Homeಮುಖಪುಟ‘ಆದಿತ್ಯನಾಥ್‌’ ಬಗ್ಗೆ ವಿಶೇಷ ವರದಿ ಕೇಳಿದ ಗಂಟೆಗಳೊಳಗೆ ಪ್ರಧಾನ ಸಂಪಾದಕರನ್ನು ವಜಾಗೊಳಿಸಿದ ‘ಔಟ್‌ಲುಕ್’

‘ಆದಿತ್ಯನಾಥ್‌’ ಬಗ್ಗೆ ವಿಶೇಷ ವರದಿ ಕೇಳಿದ ಗಂಟೆಗಳೊಳಗೆ ಪ್ರಧಾನ ಸಂಪಾದಕರನ್ನು ವಜಾಗೊಳಿಸಿದ ‘ಔಟ್‌ಲುಕ್’

- Advertisement -
- Advertisement -

ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌‌ ಅವರು ಇತ್ತೀಚೆಗೆ ನೀಡಿದ್ದ ‘ಅಬ್ಬಾ ಜಾನ್’ ಹೇಳಿಕೆಯ ಕುರಿತು ವಿಶೇಷ ವರದಿ ಕೇಳಿದ್ದ ಔಟ್‌ಲುಕ್‌ ನಿಯತಕಾಲಿಕೆಯ ಪ್ರಧಾನ ಸಂಪಾದಕ ರುಬೆನ್ ಬ್ಯಾನರ್ಜಿ ಅವರನ್ನು, ವರದಿ ಕೇಳಿದ ಎರಡು ಗಂಟೆಯ ಒಳಗೆ ‘ಔಟ್‌ಲುಕ್ ಗ್ರೂಪ್‌’ ಅವರನ್ನು ವಜಾಗೊಳಿಸಿದೆ.

ಅವರು, 33 ದಿನಗಳ ರಜೆಯನ್ನು ಮುಗಿಸಿ ಬುಧವಾರಷ್ಟೆ ಸಂಸ್ಥೆಗೆ ಹಿಂತಿರುಗಿದ್ದು, “ಆದಿತ್ಯನಾಥ್ ಮತ್ತು ಅಬ್ಬಾ ಜಾನ್” ಕುರಿತು ವಿಶೇಷ ವರದಿ ಕೇಳಿ ಹಿರಿಯ ಸಂಪಾದಕರಿಗೆ ಸಂದೇಶ ಕಳುಹಿಸಿದ ಒಂದೆರೆಡು ಗಂಟೆಗಳಲ್ಲೇ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಅವರು ಒಂದು ತಿಂಗಳ ರಜೆಯ ಮೇಲೆ ಹೋಗಿದ್ದರ ಬಗ್ಗೆ ಆಗಸ್ಟ್‌ ತಿಂಗಳಲ್ಲಿ ವರದಿ ಮಾಡಿದ್ದ ನ್ಯೂಸ್‌ಲಾಂಡ್ರಿ ಸುದ್ದಿ ಸಂಸ್ಥೆ, “ಒಂದು ತಿಂಗಳ ರಜೆಯನ್ನು ಅವರನ್ನು ಕೆಲಸದಿಂದ ವಜಾಗೊಳಿಸಲೆಂದೇ ನೀಡಲಾಗಿದೆ” ಮೂಲಗಳನ್ನು ಉಲ್ಲೇಖಿಸಿ ಹೇಳಿತ್ತು.

ಇದನ್ನೂ ಓದಿ: ವೈಚಾರಿಕತೆಯನ್ನು ಕಡೆಗಣಿಸಿ ಅಬ್ಬರಿಸುವ ಜನಪ್ರಿಯ ನಟರ ಸಿನಿಮಾದಾಚೆಗಿನ ವಿಚಾರ

ಮೇ ತಿಂಗಳ ಔಟ್‌ಲುಕ್‌ ಸಂಚಿಕೆಯಲ್ಲಿ ಒಕ್ಕೂಟ ಸರ್ಕಾರವನ್ನು ಟೀಕಿಸಿ “ಕಾಣೆಯಾಗಿದ್ದಾರೆ”(Missing) ಎಂಬ ವಿಶೇಷ ವರದಿಯೊಂದನ್ನು ಪ್ರಕಟಿಸಿದ್ದಾಗ, ವರದಿಯ ಬಗ್ಗೆ ಔಟ್‌ಲುಕ್ ಗ್ರೂಪ್‌ ಆಡಳಿತ ಆಕ್ಷೇಪ ವ್ಯಕ್ತಪಡಿಸಿತ್ತು ಎಂದು ನ್ಯೂಸ್ ಲಾಂಡ್ರಿ ವರದಿ ಮಾಡಿದೆ.

ಜೊತೆಗೆ ದೇಶವನ್ನೇ ತಲ್ಲಣಗೊಳಿಸಿದ್ದ ‘ಪೆಗಾಸಸ್ ಗೂಢಾಚಾರ’ ಕುರಿತು ಕೂಡಾ ವಿಶೇಷ ವರದಿ ಆಗಬಾರದು ಎಂದು ನಿಯತಕಾಲಿಕೆಯ ಸಂಪಾದಕೀಯ ತಂಡಕ್ಕೆ ಸೂಚನೆ ಬಂದಿತ್ತು ಎಂದು ಅದು ತನ್ನ ವರದಿಯಲ್ಲಿ ಉಲ್ಲೇಖಿಸಿತ್ತು.

ಆದರೆ ಸಂಸ್ಥೆಯು ಅವರು ಶಿಸ್ತು ಉಲ್ಲಂಘನೆ ಮಾಡಿದ್ದಕ್ಕಾಗಿ ಅವರನ್ನು ಸೇವೆಯಿಂದ ವರಜಾಗೊಳಿಸಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: ಮುಂಬೈ ದಾಳಿಯ ಬಗ್ಗೆ ಮನಮೋಹನ್‌ ಸಿಂಗ್ ಅವರನ್ನು ಪ್ರಶ್ನಿಸಿದ ಮಾಧ್ಯಮ ಪುಲ್ವಾಮ ದಾಳಿ ಬಗ್ಗೆ ಮೋದಿಯನ್ನು ಪ್ರಶ್ನಿಸಲಿಲ್ಲ!

ಆಗಸ್ಟ್ 12 ರಿಂದ ರಜೆಯ ಮೇಲೆ ಹೋಗಿದ್ದ ತನ್ನನ್ನು ಯಾವುದೇ ಸೂಚನೆ ಇಲ್ಲದೆ ಅವರನ್ನು ವಜಾ ಮಾಡಲಾಗಿದೆ ಎಂದು ರುಬೆನ್‌ ಬ್ಯಾನರ್ಜಿ ಆರೋಪಿಸಿದ್ದಾರೆ ಎಂದು ದಿ ಪ್ರಿಂಟ್‌ ಸುದ್ದಿ ಸಂಸ್ಥೆ ವರದಿ ಮಾಡಿದೆ.

“ನನಗೆ ಆರೋಗ್ಯ ಸರಿಯಿಲ್ಲದ ಕಾರಣ ಸೆಪ್ಟೆಂಬರ್ 12 ರಂದು ನನ್ನ ರಜೆಯನ್ನು ವಿಸ್ತರಿಸಲು ನಾನು ಕೇಳಿದ್ದೆ. ಇದೀಗ ನಾನು ಚೇತರಿಸಿಕೊಂಡು ಇಂದು ಸಂಸ್ಥೆಯಲ್ಲಿ ಕೆಲಸಕ್ಕೆ ಸೇರಿಕೊಂಡೆ. ಮತ್ತೆ ಸಂಸ್ಥೆಗೆ ಕೆಲಸಕ್ಕಾಗಿ ಹಾಜರಾಗುವುದು ಶಿಸ್ತಿನ ಉಲ್ಲಂಘನೆ ಹೇಗೆ ಆಗುತ್ತದೆ” ಎಂದು ಅವರು ಪ್ರಶ್ನಿಸಿದ್ದಾರೆ.

ರುಬೆನ್ ಬ್ಯಾನರ್ಜಿ ಅವರು 2018 ರಲ್ಲಿ ಔಟ್‌ಲುಕ್‌ಗೆ ಸಂಪಾದಕರಾಗಿ ಸೇರಿದ್ದರು. 2019 ರಲ್ಲಿ ಪ್ರಧಾನ ಸಂಪಾದಕರಾಗಿ ಬಡ್ತಿ ಪಡೆದಿದ್ದರು ಮತ್ತು 2020 ರಲ್ಲಿ ಔಟ್‌ಲುಕ್ ಮನಿ ಮತ್ತು ಔಟ್‌ಲುಕ್ ಹಿಂದಿಯ ಸಂಪಾದಕರಾಗಿಯು ನೇಮಕಗೊಂಡಿದ್ದರು. ಇದಾಗಿ ಅವರು ಈ ವರ್ಷವಷ್ಟೇ ಗ್ರೂಪ್‌ನ ಎಲ್ಲಾ ಮಾಧ್ಯಮಗಳಿಗೂ ಪ್ರಧಾನ ಸಂಪಾದಕರಾಗಿ ಬಡ್ತಿ ಪಡೆದಿದ್ದರು.

ಇದನ್ನೂ ಓದಿ: ಸಹೋದರ ಸಂಬಂಧಿಗಳ ಪ್ರೇಮ ಪ್ರಕರಣಕ್ಕೆ ‘ಲವ್‌ ಜಿಹಾದ್’ ಪಟ್ಟ ಕಟ್ಟಿದ ಬಿಜೆಪಿ ಪರ ಸಂಘಟನೆ ಮತ್ತು ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...