Homeಚಳವಳಿಕೃಷಿ ಮಸೂದೆಗಳ ವಿರುದ್ಧ ಆಕ್ರೋಶ: ರಾಜ್ಯದ್ಯಂತ ಕರ್ನಾಟಕ ಬಂದ್ ಆರಂಭ - ವಿಡಿಯೋ ನೋಡಿ

ಕೃಷಿ ಮಸೂದೆಗಳ ವಿರುದ್ಧ ಆಕ್ರೋಶ: ರಾಜ್ಯದ್ಯಂತ ಕರ್ನಾಟಕ ಬಂದ್ ಆರಂಭ – ವಿಡಿಯೋ ನೋಡಿ

ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಪದಾಧಿಕಾರಿಗಳು ಬೆಂಗಳೂರಿನ ದೇವನಹಳ್ಳಿ ಸಮೀಪವಿರುವ ನಾಡಪ್ರಭು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ 5 ಗಂಟೆಗೆ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿದ್ದಾರೆ.

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಲು ಹೊರಟಿರುವ ಕೃಷಿ ಮಸೂದೆಗಳ ವಿರುದ್ಧ ರಾಜ್ಯಾದ್ಯಂತ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕರ್ನಾಟಕ ಬಂದ್ ಆರಂಭಿಸಿದ್ದಾರೆ. ಇಂದು ಮುಂಜಾನೆ 7 ಗಂಟೆಯಿಂದಲೇ ಬೀದಿಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತರ ಹೋರಾಟಕ್ಕೆ ಕಾರ್ಮಿಕ, ಪ್ರಗತಿಪರ, ಕನ್ನಡಪರ, ಯುವ, ವಿದ್ಯಾರ್ಥಿ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿ ಹೋರಾಟಕ್ಕೆ ಧುಮುಕಿವೆ.

ಬೆಂಗಳೂರಿನ ಟೌನ್ ಹಾಲ್ ಎದುರು ಭಾರೀ ಹೋರಾಟ ಆರಂಭವಾಗಿದ್ದು, ರೈತರು, ವಿದ್ಯಾರ್ಥಿಗಳು, ಕನ್ನಡಪರ ಸಂಘಟನೆಗಳು ಜಮಾವಣೆಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಮುಗಿಲು ಮುಟ್ಟಿವೆ. ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬೀದಿಯಲ್ಲೇ ಮಲಗಿ, ಉರುಳುಸೇವೆ ಮಾಡುವ ಮಾಡುವ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ. ಬಡಗಲಪುರ ನಾಗೇಂದ್ರ, ಸರೋವರ್ ಬೆಂಕಿಕೆರೆ, ಹರೀಶ್ ಕುಮಾರ್ ಬಿ ಮುಂತಾದವರು ನೇತೃತ್ವ ವಹಿಸಿದ್ದಾರೆ.

ಇಂದು ಮುಂಜಾನೆ 4 ಗಂಟೆಗೆ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಬಂದ ಕರ್ನಾಟಕ ರಣಧೀರ ಪಡೆ ಕಾರ್ಯಕರ್ತರು ಬಸ್‌ಗಳನ್ನು ತಡೆದು ಬಂದ್ ಆರಂಭಿಸಿದರು. 50 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಬಸ್‌ನಲ್ಲಿ ಅವರನ್ನು ಕರೆದೊಯ್ಯುತ್ತಿರವಾಗ ಮತ್ತಷ್ಟು ಕನ್ನಡಪರ ಸಂಘಟನೆ ಕಾರ್ಯಕರ್ತರು ಬಂದು ಅದೇ ಬಸ್‌ ತಡೆದು ಪ್ರತಿಭಟನೆ ತೀವ್ರಗೊಳಿಸಿದರು.

ಆರಂಭವಾಯ್ತು ಕರ್ನಾಟಕ ಬಂದ್, ರೈತರ ಗುಡುಗು… ಟೌನ್ ಹಾಲ್ ಬೆಂಗಳೂರು

Posted by Naanu Gauri on Sunday, September 27, 2020

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಪದಾಧಿಕಾರಿಗಳು ಬೆಂಗಳೂರಿನ ದೇವನಹಳ್ಳಿ ಸಮೀಪವಿರುವ ನಾಡಪ್ರಭು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ 5 ಗಂಟೆಗೆ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿದ್ದಾರೆ.

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದ ಎದುರು ಜಮಾಯಿಸಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬಂದ್‌ಗೆ ಚಾಲನೆ ನೀಡಿ ಪ್ರತಿಭಟನೆ ದಾಖಲಿಸಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್, ಟಿ.ಎ ನಾರಾಯಣಗೌಡ ಪ್ರತಿಭಟನೆಯಲ್ಲಿದ್ದರು.

ಇಂದು ಮುಂಜಾನೆಯೇ ನಾಯಂಡನಹಳ್ಳಿ ಬಳಿ ಪ್ರತಿಭಟನೆ ನಡೆಸಿದ ರೈತರು ಮತ್ತು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದ್ದಾರೆ. ಹೋರಾಟ ಹತ್ತಿಕ್ಕುವ ಪೊಲೀಸರ್ ವರ್ತನೆಗೆ ರೈತರು ಕಿಡಿಕಾರಿದ್ದಾರೆ.

ಹೋರಾಟನಿರತ ಕಾರ್ಯಕರ್ತರನ್ನು ಸ್ವಲ್ಪವೂ ಮಾನವೀಯತೆಯಿಲ್ಲದೇ ಥಳಿಸಿದ ಪೋಲೀಸರು..

Posted by Karnataka janashakthi ಕರ್ನಾಟಕ ಜನಶಕ್ತಿ on Sunday, September 27, 2020

ಸಿಂಧನೂರಿನಲ್ಲಿ ಇಂದು ಬೆಳಿಗ್ಗೆಯೇ ಪ್ರತಿಭಟನೆ ಆರಂಭವಾಗಿದ್ದು, ಹೋರಾಟ ತೀವ್ರಗೊಂಡಿದೆ.

ದೇಶಾದ್ಯಂತ ರೈತರು ಪ್ರತಿಭಟಿಸುತ್ತಿರುವುದೇಕೆ? ವಿಡಿಯೋ ನೋಡಿ.


ಇದನ್ನೂ ಓದಿ: Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...