Homeಮುಖಪುಟಹಿಂದೂ ರಾಷ್ಟ್ರಕ್ಕಾಗಿ ‘ಕೊಲೆ’ ಮಾಡುವಂತೆ ಅಪ್ರಾಪ್ತ ಮಕ್ಕಳಿಗೆ ಪ್ರತಿಜ್ಞೆ ಮಾಡಿಸಿದ ದುಷ್ಕರ್ಮಿಗಳು!

ಹಿಂದೂ ರಾಷ್ಟ್ರಕ್ಕಾಗಿ ‘ಕೊಲೆ’ ಮಾಡುವಂತೆ ಅಪ್ರಾಪ್ತ ಮಕ್ಕಳಿಗೆ ಪ್ರತಿಜ್ಞೆ ಮಾಡಿಸಿದ ದುಷ್ಕರ್ಮಿಗಳು!

- Advertisement -
- Advertisement -

ಹರಿದ್ವಾರ ಮತ್ತು ಛತ್ತೀಸ್‌ಗಢದ ಧರಮ್‌ ಸಂಸದ್‌ನಲ್ಲಿ ಮಾಡಿದ ದ್ವೇಷದ ಭಾಷಣಗಳ ವಿರುದ್ದ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವಾಗಲೇ, ಅಪ್ರಾಪ್ತ ಮಕ್ಕಳೊಂದಿಗೆ ಹಿಂದೂ ರಾಷ್ಟ್ರಕ್ಕಾಗಿ ಸಾಯುವ ಮತ್ತು ಕೊಲ್ಲುವ ಪ್ರತಿಜ್ಞೆ ಮಾಡಿಸುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಬಿಜೆಪಿ ಪರ ಪ್ರೊಪಗಾಂಡ ಸೃಷ್ಟಿಸುವ, ಕೋಮುವಾಗಿ ಟಿವಿ ಚಾನೆಲ್‌ ಸುದರ್ಶನ್‌ ಟಿವಿ ಇದನ್ನು ಪ್ರಸಾರ ಮಾಡಿದ್ದು, ಅದರ ಸಂಪಾದಕ ಸುರೇಶ್ ಚವ್ಹಾಂಕೆ ಇದನ್ನು ಹಂಚಿಕೊಂಡಿದ್ದಾರೆ.

ವಿಡಿಯೊದಲ್ಲಿ ಸಮವಸ್ತ್ರ ಧರಿಸಿರುವ ಅಪ್ರಾಪ್ತ ಮಕ್ಕಳಿಗೆ ಹಿಂದೂ ರಾಷ್ಟ್ರಕ್ಕಾಗಿ ಜನರನ್ನು ಕೊಲ್ಲುವಂತೆ ಪ್ರತಿಜ್ಞೆ ಮಾಡಿಸಲಾಗಿದೆ.

ಇದನ್ನೂ ಓದಿ:ಧರಮ್ ಸಂಸದ್‌ನಲ್ಲಿ ಗಾಂಧಿಜಿಗೆ ಅವಹೇಳನ; ಬಲಪಂಥೀಯ ಸ್ವಾಮಿ ವಿರುದ್ದ FIR

ಕೆಂಪು ಸಮವಸ್ತ್ರದಲ್ಲಿ, ಸಾಲಾಗಿ ನಿಂತಿರುವ ವಿದ್ಯಾರ್ಥಿಗಳಿಗೆ ವ್ಯಕ್ತಿಯೊಬ್ಬ ಹಿಂದೂ ರಾಷ್ಟ್ರಕ್ಕಾಗಿ ಹೋರಾಡುವಂತೆ, ಸಾಯುವಂತೆ ಹಾಗೂ ಅಗತ್ಯವಿದ್ದರೆ ಕೊಲ್ಲುವಂತೆ ಪ್ರತಿಜ್ಞೆ ಮಾಡಿಸುತ್ತಾನೆ. ಈ ವೇಳೆ ಅವನ ಮಾತನ್ನು ಪುನರಾವರ್ತಿಸುತ್ತಾರೆ.

ಸುದರ್ಶನ್ ಟಿವಿ ಮತ್ತು ಅದರ ಸಂಪಾದಕ ಉತ್ತರ ಪ್ರದೇಶದ ಸೋನಾಭದ್ರದಲ್ಲಿ ಅಪ್ರಾಪ್ತ ಮಕ್ಕಳು ಕೊಲ್ಲುವ ಪ್ರತಿಜ್ಞೆಯನ್ನು ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

ವೀಡಿಯೊದ ಸತ್ಯಾಸತ್ಯತೆಯನ್ನು ಪರಿಶೀಲಿಸಲಾಗುತ್ತಿದೆ ಮತ್ತು ನಂತರ ಕ್ರಮವನ್ನು ಪ್ರಾರಂಭಿಸಲಾಗುವುದು ಎಂದು ಪೊಲೀಸ್ ಮೂಲಗಳು ಹೇಳಿವೆ ಎಂದು TNIE ವರದಿ ಮಾಡಿದೆ.

ಇದನ್ನೂ ಓದಿ:ಉಡುಪಿ ದ್ವೇಷ ಭಾಷಣ: ಬೇಷರತ್‌‌ ಕ್ಷಮೆ ಕೇಳಿದ ತೇಜಸ್ವಿ ಸೂರ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ಯಾಲೆಸ್ತೀನ್‌ ಪರ ಪ್ರತಿಭಟನಾಕಾರರ ಮೇಲೆ ಅಮೆರಿಕ ಪೊಲೀಸರಿಂದ ದೌರ್ಜನ್ಯ

0
ಗಾಝಾದಲ್ಲಿ ಇಸ್ರೇಲ್‌ ಹತ್ಯಾಕಾಂಡವನ್ನು ಮುಂದುವರಿಸಿದ್ದು, ಇದನ್ನು ಖಂಡಿಸಿ ಅಮೆರಿಕದಲ್ಲಿ ಹಲವು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿ ಪ್ಯಾಲೆಸ್ತೀನ್‌ ಪರ ಪ್ರತಿಭಟನಾಕಾರರನ್ನು ಥಳಿಸಿ ಪೊಲೀಸರು ದೌರ್ಜನ್ಯ ನಡೆಸಿರುವ ಬಗ್ಗೆ ಅಲ್‌ಜಝೀರಾ ವರದಿ ಮಾಡಿದೆ. ಗಾಝಾದಲ್ಲಿ...