HomeಮುಖಪುಟNDA ಜೊತೆಗಿರುವ 38 ಪಕ್ಷಗಳಲ್ಲಿ 15 ಪಕ್ಷಗಳು ಕಳೆದ ಬಾರಿ ಒಂದೂ ಲೋಕಸಭಾ ಸ್ಥಾನ ಗೆದ್ದಿಲ್ಲ,...

NDA ಜೊತೆಗಿರುವ 38 ಪಕ್ಷಗಳಲ್ಲಿ 15 ಪಕ್ಷಗಳು ಕಳೆದ ಬಾರಿ ಒಂದೂ ಲೋಕಸಭಾ ಸ್ಥಾನ ಗೆದ್ದಿಲ್ಲ, 10 ಪಕ್ಷಗಳು ಸ್ಪರ್ಧಿಸಿಯೇ ಇಲ್ಲ!

ಬಿಜೆಪಿ, ಶಿವಸೇನೆ, ಎನ್‌ಸಿಪಿ ಮತ್ತು ಎಲ್‌ಜೆಪಿ ಹೊರತುಪಡಿಸಿ ಉಳಿದ 8 ಪಕ್ಷಗಳು ಕೇವಲ 9 ಲೋಕಸಭಾ ಸ್ಥಾನಗಳನ್ನು ಗೆದ್ದಿವೆ...

- Advertisement -
- Advertisement -

2024ರ ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ NDA ಸರ್ಕಾರ ಸೋಲಿಸಲು 26 ವಿರೋಧ ಪಕ್ಷಗಳು ಒಟ್ಟಾಗಿ INDIA ಎಂಬ ನೂತನ ಮೈತ್ರಿಕೂಟ ರಚಿಸಿಕೊಂಡಿವೆ. ಇದರಿಂದ ಎಚ್ಚೆತ್ತುಕೊಂಡಿರುವ ನರೇಂದ್ರ ಮೋದಿಯವರು ತಮ್ಮ NDA ಮೈತ್ರಿಕೂಟಕ್ಕೆ ಹಲವು ಸಣ್ಣ ಪುಟ್ಟ ಪಕ್ಷಗಳನ್ನು ಸೇರಿಸಿಕೊಂಡು ಸಭೆ ನಡೆಸಿದ್ದಾರೆ. ಅಲ್ಲದೇ ತಮ್ಮೊಡನೆ ಒಟ್ಟು 38 ಪಕ್ಷಗಳಿವೆ ಎಂದಿದ್ದಾರೆ. ಆದರೆ NDA ಜೊತೆಗಿರುವ 38 ಪಕ್ಷಗಳಲ್ಲಿ 15 ಪಕ್ಷಗಳು ಕಳೆದ ಬಾರಿ ಒಂದೂ ಲೋಕಸಭಾ ಸ್ಥಾನ ಗೆದ್ದಿಲ್ಲ, 10 ಪಕ್ಷಗಳು ಸ್ಪರ್ಧಿಸಿಯೇ ಇಲ್ಲ! 8 ಪಕ್ಷಗಳು ಮಾತ್ರ ತಲಾ ಒಂದೊಂದು ಲೋಕಸಭಾ ಸ್ಥಾನ ಗೆದ್ದಿವೆ ಅಷ್ಟೇ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವಿಶೇ‍ಷ ವರದಿ ಪ್ರಕಟಿಸಿದೆ.

ಬಿಜೆಪಿ ಹೊರತುಪಡಿಸಿ NDA ಮೈತ್ರಿಕೂಟದಲ್ಲಿ 37 ಪಕ್ಷಗಳಿವೆ. ಅದರಲ್ಲಿ ಹೊಸದಾಗಿ ಸೇರ್ಪಡೆಗೊಂಡ ಎನ್‌ಸಿಪಿ ಅಜಿತ್ ಪವಾರ್ ಬಣ, ಏಕನಾಥ್ ಶಿಂಧೆ ಶಿವಸೇನೆ ಬಣ ಮತ್ತು ಎಲ್‌ಜೆಪಿ ಪಕ್ಷಗಳು ಸಭೆಯಲ್ಲಿ ಭಾಗವಹಿಸಿವೆ. ಈ ಪಕ್ಷಗಳು ಮಾತ್ರವೇ ಕಳೆದ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಿವೆ ಬಿಟ್ಟರೆ ಸಭೆಯಲ್ಲಿ ಭಾಗವಹಿಸಿದ್ದ 10 ಪಕ್ಷಗಳು 2019ರ ಲೋಕಸಭಾ ಚುನಾವಣೆಯನ್ನು ಎದುರಿಸಿರಲಿಲ್ಲ. ಉಳಿದ 23 ಪಕ್ಷಗಳು ಸ್ಪರ್ಧಿಸಿದ್ದರೂ ಅವುಗಳಲ್ಲಿ 8 ಪಕ್ಷಗಳು 9 ಸ್ಥಾನಗಳನ್ನಷ್ಟೇ ಗೆದ್ದಿದ್ದವು. 15 ಪಕ್ಷಗಳು ಒಂದೂ ಸ್ಥಾನ ಗೆಲ್ಲಲಾಗಿರಲಿಲ್ಲ.

ಕಳೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷವೊಂದೇ 37.69 ಮತ ಪ್ರಮಾಣದೊಂದಿಗೆ 303 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಆಗ ಬಿಜೆಪಿ ಮೈತ್ರಿ ಪಕ್ಷವಾಗಿದ್ದ ಶಿವಸೇನೆ ಮಹಾರಾಷ್ಟ್ರದಲ್ಲಿ 18 ಸ್ಥಾನಗಳನ್ನು ಗೆದ್ದಿತ್ತು. ಈಗ ಅದು ಉದ್ಧವ್ ಬಣ ಮತ್ತು ಶಿಂಧೆ ಬಣವಾಗಿ ಎರಡು ಹೋಳಾಗಿದ್ದು ಶಿಂಧೆ ಬಣ ಎನ್‌ಡಿಎ ಜೊತೆಗಿದೆ. ಎಲ್‌ಜೆಪಿ ಪಕ್ಷವು ಎನ್‌ಡಿಎ ಜೊತೆ ಮೈತ್ರಿಯೊಂದಿಗೆ ಸ್ಪರ್ಧಿಸಿ ಬಿಹಾರದಲ್ಲಿ 6 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಆನಂತರ ಅದು ಸಹ ಎರಡು ಹೋಳಾಗಿದೆ. ಎನ್‌ಸಿಪಿ ಪಕ್ಷ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿಯೊಂದಿಗೆ ಸ್ಪರ್ಧಿಸಿ 5 ಸ್ಥಾನಗಳನ್ನು ಗೆದ್ದಿತ್ತು. ಅದು ಅದು ಎರಡು ಹೋಳಾಗಿದ್ದು ಅಜಿತ್ ಪವಾರ್ ಬಣ ಎನ್‌ಡಿಎ ಜೊತೆಗೆ ಗುರುತಿಸಿಕೊಂಡಿದೆ. ಈ ಪಕ್ಷಗಳನ್ನು ಬಿಟ್ಟರೆ ಉಳಿದ ಎನ್‌ಡಿಎ ಜೊತೆಗಿರುವ ಪಕ್ಷಗಳ ಸಾಧನೆ ಅಷ್ಟಕಷ್ಟೆ ಎನ್ನುವಂತಿದೆ.

10 ಪಕ್ಷಗಳು ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ

ಶಿರೋಮಣಿ ಅಕಾಲಿದಳ (ಸಂಯುಕ್ತ), ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ (ಎಂಜಿಪಿ), ಜನ ಸುರಾಜ್ಯ ಶಕ್ತಿ ಪಕ್ಷ, ಕುಕಿ ಪೀಪಲ್ಸ್ ಅಲೈಯನ್ಸ್, ಹಿಲ್ ಸ್ಟೇಟ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ, ನಿಶಾದ್ ಪಾರ್ಟಿ, ಹರಿಯಾಣ ಲೋಕಿತ್ ಪಾರ್ಟಿ, ಕೇರಳ ಕಾಮರಾಜ್ ಕಾಂಗ್ರೆಸ್, ಪುತಿಯಾ ತಮಿಳಗಂ, ಮತ್ತು ಗೂರ್ಖಾ ನ್ಯಾಷನಲ್ ಲಿಬರೇಶನ್ ಫ್ರಂಟ್ ಪಕ್ಷಗಳು ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ.

8 ಪಕ್ಷಗಳಿಗೆ 9 ಸೀಟು

ಅಪ್ನಾ ದಳ (ಸೋನಿಲಾಲ್), ಎಜೆಎಸ್‌ಯು, ಎಐಎಡಿಎಂಕೆ, ಮಿಜೋ ನ್ಯಾಷನಲ್ ಫ್ರಂಟ್, ನಾಗಾ ಪೀಪಲ್ಸ್ ಫ್ರಂಟ್, ನ್ಯಾಷನಲ್ ಪೀಪಲ್ಸ್ ಪಾರ್ಟಿ, ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ, ಮತ್ತು ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಪಕ್ಷಗಳು ಸೇರಿ 9 ಸ್ಥಾನಗಳನ್ನು ಗೆದ್ದಿದ್ದವು. ಅಪ್ನಾ ದಳ ಎರಡು ಸ್ಥಾನಗಳಲ್ಲಿ ಗೆಲುವು ಕಂಡಿದ್ದಿ ಬಿಟ್ಟರೆ ಉಳಿದ ಪಕ್ಷಗಳು ತಲಾ ಒಂದೊಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದವು.

Photo Courtesy: Indian express

ಒಂದೂ ಸ್ಥಾನ ಗೆಲ್ಲಲಾದ 15 ಪಕ್ಷಗಳು!

ಸದ್ಯ ಎನ್‌ಡಿಎ ಜೊತೆ ಗುರುತಿಸಿಕೊಂಡಿರುವ 15 ಪಕ್ಷಗಳು ಒಂದೂ ಸ್ಥಾನ ಗೆಲ್ಲಲು ಸಾಧ್ಯವಾಗಿರಲಿಲ್ಲ. ಅವುಗಳೆಂದರೆ ಆಲ್ ಇಂಡಿಯಾ ಎನ್.ಆರ್. ಕಾಂಗ್ರೆಸ್, ಅಸೋಮ್ ಗಣ ಪರಿಷತ್, ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ, ಪಟ್ಟಾಲಿ ಮಕ್ಕಳ್ ಕಚ್ಚಿ, ಯುನೈಟೆಡ್ ಡೆಮಾಕ್ರಟಿಕ್ ಪಾರ್ಟಿ, ಭಾರತ್ ಧರ್ಮ ಜನಸೇನಾ, ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ), ಜನಸೇನಾ ಪಾರ್ಟಿ, ಜನನಾಯಕ್ ಜನತಾ ಪಾರ್ಟಿ, ಪ್ರಹಾರ್ ಜನಶಕ್ತಿ ಪಕ್ಷ, ರಾಷ್ಟ್ರೀಯ ಸಮಾಜ ಪಕ್ಷ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ, ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷ, ತಮಿಳ್ ಮಾನಿಲಾ ಕಾಂಗ್ರೆಸ್ (ಮೂಪನಾರ್), ಮತ್ತು ಯುನೈಟೆಡ್ ಪೀಪಲ್ಸ್ ಪಾರ್ಟಿ, (ಲಿಬರಲ್) ಗಳಾಗಿವೆ.

ಇದನ್ನೂ ಓದಿ: ಮಣಿಪುರದಲ್ಲಿ ಯಾರ ಸರ್ಕಾರವಿದೆ? ಮೋದಿ 36 ಸೆಕೆಂಡ್ ಮಾತನಾಡಿದರೆ ಸಾಕೆ? – ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...