HomeಮುಖಪುಟNDA ಜೊತೆಗಿರುವ 38 ಪಕ್ಷಗಳಲ್ಲಿ 15 ಪಕ್ಷಗಳು ಕಳೆದ ಬಾರಿ ಒಂದೂ ಲೋಕಸಭಾ ಸ್ಥಾನ ಗೆದ್ದಿಲ್ಲ,...

NDA ಜೊತೆಗಿರುವ 38 ಪಕ್ಷಗಳಲ್ಲಿ 15 ಪಕ್ಷಗಳು ಕಳೆದ ಬಾರಿ ಒಂದೂ ಲೋಕಸಭಾ ಸ್ಥಾನ ಗೆದ್ದಿಲ್ಲ, 10 ಪಕ್ಷಗಳು ಸ್ಪರ್ಧಿಸಿಯೇ ಇಲ್ಲ!

ಬಿಜೆಪಿ, ಶಿವಸೇನೆ, ಎನ್‌ಸಿಪಿ ಮತ್ತು ಎಲ್‌ಜೆಪಿ ಹೊರತುಪಡಿಸಿ ಉಳಿದ 8 ಪಕ್ಷಗಳು ಕೇವಲ 9 ಲೋಕಸಭಾ ಸ್ಥಾನಗಳನ್ನು ಗೆದ್ದಿವೆ...

- Advertisement -
- Advertisement -

2024ರ ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ NDA ಸರ್ಕಾರ ಸೋಲಿಸಲು 26 ವಿರೋಧ ಪಕ್ಷಗಳು ಒಟ್ಟಾಗಿ INDIA ಎಂಬ ನೂತನ ಮೈತ್ರಿಕೂಟ ರಚಿಸಿಕೊಂಡಿವೆ. ಇದರಿಂದ ಎಚ್ಚೆತ್ತುಕೊಂಡಿರುವ ನರೇಂದ್ರ ಮೋದಿಯವರು ತಮ್ಮ NDA ಮೈತ್ರಿಕೂಟಕ್ಕೆ ಹಲವು ಸಣ್ಣ ಪುಟ್ಟ ಪಕ್ಷಗಳನ್ನು ಸೇರಿಸಿಕೊಂಡು ಸಭೆ ನಡೆಸಿದ್ದಾರೆ. ಅಲ್ಲದೇ ತಮ್ಮೊಡನೆ ಒಟ್ಟು 38 ಪಕ್ಷಗಳಿವೆ ಎಂದಿದ್ದಾರೆ. ಆದರೆ NDA ಜೊತೆಗಿರುವ 38 ಪಕ್ಷಗಳಲ್ಲಿ 15 ಪಕ್ಷಗಳು ಕಳೆದ ಬಾರಿ ಒಂದೂ ಲೋಕಸಭಾ ಸ್ಥಾನ ಗೆದ್ದಿಲ್ಲ, 10 ಪಕ್ಷಗಳು ಸ್ಪರ್ಧಿಸಿಯೇ ಇಲ್ಲ! 8 ಪಕ್ಷಗಳು ಮಾತ್ರ ತಲಾ ಒಂದೊಂದು ಲೋಕಸಭಾ ಸ್ಥಾನ ಗೆದ್ದಿವೆ ಅಷ್ಟೇ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವಿಶೇ‍ಷ ವರದಿ ಪ್ರಕಟಿಸಿದೆ.

ಬಿಜೆಪಿ ಹೊರತುಪಡಿಸಿ NDA ಮೈತ್ರಿಕೂಟದಲ್ಲಿ 37 ಪಕ್ಷಗಳಿವೆ. ಅದರಲ್ಲಿ ಹೊಸದಾಗಿ ಸೇರ್ಪಡೆಗೊಂಡ ಎನ್‌ಸಿಪಿ ಅಜಿತ್ ಪವಾರ್ ಬಣ, ಏಕನಾಥ್ ಶಿಂಧೆ ಶಿವಸೇನೆ ಬಣ ಮತ್ತು ಎಲ್‌ಜೆಪಿ ಪಕ್ಷಗಳು ಸಭೆಯಲ್ಲಿ ಭಾಗವಹಿಸಿವೆ. ಈ ಪಕ್ಷಗಳು ಮಾತ್ರವೇ ಕಳೆದ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಿವೆ ಬಿಟ್ಟರೆ ಸಭೆಯಲ್ಲಿ ಭಾಗವಹಿಸಿದ್ದ 10 ಪಕ್ಷಗಳು 2019ರ ಲೋಕಸಭಾ ಚುನಾವಣೆಯನ್ನು ಎದುರಿಸಿರಲಿಲ್ಲ. ಉಳಿದ 23 ಪಕ್ಷಗಳು ಸ್ಪರ್ಧಿಸಿದ್ದರೂ ಅವುಗಳಲ್ಲಿ 8 ಪಕ್ಷಗಳು 9 ಸ್ಥಾನಗಳನ್ನಷ್ಟೇ ಗೆದ್ದಿದ್ದವು. 15 ಪಕ್ಷಗಳು ಒಂದೂ ಸ್ಥಾನ ಗೆಲ್ಲಲಾಗಿರಲಿಲ್ಲ.

ಕಳೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷವೊಂದೇ 37.69 ಮತ ಪ್ರಮಾಣದೊಂದಿಗೆ 303 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಆಗ ಬಿಜೆಪಿ ಮೈತ್ರಿ ಪಕ್ಷವಾಗಿದ್ದ ಶಿವಸೇನೆ ಮಹಾರಾಷ್ಟ್ರದಲ್ಲಿ 18 ಸ್ಥಾನಗಳನ್ನು ಗೆದ್ದಿತ್ತು. ಈಗ ಅದು ಉದ್ಧವ್ ಬಣ ಮತ್ತು ಶಿಂಧೆ ಬಣವಾಗಿ ಎರಡು ಹೋಳಾಗಿದ್ದು ಶಿಂಧೆ ಬಣ ಎನ್‌ಡಿಎ ಜೊತೆಗಿದೆ. ಎಲ್‌ಜೆಪಿ ಪಕ್ಷವು ಎನ್‌ಡಿಎ ಜೊತೆ ಮೈತ್ರಿಯೊಂದಿಗೆ ಸ್ಪರ್ಧಿಸಿ ಬಿಹಾರದಲ್ಲಿ 6 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಆನಂತರ ಅದು ಸಹ ಎರಡು ಹೋಳಾಗಿದೆ. ಎನ್‌ಸಿಪಿ ಪಕ್ಷ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿಯೊಂದಿಗೆ ಸ್ಪರ್ಧಿಸಿ 5 ಸ್ಥಾನಗಳನ್ನು ಗೆದ್ದಿತ್ತು. ಅದು ಅದು ಎರಡು ಹೋಳಾಗಿದ್ದು ಅಜಿತ್ ಪವಾರ್ ಬಣ ಎನ್‌ಡಿಎ ಜೊತೆಗೆ ಗುರುತಿಸಿಕೊಂಡಿದೆ. ಈ ಪಕ್ಷಗಳನ್ನು ಬಿಟ್ಟರೆ ಉಳಿದ ಎನ್‌ಡಿಎ ಜೊತೆಗಿರುವ ಪಕ್ಷಗಳ ಸಾಧನೆ ಅಷ್ಟಕಷ್ಟೆ ಎನ್ನುವಂತಿದೆ.

10 ಪಕ್ಷಗಳು ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ

ಶಿರೋಮಣಿ ಅಕಾಲಿದಳ (ಸಂಯುಕ್ತ), ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ (ಎಂಜಿಪಿ), ಜನ ಸುರಾಜ್ಯ ಶಕ್ತಿ ಪಕ್ಷ, ಕುಕಿ ಪೀಪಲ್ಸ್ ಅಲೈಯನ್ಸ್, ಹಿಲ್ ಸ್ಟೇಟ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ, ನಿಶಾದ್ ಪಾರ್ಟಿ, ಹರಿಯಾಣ ಲೋಕಿತ್ ಪಾರ್ಟಿ, ಕೇರಳ ಕಾಮರಾಜ್ ಕಾಂಗ್ರೆಸ್, ಪುತಿಯಾ ತಮಿಳಗಂ, ಮತ್ತು ಗೂರ್ಖಾ ನ್ಯಾಷನಲ್ ಲಿಬರೇಶನ್ ಫ್ರಂಟ್ ಪಕ್ಷಗಳು ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ.

8 ಪಕ್ಷಗಳಿಗೆ 9 ಸೀಟು

ಅಪ್ನಾ ದಳ (ಸೋನಿಲಾಲ್), ಎಜೆಎಸ್‌ಯು, ಎಐಎಡಿಎಂಕೆ, ಮಿಜೋ ನ್ಯಾಷನಲ್ ಫ್ರಂಟ್, ನಾಗಾ ಪೀಪಲ್ಸ್ ಫ್ರಂಟ್, ನ್ಯಾಷನಲ್ ಪೀಪಲ್ಸ್ ಪಾರ್ಟಿ, ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ, ಮತ್ತು ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಪಕ್ಷಗಳು ಸೇರಿ 9 ಸ್ಥಾನಗಳನ್ನು ಗೆದ್ದಿದ್ದವು. ಅಪ್ನಾ ದಳ ಎರಡು ಸ್ಥಾನಗಳಲ್ಲಿ ಗೆಲುವು ಕಂಡಿದ್ದಿ ಬಿಟ್ಟರೆ ಉಳಿದ ಪಕ್ಷಗಳು ತಲಾ ಒಂದೊಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದವು.

Photo Courtesy: Indian express

ಒಂದೂ ಸ್ಥಾನ ಗೆಲ್ಲಲಾದ 15 ಪಕ್ಷಗಳು!

ಸದ್ಯ ಎನ್‌ಡಿಎ ಜೊತೆ ಗುರುತಿಸಿಕೊಂಡಿರುವ 15 ಪಕ್ಷಗಳು ಒಂದೂ ಸ್ಥಾನ ಗೆಲ್ಲಲು ಸಾಧ್ಯವಾಗಿರಲಿಲ್ಲ. ಅವುಗಳೆಂದರೆ ಆಲ್ ಇಂಡಿಯಾ ಎನ್.ಆರ್. ಕಾಂಗ್ರೆಸ್, ಅಸೋಮ್ ಗಣ ಪರಿಷತ್, ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ, ಪಟ್ಟಾಲಿ ಮಕ್ಕಳ್ ಕಚ್ಚಿ, ಯುನೈಟೆಡ್ ಡೆಮಾಕ್ರಟಿಕ್ ಪಾರ್ಟಿ, ಭಾರತ್ ಧರ್ಮ ಜನಸೇನಾ, ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ), ಜನಸೇನಾ ಪಾರ್ಟಿ, ಜನನಾಯಕ್ ಜನತಾ ಪಾರ್ಟಿ, ಪ್ರಹಾರ್ ಜನಶಕ್ತಿ ಪಕ್ಷ, ರಾಷ್ಟ್ರೀಯ ಸಮಾಜ ಪಕ್ಷ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ, ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷ, ತಮಿಳ್ ಮಾನಿಲಾ ಕಾಂಗ್ರೆಸ್ (ಮೂಪನಾರ್), ಮತ್ತು ಯುನೈಟೆಡ್ ಪೀಪಲ್ಸ್ ಪಾರ್ಟಿ, (ಲಿಬರಲ್) ಗಳಾಗಿವೆ.

ಇದನ್ನೂ ಓದಿ: ಮಣಿಪುರದಲ್ಲಿ ಯಾರ ಸರ್ಕಾರವಿದೆ? ಮೋದಿ 36 ಸೆಕೆಂಡ್ ಮಾತನಾಡಿದರೆ ಸಾಕೆ? – ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...