Homeಚಳವಳಿಕೃಷಿ ಮಸೂದೆಗಳ ವಿರುದ್ಧ ಆಕ್ರೋಶ: ರಾಜ್ಯದ್ಯಂತ ಕರ್ನಾಟಕ ಬಂದ್ ಆರಂಭ - ವಿಡಿಯೋ ನೋಡಿ

ಕೃಷಿ ಮಸೂದೆಗಳ ವಿರುದ್ಧ ಆಕ್ರೋಶ: ರಾಜ್ಯದ್ಯಂತ ಕರ್ನಾಟಕ ಬಂದ್ ಆರಂಭ – ವಿಡಿಯೋ ನೋಡಿ

ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಪದಾಧಿಕಾರಿಗಳು ಬೆಂಗಳೂರಿನ ದೇವನಹಳ್ಳಿ ಸಮೀಪವಿರುವ ನಾಡಪ್ರಭು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ 5 ಗಂಟೆಗೆ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿದ್ದಾರೆ.

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಲು ಹೊರಟಿರುವ ಕೃಷಿ ಮಸೂದೆಗಳ ವಿರುದ್ಧ ರಾಜ್ಯಾದ್ಯಂತ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕರ್ನಾಟಕ ಬಂದ್ ಆರಂಭಿಸಿದ್ದಾರೆ. ಇಂದು ಮುಂಜಾನೆ 7 ಗಂಟೆಯಿಂದಲೇ ಬೀದಿಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತರ ಹೋರಾಟಕ್ಕೆ ಕಾರ್ಮಿಕ, ಪ್ರಗತಿಪರ, ಕನ್ನಡಪರ, ಯುವ, ವಿದ್ಯಾರ್ಥಿ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿ ಹೋರಾಟಕ್ಕೆ ಧುಮುಕಿವೆ.

ಬೆಂಗಳೂರಿನ ಟೌನ್ ಹಾಲ್ ಎದುರು ಭಾರೀ ಹೋರಾಟ ಆರಂಭವಾಗಿದ್ದು, ರೈತರು, ವಿದ್ಯಾರ್ಥಿಗಳು, ಕನ್ನಡಪರ ಸಂಘಟನೆಗಳು ಜಮಾವಣೆಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಮುಗಿಲು ಮುಟ್ಟಿವೆ. ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬೀದಿಯಲ್ಲೇ ಮಲಗಿ, ಉರುಳುಸೇವೆ ಮಾಡುವ ಮಾಡುವ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ. ಬಡಗಲಪುರ ನಾಗೇಂದ್ರ, ಸರೋವರ್ ಬೆಂಕಿಕೆರೆ, ಹರೀಶ್ ಕುಮಾರ್ ಬಿ ಮುಂತಾದವರು ನೇತೃತ್ವ ವಹಿಸಿದ್ದಾರೆ.

ಇಂದು ಮುಂಜಾನೆ 4 ಗಂಟೆಗೆ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಬಂದ ಕರ್ನಾಟಕ ರಣಧೀರ ಪಡೆ ಕಾರ್ಯಕರ್ತರು ಬಸ್‌ಗಳನ್ನು ತಡೆದು ಬಂದ್ ಆರಂಭಿಸಿದರು. 50 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಬಸ್‌ನಲ್ಲಿ ಅವರನ್ನು ಕರೆದೊಯ್ಯುತ್ತಿರವಾಗ ಮತ್ತಷ್ಟು ಕನ್ನಡಪರ ಸಂಘಟನೆ ಕಾರ್ಯಕರ್ತರು ಬಂದು ಅದೇ ಬಸ್‌ ತಡೆದು ಪ್ರತಿಭಟನೆ ತೀವ್ರಗೊಳಿಸಿದರು.

ಆರಂಭವಾಯ್ತು ಕರ್ನಾಟಕ ಬಂದ್, ರೈತರ ಗುಡುಗು… ಟೌನ್ ಹಾಲ್ ಬೆಂಗಳೂರು

Posted by Naanu Gauri on Sunday, September 27, 2020

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಪದಾಧಿಕಾರಿಗಳು ಬೆಂಗಳೂರಿನ ದೇವನಹಳ್ಳಿ ಸಮೀಪವಿರುವ ನಾಡಪ್ರಭು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ 5 ಗಂಟೆಗೆ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿದ್ದಾರೆ.

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದ ಎದುರು ಜಮಾಯಿಸಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬಂದ್‌ಗೆ ಚಾಲನೆ ನೀಡಿ ಪ್ರತಿಭಟನೆ ದಾಖಲಿಸಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್, ಟಿ.ಎ ನಾರಾಯಣಗೌಡ ಪ್ರತಿಭಟನೆಯಲ್ಲಿದ್ದರು.

ಇಂದು ಮುಂಜಾನೆಯೇ ನಾಯಂಡನಹಳ್ಳಿ ಬಳಿ ಪ್ರತಿಭಟನೆ ನಡೆಸಿದ ರೈತರು ಮತ್ತು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದ್ದಾರೆ. ಹೋರಾಟ ಹತ್ತಿಕ್ಕುವ ಪೊಲೀಸರ್ ವರ್ತನೆಗೆ ರೈತರು ಕಿಡಿಕಾರಿದ್ದಾರೆ.

ಹೋರಾಟನಿರತ ಕಾರ್ಯಕರ್ತರನ್ನು ಸ್ವಲ್ಪವೂ ಮಾನವೀಯತೆಯಿಲ್ಲದೇ ಥಳಿಸಿದ ಪೋಲೀಸರು..

Posted by Karnataka janashakthi ಕರ್ನಾಟಕ ಜನಶಕ್ತಿ on Sunday, September 27, 2020

ಸಿಂಧನೂರಿನಲ್ಲಿ ಇಂದು ಬೆಳಿಗ್ಗೆಯೇ ಪ್ರತಿಭಟನೆ ಆರಂಭವಾಗಿದ್ದು, ಹೋರಾಟ ತೀವ್ರಗೊಂಡಿದೆ.

ದೇಶಾದ್ಯಂತ ರೈತರು ಪ್ರತಿಭಟಿಸುತ್ತಿರುವುದೇಕೆ? ವಿಡಿಯೋ ನೋಡಿ.


ಇದನ್ನೂ ಓದಿ: Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...