Homeಮುಖಪುಟ‘ಆದಿತ್ಯನಾಥ್‌’ ಬಗ್ಗೆ ವಿಶೇಷ ವರದಿ ಕೇಳಿದ ಗಂಟೆಗಳೊಳಗೆ ಪ್ರಧಾನ ಸಂಪಾದಕರನ್ನು ವಜಾಗೊಳಿಸಿದ ‘ಔಟ್‌ಲುಕ್’

‘ಆದಿತ್ಯನಾಥ್‌’ ಬಗ್ಗೆ ವಿಶೇಷ ವರದಿ ಕೇಳಿದ ಗಂಟೆಗಳೊಳಗೆ ಪ್ರಧಾನ ಸಂಪಾದಕರನ್ನು ವಜಾಗೊಳಿಸಿದ ‘ಔಟ್‌ಲುಕ್’

- Advertisement -
- Advertisement -

ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌‌ ಅವರು ಇತ್ತೀಚೆಗೆ ನೀಡಿದ್ದ ‘ಅಬ್ಬಾ ಜಾನ್’ ಹೇಳಿಕೆಯ ಕುರಿತು ವಿಶೇಷ ವರದಿ ಕೇಳಿದ್ದ ಔಟ್‌ಲುಕ್‌ ನಿಯತಕಾಲಿಕೆಯ ಪ್ರಧಾನ ಸಂಪಾದಕ ರುಬೆನ್ ಬ್ಯಾನರ್ಜಿ ಅವರನ್ನು, ವರದಿ ಕೇಳಿದ ಎರಡು ಗಂಟೆಯ ಒಳಗೆ ‘ಔಟ್‌ಲುಕ್ ಗ್ರೂಪ್‌’ ಅವರನ್ನು ವಜಾಗೊಳಿಸಿದೆ.

ಅವರು, 33 ದಿನಗಳ ರಜೆಯನ್ನು ಮುಗಿಸಿ ಬುಧವಾರಷ್ಟೆ ಸಂಸ್ಥೆಗೆ ಹಿಂತಿರುಗಿದ್ದು, “ಆದಿತ್ಯನಾಥ್ ಮತ್ತು ಅಬ್ಬಾ ಜಾನ್” ಕುರಿತು ವಿಶೇಷ ವರದಿ ಕೇಳಿ ಹಿರಿಯ ಸಂಪಾದಕರಿಗೆ ಸಂದೇಶ ಕಳುಹಿಸಿದ ಒಂದೆರೆಡು ಗಂಟೆಗಳಲ್ಲೇ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಅವರು ಒಂದು ತಿಂಗಳ ರಜೆಯ ಮೇಲೆ ಹೋಗಿದ್ದರ ಬಗ್ಗೆ ಆಗಸ್ಟ್‌ ತಿಂಗಳಲ್ಲಿ ವರದಿ ಮಾಡಿದ್ದ ನ್ಯೂಸ್‌ಲಾಂಡ್ರಿ ಸುದ್ದಿ ಸಂಸ್ಥೆ, “ಒಂದು ತಿಂಗಳ ರಜೆಯನ್ನು ಅವರನ್ನು ಕೆಲಸದಿಂದ ವಜಾಗೊಳಿಸಲೆಂದೇ ನೀಡಲಾಗಿದೆ” ಮೂಲಗಳನ್ನು ಉಲ್ಲೇಖಿಸಿ ಹೇಳಿತ್ತು.

ಇದನ್ನೂ ಓದಿ: ವೈಚಾರಿಕತೆಯನ್ನು ಕಡೆಗಣಿಸಿ ಅಬ್ಬರಿಸುವ ಜನಪ್ರಿಯ ನಟರ ಸಿನಿಮಾದಾಚೆಗಿನ ವಿಚಾರ

ಮೇ ತಿಂಗಳ ಔಟ್‌ಲುಕ್‌ ಸಂಚಿಕೆಯಲ್ಲಿ ಒಕ್ಕೂಟ ಸರ್ಕಾರವನ್ನು ಟೀಕಿಸಿ “ಕಾಣೆಯಾಗಿದ್ದಾರೆ”(Missing) ಎಂಬ ವಿಶೇಷ ವರದಿಯೊಂದನ್ನು ಪ್ರಕಟಿಸಿದ್ದಾಗ, ವರದಿಯ ಬಗ್ಗೆ ಔಟ್‌ಲುಕ್ ಗ್ರೂಪ್‌ ಆಡಳಿತ ಆಕ್ಷೇಪ ವ್ಯಕ್ತಪಡಿಸಿತ್ತು ಎಂದು ನ್ಯೂಸ್ ಲಾಂಡ್ರಿ ವರದಿ ಮಾಡಿದೆ.

ಜೊತೆಗೆ ದೇಶವನ್ನೇ ತಲ್ಲಣಗೊಳಿಸಿದ್ದ ‘ಪೆಗಾಸಸ್ ಗೂಢಾಚಾರ’ ಕುರಿತು ಕೂಡಾ ವಿಶೇಷ ವರದಿ ಆಗಬಾರದು ಎಂದು ನಿಯತಕಾಲಿಕೆಯ ಸಂಪಾದಕೀಯ ತಂಡಕ್ಕೆ ಸೂಚನೆ ಬಂದಿತ್ತು ಎಂದು ಅದು ತನ್ನ ವರದಿಯಲ್ಲಿ ಉಲ್ಲೇಖಿಸಿತ್ತು.

ಆದರೆ ಸಂಸ್ಥೆಯು ಅವರು ಶಿಸ್ತು ಉಲ್ಲಂಘನೆ ಮಾಡಿದ್ದಕ್ಕಾಗಿ ಅವರನ್ನು ಸೇವೆಯಿಂದ ವರಜಾಗೊಳಿಸಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: ಮುಂಬೈ ದಾಳಿಯ ಬಗ್ಗೆ ಮನಮೋಹನ್‌ ಸಿಂಗ್ ಅವರನ್ನು ಪ್ರಶ್ನಿಸಿದ ಮಾಧ್ಯಮ ಪುಲ್ವಾಮ ದಾಳಿ ಬಗ್ಗೆ ಮೋದಿಯನ್ನು ಪ್ರಶ್ನಿಸಲಿಲ್ಲ!

ಆಗಸ್ಟ್ 12 ರಿಂದ ರಜೆಯ ಮೇಲೆ ಹೋಗಿದ್ದ ತನ್ನನ್ನು ಯಾವುದೇ ಸೂಚನೆ ಇಲ್ಲದೆ ಅವರನ್ನು ವಜಾ ಮಾಡಲಾಗಿದೆ ಎಂದು ರುಬೆನ್‌ ಬ್ಯಾನರ್ಜಿ ಆರೋಪಿಸಿದ್ದಾರೆ ಎಂದು ದಿ ಪ್ರಿಂಟ್‌ ಸುದ್ದಿ ಸಂಸ್ಥೆ ವರದಿ ಮಾಡಿದೆ.

“ನನಗೆ ಆರೋಗ್ಯ ಸರಿಯಿಲ್ಲದ ಕಾರಣ ಸೆಪ್ಟೆಂಬರ್ 12 ರಂದು ನನ್ನ ರಜೆಯನ್ನು ವಿಸ್ತರಿಸಲು ನಾನು ಕೇಳಿದ್ದೆ. ಇದೀಗ ನಾನು ಚೇತರಿಸಿಕೊಂಡು ಇಂದು ಸಂಸ್ಥೆಯಲ್ಲಿ ಕೆಲಸಕ್ಕೆ ಸೇರಿಕೊಂಡೆ. ಮತ್ತೆ ಸಂಸ್ಥೆಗೆ ಕೆಲಸಕ್ಕಾಗಿ ಹಾಜರಾಗುವುದು ಶಿಸ್ತಿನ ಉಲ್ಲಂಘನೆ ಹೇಗೆ ಆಗುತ್ತದೆ” ಎಂದು ಅವರು ಪ್ರಶ್ನಿಸಿದ್ದಾರೆ.

ರುಬೆನ್ ಬ್ಯಾನರ್ಜಿ ಅವರು 2018 ರಲ್ಲಿ ಔಟ್‌ಲುಕ್‌ಗೆ ಸಂಪಾದಕರಾಗಿ ಸೇರಿದ್ದರು. 2019 ರಲ್ಲಿ ಪ್ರಧಾನ ಸಂಪಾದಕರಾಗಿ ಬಡ್ತಿ ಪಡೆದಿದ್ದರು ಮತ್ತು 2020 ರಲ್ಲಿ ಔಟ್‌ಲುಕ್ ಮನಿ ಮತ್ತು ಔಟ್‌ಲುಕ್ ಹಿಂದಿಯ ಸಂಪಾದಕರಾಗಿಯು ನೇಮಕಗೊಂಡಿದ್ದರು. ಇದಾಗಿ ಅವರು ಈ ವರ್ಷವಷ್ಟೇ ಗ್ರೂಪ್‌ನ ಎಲ್ಲಾ ಮಾಧ್ಯಮಗಳಿಗೂ ಪ್ರಧಾನ ಸಂಪಾದಕರಾಗಿ ಬಡ್ತಿ ಪಡೆದಿದ್ದರು.

ಇದನ್ನೂ ಓದಿ: ಸಹೋದರ ಸಂಬಂಧಿಗಳ ಪ್ರೇಮ ಪ್ರಕರಣಕ್ಕೆ ‘ಲವ್‌ ಜಿಹಾದ್’ ಪಟ್ಟ ಕಟ್ಟಿದ ಬಿಜೆಪಿ ಪರ ಸಂಘಟನೆ ಮತ್ತು ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...