HomeಮುಖಪುಟNDA ಜೊತೆಗಿರುವ 38 ಪಕ್ಷಗಳಲ್ಲಿ 15 ಪಕ್ಷಗಳು ಕಳೆದ ಬಾರಿ ಒಂದೂ ಲೋಕಸಭಾ ಸ್ಥಾನ ಗೆದ್ದಿಲ್ಲ,...

NDA ಜೊತೆಗಿರುವ 38 ಪಕ್ಷಗಳಲ್ಲಿ 15 ಪಕ್ಷಗಳು ಕಳೆದ ಬಾರಿ ಒಂದೂ ಲೋಕಸಭಾ ಸ್ಥಾನ ಗೆದ್ದಿಲ್ಲ, 10 ಪಕ್ಷಗಳು ಸ್ಪರ್ಧಿಸಿಯೇ ಇಲ್ಲ!

ಬಿಜೆಪಿ, ಶಿವಸೇನೆ, ಎನ್‌ಸಿಪಿ ಮತ್ತು ಎಲ್‌ಜೆಪಿ ಹೊರತುಪಡಿಸಿ ಉಳಿದ 8 ಪಕ್ಷಗಳು ಕೇವಲ 9 ಲೋಕಸಭಾ ಸ್ಥಾನಗಳನ್ನು ಗೆದ್ದಿವೆ...

- Advertisement -
- Advertisement -

2024ರ ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ NDA ಸರ್ಕಾರ ಸೋಲಿಸಲು 26 ವಿರೋಧ ಪಕ್ಷಗಳು ಒಟ್ಟಾಗಿ INDIA ಎಂಬ ನೂತನ ಮೈತ್ರಿಕೂಟ ರಚಿಸಿಕೊಂಡಿವೆ. ಇದರಿಂದ ಎಚ್ಚೆತ್ತುಕೊಂಡಿರುವ ನರೇಂದ್ರ ಮೋದಿಯವರು ತಮ್ಮ NDA ಮೈತ್ರಿಕೂಟಕ್ಕೆ ಹಲವು ಸಣ್ಣ ಪುಟ್ಟ ಪಕ್ಷಗಳನ್ನು ಸೇರಿಸಿಕೊಂಡು ಸಭೆ ನಡೆಸಿದ್ದಾರೆ. ಅಲ್ಲದೇ ತಮ್ಮೊಡನೆ ಒಟ್ಟು 38 ಪಕ್ಷಗಳಿವೆ ಎಂದಿದ್ದಾರೆ. ಆದರೆ NDA ಜೊತೆಗಿರುವ 38 ಪಕ್ಷಗಳಲ್ಲಿ 15 ಪಕ್ಷಗಳು ಕಳೆದ ಬಾರಿ ಒಂದೂ ಲೋಕಸಭಾ ಸ್ಥಾನ ಗೆದ್ದಿಲ್ಲ, 10 ಪಕ್ಷಗಳು ಸ್ಪರ್ಧಿಸಿಯೇ ಇಲ್ಲ! 8 ಪಕ್ಷಗಳು ಮಾತ್ರ ತಲಾ ಒಂದೊಂದು ಲೋಕಸಭಾ ಸ್ಥಾನ ಗೆದ್ದಿವೆ ಅಷ್ಟೇ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವಿಶೇ‍ಷ ವರದಿ ಪ್ರಕಟಿಸಿದೆ.

ಬಿಜೆಪಿ ಹೊರತುಪಡಿಸಿ NDA ಮೈತ್ರಿಕೂಟದಲ್ಲಿ 37 ಪಕ್ಷಗಳಿವೆ. ಅದರಲ್ಲಿ ಹೊಸದಾಗಿ ಸೇರ್ಪಡೆಗೊಂಡ ಎನ್‌ಸಿಪಿ ಅಜಿತ್ ಪವಾರ್ ಬಣ, ಏಕನಾಥ್ ಶಿಂಧೆ ಶಿವಸೇನೆ ಬಣ ಮತ್ತು ಎಲ್‌ಜೆಪಿ ಪಕ್ಷಗಳು ಸಭೆಯಲ್ಲಿ ಭಾಗವಹಿಸಿವೆ. ಈ ಪಕ್ಷಗಳು ಮಾತ್ರವೇ ಕಳೆದ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಿವೆ ಬಿಟ್ಟರೆ ಸಭೆಯಲ್ಲಿ ಭಾಗವಹಿಸಿದ್ದ 10 ಪಕ್ಷಗಳು 2019ರ ಲೋಕಸಭಾ ಚುನಾವಣೆಯನ್ನು ಎದುರಿಸಿರಲಿಲ್ಲ. ಉಳಿದ 23 ಪಕ್ಷಗಳು ಸ್ಪರ್ಧಿಸಿದ್ದರೂ ಅವುಗಳಲ್ಲಿ 8 ಪಕ್ಷಗಳು 9 ಸ್ಥಾನಗಳನ್ನಷ್ಟೇ ಗೆದ್ದಿದ್ದವು. 15 ಪಕ್ಷಗಳು ಒಂದೂ ಸ್ಥಾನ ಗೆಲ್ಲಲಾಗಿರಲಿಲ್ಲ.

ಕಳೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷವೊಂದೇ 37.69 ಮತ ಪ್ರಮಾಣದೊಂದಿಗೆ 303 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಆಗ ಬಿಜೆಪಿ ಮೈತ್ರಿ ಪಕ್ಷವಾಗಿದ್ದ ಶಿವಸೇನೆ ಮಹಾರಾಷ್ಟ್ರದಲ್ಲಿ 18 ಸ್ಥಾನಗಳನ್ನು ಗೆದ್ದಿತ್ತು. ಈಗ ಅದು ಉದ್ಧವ್ ಬಣ ಮತ್ತು ಶಿಂಧೆ ಬಣವಾಗಿ ಎರಡು ಹೋಳಾಗಿದ್ದು ಶಿಂಧೆ ಬಣ ಎನ್‌ಡಿಎ ಜೊತೆಗಿದೆ. ಎಲ್‌ಜೆಪಿ ಪಕ್ಷವು ಎನ್‌ಡಿಎ ಜೊತೆ ಮೈತ್ರಿಯೊಂದಿಗೆ ಸ್ಪರ್ಧಿಸಿ ಬಿಹಾರದಲ್ಲಿ 6 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಆನಂತರ ಅದು ಸಹ ಎರಡು ಹೋಳಾಗಿದೆ. ಎನ್‌ಸಿಪಿ ಪಕ್ಷ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿಯೊಂದಿಗೆ ಸ್ಪರ್ಧಿಸಿ 5 ಸ್ಥಾನಗಳನ್ನು ಗೆದ್ದಿತ್ತು. ಅದು ಅದು ಎರಡು ಹೋಳಾಗಿದ್ದು ಅಜಿತ್ ಪವಾರ್ ಬಣ ಎನ್‌ಡಿಎ ಜೊತೆಗೆ ಗುರುತಿಸಿಕೊಂಡಿದೆ. ಈ ಪಕ್ಷಗಳನ್ನು ಬಿಟ್ಟರೆ ಉಳಿದ ಎನ್‌ಡಿಎ ಜೊತೆಗಿರುವ ಪಕ್ಷಗಳ ಸಾಧನೆ ಅಷ್ಟಕಷ್ಟೆ ಎನ್ನುವಂತಿದೆ.

10 ಪಕ್ಷಗಳು ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ

ಶಿರೋಮಣಿ ಅಕಾಲಿದಳ (ಸಂಯುಕ್ತ), ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ (ಎಂಜಿಪಿ), ಜನ ಸುರಾಜ್ಯ ಶಕ್ತಿ ಪಕ್ಷ, ಕುಕಿ ಪೀಪಲ್ಸ್ ಅಲೈಯನ್ಸ್, ಹಿಲ್ ಸ್ಟೇಟ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ, ನಿಶಾದ್ ಪಾರ್ಟಿ, ಹರಿಯಾಣ ಲೋಕಿತ್ ಪಾರ್ಟಿ, ಕೇರಳ ಕಾಮರಾಜ್ ಕಾಂಗ್ರೆಸ್, ಪುತಿಯಾ ತಮಿಳಗಂ, ಮತ್ತು ಗೂರ್ಖಾ ನ್ಯಾಷನಲ್ ಲಿಬರೇಶನ್ ಫ್ರಂಟ್ ಪಕ್ಷಗಳು ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ.

8 ಪಕ್ಷಗಳಿಗೆ 9 ಸೀಟು

ಅಪ್ನಾ ದಳ (ಸೋನಿಲಾಲ್), ಎಜೆಎಸ್‌ಯು, ಎಐಎಡಿಎಂಕೆ, ಮಿಜೋ ನ್ಯಾಷನಲ್ ಫ್ರಂಟ್, ನಾಗಾ ಪೀಪಲ್ಸ್ ಫ್ರಂಟ್, ನ್ಯಾಷನಲ್ ಪೀಪಲ್ಸ್ ಪಾರ್ಟಿ, ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ, ಮತ್ತು ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಪಕ್ಷಗಳು ಸೇರಿ 9 ಸ್ಥಾನಗಳನ್ನು ಗೆದ್ದಿದ್ದವು. ಅಪ್ನಾ ದಳ ಎರಡು ಸ್ಥಾನಗಳಲ್ಲಿ ಗೆಲುವು ಕಂಡಿದ್ದಿ ಬಿಟ್ಟರೆ ಉಳಿದ ಪಕ್ಷಗಳು ತಲಾ ಒಂದೊಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದವು.

Photo Courtesy: Indian express

ಒಂದೂ ಸ್ಥಾನ ಗೆಲ್ಲಲಾದ 15 ಪಕ್ಷಗಳು!

ಸದ್ಯ ಎನ್‌ಡಿಎ ಜೊತೆ ಗುರುತಿಸಿಕೊಂಡಿರುವ 15 ಪಕ್ಷಗಳು ಒಂದೂ ಸ್ಥಾನ ಗೆಲ್ಲಲು ಸಾಧ್ಯವಾಗಿರಲಿಲ್ಲ. ಅವುಗಳೆಂದರೆ ಆಲ್ ಇಂಡಿಯಾ ಎನ್.ಆರ್. ಕಾಂಗ್ರೆಸ್, ಅಸೋಮ್ ಗಣ ಪರಿಷತ್, ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ, ಪಟ್ಟಾಲಿ ಮಕ್ಕಳ್ ಕಚ್ಚಿ, ಯುನೈಟೆಡ್ ಡೆಮಾಕ್ರಟಿಕ್ ಪಾರ್ಟಿ, ಭಾರತ್ ಧರ್ಮ ಜನಸೇನಾ, ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ), ಜನಸೇನಾ ಪಾರ್ಟಿ, ಜನನಾಯಕ್ ಜನತಾ ಪಾರ್ಟಿ, ಪ್ರಹಾರ್ ಜನಶಕ್ತಿ ಪಕ್ಷ, ರಾಷ್ಟ್ರೀಯ ಸಮಾಜ ಪಕ್ಷ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ, ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷ, ತಮಿಳ್ ಮಾನಿಲಾ ಕಾಂಗ್ರೆಸ್ (ಮೂಪನಾರ್), ಮತ್ತು ಯುನೈಟೆಡ್ ಪೀಪಲ್ಸ್ ಪಾರ್ಟಿ, (ಲಿಬರಲ್) ಗಳಾಗಿವೆ.

ಇದನ್ನೂ ಓದಿ: ಮಣಿಪುರದಲ್ಲಿ ಯಾರ ಸರ್ಕಾರವಿದೆ? ಮೋದಿ 36 ಸೆಕೆಂಡ್ ಮಾತನಾಡಿದರೆ ಸಾಕೆ? – ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...