HomeಮುಖಪುಟNDA ಜೊತೆಗಿರುವ 38 ಪಕ್ಷಗಳಲ್ಲಿ 15 ಪಕ್ಷಗಳು ಕಳೆದ ಬಾರಿ ಒಂದೂ ಲೋಕಸಭಾ ಸ್ಥಾನ ಗೆದ್ದಿಲ್ಲ,...

NDA ಜೊತೆಗಿರುವ 38 ಪಕ್ಷಗಳಲ್ಲಿ 15 ಪಕ್ಷಗಳು ಕಳೆದ ಬಾರಿ ಒಂದೂ ಲೋಕಸಭಾ ಸ್ಥಾನ ಗೆದ್ದಿಲ್ಲ, 10 ಪಕ್ಷಗಳು ಸ್ಪರ್ಧಿಸಿಯೇ ಇಲ್ಲ!

ಬಿಜೆಪಿ, ಶಿವಸೇನೆ, ಎನ್‌ಸಿಪಿ ಮತ್ತು ಎಲ್‌ಜೆಪಿ ಹೊರತುಪಡಿಸಿ ಉಳಿದ 8 ಪಕ್ಷಗಳು ಕೇವಲ 9 ಲೋಕಸಭಾ ಸ್ಥಾನಗಳನ್ನು ಗೆದ್ದಿವೆ...

- Advertisement -
- Advertisement -

2024ರ ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ NDA ಸರ್ಕಾರ ಸೋಲಿಸಲು 26 ವಿರೋಧ ಪಕ್ಷಗಳು ಒಟ್ಟಾಗಿ INDIA ಎಂಬ ನೂತನ ಮೈತ್ರಿಕೂಟ ರಚಿಸಿಕೊಂಡಿವೆ. ಇದರಿಂದ ಎಚ್ಚೆತ್ತುಕೊಂಡಿರುವ ನರೇಂದ್ರ ಮೋದಿಯವರು ತಮ್ಮ NDA ಮೈತ್ರಿಕೂಟಕ್ಕೆ ಹಲವು ಸಣ್ಣ ಪುಟ್ಟ ಪಕ್ಷಗಳನ್ನು ಸೇರಿಸಿಕೊಂಡು ಸಭೆ ನಡೆಸಿದ್ದಾರೆ. ಅಲ್ಲದೇ ತಮ್ಮೊಡನೆ ಒಟ್ಟು 38 ಪಕ್ಷಗಳಿವೆ ಎಂದಿದ್ದಾರೆ. ಆದರೆ NDA ಜೊತೆಗಿರುವ 38 ಪಕ್ಷಗಳಲ್ಲಿ 15 ಪಕ್ಷಗಳು ಕಳೆದ ಬಾರಿ ಒಂದೂ ಲೋಕಸಭಾ ಸ್ಥಾನ ಗೆದ್ದಿಲ್ಲ, 10 ಪಕ್ಷಗಳು ಸ್ಪರ್ಧಿಸಿಯೇ ಇಲ್ಲ! 8 ಪಕ್ಷಗಳು ಮಾತ್ರ ತಲಾ ಒಂದೊಂದು ಲೋಕಸಭಾ ಸ್ಥಾನ ಗೆದ್ದಿವೆ ಅಷ್ಟೇ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವಿಶೇ‍ಷ ವರದಿ ಪ್ರಕಟಿಸಿದೆ.

ಬಿಜೆಪಿ ಹೊರತುಪಡಿಸಿ NDA ಮೈತ್ರಿಕೂಟದಲ್ಲಿ 37 ಪಕ್ಷಗಳಿವೆ. ಅದರಲ್ಲಿ ಹೊಸದಾಗಿ ಸೇರ್ಪಡೆಗೊಂಡ ಎನ್‌ಸಿಪಿ ಅಜಿತ್ ಪವಾರ್ ಬಣ, ಏಕನಾಥ್ ಶಿಂಧೆ ಶಿವಸೇನೆ ಬಣ ಮತ್ತು ಎಲ್‌ಜೆಪಿ ಪಕ್ಷಗಳು ಸಭೆಯಲ್ಲಿ ಭಾಗವಹಿಸಿವೆ. ಈ ಪಕ್ಷಗಳು ಮಾತ್ರವೇ ಕಳೆದ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಿವೆ ಬಿಟ್ಟರೆ ಸಭೆಯಲ್ಲಿ ಭಾಗವಹಿಸಿದ್ದ 10 ಪಕ್ಷಗಳು 2019ರ ಲೋಕಸಭಾ ಚುನಾವಣೆಯನ್ನು ಎದುರಿಸಿರಲಿಲ್ಲ. ಉಳಿದ 23 ಪಕ್ಷಗಳು ಸ್ಪರ್ಧಿಸಿದ್ದರೂ ಅವುಗಳಲ್ಲಿ 8 ಪಕ್ಷಗಳು 9 ಸ್ಥಾನಗಳನ್ನಷ್ಟೇ ಗೆದ್ದಿದ್ದವು. 15 ಪಕ್ಷಗಳು ಒಂದೂ ಸ್ಥಾನ ಗೆಲ್ಲಲಾಗಿರಲಿಲ್ಲ.

ಕಳೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷವೊಂದೇ 37.69 ಮತ ಪ್ರಮಾಣದೊಂದಿಗೆ 303 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಆಗ ಬಿಜೆಪಿ ಮೈತ್ರಿ ಪಕ್ಷವಾಗಿದ್ದ ಶಿವಸೇನೆ ಮಹಾರಾಷ್ಟ್ರದಲ್ಲಿ 18 ಸ್ಥಾನಗಳನ್ನು ಗೆದ್ದಿತ್ತು. ಈಗ ಅದು ಉದ್ಧವ್ ಬಣ ಮತ್ತು ಶಿಂಧೆ ಬಣವಾಗಿ ಎರಡು ಹೋಳಾಗಿದ್ದು ಶಿಂಧೆ ಬಣ ಎನ್‌ಡಿಎ ಜೊತೆಗಿದೆ. ಎಲ್‌ಜೆಪಿ ಪಕ್ಷವು ಎನ್‌ಡಿಎ ಜೊತೆ ಮೈತ್ರಿಯೊಂದಿಗೆ ಸ್ಪರ್ಧಿಸಿ ಬಿಹಾರದಲ್ಲಿ 6 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಆನಂತರ ಅದು ಸಹ ಎರಡು ಹೋಳಾಗಿದೆ. ಎನ್‌ಸಿಪಿ ಪಕ್ಷ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿಯೊಂದಿಗೆ ಸ್ಪರ್ಧಿಸಿ 5 ಸ್ಥಾನಗಳನ್ನು ಗೆದ್ದಿತ್ತು. ಅದು ಅದು ಎರಡು ಹೋಳಾಗಿದ್ದು ಅಜಿತ್ ಪವಾರ್ ಬಣ ಎನ್‌ಡಿಎ ಜೊತೆಗೆ ಗುರುತಿಸಿಕೊಂಡಿದೆ. ಈ ಪಕ್ಷಗಳನ್ನು ಬಿಟ್ಟರೆ ಉಳಿದ ಎನ್‌ಡಿಎ ಜೊತೆಗಿರುವ ಪಕ್ಷಗಳ ಸಾಧನೆ ಅಷ್ಟಕಷ್ಟೆ ಎನ್ನುವಂತಿದೆ.

10 ಪಕ್ಷಗಳು ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ

ಶಿರೋಮಣಿ ಅಕಾಲಿದಳ (ಸಂಯುಕ್ತ), ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ (ಎಂಜಿಪಿ), ಜನ ಸುರಾಜ್ಯ ಶಕ್ತಿ ಪಕ್ಷ, ಕುಕಿ ಪೀಪಲ್ಸ್ ಅಲೈಯನ್ಸ್, ಹಿಲ್ ಸ್ಟೇಟ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ, ನಿಶಾದ್ ಪಾರ್ಟಿ, ಹರಿಯಾಣ ಲೋಕಿತ್ ಪಾರ್ಟಿ, ಕೇರಳ ಕಾಮರಾಜ್ ಕಾಂಗ್ರೆಸ್, ಪುತಿಯಾ ತಮಿಳಗಂ, ಮತ್ತು ಗೂರ್ಖಾ ನ್ಯಾಷನಲ್ ಲಿಬರೇಶನ್ ಫ್ರಂಟ್ ಪಕ್ಷಗಳು ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ.

8 ಪಕ್ಷಗಳಿಗೆ 9 ಸೀಟು

ಅಪ್ನಾ ದಳ (ಸೋನಿಲಾಲ್), ಎಜೆಎಸ್‌ಯು, ಎಐಎಡಿಎಂಕೆ, ಮಿಜೋ ನ್ಯಾಷನಲ್ ಫ್ರಂಟ್, ನಾಗಾ ಪೀಪಲ್ಸ್ ಫ್ರಂಟ್, ನ್ಯಾಷನಲ್ ಪೀಪಲ್ಸ್ ಪಾರ್ಟಿ, ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ, ಮತ್ತು ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಪಕ್ಷಗಳು ಸೇರಿ 9 ಸ್ಥಾನಗಳನ್ನು ಗೆದ್ದಿದ್ದವು. ಅಪ್ನಾ ದಳ ಎರಡು ಸ್ಥಾನಗಳಲ್ಲಿ ಗೆಲುವು ಕಂಡಿದ್ದಿ ಬಿಟ್ಟರೆ ಉಳಿದ ಪಕ್ಷಗಳು ತಲಾ ಒಂದೊಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದವು.

Photo Courtesy: Indian express

ಒಂದೂ ಸ್ಥಾನ ಗೆಲ್ಲಲಾದ 15 ಪಕ್ಷಗಳು!

ಸದ್ಯ ಎನ್‌ಡಿಎ ಜೊತೆ ಗುರುತಿಸಿಕೊಂಡಿರುವ 15 ಪಕ್ಷಗಳು ಒಂದೂ ಸ್ಥಾನ ಗೆಲ್ಲಲು ಸಾಧ್ಯವಾಗಿರಲಿಲ್ಲ. ಅವುಗಳೆಂದರೆ ಆಲ್ ಇಂಡಿಯಾ ಎನ್.ಆರ್. ಕಾಂಗ್ರೆಸ್, ಅಸೋಮ್ ಗಣ ಪರಿಷತ್, ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ, ಪಟ್ಟಾಲಿ ಮಕ್ಕಳ್ ಕಚ್ಚಿ, ಯುನೈಟೆಡ್ ಡೆಮಾಕ್ರಟಿಕ್ ಪಾರ್ಟಿ, ಭಾರತ್ ಧರ್ಮ ಜನಸೇನಾ, ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ), ಜನಸೇನಾ ಪಾರ್ಟಿ, ಜನನಾಯಕ್ ಜನತಾ ಪಾರ್ಟಿ, ಪ್ರಹಾರ್ ಜನಶಕ್ತಿ ಪಕ್ಷ, ರಾಷ್ಟ್ರೀಯ ಸಮಾಜ ಪಕ್ಷ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ, ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷ, ತಮಿಳ್ ಮಾನಿಲಾ ಕಾಂಗ್ರೆಸ್ (ಮೂಪನಾರ್), ಮತ್ತು ಯುನೈಟೆಡ್ ಪೀಪಲ್ಸ್ ಪಾರ್ಟಿ, (ಲಿಬರಲ್) ಗಳಾಗಿವೆ.

ಇದನ್ನೂ ಓದಿ: ಮಣಿಪುರದಲ್ಲಿ ಯಾರ ಸರ್ಕಾರವಿದೆ? ಮೋದಿ 36 ಸೆಕೆಂಡ್ ಮಾತನಾಡಿದರೆ ಸಾಕೆ? – ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...