Homeಚಳವಳಿಕೃಷಿ ಮಸೂದೆಗಳ ವಿರುದ್ಧ ಆಕ್ರೋಶ: ರಾಜ್ಯದ್ಯಂತ ಕರ್ನಾಟಕ ಬಂದ್ ಆರಂಭ - ವಿಡಿಯೋ ನೋಡಿ

ಕೃಷಿ ಮಸೂದೆಗಳ ವಿರುದ್ಧ ಆಕ್ರೋಶ: ರಾಜ್ಯದ್ಯಂತ ಕರ್ನಾಟಕ ಬಂದ್ ಆರಂಭ – ವಿಡಿಯೋ ನೋಡಿ

ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಪದಾಧಿಕಾರಿಗಳು ಬೆಂಗಳೂರಿನ ದೇವನಹಳ್ಳಿ ಸಮೀಪವಿರುವ ನಾಡಪ್ರಭು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ 5 ಗಂಟೆಗೆ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿದ್ದಾರೆ.

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಲು ಹೊರಟಿರುವ ಕೃಷಿ ಮಸೂದೆಗಳ ವಿರುದ್ಧ ರಾಜ್ಯಾದ್ಯಂತ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕರ್ನಾಟಕ ಬಂದ್ ಆರಂಭಿಸಿದ್ದಾರೆ. ಇಂದು ಮುಂಜಾನೆ 7 ಗಂಟೆಯಿಂದಲೇ ಬೀದಿಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತರ ಹೋರಾಟಕ್ಕೆ ಕಾರ್ಮಿಕ, ಪ್ರಗತಿಪರ, ಕನ್ನಡಪರ, ಯುವ, ವಿದ್ಯಾರ್ಥಿ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿ ಹೋರಾಟಕ್ಕೆ ಧುಮುಕಿವೆ.

ಬೆಂಗಳೂರಿನ ಟೌನ್ ಹಾಲ್ ಎದುರು ಭಾರೀ ಹೋರಾಟ ಆರಂಭವಾಗಿದ್ದು, ರೈತರು, ವಿದ್ಯಾರ್ಥಿಗಳು, ಕನ್ನಡಪರ ಸಂಘಟನೆಗಳು ಜಮಾವಣೆಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಮುಗಿಲು ಮುಟ್ಟಿವೆ. ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬೀದಿಯಲ್ಲೇ ಮಲಗಿ, ಉರುಳುಸೇವೆ ಮಾಡುವ ಮಾಡುವ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ. ಬಡಗಲಪುರ ನಾಗೇಂದ್ರ, ಸರೋವರ್ ಬೆಂಕಿಕೆರೆ, ಹರೀಶ್ ಕುಮಾರ್ ಬಿ ಮುಂತಾದವರು ನೇತೃತ್ವ ವಹಿಸಿದ್ದಾರೆ.

ಇಂದು ಮುಂಜಾನೆ 4 ಗಂಟೆಗೆ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಬಂದ ಕರ್ನಾಟಕ ರಣಧೀರ ಪಡೆ ಕಾರ್ಯಕರ್ತರು ಬಸ್‌ಗಳನ್ನು ತಡೆದು ಬಂದ್ ಆರಂಭಿಸಿದರು. 50 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಬಸ್‌ನಲ್ಲಿ ಅವರನ್ನು ಕರೆದೊಯ್ಯುತ್ತಿರವಾಗ ಮತ್ತಷ್ಟು ಕನ್ನಡಪರ ಸಂಘಟನೆ ಕಾರ್ಯಕರ್ತರು ಬಂದು ಅದೇ ಬಸ್‌ ತಡೆದು ಪ್ರತಿಭಟನೆ ತೀವ್ರಗೊಳಿಸಿದರು.

ಆರಂಭವಾಯ್ತು ಕರ್ನಾಟಕ ಬಂದ್, ರೈತರ ಗುಡುಗು… ಟೌನ್ ಹಾಲ್ ಬೆಂಗಳೂರು

Posted by Naanu Gauri on Sunday, September 27, 2020

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಪದಾಧಿಕಾರಿಗಳು ಬೆಂಗಳೂರಿನ ದೇವನಹಳ್ಳಿ ಸಮೀಪವಿರುವ ನಾಡಪ್ರಭು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ 5 ಗಂಟೆಗೆ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿದ್ದಾರೆ.

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದ ಎದುರು ಜಮಾಯಿಸಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬಂದ್‌ಗೆ ಚಾಲನೆ ನೀಡಿ ಪ್ರತಿಭಟನೆ ದಾಖಲಿಸಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್, ಟಿ.ಎ ನಾರಾಯಣಗೌಡ ಪ್ರತಿಭಟನೆಯಲ್ಲಿದ್ದರು.

ಇಂದು ಮುಂಜಾನೆಯೇ ನಾಯಂಡನಹಳ್ಳಿ ಬಳಿ ಪ್ರತಿಭಟನೆ ನಡೆಸಿದ ರೈತರು ಮತ್ತು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದ್ದಾರೆ. ಹೋರಾಟ ಹತ್ತಿಕ್ಕುವ ಪೊಲೀಸರ್ ವರ್ತನೆಗೆ ರೈತರು ಕಿಡಿಕಾರಿದ್ದಾರೆ.

ಹೋರಾಟನಿರತ ಕಾರ್ಯಕರ್ತರನ್ನು ಸ್ವಲ್ಪವೂ ಮಾನವೀಯತೆಯಿಲ್ಲದೇ ಥಳಿಸಿದ ಪೋಲೀಸರು..

Posted by Karnataka janashakthi ಕರ್ನಾಟಕ ಜನಶಕ್ತಿ on Sunday, September 27, 2020

ಸಿಂಧನೂರಿನಲ್ಲಿ ಇಂದು ಬೆಳಿಗ್ಗೆಯೇ ಪ್ರತಿಭಟನೆ ಆರಂಭವಾಗಿದ್ದು, ಹೋರಾಟ ತೀವ್ರಗೊಂಡಿದೆ.

ದೇಶಾದ್ಯಂತ ರೈತರು ಪ್ರತಿಭಟಿಸುತ್ತಿರುವುದೇಕೆ? ವಿಡಿಯೋ ನೋಡಿ.


ಇದನ್ನೂ ಓದಿ: Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...