Homeಮುಖಪುಟಅಗ್ನಿಪಥ್ ವಿರುದ್ಧ ಸಿಡಿದೆದ್ದ ಯುವಜನತೆ: ಒಂದು ಸಾವು, 8 ಜನರಿಗೆ ಗಾಯ - ವಯಸ್ಸಿನ ಮಿತಿ...

ಅಗ್ನಿಪಥ್ ವಿರುದ್ಧ ಸಿಡಿದೆದ್ದ ಯುವಜನತೆ: ಒಂದು ಸಾವು, 8 ಜನರಿಗೆ ಗಾಯ – ವಯಸ್ಸಿನ ಮಿತಿ ಹೆಚ್ಚಳಕ್ಕೆ ಮುಂದಾದ ಕೇಂದ್ರ

- Advertisement -
- Advertisement -

ಕೇಂದ್ರ ಸರ್ಕಾರ ಹೊಸದಾಗಿ ಘೋಷಿಸಿದ ಸೇನಾ ನೇಮಕಾತಿ ಕುರಿತ ಅಗ್ನಿಪಥ್ ಯೋಜನೆಗೆ ರಾಷ್ಟ್ರಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದೆ. ಉದ್ಯೋಗಾಕಾಂಕ್ಷಿ ಯುವಜನರು ಸಿಡಿದೆದ್ದಿದ್ದು 7 ರಾಜ್ಯಗಳಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ತಡೆಯಲು ಪೊಲೀಸರು ಲಾಠೀ ಚಾರ್ಜ್ ಮಾಡಿದ್ದರಿಂದ ಪ್ರತಿಭಟನೆ ಹಿಂಸಾರೂಪ ಪಡೆದಿದೆ. ಇದುವರೆಗೂ ದೇಶಾದ್ಯಂತ ಒಂದು ಸಾವು ಸಂಭವಿಸಿದ್ದು, 8 ಜನರ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ತೆಲಂಗಾಣಕ್ಕೂ ಪ್ರತಿಭಟನೆಯ ಕಿಚ್ಚು ವ್ಯಾಪಿಸಿದ್ದು ಸಿಕಂದರಾಬಾದ್‌ ರೈಲ್ವೇ ನಿಲ್ದಾಣದಲ್ಲಿ ಪ್ರತಿಭಟನೆ ತೀವ್ರಗೊಂಡಾಗ ಪೊಲೀಸರು ಗುಂಡು ಹಾರಿಸಿದ್ದಾರೆ. ಆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಒಬ್ಬ ಯುವಕ ಸಾವನಪ್ಪಿದ್ದಾನೆ. ತದನಂತರ ಸಿಟ್ಟಿಗೆದ್ದ ಯುವಜನರು ರೈಲು ಬೋಗಿಗಳಿಗೆ ಕಲ್ಲು ತೂರಿ, ಸಾರ್ವಜನಿಕ ಬಸ್‌ಗಳನ್ನು ಜಖಂಗೊಳಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಬಿಹಾರ-ಉತ್ತರ ಪ್ರದೇಶದಲ್ಲಿ ಮೂರನೇ ದಿನವೂ ಪ್ರತಿಭಟನೆಗಳು ಹೆಚ್ಚಾಗುತ್ತಿವೆ. ರಸ್ತೆ ತಡೆ- ರೈಲು ತಡೆಗಳು ಸಾಮಾನ್ಯವಾಗಿವೆ. ಉತ್ತರ ಬಿಹಾರದ ಚಂಪಾರಣ್ ಜಿಲ್ಲೆಯಲ್ಲಿ ಉಪ ಮುಖ್ಯಮಂತ್ರಿ ರೇಣು ದೇವಿ ಮೇಲೆ ಪ್ರತಿಭಾನಾಕರರು ದಾಳಿ ನಡೆಸಿದ್ದಾರೆ.

ಪ್ರತಿಭಟನೆಗಳು ತೀವ್ರವಾಗುತ್ತಿದ್ದಂತ ಕೇಂದ್ರ ಸರ್ಕಾರ ನೇಮಕಾತಿಗೆ ಇದ್ದ ವಯಸ್ಸಿನ ಮಿತಿಯನ್ನು ಈ ವರ್ಷಕ್ಕೆ ಮಾತ್ರ ಅನ್ವಯವಾಗುವಂತೆ 21 ವರ್ಷದಿಂದ 23 ವರ್ಷಕ್ಕೆ ಹೆಚ್ಚಿಸಿದೆ. ಈ ಕುರಿತು ಗೃಹ ಸಚಿವ ಅಮಿತ್ ಶಾ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಕಳೆದ ಎರಡು ವರ್ಷಗಳಿಂದ ಕರೋನಾ ಸಾಂಕ್ರಾಮಿಕದಿಂದಾಗಿ ಸೇನೆಯಲ್ಲಿನ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ.
‘ಅಗ್ನಿಪಥ್ ಯೋಜನೆ’ಯಲ್ಲಿ ಆ ಯುವಕರ ಕಾಳಜಿಗಾಗಿ ಮೊದಲ ವರ್ಷದಲ್ಲಿ ಎರಡು ವರ್ಷಗಳ ರಿಯಾಯಿತಿ ನೀಡುವ ಮೂಲಕ ವಯೋಮಿತಿಯನ್ನು 21 ವರ್ಷದಿಂದ 23 ವರ್ಷಕ್ಕೆ ಹೆಚ್ಚಿಸುವ ಸೂಕ್ಷ್ಮ ನಿರ್ಧಾರವನ್ನು ನರೇಂದ್ರ ಮೋದಿಯವರು ತೆಗೆದುಕೊಂಡಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಆದರೆ ಸರ್ಕಾರದ ಈ ಕ್ರಮಕ್ಕೆ ಉದ್ಯೋಗಾಂಕ್ಷಿಗಳು ಸಮಾಧಾನಗೊಂಡಿಲ್ಲ. ಪ್ರತಿಭಟನೆಗಳನ್ನು ಮುಂದುವರೆಸಿದ್ದು, ಅಗ್ನಿಪಥ್ ಯೋಜನೆ ಕೈಬಿಟ್ಟು, ಈ ಹಿಂದೆ ನೇಮಕಾತಿ ಪ್ರಕ್ರಿಯೆಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Explainer: ಏನಿದು ಅಗ್ನಿಪಥ್ ಯೋಜನೆ? ಯಾಕಿಷ್ಟು ವಿರೋಧ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...