Homeಚಳವಳಿಕೃಷಿ ಮಸೂದೆಗಳ ವಿರುದ್ಧ ಆಕ್ರೋಶ: ರಾಜ್ಯದ್ಯಂತ ಕರ್ನಾಟಕ ಬಂದ್ ಆರಂಭ - ವಿಡಿಯೋ ನೋಡಿ

ಕೃಷಿ ಮಸೂದೆಗಳ ವಿರುದ್ಧ ಆಕ್ರೋಶ: ರಾಜ್ಯದ್ಯಂತ ಕರ್ನಾಟಕ ಬಂದ್ ಆರಂಭ – ವಿಡಿಯೋ ನೋಡಿ

ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಪದಾಧಿಕಾರಿಗಳು ಬೆಂಗಳೂರಿನ ದೇವನಹಳ್ಳಿ ಸಮೀಪವಿರುವ ನಾಡಪ್ರಭು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ 5 ಗಂಟೆಗೆ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿದ್ದಾರೆ.

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಲು ಹೊರಟಿರುವ ಕೃಷಿ ಮಸೂದೆಗಳ ವಿರುದ್ಧ ರಾಜ್ಯಾದ್ಯಂತ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕರ್ನಾಟಕ ಬಂದ್ ಆರಂಭಿಸಿದ್ದಾರೆ. ಇಂದು ಮುಂಜಾನೆ 7 ಗಂಟೆಯಿಂದಲೇ ಬೀದಿಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತರ ಹೋರಾಟಕ್ಕೆ ಕಾರ್ಮಿಕ, ಪ್ರಗತಿಪರ, ಕನ್ನಡಪರ, ಯುವ, ವಿದ್ಯಾರ್ಥಿ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿ ಹೋರಾಟಕ್ಕೆ ಧುಮುಕಿವೆ.

ಬೆಂಗಳೂರಿನ ಟೌನ್ ಹಾಲ್ ಎದುರು ಭಾರೀ ಹೋರಾಟ ಆರಂಭವಾಗಿದ್ದು, ರೈತರು, ವಿದ್ಯಾರ್ಥಿಗಳು, ಕನ್ನಡಪರ ಸಂಘಟನೆಗಳು ಜಮಾವಣೆಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಮುಗಿಲು ಮುಟ್ಟಿವೆ. ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬೀದಿಯಲ್ಲೇ ಮಲಗಿ, ಉರುಳುಸೇವೆ ಮಾಡುವ ಮಾಡುವ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ. ಬಡಗಲಪುರ ನಾಗೇಂದ್ರ, ಸರೋವರ್ ಬೆಂಕಿಕೆರೆ, ಹರೀಶ್ ಕುಮಾರ್ ಬಿ ಮುಂತಾದವರು ನೇತೃತ್ವ ವಹಿಸಿದ್ದಾರೆ.

ಇಂದು ಮುಂಜಾನೆ 4 ಗಂಟೆಗೆ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಬಂದ ಕರ್ನಾಟಕ ರಣಧೀರ ಪಡೆ ಕಾರ್ಯಕರ್ತರು ಬಸ್‌ಗಳನ್ನು ತಡೆದು ಬಂದ್ ಆರಂಭಿಸಿದರು. 50 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಬಸ್‌ನಲ್ಲಿ ಅವರನ್ನು ಕರೆದೊಯ್ಯುತ್ತಿರವಾಗ ಮತ್ತಷ್ಟು ಕನ್ನಡಪರ ಸಂಘಟನೆ ಕಾರ್ಯಕರ್ತರು ಬಂದು ಅದೇ ಬಸ್‌ ತಡೆದು ಪ್ರತಿಭಟನೆ ತೀವ್ರಗೊಳಿಸಿದರು.

ಆರಂಭವಾಯ್ತು ಕರ್ನಾಟಕ ಬಂದ್, ರೈತರ ಗುಡುಗು… ಟೌನ್ ಹಾಲ್ ಬೆಂಗಳೂರು

Posted by Naanu Gauri on Sunday, September 27, 2020

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಪದಾಧಿಕಾರಿಗಳು ಬೆಂಗಳೂರಿನ ದೇವನಹಳ್ಳಿ ಸಮೀಪವಿರುವ ನಾಡಪ್ರಭು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ 5 ಗಂಟೆಗೆ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿದ್ದಾರೆ.

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದ ಎದುರು ಜಮಾಯಿಸಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬಂದ್‌ಗೆ ಚಾಲನೆ ನೀಡಿ ಪ್ರತಿಭಟನೆ ದಾಖಲಿಸಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್, ಟಿ.ಎ ನಾರಾಯಣಗೌಡ ಪ್ರತಿಭಟನೆಯಲ್ಲಿದ್ದರು.

ಇಂದು ಮುಂಜಾನೆಯೇ ನಾಯಂಡನಹಳ್ಳಿ ಬಳಿ ಪ್ರತಿಭಟನೆ ನಡೆಸಿದ ರೈತರು ಮತ್ತು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದ್ದಾರೆ. ಹೋರಾಟ ಹತ್ತಿಕ್ಕುವ ಪೊಲೀಸರ್ ವರ್ತನೆಗೆ ರೈತರು ಕಿಡಿಕಾರಿದ್ದಾರೆ.

ಹೋರಾಟನಿರತ ಕಾರ್ಯಕರ್ತರನ್ನು ಸ್ವಲ್ಪವೂ ಮಾನವೀಯತೆಯಿಲ್ಲದೇ ಥಳಿಸಿದ ಪೋಲೀಸರು..

Posted by Karnataka janashakthi ಕರ್ನಾಟಕ ಜನಶಕ್ತಿ on Sunday, September 27, 2020

ಸಿಂಧನೂರಿನಲ್ಲಿ ಇಂದು ಬೆಳಿಗ್ಗೆಯೇ ಪ್ರತಿಭಟನೆ ಆರಂಭವಾಗಿದ್ದು, ಹೋರಾಟ ತೀವ್ರಗೊಂಡಿದೆ.

ದೇಶಾದ್ಯಂತ ರೈತರು ಪ್ರತಿಭಟಿಸುತ್ತಿರುವುದೇಕೆ? ವಿಡಿಯೋ ನೋಡಿ.


ಇದನ್ನೂ ಓದಿ: Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ : ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಕೇಂದ್ರ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪಶ್ಚಿಮ ಬಂಗಾಳ ಭೇಟಿಗೆ ಸಂಬಂಧಿಸಿದಂತೆ ರಾಜ್ಯದ ಟಿಎಂಸಿ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ನಡುವೆ ರಾಜಕೀಯ ಕಿತ್ತಾಟ ತೀವ್ರಗೊಂಡಂತೆ ಗೋಚರಿಸುತ್ತಿದೆ. ರಾಷ್ಟ್ರಪತಿ ಭೇಟಿಯ ವೇಳೆ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಒಂದು ವಾರದಲ್ಲಿ ಗಲ್ಫ್ ದೇಶಗಳಿಂದ 52,000 ಕ್ಕೂ ಹೆಚ್ಚು ಭಾರತೀಯರು ಮರಳಿದ್ದಾರೆ: ವಿದೇಶಾಂಗ ಸಚಿವಾಲಯ

ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯನ್ನು ಸರ್ಕಾರ ಮೇಲ್ವಿಚಾರಣೆ ಮಾಡುತ್ತಿರುವುದರಿಂದ ಮಾರ್ಚ್ 1 ರಿಂದ 7 ರವರೆಗೆ ಗಲ್ಫ್ ಪ್ರದೇಶದಿಂದ 52,000 ಕ್ಕೂ ಹೆಚ್ಚು ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

‘ನೀವು ಅಮೆರಿಕನ್ನರನ್ನು ಕೊಂದರೆ ನಾವು, ನಿಮ್ಮನ್ನು ಬೇಟೆಯಾಡುತ್ತೇವೆ’: ಅಮೆರಿಕ ಬೆದರಿಕೆ 

ವಾಷಿಂಗ್ಟನ್: "ನೀವು ಅಮೆರಿಕನ್ನರನ್ನು ಕೊಂದರೆ, ನಾವು ನಿಮ್ಮನ್ನು ಬೇಟೆಯಾಡುತ್ತೇವೆ" ಎಂದು ಯುದ್ಧ ಕಾರ್ಯದರ್ಶಿ ಪೀಟ್ ಹೆಗ್ಸೆತ್ ರೀಡ್ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದಾರೆ.  ಅಮೆರಿಕ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಯಾವುದೇ ದೇಶ...

ಬಳ್ಳಾರಿ | ವಸತಿ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ದಾಳಿ : ಓರ್ವ ಸಾವು, 8 ಜನರಿಗೆ ಗಾಯ

ಬಳ್ಳಾರಿ ನಗರದ 'ಗುರುಕುಲ ವಸತಿ ಶಾಲೆ'ಯಲ್ಲಿ ಶನಿವಾರ (ಮಾ.7) ರಾತ್ರಿ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಗಳ ಮೇಲೆ ರಾಡ್, ಸ್ಕ್ರೂ ಡ್ರೈವರ್‌ನಿಂದ ದಾಳಿ ನಡೆಸಿದ್ದು, ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಎಂಟು ಜನರು ಗಾಯಗೊಂಡಿದ್ದಾರೆ...

ಗೋವುಗಳ ಕಳ್ಳಸಾಗಣೆ ಆರೋಪ: ಹಣ್ಣು-ತರಕಾರಿ ಸಾಗಿಸುತ್ತಿದ್ದ 28 ವರ್ಷದ ಮುಸ್ಲಿಂ ಚಾಲಕನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಹಿಂದುತ್ವ ಗುಂಪು

ಭಿವಾಡಿ: ರಾಜಸ್ಥಾನದ ಭಿವಾಡಿ ಪ್ರದೇಶದಲ್ಲಿ ಮಾರ್ಚ್ 2 ರ ಮುಂಜಾನೆ 28 ವರ್ಷದ ಆಮಿರ್ ಎಂಬ ವ್ಯಕ್ತಿಯನ್ನು ಗೋರಕ್ಷಕರು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ರಮವಾಗಿ ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆಂದು ಶಂಕಿಸಿ ಬಜರಂಗದಳದ ಸದಸ್ಯರು...

ನೇಪಾಳ ಚುನಾವಣೆ : ಪ್ರಚಂಡ ಗೆಲುವಿನತ್ತ ಆರ್‌ಎಸ್‌ಪಿ; ಬೆಂಗಳೂರಿನಲ್ಲಿ ಪದವಿ ಪಡೆದಿದ್ದ ಬಲೇಂದ್ರ ಶಾಗೆ ಪ್ರಧಾನಿ ಪಟ್ಟ?

'ಜೆನ್‌ ಝೀ ದಂಗೆ'ಯ ಬಳಿಕ ನಡೆದ ನೇಪಾಳದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಯುವ ನಾಯಕ ಬಲೇಂದ್ರ ಶಾ ನೇತೃತ್ವದ ರಾಷ್ಟ್ರೀಯ ಸ್ವತಂತ್ರ ಪಕ್ಷ (ಆರ್‌ಎಸ್‌ಪಿ) ಅಭೂತಪೂರ್ವ ಗೆಲುವಿನತ್ತ ಮುನ್ನುಗ್ಗುತ್ತಿದೆ.  ಕಠ್ಮಂಡುವಿನ ಮಾಜಿ ಮೇಯರ್ ಮತ್ತು ಮಾಜಿ...

‘ರಾಷ್ಟ್ರಪತಿ ಮುಂದಿಟ್ಟುಕೊಂಡು ಬಿಜೆಪಿಯಿಂದ ರಾಜಕೀಯ’ : ದ್ರೌಪದಿ ಮುರ್ಮು ಆರೋಪಗಳಿಗೆ ಮಮತಾ ಬ್ಯಾನರ್ಜಿ ತಿರುಗೇಟು

'ಅಂತಾರಾಷ್ಟ್ರೀಯ ಸಂತಾಲ್' ಸಮ್ಮೇಳನದ ಸ್ಥಳ ಬದಲಾವಣೆ, ಶಿಷ್ಟಾಚಾರ ಉಲ್ಲಂಘನೆ ಸೇರಿದಂತೆ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿರುವ ಆರೋಪಗಳಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು ಕೊಟ್ಟಿದ್ದಾರೆ. ಪಶ್ಚಿಮ...

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...