವರು ಕಮ್ಮಿ. ಅದರ ಹೆಸರಿನಲ್ಲಿ ಹೋರಾಟ ಮಾಡಿದವರು ಹೆಚ್ಚು. ಅದು ಆ ಕಡೆನೂ ಇರಬಹುದು, ಈ ಕಡೆನೂ ಇರಬಹುದು.

ಆ ವರದಿಯ ಮೊದಲ ಪುಟದ ಮೇಲೆ ಒಂದು ಮಾತು ಬರದದ. ಸಾವಿರ ವರ್ಷಕ್ಕೂ ಸಲ್ಲುವ ಮಾತು ಅದು. “ಅಸಮಾನನನ್ನು ಸಮಾನನ ಜೊತೆ ಸೇರಿಸಿ ನೋಡುವುದು, ಅಸಮಾನತೆಯನ್ನು ಮುಂದುವರೆಸಿದಂತೆ”. ಅಸಮಾನತೆಯನ್ನು ಮುರಿಯಲಿಕ್ಕೆ ಬೇರೆ ಬೇರೆ ಪ್ರಯತ್ನ ಮಾಡಿ ಅವು ಯಾವುವೂ ಯಶಸ್ಸು ಗಳಿಸದೇ ಹೋದಾಗ ಪ್ರಾರಂಭವಾಗಿದ್ದು, ತಕ್ಕಮಟ್ಟಿಗೆ ಯಶಸ್ಸು ಗಳಿಸಿದ್ದು ಮೀಸಲಾತಿ.

ಅದರ ಬಗ್ಗೆ ಕೆಲವು ಮೂಲಭೂತ ವಿಷಯಗಳನ್ನು ತಿಳಿದುಕೊಳ್ಳೋಣ. ಈ ಬ್ರಹ್ಮಾಂಡದಾಗ 200 ದೇಶ ಅವ. ಅದರಾಗ ಸುಮಾರು 170 ದೇಶದೊಳಗ ಪ್ರಜಾಪ್ರಭುತ್ವ ಅದ. ಎಲ್ಲೆಲ್ಲಿ ಪ್ರಜಾಪ್ರಭುತ್ವ ಅದನೋ ಅಲ್ಲೆಲ್ಲಾ ಮೀಸಲಾತಿ ಅದ. ಅದರ ಹೆಸರು ಬ್ಯಾರೆ ಬ್ಯಾರೆ ಇರಬಹುದು ಅಷ್ಟ. ಅಮೆರಿಕಾದ ಅದನ್ನು ಧನಾತ್ಮಕ ತಾರತಮ್ಯ ಅಂತಾರ. ಯುರೋಪಿನ್ಯಾಗ ಸಕಾರಾತ್ಮಕ ಕ್ರಿಯೆ ಅಂತಾರ, ಅನೇಕ ದೇಶದೊಳಗ ಕೋಟಾ ಅಂತಾರ. ಭಾರತದಾಗ ಸರಳವಾಗಿ ಮೀಸಲಾತಿ ಅಂತೇವಿ.

ಬಿಲ್ ಕ್ಲಿಂಟನ್ನಿನ ಕಚೇರಿಯೊಳಗ ಕರಿಯರು, ಮೆಕ್ಸಿಕೋದವರು, ಏಷಿಯಾದವರು, ಮಹಿಳೆಯರು ಕಮ್ಮಿ ಇದ್ದಾರೆ ಅಂತ ಅಲ್ಲಿನ ಧನಾತ್ಮಕ ತಾರತಮ್ಯ ಆಯೋಗ ಅಲ್ಲಿನ ಅಧ್ಯಕ್ಷನಿಗೆ ನೋಟಿಸು ಕೊಟ್ಟಿತ್ತು.

ಯುರೋಪಿನಲ್ಲಿ ಪ್ರತಿ ಸರಕಾರಿ ಹಾಗೂ ಸಾರ್ವಜನಿಕ ಕಚೇರಿಗಳಲ್ಲಿ, ಎಲ್ಲಾ ರೀತಿಯ ಜಾತಿ- ಜನಾಂಗ- ಲಿಂಗದವರಿಗೆ ಅವಕಾಶ ನೀಡಲೇಬೇಕು ಅಂತ ಒಂದು ಕಾನೂನು ಇದೆ. ಅದನ್ನು ತಪ್ಪಿದರೆ ವಾಗ್ದಂಡನೆ ಹಾಗೂ ಇತರ ಶಿಕ್ಷೆ ಅದ. ಇದು ನಮ್ಮ ಭಾಳ ಜಾನ ಎನ್‍ಆರ್‍ಐಗಳಿಗೆ ಅನಿವಾಸಿ ಭಾರತೀಯರಿಗೆ ಗೊತ್ತಿರೋದಿಲ್ಲ. ಭಾರತ ಹಾಳಾಗಿರುವುದು ಮೀಸಲಾತಿಯಿಂದ ಅಂತ ಅವರು ಘಂಟಾಘೋಷವಾಗಿ ಹೇಳತಾರ. ತಮ್ಮ ಅಜ್ಞಾನದ ಬಲದಿಂದ ತಿಳಿದವರನ್ನ ಗೋಳು ಹೊಯ್ಕೊತಾರ.

ಯಾಕಂದರ ಅವರು ತಮಗೆ ರೊಟ್ಟಿ – ಬ್ಯಾಳಿ ನೀಡಿದ ದೇಶದ ಸರಕಾರ ಹಾಗೂ ಸಂವಿಧಾನದ ಬಗ್ಗೆ ಆಳವಾದ ಜ್ಞಾನ ಬೆಳೆಸಿಕೊಳ್ಳಲಿಕ್ಕೆ ಹೋಗಿರೋದಿಲ್ಲ.

ಅವರು ಅಲ್ಲಿ ಇರೋತನಕಾ ಪ್ರವಾಸಿಗಳ ಥರಾ ಇದ್ದು, ತಮಗೆ ಕೆಲಸ ನೀಡಿದ ದೇಶದ ಬಗ್ಗೆ ಅಭಿಮಾನ ಹಾಗೂ ತಮಗೆ ಜನ್ಮ ನೀಡಿದ ದೇಶದ ಬಗ್ಗೆ ತಾತ್ಸಾರ ಬೆಳೆಸಿಕೊಂಡಿರತಾರ.

ನೀವು ಹಳ್ಳಿಯೊಳಗ ಜಂಗೀ ನಿಕಾಲಿ ಕುಸ್ತಿ ನೋಡಿರಬಹುದು. ಹಂಗಂದರ ಯುದ್ಧದಲ್ಲಿ ಕೊನೆಯಾಗುವ ಕುಸ್ತಿ ಅಂತ ಅರ್ಥ. ಅದರಾಗ ಎದುರಾಳಿಗಳನ್ನ ಹೆಂಗ ಹುಡುಕತಾರ, ಹೆಂಗ ಅವರ ನಡುವೆ ಸ್ಪರ್ಧೆ ಹಚ್ಚತಾರ ಅಂತ ನೋಡಬೇಕು .ಅದು ಅವರ ವಯಸ್ಸು ಅಥವಾ ಅನುಭವದ ಮ್ಯಾಲೆ ಇರಂಗಿಲ್ಲ. ಅವರ ದೇಹದ ತೂಕದ ಮ್ಯಾಲೆ ಇರತದ. ಯಾಕಂದರ ಸ್ಪರ್ಧೆ ಅನ್ನೋದು ಸಮಾನರ ನಡುವೆ ಇರಬೇಕು ಅಂತ. ಒಲಂಪಿಕ್ಸನ್ಯಾಗ ನಮ್ಮ ಹೆಮ್ಮೆಯ ಹುಡುಗಿ ಮೇರಿ ಕೋಮ ಅಂತಿಮ ಸುತ್ತಿನ್ಯಾಗ ಯಾಕ ಸೋತು ಹೋದಳು ಅಂದರ ಅಕಿನ್ನ ತನಗಿಂತ ಹೆಚ್ಚು ತೂಕದ ಹುಡುಗಿಯೊಂದಿಗೆ ಹೊಡದಾಡಲಿಕ್ಕೆ ಹಚ್ಚಿದರು.

ನಮ್ಮ ಸಮಾಜದಾಗ ಅಸಮಾನತೆ ಸಾವಿರಾರು ವರ್ಷಗಳಿಂದ ಅದ. ಅದನ್ನ ಪ್ರಜಾಪ್ರಭುತ್ವದ ನಂತರ ಅಳಿಸಬೇಕು ಅಂದರ ಸರಳ ಇಲ್ಲ. ಆದರೂ ಪ್ರಯತ್ನ ಕೈಬಿಡಬಾರದು. ಅದರಾಗುನೂ ಆ ಅಸಮಾನತೆ ಮಾನವ ನಿರ್ಮಿತವಾದ್ದರಿಂದ ಅದನ್ನು ಮಾನವರೇ ಅಳಿಸಬೇಕು. ಸಮಾನತೆ ಮೂಲಭೂತ ಹಕ್ಕು ಅಂದರ ಅದನ್ನು ನಿವಾರಿಸಲು ಬೇಕಾಗುವ ಪರಿಕರಗಳು ಮೂಲಭೂತ ಹಕ್ಕು ಯಾಕ ಆಗಂಗಿಲ್ಲ? ಆ ಪರಿಕರಗಳನ್ನ ಕಸಗೊಂಡರ ಯಾವ ರೀತಿ ಸಮಾನತೆ ಸಾಧಿಸಲಿಕ್ಕೆ ಸಾಧ್ಯ ಅದ?

ಘನ ಸರಕಾರಗಳು ನ್ಯಾಯಾಧೀಶರ ಮುಂದ ಇಡುವ ವಾದಗಳಲ್ಲಿ ಈ ಮಾತುಗಳು ಬರಬಹುದು ಅಂತ ಆಶೆ ಮಾಡೋಣ. ಪ್ರಾರ್ಥನೆಗಿಂತ ದೊಡ್ಡದು ಯಾವುದೂ ಇಲ್ಲ ಅನ್ನೋ ಮಾತನ್ನು ಬಂಗಾಳದ ಭಕ್ತಿ ಸಂತ ಕೃಷ್ಣ ಚೈತನ್ಯ ಹೇಳಿದರು. ಸದ್ಯಕ್ಕಂತೂ ನಮಗ ಪ್ರಾರ್ಥನೆ ಮಾಡೋದು ಬಿಟ್ಟು ಬ್ಯಾರೆ ದಾರಿನ ಇಲ್ಲ. ಅದು ದೇವರಿಗೆ ಇರಬಹುದು, ಸರಕಾರದಲ್ಲಿ ಇರೋ ನಮ್ಮ ದಾತಾರರಿಗೆ ಇರಬಹುದು. ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...