Homeಕರ್ನಾಟಕಹಿಂದಿ ಹೇರಿಕೆ ವಿರುದ್ಧ ಭುಗಿಲೆದ್ದ ಆಕ್ರೋಶ: ಬಿಎಸ್‌ವೈ, ಅಮಿತ್‌ ಶಾ ವಿರುದ್ಧ ಕಿಡಿ

ಹಿಂದಿ ಹೇರಿಕೆ ವಿರುದ್ಧ ಭುಗಿಲೆದ್ದ ಆಕ್ರೋಶ: ಬಿಎಸ್‌ವೈ, ಅಮಿತ್‌ ಶಾ ವಿರುದ್ಧ ಕಿಡಿ

ಕನ್ನಡಿಗರೆಲ್ಲರೂ ಈ ದುಷ್ಟ ಹುನ್ನಾರಗಳ ವಿರುದ್ಧ ಹೋರಾಡೋಣ. ನಾವು ಹಿಂದಿ ಗುಲಾಮರಲ್ಲ‌ ಎಂದು ಸಾರೋಣ. ಹಿಂದಿ ಸಾಮ್ರಾಜ್ಯಶಾಹಿಯ ರಣಕೇಕೆಯನ್ನು ಹಿಮ್ಮೆಟ್ಟಿಸೋಣ ಟಿ.ಎ.ನಾರಾಯಣಗೌಡ ಕರೆ ನೀಡಿದ್ದಾರೆ.

- Advertisement -
- Advertisement -

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಸಮೀಪ ರಾಜ್ಯ ಸರ್ಕಾರದ ವತಿಯಿಂದ ನಡೆದ ಕ್ಷಿಪ್ರ ಕಾರ್ಯಪಡೆ ಬೆಟಾಲಿಯನ್ ಸ್ಥಾಪನೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣಿಸಿ ಹಿಂದಿಯಲ್ಲಿ ಬ್ಯಾನರ್, ನಿರೂಪಣೆ ಸೇರಿದಂತೆ ಇಡೀ ಕಾರ್ಯಕ್ರಮ ನಡೆಸಿದ್ದಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.

ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ. ಅಶ್ವತ್ಥ್ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಸಂಗಮೇಶ್ ಭಾಗವಹಿಸಿದ್ದು ಅಮಿತ್‌ ಶಾರನ್ನು ಒಲೈಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ಹಿಂದಿಯಲ್ಲಿ ಕಾರ್ಯಕ್ರಮ ನಡೆಸಲಾಗಿದೆ ಎಂದು ಕನ್ನಡಿಗರು ಕಿಡಿಕಾರಿದ್ದಾರೆ.

ಬಹಳ ವರ್ಷಗಳಿಂದಲೂ ಕರ್ನಾಟಕದಲ್ಲಿ ಹಿಂದಿ ಹೇರಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಆದರೆ ವಿಶೇಷವಾಗಿ ಬಿಜೆಪಿ ಪಕ್ಷವು ಕನ್ನಡಿಗರ ತೀವ್ರ ವಿರೋಧವನ್ನು ಲೆಕ್ಕಿಸದೇ ಪದೇ ಪದೇ ಹಿಂದಿ ಹೇರಿಕೆ ಮಾಡುತ್ತಿದೆ. ನಿನ್ನೆಯ ಕಾರ್ಯಕ್ರಮವು ಅದರ ಮುಂದುವರೆದ ಭಾಗವಾಗಿದೆ. ಇದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಇಂದು ಸಂಜೆ 5 ಗಂಟೆಗೆ #ಹಿಂದಿಗುಲಾಮಗಿರಿಬೇಡ #No‌ToHindiSlavery ಹ್ಯಾಷ್‌ಟ್ಯಾಗ್ ಹೆಸರಿನಲ್ಲಿ ಟ್ವಿಟರ್ ಟ್ರೆಂಡಿಂಗ್‌ಗೆ ಕರೆ ಕೊಡಲಾಗಿದೆ.

ಶಿವಮೊಗ್ಗದಲ್ಲಿ ನಡೆದ ಸಿಆರ್‌ಪಿಎಫ್ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಸಂಪೂರ್ಣ ಹಿಂದಿ ಬ್ಯಾನರುಗಳನ್ನು ಬಳಸಿ, ಹಿಂದಿಯಲ್ಲೇ ನಿರೂಪಣೆ ಮಾಡಿರುವುದನ್ನು ಗಮನಿಸಿದೆ. ಇದು ಬೇರೇನೂ ಅಲ್ಲ, ಕನ್ನಡಿಗರ ಮೇಲೆ ಹಿಂದಿ ಸಾಮ್ರಾಜ್ಯಶಾಹಿಗಳು ಹೂಡಿರುವ ಪರೋಕ್ಷ ಯುದ್ಧ. ಕನ್ನಡತನವನ್ನು ನಾಶಗೊಳಿಸುವ ವ್ಯವಸ್ಥಿತ ದಾಳಿ. ಇದನ್ನು ಕನ್ನಡಿಗರೆಲ್ಲರೂ ಒಟ್ಟಾಗಿ ಖಂಡಿಸಬೇಕಿದೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ತಿಳಿಸಿದ್ದಾರೆ.

ಕನ್ನಡನಾಡಲ್ಲಿ ಕನ್ನಡವನ್ನೇ ಬಳಸಬೇಕೆಂಬುದು ಯಾವುದೇ ಸರ್ಕಾರಕ್ಕೆ ಇರಬೇಕಾದ ಸಾಮಾನ್ಯ ಪ್ರಜ್ಞೆ. ಇದು ಅವರಿಗೆ ಗೊತ್ತಿಲ್ಲವೆಂದೇನಿಲ್ಲ. ಉದ್ದೇಶಪೂರ್ವಕವಾಗಿಯೇ ಕನ್ನಡಿಗರ ಮೇಲೆ ಹಿಂದಿಯನ್ನು ಹೇರುತ್ತಿರುವ ಈ ದುರಹಂಕಾರವನ್ನು ಕನ್ನಡಿಗರು ಸಹಿಸಬೇಕಿಲ್ಲ. ನಾವು ಸಹಸ್ರಾರು ವರ್ಷಗಳಿಂದ ಕನ್ನಡಿಗರು, ಇಂಥ ಹುನ್ನಾರಗಳಿಗೆ ತಲೆಬಾಗುವುದಿಲ್ಲ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಕನ್ನಡಿಗರು ಜಾತಿ, ಮತ, ಧರ್ಮ, ಪಂಥ, ಪಕ್ಷಗಳನ್ನು ಬದಿಗಿಟ್ಟು ಒಂದಾಗಬೇಕಾದ ಕಾಲವಿದು. ಈಗ ನಾವು ಮೈಮರೆತು ಕುಳಿತರೆ ನಮಗೆ ಉಳಿಗಾಲವಿಲ್ಲ. ಕನ್ನಡಿಗರೆಲ್ಲರೂ ಈ ದುಷ್ಟ ಹುನ್ನಾರಗಳ ವಿರುದ್ಧ ಹೋರಾಡೋಣ. ನಾವು ಹಿಂದಿ ಗುಲಾಮರಲ್ಲ‌ ಎಂದು ಸಾರೋಣ. ಹಿಂದಿ ಸಾಮ್ರಾಜ್ಯಶಾಹಿಯ ರಣಕೇಕೆಯನ್ನು ಹಿಮ್ಮೆಟ್ಟಿಸೋಣ ಟಿ.ಎ.ನಾರಾಯಣಗೌಡ ಕರೆ ನೀಡಿದ್ದಾರೆ.

ಮಾಜಿ ಸಿಎಂ ಎಚ್.‌ಡಿ ಕುಮಾರಸ್ವಾಮಿ ಸಹ ರಾಜ್ಯ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಗೃಹಸಚಿವರಾದ ಅಮಿತ್ ಷಾ ಅವರು ಶಂಕುಸ್ಥಾಪನೆ ನೆರವೇರಿಸಿದ ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿವೆ. ಇಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ. ವೈವಿಧ್ಯಮಯ ಭಾರತ ತ್ರಿಭಾಷಾ ಸೂತ್ರ ಅಳವಡಿಸಿಕೊಂಡಿದ್ದು, ಆಯಾ ರಾಜ್ಯ ಭಾಷೆ ಗೌರವಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಗೃಹ ಸಚಿವರೆ ತ್ರಿಭಾಷಾ ಸೂತ್ರವನ್ನು ಧಿಕ್ಕರಿಸಿರುವುದು ಕನ್ನಡಕ್ಕೆ, ಕನ್ನಡಿಗರಿಗೆ ಮಾಡಿದ ಅಗೌರವ. ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ನಾಡು-ನುಡಿಯ ಘನತೆಯನ್ನು ಮರೆತದ್ದು ಅತ್ಯಂತ ಖಂಡನೀಯ ಎಂದು ಹಿಂದಿ-ಆಂಗ್ಲ ಭಾಷೆಯ ನಿಷ್ಠ ಧೋರಣೆಯಲ್ಲಿ ಕನ್ನಡ ಭಾಷೆಯನ್ನು ಅವಗಣನೆ ಮಾಡಿರುವ ಅಮಿತ್ ಷಾ ಅವರ ಧೋರಣೆ ಕನ್ನಡ ವಿರೋಧಿತನವನ್ನು ತೋರಿಸುತ್ತದೆ. ಇದು ಕನ್ನಡಿಗರ ಸ್ವಾಭಿಮಾನಕ್ಕೆ ಮಾಡಿದ ಅವಮಾನ” ಎಂದು ಎಚ್‌ಡಿಕೆ ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರದ ಅಧೀನದಲ್ಲಿರುವ RAF ಘಟಕ ಸ್ಥಾಪನೆಗೆ ಕನ್ನಡದ ನೆಲವನ್ನೆ ಕೊಟ್ಟಿದ್ದು, ಈ ಪರಿಜ್ಞಾನವಿಲ್ಲದೆ ಕನ್ನಡದಲ್ಲಿ ಅಡಿಗಲ್ಲು ಫಲಕ ಇಲ್ಲದಿರುವುದು ಅಕ್ಷಮ್ಯ. ಅಮಿತ್ ಷಾ ಅವರು ತ್ರಿಭಾಷಾ ಸೂತ್ರ ಉಲ್ಲಂಘಿಸಿರುವುದಕ್ಕೆ ಕನ್ನಡಿಗರಿಗೆ ಸ್ಪಷ್ಟನೆ ನೀಡಬೇಕು. ನಾಡು-ನುಡಿಯ ಘನತೆಗೆ ಚ್ಯುತಿ ಬಂದಾಗ ಸಹಿಸಿಕೊಳ್ಳುವವರಿಗೆ ಈ ರಾಜ್ಯದ ಆಡಳಿತ ನಡೆಸುವ ಅರ್ಹತೆ ಇಲ್ಲ. ಕೇಂದ್ರದ ಗೃಹಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡೆ ಕನ್ನಡಕ್ಕೆ ಬಗೆದ ದ್ರೋಹವಾಗಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಹಿಂದಿ ಹೇರಿಕೆಗೆ ವಿಭಿನ್ನ ವಿರೋಧ: ಪವನ್ ಕುಮಾರ್ ನಿರ್ದೇಶನದ ’ಏನ್ ಮಾಡೋದು..?’ ಕಿರುಚಿತ್ರ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...