Homeಕರ್ನಾಟಕಹಿಂದಿ ಹೇರಿಕೆ ವಿರುದ್ಧ ಭುಗಿಲೆದ್ದ ಆಕ್ರೋಶ: ಬಿಎಸ್‌ವೈ, ಅಮಿತ್‌ ಶಾ ವಿರುದ್ಧ ಕಿಡಿ

ಹಿಂದಿ ಹೇರಿಕೆ ವಿರುದ್ಧ ಭುಗಿಲೆದ್ದ ಆಕ್ರೋಶ: ಬಿಎಸ್‌ವೈ, ಅಮಿತ್‌ ಶಾ ವಿರುದ್ಧ ಕಿಡಿ

ಕನ್ನಡಿಗರೆಲ್ಲರೂ ಈ ದುಷ್ಟ ಹುನ್ನಾರಗಳ ವಿರುದ್ಧ ಹೋರಾಡೋಣ. ನಾವು ಹಿಂದಿ ಗುಲಾಮರಲ್ಲ‌ ಎಂದು ಸಾರೋಣ. ಹಿಂದಿ ಸಾಮ್ರಾಜ್ಯಶಾಹಿಯ ರಣಕೇಕೆಯನ್ನು ಹಿಮ್ಮೆಟ್ಟಿಸೋಣ ಟಿ.ಎ.ನಾರಾಯಣಗೌಡ ಕರೆ ನೀಡಿದ್ದಾರೆ.

- Advertisement -
- Advertisement -

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಸಮೀಪ ರಾಜ್ಯ ಸರ್ಕಾರದ ವತಿಯಿಂದ ನಡೆದ ಕ್ಷಿಪ್ರ ಕಾರ್ಯಪಡೆ ಬೆಟಾಲಿಯನ್ ಸ್ಥಾಪನೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣಿಸಿ ಹಿಂದಿಯಲ್ಲಿ ಬ್ಯಾನರ್, ನಿರೂಪಣೆ ಸೇರಿದಂತೆ ಇಡೀ ಕಾರ್ಯಕ್ರಮ ನಡೆಸಿದ್ದಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.

ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ. ಅಶ್ವತ್ಥ್ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಸಂಗಮೇಶ್ ಭಾಗವಹಿಸಿದ್ದು ಅಮಿತ್‌ ಶಾರನ್ನು ಒಲೈಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ಹಿಂದಿಯಲ್ಲಿ ಕಾರ್ಯಕ್ರಮ ನಡೆಸಲಾಗಿದೆ ಎಂದು ಕನ್ನಡಿಗರು ಕಿಡಿಕಾರಿದ್ದಾರೆ.

ಬಹಳ ವರ್ಷಗಳಿಂದಲೂ ಕರ್ನಾಟಕದಲ್ಲಿ ಹಿಂದಿ ಹೇರಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಆದರೆ ವಿಶೇಷವಾಗಿ ಬಿಜೆಪಿ ಪಕ್ಷವು ಕನ್ನಡಿಗರ ತೀವ್ರ ವಿರೋಧವನ್ನು ಲೆಕ್ಕಿಸದೇ ಪದೇ ಪದೇ ಹಿಂದಿ ಹೇರಿಕೆ ಮಾಡುತ್ತಿದೆ. ನಿನ್ನೆಯ ಕಾರ್ಯಕ್ರಮವು ಅದರ ಮುಂದುವರೆದ ಭಾಗವಾಗಿದೆ. ಇದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಇಂದು ಸಂಜೆ 5 ಗಂಟೆಗೆ #ಹಿಂದಿಗುಲಾಮಗಿರಿಬೇಡ #No‌ToHindiSlavery ಹ್ಯಾಷ್‌ಟ್ಯಾಗ್ ಹೆಸರಿನಲ್ಲಿ ಟ್ವಿಟರ್ ಟ್ರೆಂಡಿಂಗ್‌ಗೆ ಕರೆ ಕೊಡಲಾಗಿದೆ.

ಶಿವಮೊಗ್ಗದಲ್ಲಿ ನಡೆದ ಸಿಆರ್‌ಪಿಎಫ್ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಸಂಪೂರ್ಣ ಹಿಂದಿ ಬ್ಯಾನರುಗಳನ್ನು ಬಳಸಿ, ಹಿಂದಿಯಲ್ಲೇ ನಿರೂಪಣೆ ಮಾಡಿರುವುದನ್ನು ಗಮನಿಸಿದೆ. ಇದು ಬೇರೇನೂ ಅಲ್ಲ, ಕನ್ನಡಿಗರ ಮೇಲೆ ಹಿಂದಿ ಸಾಮ್ರಾಜ್ಯಶಾಹಿಗಳು ಹೂಡಿರುವ ಪರೋಕ್ಷ ಯುದ್ಧ. ಕನ್ನಡತನವನ್ನು ನಾಶಗೊಳಿಸುವ ವ್ಯವಸ್ಥಿತ ದಾಳಿ. ಇದನ್ನು ಕನ್ನಡಿಗರೆಲ್ಲರೂ ಒಟ್ಟಾಗಿ ಖಂಡಿಸಬೇಕಿದೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ತಿಳಿಸಿದ್ದಾರೆ.

ಕನ್ನಡನಾಡಲ್ಲಿ ಕನ್ನಡವನ್ನೇ ಬಳಸಬೇಕೆಂಬುದು ಯಾವುದೇ ಸರ್ಕಾರಕ್ಕೆ ಇರಬೇಕಾದ ಸಾಮಾನ್ಯ ಪ್ರಜ್ಞೆ. ಇದು ಅವರಿಗೆ ಗೊತ್ತಿಲ್ಲವೆಂದೇನಿಲ್ಲ. ಉದ್ದೇಶಪೂರ್ವಕವಾಗಿಯೇ ಕನ್ನಡಿಗರ ಮೇಲೆ ಹಿಂದಿಯನ್ನು ಹೇರುತ್ತಿರುವ ಈ ದುರಹಂಕಾರವನ್ನು ಕನ್ನಡಿಗರು ಸಹಿಸಬೇಕಿಲ್ಲ. ನಾವು ಸಹಸ್ರಾರು ವರ್ಷಗಳಿಂದ ಕನ್ನಡಿಗರು, ಇಂಥ ಹುನ್ನಾರಗಳಿಗೆ ತಲೆಬಾಗುವುದಿಲ್ಲ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಕನ್ನಡಿಗರು ಜಾತಿ, ಮತ, ಧರ್ಮ, ಪಂಥ, ಪಕ್ಷಗಳನ್ನು ಬದಿಗಿಟ್ಟು ಒಂದಾಗಬೇಕಾದ ಕಾಲವಿದು. ಈಗ ನಾವು ಮೈಮರೆತು ಕುಳಿತರೆ ನಮಗೆ ಉಳಿಗಾಲವಿಲ್ಲ. ಕನ್ನಡಿಗರೆಲ್ಲರೂ ಈ ದುಷ್ಟ ಹುನ್ನಾರಗಳ ವಿರುದ್ಧ ಹೋರಾಡೋಣ. ನಾವು ಹಿಂದಿ ಗುಲಾಮರಲ್ಲ‌ ಎಂದು ಸಾರೋಣ. ಹಿಂದಿ ಸಾಮ್ರಾಜ್ಯಶಾಹಿಯ ರಣಕೇಕೆಯನ್ನು ಹಿಮ್ಮೆಟ್ಟಿಸೋಣ ಟಿ.ಎ.ನಾರಾಯಣಗೌಡ ಕರೆ ನೀಡಿದ್ದಾರೆ.

ಮಾಜಿ ಸಿಎಂ ಎಚ್.‌ಡಿ ಕುಮಾರಸ್ವಾಮಿ ಸಹ ರಾಜ್ಯ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಗೃಹಸಚಿವರಾದ ಅಮಿತ್ ಷಾ ಅವರು ಶಂಕುಸ್ಥಾಪನೆ ನೆರವೇರಿಸಿದ ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿವೆ. ಇಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ. ವೈವಿಧ್ಯಮಯ ಭಾರತ ತ್ರಿಭಾಷಾ ಸೂತ್ರ ಅಳವಡಿಸಿಕೊಂಡಿದ್ದು, ಆಯಾ ರಾಜ್ಯ ಭಾಷೆ ಗೌರವಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಗೃಹ ಸಚಿವರೆ ತ್ರಿಭಾಷಾ ಸೂತ್ರವನ್ನು ಧಿಕ್ಕರಿಸಿರುವುದು ಕನ್ನಡಕ್ಕೆ, ಕನ್ನಡಿಗರಿಗೆ ಮಾಡಿದ ಅಗೌರವ. ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ನಾಡು-ನುಡಿಯ ಘನತೆಯನ್ನು ಮರೆತದ್ದು ಅತ್ಯಂತ ಖಂಡನೀಯ ಎಂದು ಹಿಂದಿ-ಆಂಗ್ಲ ಭಾಷೆಯ ನಿಷ್ಠ ಧೋರಣೆಯಲ್ಲಿ ಕನ್ನಡ ಭಾಷೆಯನ್ನು ಅವಗಣನೆ ಮಾಡಿರುವ ಅಮಿತ್ ಷಾ ಅವರ ಧೋರಣೆ ಕನ್ನಡ ವಿರೋಧಿತನವನ್ನು ತೋರಿಸುತ್ತದೆ. ಇದು ಕನ್ನಡಿಗರ ಸ್ವಾಭಿಮಾನಕ್ಕೆ ಮಾಡಿದ ಅವಮಾನ” ಎಂದು ಎಚ್‌ಡಿಕೆ ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರದ ಅಧೀನದಲ್ಲಿರುವ RAF ಘಟಕ ಸ್ಥಾಪನೆಗೆ ಕನ್ನಡದ ನೆಲವನ್ನೆ ಕೊಟ್ಟಿದ್ದು, ಈ ಪರಿಜ್ಞಾನವಿಲ್ಲದೆ ಕನ್ನಡದಲ್ಲಿ ಅಡಿಗಲ್ಲು ಫಲಕ ಇಲ್ಲದಿರುವುದು ಅಕ್ಷಮ್ಯ. ಅಮಿತ್ ಷಾ ಅವರು ತ್ರಿಭಾಷಾ ಸೂತ್ರ ಉಲ್ಲಂಘಿಸಿರುವುದಕ್ಕೆ ಕನ್ನಡಿಗರಿಗೆ ಸ್ಪಷ್ಟನೆ ನೀಡಬೇಕು. ನಾಡು-ನುಡಿಯ ಘನತೆಗೆ ಚ್ಯುತಿ ಬಂದಾಗ ಸಹಿಸಿಕೊಳ್ಳುವವರಿಗೆ ಈ ರಾಜ್ಯದ ಆಡಳಿತ ನಡೆಸುವ ಅರ್ಹತೆ ಇಲ್ಲ. ಕೇಂದ್ರದ ಗೃಹಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡೆ ಕನ್ನಡಕ್ಕೆ ಬಗೆದ ದ್ರೋಹವಾಗಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಹಿಂದಿ ಹೇರಿಕೆಗೆ ವಿಭಿನ್ನ ವಿರೋಧ: ಪವನ್ ಕುಮಾರ್ ನಿರ್ದೇಶನದ ’ಏನ್ ಮಾಡೋದು..?’ ಕಿರುಚಿತ್ರ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....