Homeಮುಖಪುಟ‘ಆದಿತ್ಯನಾಥ್‌’ ಬಗ್ಗೆ ವಿಶೇಷ ವರದಿ ಕೇಳಿದ ಗಂಟೆಗಳೊಳಗೆ ಪ್ರಧಾನ ಸಂಪಾದಕರನ್ನು ವಜಾಗೊಳಿಸಿದ ‘ಔಟ್‌ಲುಕ್’

‘ಆದಿತ್ಯನಾಥ್‌’ ಬಗ್ಗೆ ವಿಶೇಷ ವರದಿ ಕೇಳಿದ ಗಂಟೆಗಳೊಳಗೆ ಪ್ರಧಾನ ಸಂಪಾದಕರನ್ನು ವಜಾಗೊಳಿಸಿದ ‘ಔಟ್‌ಲುಕ್’

- Advertisement -
- Advertisement -

ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌‌ ಅವರು ಇತ್ತೀಚೆಗೆ ನೀಡಿದ್ದ ‘ಅಬ್ಬಾ ಜಾನ್’ ಹೇಳಿಕೆಯ ಕುರಿತು ವಿಶೇಷ ವರದಿ ಕೇಳಿದ್ದ ಔಟ್‌ಲುಕ್‌ ನಿಯತಕಾಲಿಕೆಯ ಪ್ರಧಾನ ಸಂಪಾದಕ ರುಬೆನ್ ಬ್ಯಾನರ್ಜಿ ಅವರನ್ನು, ವರದಿ ಕೇಳಿದ ಎರಡು ಗಂಟೆಯ ಒಳಗೆ ‘ಔಟ್‌ಲುಕ್ ಗ್ರೂಪ್‌’ ಅವರನ್ನು ವಜಾಗೊಳಿಸಿದೆ.

ಅವರು, 33 ದಿನಗಳ ರಜೆಯನ್ನು ಮುಗಿಸಿ ಬುಧವಾರಷ್ಟೆ ಸಂಸ್ಥೆಗೆ ಹಿಂತಿರುಗಿದ್ದು, “ಆದಿತ್ಯನಾಥ್ ಮತ್ತು ಅಬ್ಬಾ ಜಾನ್” ಕುರಿತು ವಿಶೇಷ ವರದಿ ಕೇಳಿ ಹಿರಿಯ ಸಂಪಾದಕರಿಗೆ ಸಂದೇಶ ಕಳುಹಿಸಿದ ಒಂದೆರೆಡು ಗಂಟೆಗಳಲ್ಲೇ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಅವರು ಒಂದು ತಿಂಗಳ ರಜೆಯ ಮೇಲೆ ಹೋಗಿದ್ದರ ಬಗ್ಗೆ ಆಗಸ್ಟ್‌ ತಿಂಗಳಲ್ಲಿ ವರದಿ ಮಾಡಿದ್ದ ನ್ಯೂಸ್‌ಲಾಂಡ್ರಿ ಸುದ್ದಿ ಸಂಸ್ಥೆ, “ಒಂದು ತಿಂಗಳ ರಜೆಯನ್ನು ಅವರನ್ನು ಕೆಲಸದಿಂದ ವಜಾಗೊಳಿಸಲೆಂದೇ ನೀಡಲಾಗಿದೆ” ಮೂಲಗಳನ್ನು ಉಲ್ಲೇಖಿಸಿ ಹೇಳಿತ್ತು.

ಇದನ್ನೂ ಓದಿ: ವೈಚಾರಿಕತೆಯನ್ನು ಕಡೆಗಣಿಸಿ ಅಬ್ಬರಿಸುವ ಜನಪ್ರಿಯ ನಟರ ಸಿನಿಮಾದಾಚೆಗಿನ ವಿಚಾರ

ಮೇ ತಿಂಗಳ ಔಟ್‌ಲುಕ್‌ ಸಂಚಿಕೆಯಲ್ಲಿ ಒಕ್ಕೂಟ ಸರ್ಕಾರವನ್ನು ಟೀಕಿಸಿ “ಕಾಣೆಯಾಗಿದ್ದಾರೆ”(Missing) ಎಂಬ ವಿಶೇಷ ವರದಿಯೊಂದನ್ನು ಪ್ರಕಟಿಸಿದ್ದಾಗ, ವರದಿಯ ಬಗ್ಗೆ ಔಟ್‌ಲುಕ್ ಗ್ರೂಪ್‌ ಆಡಳಿತ ಆಕ್ಷೇಪ ವ್ಯಕ್ತಪಡಿಸಿತ್ತು ಎಂದು ನ್ಯೂಸ್ ಲಾಂಡ್ರಿ ವರದಿ ಮಾಡಿದೆ.

ಜೊತೆಗೆ ದೇಶವನ್ನೇ ತಲ್ಲಣಗೊಳಿಸಿದ್ದ ‘ಪೆಗಾಸಸ್ ಗೂಢಾಚಾರ’ ಕುರಿತು ಕೂಡಾ ವಿಶೇಷ ವರದಿ ಆಗಬಾರದು ಎಂದು ನಿಯತಕಾಲಿಕೆಯ ಸಂಪಾದಕೀಯ ತಂಡಕ್ಕೆ ಸೂಚನೆ ಬಂದಿತ್ತು ಎಂದು ಅದು ತನ್ನ ವರದಿಯಲ್ಲಿ ಉಲ್ಲೇಖಿಸಿತ್ತು.

ಆದರೆ ಸಂಸ್ಥೆಯು ಅವರು ಶಿಸ್ತು ಉಲ್ಲಂಘನೆ ಮಾಡಿದ್ದಕ್ಕಾಗಿ ಅವರನ್ನು ಸೇವೆಯಿಂದ ವರಜಾಗೊಳಿಸಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: ಮುಂಬೈ ದಾಳಿಯ ಬಗ್ಗೆ ಮನಮೋಹನ್‌ ಸಿಂಗ್ ಅವರನ್ನು ಪ್ರಶ್ನಿಸಿದ ಮಾಧ್ಯಮ ಪುಲ್ವಾಮ ದಾಳಿ ಬಗ್ಗೆ ಮೋದಿಯನ್ನು ಪ್ರಶ್ನಿಸಲಿಲ್ಲ!

ಆಗಸ್ಟ್ 12 ರಿಂದ ರಜೆಯ ಮೇಲೆ ಹೋಗಿದ್ದ ತನ್ನನ್ನು ಯಾವುದೇ ಸೂಚನೆ ಇಲ್ಲದೆ ಅವರನ್ನು ವಜಾ ಮಾಡಲಾಗಿದೆ ಎಂದು ರುಬೆನ್‌ ಬ್ಯಾನರ್ಜಿ ಆರೋಪಿಸಿದ್ದಾರೆ ಎಂದು ದಿ ಪ್ರಿಂಟ್‌ ಸುದ್ದಿ ಸಂಸ್ಥೆ ವರದಿ ಮಾಡಿದೆ.

“ನನಗೆ ಆರೋಗ್ಯ ಸರಿಯಿಲ್ಲದ ಕಾರಣ ಸೆಪ್ಟೆಂಬರ್ 12 ರಂದು ನನ್ನ ರಜೆಯನ್ನು ವಿಸ್ತರಿಸಲು ನಾನು ಕೇಳಿದ್ದೆ. ಇದೀಗ ನಾನು ಚೇತರಿಸಿಕೊಂಡು ಇಂದು ಸಂಸ್ಥೆಯಲ್ಲಿ ಕೆಲಸಕ್ಕೆ ಸೇರಿಕೊಂಡೆ. ಮತ್ತೆ ಸಂಸ್ಥೆಗೆ ಕೆಲಸಕ್ಕಾಗಿ ಹಾಜರಾಗುವುದು ಶಿಸ್ತಿನ ಉಲ್ಲಂಘನೆ ಹೇಗೆ ಆಗುತ್ತದೆ” ಎಂದು ಅವರು ಪ್ರಶ್ನಿಸಿದ್ದಾರೆ.

ರುಬೆನ್ ಬ್ಯಾನರ್ಜಿ ಅವರು 2018 ರಲ್ಲಿ ಔಟ್‌ಲುಕ್‌ಗೆ ಸಂಪಾದಕರಾಗಿ ಸೇರಿದ್ದರು. 2019 ರಲ್ಲಿ ಪ್ರಧಾನ ಸಂಪಾದಕರಾಗಿ ಬಡ್ತಿ ಪಡೆದಿದ್ದರು ಮತ್ತು 2020 ರಲ್ಲಿ ಔಟ್‌ಲುಕ್ ಮನಿ ಮತ್ತು ಔಟ್‌ಲುಕ್ ಹಿಂದಿಯ ಸಂಪಾದಕರಾಗಿಯು ನೇಮಕಗೊಂಡಿದ್ದರು. ಇದಾಗಿ ಅವರು ಈ ವರ್ಷವಷ್ಟೇ ಗ್ರೂಪ್‌ನ ಎಲ್ಲಾ ಮಾಧ್ಯಮಗಳಿಗೂ ಪ್ರಧಾನ ಸಂಪಾದಕರಾಗಿ ಬಡ್ತಿ ಪಡೆದಿದ್ದರು.

ಇದನ್ನೂ ಓದಿ: ಸಹೋದರ ಸಂಬಂಧಿಗಳ ಪ್ರೇಮ ಪ್ರಕರಣಕ್ಕೆ ‘ಲವ್‌ ಜಿಹಾದ್’ ಪಟ್ಟ ಕಟ್ಟಿದ ಬಿಜೆಪಿ ಪರ ಸಂಘಟನೆ ಮತ್ತು ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...