Homeಚಳವಳಿಕೃಷಿ ಮಸೂದೆಗಳ ವಿರುದ್ಧ ಆಕ್ರೋಶ: ರಾಜ್ಯದ್ಯಂತ ಕರ್ನಾಟಕ ಬಂದ್ ಆರಂಭ - ವಿಡಿಯೋ ನೋಡಿ

ಕೃಷಿ ಮಸೂದೆಗಳ ವಿರುದ್ಧ ಆಕ್ರೋಶ: ರಾಜ್ಯದ್ಯಂತ ಕರ್ನಾಟಕ ಬಂದ್ ಆರಂಭ – ವಿಡಿಯೋ ನೋಡಿ

ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಪದಾಧಿಕಾರಿಗಳು ಬೆಂಗಳೂರಿನ ದೇವನಹಳ್ಳಿ ಸಮೀಪವಿರುವ ನಾಡಪ್ರಭು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ 5 ಗಂಟೆಗೆ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿದ್ದಾರೆ.

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಲು ಹೊರಟಿರುವ ಕೃಷಿ ಮಸೂದೆಗಳ ವಿರುದ್ಧ ರಾಜ್ಯಾದ್ಯಂತ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕರ್ನಾಟಕ ಬಂದ್ ಆರಂಭಿಸಿದ್ದಾರೆ. ಇಂದು ಮುಂಜಾನೆ 7 ಗಂಟೆಯಿಂದಲೇ ಬೀದಿಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತರ ಹೋರಾಟಕ್ಕೆ ಕಾರ್ಮಿಕ, ಪ್ರಗತಿಪರ, ಕನ್ನಡಪರ, ಯುವ, ವಿದ್ಯಾರ್ಥಿ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿ ಹೋರಾಟಕ್ಕೆ ಧುಮುಕಿವೆ.

ಬೆಂಗಳೂರಿನ ಟೌನ್ ಹಾಲ್ ಎದುರು ಭಾರೀ ಹೋರಾಟ ಆರಂಭವಾಗಿದ್ದು, ರೈತರು, ವಿದ್ಯಾರ್ಥಿಗಳು, ಕನ್ನಡಪರ ಸಂಘಟನೆಗಳು ಜಮಾವಣೆಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಮುಗಿಲು ಮುಟ್ಟಿವೆ. ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬೀದಿಯಲ್ಲೇ ಮಲಗಿ, ಉರುಳುಸೇವೆ ಮಾಡುವ ಮಾಡುವ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ. ಬಡಗಲಪುರ ನಾಗೇಂದ್ರ, ಸರೋವರ್ ಬೆಂಕಿಕೆರೆ, ಹರೀಶ್ ಕುಮಾರ್ ಬಿ ಮುಂತಾದವರು ನೇತೃತ್ವ ವಹಿಸಿದ್ದಾರೆ.

ಇಂದು ಮುಂಜಾನೆ 4 ಗಂಟೆಗೆ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಬಂದ ಕರ್ನಾಟಕ ರಣಧೀರ ಪಡೆ ಕಾರ್ಯಕರ್ತರು ಬಸ್‌ಗಳನ್ನು ತಡೆದು ಬಂದ್ ಆರಂಭಿಸಿದರು. 50 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಬಸ್‌ನಲ್ಲಿ ಅವರನ್ನು ಕರೆದೊಯ್ಯುತ್ತಿರವಾಗ ಮತ್ತಷ್ಟು ಕನ್ನಡಪರ ಸಂಘಟನೆ ಕಾರ್ಯಕರ್ತರು ಬಂದು ಅದೇ ಬಸ್‌ ತಡೆದು ಪ್ರತಿಭಟನೆ ತೀವ್ರಗೊಳಿಸಿದರು.

ಆರಂಭವಾಯ್ತು ಕರ್ನಾಟಕ ಬಂದ್, ರೈತರ ಗುಡುಗು… ಟೌನ್ ಹಾಲ್ ಬೆಂಗಳೂರು

Posted by Naanu Gauri on Sunday, September 27, 2020

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಪದಾಧಿಕಾರಿಗಳು ಬೆಂಗಳೂರಿನ ದೇವನಹಳ್ಳಿ ಸಮೀಪವಿರುವ ನಾಡಪ್ರಭು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ 5 ಗಂಟೆಗೆ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿದ್ದಾರೆ.

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದ ಎದುರು ಜಮಾಯಿಸಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬಂದ್‌ಗೆ ಚಾಲನೆ ನೀಡಿ ಪ್ರತಿಭಟನೆ ದಾಖಲಿಸಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್, ಟಿ.ಎ ನಾರಾಯಣಗೌಡ ಪ್ರತಿಭಟನೆಯಲ್ಲಿದ್ದರು.

ಇಂದು ಮುಂಜಾನೆಯೇ ನಾಯಂಡನಹಳ್ಳಿ ಬಳಿ ಪ್ರತಿಭಟನೆ ನಡೆಸಿದ ರೈತರು ಮತ್ತು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದ್ದಾರೆ. ಹೋರಾಟ ಹತ್ತಿಕ್ಕುವ ಪೊಲೀಸರ್ ವರ್ತನೆಗೆ ರೈತರು ಕಿಡಿಕಾರಿದ್ದಾರೆ.

ಹೋರಾಟನಿರತ ಕಾರ್ಯಕರ್ತರನ್ನು ಸ್ವಲ್ಪವೂ ಮಾನವೀಯತೆಯಿಲ್ಲದೇ ಥಳಿಸಿದ ಪೋಲೀಸರು..

Posted by Karnataka janashakthi ಕರ್ನಾಟಕ ಜನಶಕ್ತಿ on Sunday, September 27, 2020

ಸಿಂಧನೂರಿನಲ್ಲಿ ಇಂದು ಬೆಳಿಗ್ಗೆಯೇ ಪ್ರತಿಭಟನೆ ಆರಂಭವಾಗಿದ್ದು, ಹೋರಾಟ ತೀವ್ರಗೊಂಡಿದೆ.

ದೇಶಾದ್ಯಂತ ರೈತರು ಪ್ರತಿಭಟಿಸುತ್ತಿರುವುದೇಕೆ? ವಿಡಿಯೋ ನೋಡಿ.


ಇದನ್ನೂ ಓದಿ: Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...

85 ಕೋಟಿ ರೂ. ವಂಚನೆ ಪ್ರಕರಣ: ಲೋಧಾ ಡೆವಲಪರ್ಸ್‌ನ ಮಾಜಿ ನಿರ್ದೇಶಕರನ್ನು ಬಂಧಿಸಿದ ಇಡಿ

85 ಕೋಟಿ ರೂಪಾಯಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಮುಂಬೈ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆ ಲೋಧಾ ಡೆವಲಪರ್ಸ್‌ನ ಮಾಜಿ ನಿರ್ದೇಶಕ ರಾಜೇಂದ್ರ ಲೋಧಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ (Pe.13)...

ಹೆತ್ತವರ ಹತ್ಯೆ ಪ್ರಕರಣ: ಸ್ಕಿಜೋಫ್ರೇನಿಯಾ ಎಂಬ ಮನೋರೋಗದಿಂದ ಬಳಲುತ್ತಿದ್ದ ಬೆಂಗಳೂರು ಟೆಕ್ಕಿ ರೋಹನ್ ಚಂದ್ರ ಭಟ್ 

ಬೆಂಗಳೂರು: ಬುಧವಾರ ತನ್ನ ಹೆತ್ತವರನ್ನು ಇರಿದು ಕೊಂದ 33 ವರ್ಷದ ಅಮೆರಿಕದಿಂದ ಹಿಂದಿರುಗಿದ ಟೆಕ್ಕಿ ರೋಹನ್ ಚಂದ್ರ ಭಟ್, ವರ್ಷಗಳಿಂದ ಕೆಲಸವಿಲ್ಲದ ಕಾರಣ ಮಾನಸಿಕವಾಗಿ ಅಸ್ವಸ್ಥನಾಗಿದ್ದ ಅನ್ನುವುದು ದೃಢವಾಗಿದೆ.  ಬುಧವಾರ ಬೆಳಿಗ್ಗೆ 8.30 ರ...

ಬಿಕ್ಲುಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಬಂಧನ: ಇಂದು ಕೋರ್ಟ್‌ಗೆ ಹಾಜರು

ಬೆಂಗಳೂರು ನಗರ ಪೊಲೀಸ್‌ ವ್ಯಾಪ್ತಿಯ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲುಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್‌.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಆರಿ ಹಿನ್ನಡೆಯಾಗಿದೆ. ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್‌ನಲ್ಲಿ...

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ 'ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ' ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ...