Homeಚಳವಳಿಕೃಷಿ ಮಸೂದೆಗಳ ವಿರುದ್ಧ ಆಕ್ರೋಶ: ರಾಜ್ಯದ್ಯಂತ ಕರ್ನಾಟಕ ಬಂದ್ ಆರಂಭ - ವಿಡಿಯೋ ನೋಡಿ

ಕೃಷಿ ಮಸೂದೆಗಳ ವಿರುದ್ಧ ಆಕ್ರೋಶ: ರಾಜ್ಯದ್ಯಂತ ಕರ್ನಾಟಕ ಬಂದ್ ಆರಂಭ – ವಿಡಿಯೋ ನೋಡಿ

ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಪದಾಧಿಕಾರಿಗಳು ಬೆಂಗಳೂರಿನ ದೇವನಹಳ್ಳಿ ಸಮೀಪವಿರುವ ನಾಡಪ್ರಭು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ 5 ಗಂಟೆಗೆ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿದ್ದಾರೆ.

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಲು ಹೊರಟಿರುವ ಕೃಷಿ ಮಸೂದೆಗಳ ವಿರುದ್ಧ ರಾಜ್ಯಾದ್ಯಂತ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕರ್ನಾಟಕ ಬಂದ್ ಆರಂಭಿಸಿದ್ದಾರೆ. ಇಂದು ಮುಂಜಾನೆ 7 ಗಂಟೆಯಿಂದಲೇ ಬೀದಿಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತರ ಹೋರಾಟಕ್ಕೆ ಕಾರ್ಮಿಕ, ಪ್ರಗತಿಪರ, ಕನ್ನಡಪರ, ಯುವ, ವಿದ್ಯಾರ್ಥಿ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿ ಹೋರಾಟಕ್ಕೆ ಧುಮುಕಿವೆ.

ಬೆಂಗಳೂರಿನ ಟೌನ್ ಹಾಲ್ ಎದುರು ಭಾರೀ ಹೋರಾಟ ಆರಂಭವಾಗಿದ್ದು, ರೈತರು, ವಿದ್ಯಾರ್ಥಿಗಳು, ಕನ್ನಡಪರ ಸಂಘಟನೆಗಳು ಜಮಾವಣೆಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಮುಗಿಲು ಮುಟ್ಟಿವೆ. ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬೀದಿಯಲ್ಲೇ ಮಲಗಿ, ಉರುಳುಸೇವೆ ಮಾಡುವ ಮಾಡುವ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ. ಬಡಗಲಪುರ ನಾಗೇಂದ್ರ, ಸರೋವರ್ ಬೆಂಕಿಕೆರೆ, ಹರೀಶ್ ಕುಮಾರ್ ಬಿ ಮುಂತಾದವರು ನೇತೃತ್ವ ವಹಿಸಿದ್ದಾರೆ.

ಇಂದು ಮುಂಜಾನೆ 4 ಗಂಟೆಗೆ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಬಂದ ಕರ್ನಾಟಕ ರಣಧೀರ ಪಡೆ ಕಾರ್ಯಕರ್ತರು ಬಸ್‌ಗಳನ್ನು ತಡೆದು ಬಂದ್ ಆರಂಭಿಸಿದರು. 50 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಬಸ್‌ನಲ್ಲಿ ಅವರನ್ನು ಕರೆದೊಯ್ಯುತ್ತಿರವಾಗ ಮತ್ತಷ್ಟು ಕನ್ನಡಪರ ಸಂಘಟನೆ ಕಾರ್ಯಕರ್ತರು ಬಂದು ಅದೇ ಬಸ್‌ ತಡೆದು ಪ್ರತಿಭಟನೆ ತೀವ್ರಗೊಳಿಸಿದರು.

ಆರಂಭವಾಯ್ತು ಕರ್ನಾಟಕ ಬಂದ್, ರೈತರ ಗುಡುಗು… ಟೌನ್ ಹಾಲ್ ಬೆಂಗಳೂರು

Posted by Naanu Gauri on Sunday, September 27, 2020

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಪದಾಧಿಕಾರಿಗಳು ಬೆಂಗಳೂರಿನ ದೇವನಹಳ್ಳಿ ಸಮೀಪವಿರುವ ನಾಡಪ್ರಭು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ 5 ಗಂಟೆಗೆ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿದ್ದಾರೆ.

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದ ಎದುರು ಜಮಾಯಿಸಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬಂದ್‌ಗೆ ಚಾಲನೆ ನೀಡಿ ಪ್ರತಿಭಟನೆ ದಾಖಲಿಸಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್, ಟಿ.ಎ ನಾರಾಯಣಗೌಡ ಪ್ರತಿಭಟನೆಯಲ್ಲಿದ್ದರು.

ಇಂದು ಮುಂಜಾನೆಯೇ ನಾಯಂಡನಹಳ್ಳಿ ಬಳಿ ಪ್ರತಿಭಟನೆ ನಡೆಸಿದ ರೈತರು ಮತ್ತು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದ್ದಾರೆ. ಹೋರಾಟ ಹತ್ತಿಕ್ಕುವ ಪೊಲೀಸರ್ ವರ್ತನೆಗೆ ರೈತರು ಕಿಡಿಕಾರಿದ್ದಾರೆ.

ಹೋರಾಟನಿರತ ಕಾರ್ಯಕರ್ತರನ್ನು ಸ್ವಲ್ಪವೂ ಮಾನವೀಯತೆಯಿಲ್ಲದೇ ಥಳಿಸಿದ ಪೋಲೀಸರು..

Posted by Karnataka janashakthi ಕರ್ನಾಟಕ ಜನಶಕ್ತಿ on Sunday, September 27, 2020

ಸಿಂಧನೂರಿನಲ್ಲಿ ಇಂದು ಬೆಳಿಗ್ಗೆಯೇ ಪ್ರತಿಭಟನೆ ಆರಂಭವಾಗಿದ್ದು, ಹೋರಾಟ ತೀವ್ರಗೊಂಡಿದೆ.

ದೇಶಾದ್ಯಂತ ರೈತರು ಪ್ರತಿಭಟಿಸುತ್ತಿರುವುದೇಕೆ? ವಿಡಿಯೋ ನೋಡಿ.


ಇದನ್ನೂ ಓದಿ: Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...