Homeಚಳವಳಿಕೃಷಿ ಮಸೂದೆಗಳ ವಿರುದ್ಧ ಆಕ್ರೋಶ: ರಾಜ್ಯದ್ಯಂತ ಕರ್ನಾಟಕ ಬಂದ್ ಆರಂಭ - ವಿಡಿಯೋ ನೋಡಿ

ಕೃಷಿ ಮಸೂದೆಗಳ ವಿರುದ್ಧ ಆಕ್ರೋಶ: ರಾಜ್ಯದ್ಯಂತ ಕರ್ನಾಟಕ ಬಂದ್ ಆರಂಭ – ವಿಡಿಯೋ ನೋಡಿ

ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಪದಾಧಿಕಾರಿಗಳು ಬೆಂಗಳೂರಿನ ದೇವನಹಳ್ಳಿ ಸಮೀಪವಿರುವ ನಾಡಪ್ರಭು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ 5 ಗಂಟೆಗೆ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿದ್ದಾರೆ.

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಲು ಹೊರಟಿರುವ ಕೃಷಿ ಮಸೂದೆಗಳ ವಿರುದ್ಧ ರಾಜ್ಯಾದ್ಯಂತ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕರ್ನಾಟಕ ಬಂದ್ ಆರಂಭಿಸಿದ್ದಾರೆ. ಇಂದು ಮುಂಜಾನೆ 7 ಗಂಟೆಯಿಂದಲೇ ಬೀದಿಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತರ ಹೋರಾಟಕ್ಕೆ ಕಾರ್ಮಿಕ, ಪ್ರಗತಿಪರ, ಕನ್ನಡಪರ, ಯುವ, ವಿದ್ಯಾರ್ಥಿ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿ ಹೋರಾಟಕ್ಕೆ ಧುಮುಕಿವೆ.

ಬೆಂಗಳೂರಿನ ಟೌನ್ ಹಾಲ್ ಎದುರು ಭಾರೀ ಹೋರಾಟ ಆರಂಭವಾಗಿದ್ದು, ರೈತರು, ವಿದ್ಯಾರ್ಥಿಗಳು, ಕನ್ನಡಪರ ಸಂಘಟನೆಗಳು ಜಮಾವಣೆಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಮುಗಿಲು ಮುಟ್ಟಿವೆ. ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬೀದಿಯಲ್ಲೇ ಮಲಗಿ, ಉರುಳುಸೇವೆ ಮಾಡುವ ಮಾಡುವ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ. ಬಡಗಲಪುರ ನಾಗೇಂದ್ರ, ಸರೋವರ್ ಬೆಂಕಿಕೆರೆ, ಹರೀಶ್ ಕುಮಾರ್ ಬಿ ಮುಂತಾದವರು ನೇತೃತ್ವ ವಹಿಸಿದ್ದಾರೆ.

ಇಂದು ಮುಂಜಾನೆ 4 ಗಂಟೆಗೆ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಬಂದ ಕರ್ನಾಟಕ ರಣಧೀರ ಪಡೆ ಕಾರ್ಯಕರ್ತರು ಬಸ್‌ಗಳನ್ನು ತಡೆದು ಬಂದ್ ಆರಂಭಿಸಿದರು. 50 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಬಸ್‌ನಲ್ಲಿ ಅವರನ್ನು ಕರೆದೊಯ್ಯುತ್ತಿರವಾಗ ಮತ್ತಷ್ಟು ಕನ್ನಡಪರ ಸಂಘಟನೆ ಕಾರ್ಯಕರ್ತರು ಬಂದು ಅದೇ ಬಸ್‌ ತಡೆದು ಪ್ರತಿಭಟನೆ ತೀವ್ರಗೊಳಿಸಿದರು.

ಆರಂಭವಾಯ್ತು ಕರ್ನಾಟಕ ಬಂದ್, ರೈತರ ಗುಡುಗು… ಟೌನ್ ಹಾಲ್ ಬೆಂಗಳೂರು

Posted by Naanu Gauri on Sunday, September 27, 2020

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಪದಾಧಿಕಾರಿಗಳು ಬೆಂಗಳೂರಿನ ದೇವನಹಳ್ಳಿ ಸಮೀಪವಿರುವ ನಾಡಪ್ರಭು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ 5 ಗಂಟೆಗೆ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿದ್ದಾರೆ.

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದ ಎದುರು ಜಮಾಯಿಸಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬಂದ್‌ಗೆ ಚಾಲನೆ ನೀಡಿ ಪ್ರತಿಭಟನೆ ದಾಖಲಿಸಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್, ಟಿ.ಎ ನಾರಾಯಣಗೌಡ ಪ್ರತಿಭಟನೆಯಲ್ಲಿದ್ದರು.

ಇಂದು ಮುಂಜಾನೆಯೇ ನಾಯಂಡನಹಳ್ಳಿ ಬಳಿ ಪ್ರತಿಭಟನೆ ನಡೆಸಿದ ರೈತರು ಮತ್ತು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದ್ದಾರೆ. ಹೋರಾಟ ಹತ್ತಿಕ್ಕುವ ಪೊಲೀಸರ್ ವರ್ತನೆಗೆ ರೈತರು ಕಿಡಿಕಾರಿದ್ದಾರೆ.

ಹೋರಾಟನಿರತ ಕಾರ್ಯಕರ್ತರನ್ನು ಸ್ವಲ್ಪವೂ ಮಾನವೀಯತೆಯಿಲ್ಲದೇ ಥಳಿಸಿದ ಪೋಲೀಸರು..

Posted by Karnataka janashakthi ಕರ್ನಾಟಕ ಜನಶಕ್ತಿ on Sunday, September 27, 2020

ಸಿಂಧನೂರಿನಲ್ಲಿ ಇಂದು ಬೆಳಿಗ್ಗೆಯೇ ಪ್ರತಿಭಟನೆ ಆರಂಭವಾಗಿದ್ದು, ಹೋರಾಟ ತೀವ್ರಗೊಂಡಿದೆ.

ದೇಶಾದ್ಯಂತ ರೈತರು ಪ್ರತಿಭಟಿಸುತ್ತಿರುವುದೇಕೆ? ವಿಡಿಯೋ ನೋಡಿ.


ಇದನ್ನೂ ಓದಿ: Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...