HomeಮುಖಪುಟNDA ಜೊತೆಗಿರುವ 38 ಪಕ್ಷಗಳಲ್ಲಿ 15 ಪಕ್ಷಗಳು ಕಳೆದ ಬಾರಿ ಒಂದೂ ಲೋಕಸಭಾ ಸ್ಥಾನ ಗೆದ್ದಿಲ್ಲ,...

NDA ಜೊತೆಗಿರುವ 38 ಪಕ್ಷಗಳಲ್ಲಿ 15 ಪಕ್ಷಗಳು ಕಳೆದ ಬಾರಿ ಒಂದೂ ಲೋಕಸಭಾ ಸ್ಥಾನ ಗೆದ್ದಿಲ್ಲ, 10 ಪಕ್ಷಗಳು ಸ್ಪರ್ಧಿಸಿಯೇ ಇಲ್ಲ!

ಬಿಜೆಪಿ, ಶಿವಸೇನೆ, ಎನ್‌ಸಿಪಿ ಮತ್ತು ಎಲ್‌ಜೆಪಿ ಹೊರತುಪಡಿಸಿ ಉಳಿದ 8 ಪಕ್ಷಗಳು ಕೇವಲ 9 ಲೋಕಸಭಾ ಸ್ಥಾನಗಳನ್ನು ಗೆದ್ದಿವೆ...

- Advertisement -
- Advertisement -

2024ರ ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ NDA ಸರ್ಕಾರ ಸೋಲಿಸಲು 26 ವಿರೋಧ ಪಕ್ಷಗಳು ಒಟ್ಟಾಗಿ INDIA ಎಂಬ ನೂತನ ಮೈತ್ರಿಕೂಟ ರಚಿಸಿಕೊಂಡಿವೆ. ಇದರಿಂದ ಎಚ್ಚೆತ್ತುಕೊಂಡಿರುವ ನರೇಂದ್ರ ಮೋದಿಯವರು ತಮ್ಮ NDA ಮೈತ್ರಿಕೂಟಕ್ಕೆ ಹಲವು ಸಣ್ಣ ಪುಟ್ಟ ಪಕ್ಷಗಳನ್ನು ಸೇರಿಸಿಕೊಂಡು ಸಭೆ ನಡೆಸಿದ್ದಾರೆ. ಅಲ್ಲದೇ ತಮ್ಮೊಡನೆ ಒಟ್ಟು 38 ಪಕ್ಷಗಳಿವೆ ಎಂದಿದ್ದಾರೆ. ಆದರೆ NDA ಜೊತೆಗಿರುವ 38 ಪಕ್ಷಗಳಲ್ಲಿ 15 ಪಕ್ಷಗಳು ಕಳೆದ ಬಾರಿ ಒಂದೂ ಲೋಕಸಭಾ ಸ್ಥಾನ ಗೆದ್ದಿಲ್ಲ, 10 ಪಕ್ಷಗಳು ಸ್ಪರ್ಧಿಸಿಯೇ ಇಲ್ಲ! 8 ಪಕ್ಷಗಳು ಮಾತ್ರ ತಲಾ ಒಂದೊಂದು ಲೋಕಸಭಾ ಸ್ಥಾನ ಗೆದ್ದಿವೆ ಅಷ್ಟೇ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವಿಶೇ‍ಷ ವರದಿ ಪ್ರಕಟಿಸಿದೆ.

ಬಿಜೆಪಿ ಹೊರತುಪಡಿಸಿ NDA ಮೈತ್ರಿಕೂಟದಲ್ಲಿ 37 ಪಕ್ಷಗಳಿವೆ. ಅದರಲ್ಲಿ ಹೊಸದಾಗಿ ಸೇರ್ಪಡೆಗೊಂಡ ಎನ್‌ಸಿಪಿ ಅಜಿತ್ ಪವಾರ್ ಬಣ, ಏಕನಾಥ್ ಶಿಂಧೆ ಶಿವಸೇನೆ ಬಣ ಮತ್ತು ಎಲ್‌ಜೆಪಿ ಪಕ್ಷಗಳು ಸಭೆಯಲ್ಲಿ ಭಾಗವಹಿಸಿವೆ. ಈ ಪಕ್ಷಗಳು ಮಾತ್ರವೇ ಕಳೆದ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಿವೆ ಬಿಟ್ಟರೆ ಸಭೆಯಲ್ಲಿ ಭಾಗವಹಿಸಿದ್ದ 10 ಪಕ್ಷಗಳು 2019ರ ಲೋಕಸಭಾ ಚುನಾವಣೆಯನ್ನು ಎದುರಿಸಿರಲಿಲ್ಲ. ಉಳಿದ 23 ಪಕ್ಷಗಳು ಸ್ಪರ್ಧಿಸಿದ್ದರೂ ಅವುಗಳಲ್ಲಿ 8 ಪಕ್ಷಗಳು 9 ಸ್ಥಾನಗಳನ್ನಷ್ಟೇ ಗೆದ್ದಿದ್ದವು. 15 ಪಕ್ಷಗಳು ಒಂದೂ ಸ್ಥಾನ ಗೆಲ್ಲಲಾಗಿರಲಿಲ್ಲ.

ಕಳೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷವೊಂದೇ 37.69 ಮತ ಪ್ರಮಾಣದೊಂದಿಗೆ 303 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಆಗ ಬಿಜೆಪಿ ಮೈತ್ರಿ ಪಕ್ಷವಾಗಿದ್ದ ಶಿವಸೇನೆ ಮಹಾರಾಷ್ಟ್ರದಲ್ಲಿ 18 ಸ್ಥಾನಗಳನ್ನು ಗೆದ್ದಿತ್ತು. ಈಗ ಅದು ಉದ್ಧವ್ ಬಣ ಮತ್ತು ಶಿಂಧೆ ಬಣವಾಗಿ ಎರಡು ಹೋಳಾಗಿದ್ದು ಶಿಂಧೆ ಬಣ ಎನ್‌ಡಿಎ ಜೊತೆಗಿದೆ. ಎಲ್‌ಜೆಪಿ ಪಕ್ಷವು ಎನ್‌ಡಿಎ ಜೊತೆ ಮೈತ್ರಿಯೊಂದಿಗೆ ಸ್ಪರ್ಧಿಸಿ ಬಿಹಾರದಲ್ಲಿ 6 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಆನಂತರ ಅದು ಸಹ ಎರಡು ಹೋಳಾಗಿದೆ. ಎನ್‌ಸಿಪಿ ಪಕ್ಷ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿಯೊಂದಿಗೆ ಸ್ಪರ್ಧಿಸಿ 5 ಸ್ಥಾನಗಳನ್ನು ಗೆದ್ದಿತ್ತು. ಅದು ಅದು ಎರಡು ಹೋಳಾಗಿದ್ದು ಅಜಿತ್ ಪವಾರ್ ಬಣ ಎನ್‌ಡಿಎ ಜೊತೆಗೆ ಗುರುತಿಸಿಕೊಂಡಿದೆ. ಈ ಪಕ್ಷಗಳನ್ನು ಬಿಟ್ಟರೆ ಉಳಿದ ಎನ್‌ಡಿಎ ಜೊತೆಗಿರುವ ಪಕ್ಷಗಳ ಸಾಧನೆ ಅಷ್ಟಕಷ್ಟೆ ಎನ್ನುವಂತಿದೆ.

10 ಪಕ್ಷಗಳು ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ

ಶಿರೋಮಣಿ ಅಕಾಲಿದಳ (ಸಂಯುಕ್ತ), ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ (ಎಂಜಿಪಿ), ಜನ ಸುರಾಜ್ಯ ಶಕ್ತಿ ಪಕ್ಷ, ಕುಕಿ ಪೀಪಲ್ಸ್ ಅಲೈಯನ್ಸ್, ಹಿಲ್ ಸ್ಟೇಟ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ, ನಿಶಾದ್ ಪಾರ್ಟಿ, ಹರಿಯಾಣ ಲೋಕಿತ್ ಪಾರ್ಟಿ, ಕೇರಳ ಕಾಮರಾಜ್ ಕಾಂಗ್ರೆಸ್, ಪುತಿಯಾ ತಮಿಳಗಂ, ಮತ್ತು ಗೂರ್ಖಾ ನ್ಯಾಷನಲ್ ಲಿಬರೇಶನ್ ಫ್ರಂಟ್ ಪಕ್ಷಗಳು ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ.

8 ಪಕ್ಷಗಳಿಗೆ 9 ಸೀಟು

ಅಪ್ನಾ ದಳ (ಸೋನಿಲಾಲ್), ಎಜೆಎಸ್‌ಯು, ಎಐಎಡಿಎಂಕೆ, ಮಿಜೋ ನ್ಯಾಷನಲ್ ಫ್ರಂಟ್, ನಾಗಾ ಪೀಪಲ್ಸ್ ಫ್ರಂಟ್, ನ್ಯಾಷನಲ್ ಪೀಪಲ್ಸ್ ಪಾರ್ಟಿ, ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ, ಮತ್ತು ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಪಕ್ಷಗಳು ಸೇರಿ 9 ಸ್ಥಾನಗಳನ್ನು ಗೆದ್ದಿದ್ದವು. ಅಪ್ನಾ ದಳ ಎರಡು ಸ್ಥಾನಗಳಲ್ಲಿ ಗೆಲುವು ಕಂಡಿದ್ದಿ ಬಿಟ್ಟರೆ ಉಳಿದ ಪಕ್ಷಗಳು ತಲಾ ಒಂದೊಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದವು.

Photo Courtesy: Indian express

ಒಂದೂ ಸ್ಥಾನ ಗೆಲ್ಲಲಾದ 15 ಪಕ್ಷಗಳು!

ಸದ್ಯ ಎನ್‌ಡಿಎ ಜೊತೆ ಗುರುತಿಸಿಕೊಂಡಿರುವ 15 ಪಕ್ಷಗಳು ಒಂದೂ ಸ್ಥಾನ ಗೆಲ್ಲಲು ಸಾಧ್ಯವಾಗಿರಲಿಲ್ಲ. ಅವುಗಳೆಂದರೆ ಆಲ್ ಇಂಡಿಯಾ ಎನ್.ಆರ್. ಕಾಂಗ್ರೆಸ್, ಅಸೋಮ್ ಗಣ ಪರಿಷತ್, ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ, ಪಟ್ಟಾಲಿ ಮಕ್ಕಳ್ ಕಚ್ಚಿ, ಯುನೈಟೆಡ್ ಡೆಮಾಕ್ರಟಿಕ್ ಪಾರ್ಟಿ, ಭಾರತ್ ಧರ್ಮ ಜನಸೇನಾ, ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ), ಜನಸೇನಾ ಪಾರ್ಟಿ, ಜನನಾಯಕ್ ಜನತಾ ಪಾರ್ಟಿ, ಪ್ರಹಾರ್ ಜನಶಕ್ತಿ ಪಕ್ಷ, ರಾಷ್ಟ್ರೀಯ ಸಮಾಜ ಪಕ್ಷ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ, ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷ, ತಮಿಳ್ ಮಾನಿಲಾ ಕಾಂಗ್ರೆಸ್ (ಮೂಪನಾರ್), ಮತ್ತು ಯುನೈಟೆಡ್ ಪೀಪಲ್ಸ್ ಪಾರ್ಟಿ, (ಲಿಬರಲ್) ಗಳಾಗಿವೆ.

ಇದನ್ನೂ ಓದಿ: ಮಣಿಪುರದಲ್ಲಿ ಯಾರ ಸರ್ಕಾರವಿದೆ? ಮೋದಿ 36 ಸೆಕೆಂಡ್ ಮಾತನಾಡಿದರೆ ಸಾಕೆ? – ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...