Homeಚಳವಳಿಕೃಷಿ ಮಸೂದೆಗಳ ವಿರುದ್ಧ ಆಕ್ರೋಶ: ರಾಜ್ಯದ್ಯಂತ ಕರ್ನಾಟಕ ಬಂದ್ ಆರಂಭ - ವಿಡಿಯೋ ನೋಡಿ

ಕೃಷಿ ಮಸೂದೆಗಳ ವಿರುದ್ಧ ಆಕ್ರೋಶ: ರಾಜ್ಯದ್ಯಂತ ಕರ್ನಾಟಕ ಬಂದ್ ಆರಂಭ – ವಿಡಿಯೋ ನೋಡಿ

ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಪದಾಧಿಕಾರಿಗಳು ಬೆಂಗಳೂರಿನ ದೇವನಹಳ್ಳಿ ಸಮೀಪವಿರುವ ನಾಡಪ್ರಭು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ 5 ಗಂಟೆಗೆ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿದ್ದಾರೆ.

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಲು ಹೊರಟಿರುವ ಕೃಷಿ ಮಸೂದೆಗಳ ವಿರುದ್ಧ ರಾಜ್ಯಾದ್ಯಂತ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕರ್ನಾಟಕ ಬಂದ್ ಆರಂಭಿಸಿದ್ದಾರೆ. ಇಂದು ಮುಂಜಾನೆ 7 ಗಂಟೆಯಿಂದಲೇ ಬೀದಿಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತರ ಹೋರಾಟಕ್ಕೆ ಕಾರ್ಮಿಕ, ಪ್ರಗತಿಪರ, ಕನ್ನಡಪರ, ಯುವ, ವಿದ್ಯಾರ್ಥಿ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿ ಹೋರಾಟಕ್ಕೆ ಧುಮುಕಿವೆ.

ಬೆಂಗಳೂರಿನ ಟೌನ್ ಹಾಲ್ ಎದುರು ಭಾರೀ ಹೋರಾಟ ಆರಂಭವಾಗಿದ್ದು, ರೈತರು, ವಿದ್ಯಾರ್ಥಿಗಳು, ಕನ್ನಡಪರ ಸಂಘಟನೆಗಳು ಜಮಾವಣೆಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಮುಗಿಲು ಮುಟ್ಟಿವೆ. ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬೀದಿಯಲ್ಲೇ ಮಲಗಿ, ಉರುಳುಸೇವೆ ಮಾಡುವ ಮಾಡುವ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ. ಬಡಗಲಪುರ ನಾಗೇಂದ್ರ, ಸರೋವರ್ ಬೆಂಕಿಕೆರೆ, ಹರೀಶ್ ಕುಮಾರ್ ಬಿ ಮುಂತಾದವರು ನೇತೃತ್ವ ವಹಿಸಿದ್ದಾರೆ.

ಇಂದು ಮುಂಜಾನೆ 4 ಗಂಟೆಗೆ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಬಂದ ಕರ್ನಾಟಕ ರಣಧೀರ ಪಡೆ ಕಾರ್ಯಕರ್ತರು ಬಸ್‌ಗಳನ್ನು ತಡೆದು ಬಂದ್ ಆರಂಭಿಸಿದರು. 50 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಬಸ್‌ನಲ್ಲಿ ಅವರನ್ನು ಕರೆದೊಯ್ಯುತ್ತಿರವಾಗ ಮತ್ತಷ್ಟು ಕನ್ನಡಪರ ಸಂಘಟನೆ ಕಾರ್ಯಕರ್ತರು ಬಂದು ಅದೇ ಬಸ್‌ ತಡೆದು ಪ್ರತಿಭಟನೆ ತೀವ್ರಗೊಳಿಸಿದರು.

ಆರಂಭವಾಯ್ತು ಕರ್ನಾಟಕ ಬಂದ್, ರೈತರ ಗುಡುಗು… ಟೌನ್ ಹಾಲ್ ಬೆಂಗಳೂರು

Posted by Naanu Gauri on Sunday, September 27, 2020

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಪದಾಧಿಕಾರಿಗಳು ಬೆಂಗಳೂರಿನ ದೇವನಹಳ್ಳಿ ಸಮೀಪವಿರುವ ನಾಡಪ್ರಭು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ 5 ಗಂಟೆಗೆ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿದ್ದಾರೆ.

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದ ಎದುರು ಜಮಾಯಿಸಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬಂದ್‌ಗೆ ಚಾಲನೆ ನೀಡಿ ಪ್ರತಿಭಟನೆ ದಾಖಲಿಸಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್, ಟಿ.ಎ ನಾರಾಯಣಗೌಡ ಪ್ರತಿಭಟನೆಯಲ್ಲಿದ್ದರು.

ಇಂದು ಮುಂಜಾನೆಯೇ ನಾಯಂಡನಹಳ್ಳಿ ಬಳಿ ಪ್ರತಿಭಟನೆ ನಡೆಸಿದ ರೈತರು ಮತ್ತು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದ್ದಾರೆ. ಹೋರಾಟ ಹತ್ತಿಕ್ಕುವ ಪೊಲೀಸರ್ ವರ್ತನೆಗೆ ರೈತರು ಕಿಡಿಕಾರಿದ್ದಾರೆ.

ಹೋರಾಟನಿರತ ಕಾರ್ಯಕರ್ತರನ್ನು ಸ್ವಲ್ಪವೂ ಮಾನವೀಯತೆಯಿಲ್ಲದೇ ಥಳಿಸಿದ ಪೋಲೀಸರು..

Posted by Karnataka janashakthi ಕರ್ನಾಟಕ ಜನಶಕ್ತಿ on Sunday, September 27, 2020

ಸಿಂಧನೂರಿನಲ್ಲಿ ಇಂದು ಬೆಳಿಗ್ಗೆಯೇ ಪ್ರತಿಭಟನೆ ಆರಂಭವಾಗಿದ್ದು, ಹೋರಾಟ ತೀವ್ರಗೊಂಡಿದೆ.

ದೇಶಾದ್ಯಂತ ರೈತರು ಪ್ರತಿಭಟಿಸುತ್ತಿರುವುದೇಕೆ? ವಿಡಿಯೋ ನೋಡಿ.


ಇದನ್ನೂ ಓದಿ: Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗೇಂದ್ರ ರಾಜೀನಾಮೆ: ಬಡಿಗೆ ಕೊಟ್ಟು ಹೊಡೆಸಿಕೊಂಡಂತಾಯ್ತು ಕಾಂಗ್ರೆಸ್ ಪರಿಸ್ಥಿತಿ

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ದಕ್ಕಿದ 136 ಸ್ಥಾನಗಳ ಅಭೂತಪೂರ್ವ ಬಹುಮತಕ್ಕೆ ಪ್ರಮುಖ ಕಾರಣ '40% ಸರ್ಕಾರ' ಮತ್ತು 'ಪೇ ಸಿಎಂ' ಅಭಿಯಾನಗಳು. ಬಿಜೆಪಿಯ ಭ್ರಷ್ಟಾಚಾರವನ್ನು ಅಸ್ತ್ರವಾಗಿಸಿಕೊಂಡು ಆಡಳಿತ ಹಿಡಿದ ಕಾಂಗ್ರೆಸ್‌ಗೆ,...

SIR ಕುತಂತ್ರ: 43.81 ಲಕ್ಷ ಜನರ ಮನೆ ಬಾಗಿಲಿಗೆ ನೋಟಿಸ್‌ ಬಿಸಿ, ಪೌರತ್ವ ಸಾಬೀತುಪಡಿಸಲು ನಾಗರಿಕರು ಅಲೆಯಬೇಕೇ ?

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಇದೀಗ ಲಕ್ಷಾಂತರ ನಾಗರಿಕರನ್ನು ಅತಂತ್ರ ಸ್ಥಿತಿಗೆ ತಳ್ಳಿದೆ.ಚುನಾವಣಾ ಆಯೋಗವು ರಾಜ್ಯದಲ್ಲಿದ್ದ ಒಟ್ಟು 5.54 ಕೋಟಿ ಮತದಾರರ ಪೈಕಿ ಸುಮಾರು 1.08...

ದಿಮಾಗಿ ನಕ್ಸಲ್: ರೈತ, ವಿದ್ಯಾರ್ಥಿ ಹೋರಾಟಗಳೂ ದೇಶದ್ರೋಹವೇ? RSS ಪತ್ರಿಕೆಯ ವಿವಾದಾತ್ಮಕ ಪ್ರತಿಪಾದನೆ

ಶಿಕ್ಷಣ, ಆರೋಗ್ಯ ಮತ್ತು ಒಟ್ಟಾರೆ ಅಭಿವೃದ್ಧಿ ಮಾದರಿಗೆ ತೀವ್ರ ಸ್ವರೂಪದ ಸುಧಾರಣೆಗಳ ಅಗತ್ಯವಿದೆ. ಆದರೆ ಈ ಸಮಸ್ಯೆಗಳು ಕಳೆದ ಹನ್ನೆರಡು ವರ್ಷಗಳಲ್ಲಿ ಹುಟ್ಟಿಕೊಂಡಿದ್ದಲ್ಲ ಅಥವಾ ಬಿಜೆಪಿ ಆಡಳಿತವಿರುವ ರಾಜ್ಯಗಳಿಗಷ್ಟೇ ಸೀಮಿತವಾಗಿಲ್ಲ. ಹಿಂದುತ್ವವನ್ನು ದಮನಕಾರಿ...

ಅಹಮದಾಬಾದ್‌ನಲ್ಲಿ ಪುಸ್ತಕ ಓದುಗರ ಮೇಲೆ ಭಜರಂಗದಳ ದೌರ್ಜನ್ಯ: ಮಲಾಲಾ, ಆನ್ ಫ್ರಾಂಕ್ ಕೃತಿಗಳಿಗೆ ವಿರೋಧಿಸಿ ಬೆದರಿಕೆ!

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಾಹಿತ್ಯಾಭಿಮಾನಿಗಳ ಮೇಲೆ ಭಜರಂಗದಳ ಕಾರ್ಯಕರ್ತರು ಭೀಕರ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನಗರದ ಸಾರ್ವಜನಿಕ ಉದ್ಯಾನವನವೊಂದರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸಫ್‌ಜೈ ಹಾಗೂ ವಿಶ್ವಪ್ರಸಿದ್ಧ ಲೇಖಕಿ ಆನ್...

ಉಮರ್ ಖಾಲಿದ್ – ಶಾರ್ಜೀಲ್ ಇಮಾಮ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

2020ರ ಈಶಾನ್ಯ ದೆಹಲಿ ಕೋಮು ಗಲಭೆಯ ಹಿಂದಿನ ಪ್ರಮುಖ ಸಂಚುಕೋರರು ಎಂದು ಆರೋಪಿಸಿರುವ ದೆಹಲಿ ಪೊಲೀಸರು, ಕಾರಾಗೃಹದಲ್ಲಿರುವ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ದೆಹಲಿ...

‘ಆರ್‌ಎಸ್‌ಎಸ್-ಬಿಜೆಪಿಯ ರಕ್ತನಾಳಗಳಲ್ಲಿ ತಾರತಮ್ಯ ಹರಿಯುತ್ತಿದೆ’: ಖರ್ಗೆ ರ್ಯಾಲಿ ಸ್ಥಳದ ‘ಶುದ್ಧೀಕರಣ’ ಸಮರ್ಥಿಸಿಕೊಂಡ ಉತ್ತರಾಖಂಡ ಬಿಜೆಪಿ ರಾಜ್ಯಾಧ್ಯಕ್ಷನ ವಿರುದ್ಧ ಕಾಂಗ್ರೆಸ್ ಕಿಡಿ

ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆಯ ನಂತರ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಸ್ಥಳೀಯ ‘ಶುದ್ಧೀಕರಣ’ ಸಮಾರಂಭದ ಸುತ್ತಲಿನ ರಾಜಕೀಯ ವಿವಾದವು ತೀವ್ರ ಸ್ವರೂಪ...

ಯುಜಿಸಿಇಟಿ ಸೀಟು ರದ್ದುಗೊಳಿಸಲು ರೂ.5,000 ಶುಲ್ಕ; ಕೆಇಎ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಯುಜಿಸಿಇಟಿ 2026ರ ಎರಡನೇ ಹಂತದ ಕೌನ್ಸಿಲಿಂಗ್‌ನಲ್ಲಿ ಹಂಚಿಕೆಯಾದ ಸೀಟುಗಳನ್ನು ರದ್ದುಗೊಳಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ರೂ.5,000 ದಂಡ ವಿಧಿಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನಿರ್ಧಾರವನ್ನು ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಮಲ್ಲೇಶ್ವರದಲ್ಲಿರುವ ಕೆಇಎ...

162 ವರ್ಷಗಳ ಇತಿಹಾಸದಲ್ಲೇ ಪ್ರಥಮ: ಬಾಂಬೆ ಹೈಕೋರ್ಟ್ ವಕೀಲರ ಸಂಘಕ್ಕೆ ಮಹಿಳಾ ಅಧ್ಯಕ್ಷೆ! 

ಮುಂಬೈ: ಭಾರತೀಯ ನ್ಯಾಯಾಂಗ ರಂಗದ ಇತಿಹಾಸದಲ್ಲಿ ಅತ್ಯಂತ ಮಹತ್ವದ ಮತ್ತು ಕ್ರಾಂತಿಕಾರಿ ನಿರ್ಧಾರವೊಂದನ್ನು ಬಾಂಬೆ ಹೈಕೋರ್ಟ್‌ನ ಪ್ರತಿಷ್ಠಿತ ವಕೀಲರ ಸಂಘಟನೆಯಾದ 'ಅಸೋಸಿಯೇಷನ್‌ ಆಫ್‌ ಅಡ್ವೊಕೇಟ್ಸ್‌ ಆಫ್‌ ವೆಸ್ಟರ್ನ್ ಇಂಡಿಯಾ' (AAWI) ಕೈಗೊಂಡಿದೆ ಎಂದು...

ಫ್ರೀಡಂ ಪಾರ್ಕ್‌: ಧರಣಿಗೆ 1 ಲಕ್ಷ ರೂ. ಶುಲ್ಕ? ಜಿಬಿಎ ನಡೆಗೆ ಹೋರಾಟಗಾರರ ಆಕ್ರೋಶ

ಬೆಂಗಳೂರಿನ ಐತಿಹಾಸಿಕ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಾಗೂ ಧರಣಿ ನಡೆಸಲು ದಿನಕ್ಕೆ 1 ಲಕ್ಷ ರೂ. ಶುಲ್ಕ ಮತ್ತು 10,000 ರೂ. ಮುಂಗಡ ಠೇವಣಿ ವಿಧಿಸಲಾಗುತ್ತಿದೆ ಎಂಬ ಸುದ್ದಿ ಸಾರ್ವಜನಿಕ ಹಾಗೂ ಹೋರಾಟಗಾರರ...

ಅಧಿಕಾರದಲ್ಲಿರುವವರ ವಿರುದ್ಧ ಮಾತನಾಡುವ ಭಯವನ್ನು ನೀಟ್ ಚಳವಳಿ ಹೋಗಲಾಡಿಸಿದೆ: ನೇಹಾ ಬೋರಾ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ 'ಜೆನ್ ಜಿ' ಚಳವಳಿಯು ಜನರಲ್ಲಿದ್ದ ಭಯವನ್ನು ಹೋಗಲಾಡಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ಆರ್‌ಎಸ್‌ಎಸ್‌ನವರು ವಿದ್ಯಾರ್ಥಿ ಮತ್ತು ಯುವಜನರನ್ನು ತಲುಪುವಂತೆ ಮಾಡಿದೆ ಎಂದು ಆಲ್...