Homeಮುಖಪುಟ‘ಆದಿತ್ಯನಾಥ್‌’ ಬಗ್ಗೆ ವಿಶೇಷ ವರದಿ ಕೇಳಿದ ಗಂಟೆಗಳೊಳಗೆ ಪ್ರಧಾನ ಸಂಪಾದಕರನ್ನು ವಜಾಗೊಳಿಸಿದ ‘ಔಟ್‌ಲುಕ್’

‘ಆದಿತ್ಯನಾಥ್‌’ ಬಗ್ಗೆ ವಿಶೇಷ ವರದಿ ಕೇಳಿದ ಗಂಟೆಗಳೊಳಗೆ ಪ್ರಧಾನ ಸಂಪಾದಕರನ್ನು ವಜಾಗೊಳಿಸಿದ ‘ಔಟ್‌ಲುಕ್’

- Advertisement -
- Advertisement -

ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌‌ ಅವರು ಇತ್ತೀಚೆಗೆ ನೀಡಿದ್ದ ‘ಅಬ್ಬಾ ಜಾನ್’ ಹೇಳಿಕೆಯ ಕುರಿತು ವಿಶೇಷ ವರದಿ ಕೇಳಿದ್ದ ಔಟ್‌ಲುಕ್‌ ನಿಯತಕಾಲಿಕೆಯ ಪ್ರಧಾನ ಸಂಪಾದಕ ರುಬೆನ್ ಬ್ಯಾನರ್ಜಿ ಅವರನ್ನು, ವರದಿ ಕೇಳಿದ ಎರಡು ಗಂಟೆಯ ಒಳಗೆ ‘ಔಟ್‌ಲುಕ್ ಗ್ರೂಪ್‌’ ಅವರನ್ನು ವಜಾಗೊಳಿಸಿದೆ.

ಅವರು, 33 ದಿನಗಳ ರಜೆಯನ್ನು ಮುಗಿಸಿ ಬುಧವಾರಷ್ಟೆ ಸಂಸ್ಥೆಗೆ ಹಿಂತಿರುಗಿದ್ದು, “ಆದಿತ್ಯನಾಥ್ ಮತ್ತು ಅಬ್ಬಾ ಜಾನ್” ಕುರಿತು ವಿಶೇಷ ವರದಿ ಕೇಳಿ ಹಿರಿಯ ಸಂಪಾದಕರಿಗೆ ಸಂದೇಶ ಕಳುಹಿಸಿದ ಒಂದೆರೆಡು ಗಂಟೆಗಳಲ್ಲೇ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಅವರು ಒಂದು ತಿಂಗಳ ರಜೆಯ ಮೇಲೆ ಹೋಗಿದ್ದರ ಬಗ್ಗೆ ಆಗಸ್ಟ್‌ ತಿಂಗಳಲ್ಲಿ ವರದಿ ಮಾಡಿದ್ದ ನ್ಯೂಸ್‌ಲಾಂಡ್ರಿ ಸುದ್ದಿ ಸಂಸ್ಥೆ, “ಒಂದು ತಿಂಗಳ ರಜೆಯನ್ನು ಅವರನ್ನು ಕೆಲಸದಿಂದ ವಜಾಗೊಳಿಸಲೆಂದೇ ನೀಡಲಾಗಿದೆ” ಮೂಲಗಳನ್ನು ಉಲ್ಲೇಖಿಸಿ ಹೇಳಿತ್ತು.

ಇದನ್ನೂ ಓದಿ: ವೈಚಾರಿಕತೆಯನ್ನು ಕಡೆಗಣಿಸಿ ಅಬ್ಬರಿಸುವ ಜನಪ್ರಿಯ ನಟರ ಸಿನಿಮಾದಾಚೆಗಿನ ವಿಚಾರ

ಮೇ ತಿಂಗಳ ಔಟ್‌ಲುಕ್‌ ಸಂಚಿಕೆಯಲ್ಲಿ ಒಕ್ಕೂಟ ಸರ್ಕಾರವನ್ನು ಟೀಕಿಸಿ “ಕಾಣೆಯಾಗಿದ್ದಾರೆ”(Missing) ಎಂಬ ವಿಶೇಷ ವರದಿಯೊಂದನ್ನು ಪ್ರಕಟಿಸಿದ್ದಾಗ, ವರದಿಯ ಬಗ್ಗೆ ಔಟ್‌ಲುಕ್ ಗ್ರೂಪ್‌ ಆಡಳಿತ ಆಕ್ಷೇಪ ವ್ಯಕ್ತಪಡಿಸಿತ್ತು ಎಂದು ನ್ಯೂಸ್ ಲಾಂಡ್ರಿ ವರದಿ ಮಾಡಿದೆ.

ಜೊತೆಗೆ ದೇಶವನ್ನೇ ತಲ್ಲಣಗೊಳಿಸಿದ್ದ ‘ಪೆಗಾಸಸ್ ಗೂಢಾಚಾರ’ ಕುರಿತು ಕೂಡಾ ವಿಶೇಷ ವರದಿ ಆಗಬಾರದು ಎಂದು ನಿಯತಕಾಲಿಕೆಯ ಸಂಪಾದಕೀಯ ತಂಡಕ್ಕೆ ಸೂಚನೆ ಬಂದಿತ್ತು ಎಂದು ಅದು ತನ್ನ ವರದಿಯಲ್ಲಿ ಉಲ್ಲೇಖಿಸಿತ್ತು.

ಆದರೆ ಸಂಸ್ಥೆಯು ಅವರು ಶಿಸ್ತು ಉಲ್ಲಂಘನೆ ಮಾಡಿದ್ದಕ್ಕಾಗಿ ಅವರನ್ನು ಸೇವೆಯಿಂದ ವರಜಾಗೊಳಿಸಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: ಮುಂಬೈ ದಾಳಿಯ ಬಗ್ಗೆ ಮನಮೋಹನ್‌ ಸಿಂಗ್ ಅವರನ್ನು ಪ್ರಶ್ನಿಸಿದ ಮಾಧ್ಯಮ ಪುಲ್ವಾಮ ದಾಳಿ ಬಗ್ಗೆ ಮೋದಿಯನ್ನು ಪ್ರಶ್ನಿಸಲಿಲ್ಲ!

ಆಗಸ್ಟ್ 12 ರಿಂದ ರಜೆಯ ಮೇಲೆ ಹೋಗಿದ್ದ ತನ್ನನ್ನು ಯಾವುದೇ ಸೂಚನೆ ಇಲ್ಲದೆ ಅವರನ್ನು ವಜಾ ಮಾಡಲಾಗಿದೆ ಎಂದು ರುಬೆನ್‌ ಬ್ಯಾನರ್ಜಿ ಆರೋಪಿಸಿದ್ದಾರೆ ಎಂದು ದಿ ಪ್ರಿಂಟ್‌ ಸುದ್ದಿ ಸಂಸ್ಥೆ ವರದಿ ಮಾಡಿದೆ.

“ನನಗೆ ಆರೋಗ್ಯ ಸರಿಯಿಲ್ಲದ ಕಾರಣ ಸೆಪ್ಟೆಂಬರ್ 12 ರಂದು ನನ್ನ ರಜೆಯನ್ನು ವಿಸ್ತರಿಸಲು ನಾನು ಕೇಳಿದ್ದೆ. ಇದೀಗ ನಾನು ಚೇತರಿಸಿಕೊಂಡು ಇಂದು ಸಂಸ್ಥೆಯಲ್ಲಿ ಕೆಲಸಕ್ಕೆ ಸೇರಿಕೊಂಡೆ. ಮತ್ತೆ ಸಂಸ್ಥೆಗೆ ಕೆಲಸಕ್ಕಾಗಿ ಹಾಜರಾಗುವುದು ಶಿಸ್ತಿನ ಉಲ್ಲಂಘನೆ ಹೇಗೆ ಆಗುತ್ತದೆ” ಎಂದು ಅವರು ಪ್ರಶ್ನಿಸಿದ್ದಾರೆ.

ರುಬೆನ್ ಬ್ಯಾನರ್ಜಿ ಅವರು 2018 ರಲ್ಲಿ ಔಟ್‌ಲುಕ್‌ಗೆ ಸಂಪಾದಕರಾಗಿ ಸೇರಿದ್ದರು. 2019 ರಲ್ಲಿ ಪ್ರಧಾನ ಸಂಪಾದಕರಾಗಿ ಬಡ್ತಿ ಪಡೆದಿದ್ದರು ಮತ್ತು 2020 ರಲ್ಲಿ ಔಟ್‌ಲುಕ್ ಮನಿ ಮತ್ತು ಔಟ್‌ಲುಕ್ ಹಿಂದಿಯ ಸಂಪಾದಕರಾಗಿಯು ನೇಮಕಗೊಂಡಿದ್ದರು. ಇದಾಗಿ ಅವರು ಈ ವರ್ಷವಷ್ಟೇ ಗ್ರೂಪ್‌ನ ಎಲ್ಲಾ ಮಾಧ್ಯಮಗಳಿಗೂ ಪ್ರಧಾನ ಸಂಪಾದಕರಾಗಿ ಬಡ್ತಿ ಪಡೆದಿದ್ದರು.

ಇದನ್ನೂ ಓದಿ: ಸಹೋದರ ಸಂಬಂಧಿಗಳ ಪ್ರೇಮ ಪ್ರಕರಣಕ್ಕೆ ‘ಲವ್‌ ಜಿಹಾದ್’ ಪಟ್ಟ ಕಟ್ಟಿದ ಬಿಜೆಪಿ ಪರ ಸಂಘಟನೆ ಮತ್ತು ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...