ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಸಮೀಪ ರಾಜ್ಯ ಸರ್ಕಾರದ ವತಿಯಿಂದ ನಡೆದ ಕ್ಷಿಪ್ರ ಕಾರ್ಯಪಡೆ ಬೆಟಾಲಿಯನ್ ಸ್ಥಾಪನೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣಿಸಿ ಹಿಂದಿಯಲ್ಲಿ ಬ್ಯಾನರ್, ನಿರೂಪಣೆ ಸೇರಿದಂತೆ ಇಡೀ ಕಾರ್ಯಕ್ರಮ ನಡೆಸಿದ್ದಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.
ಉಕ್ಕಿನ ನಗರಿ ಭದ್ರಾವತಿಯ ಅಭಿವೃದ್ಧಿಯ ಹೊಸ ಅಧ್ಯಾಯ ಇಂದು ಪ್ರಾರಂಭಗೊಂಡಿದೆ. ಇಂದು ಭದ್ರಾವತಿಯಲ್ಲಿ 'ಕ್ಷಿಪ್ರ ಕಾರ್ಯ ಪಡೆ' ಘಟಕದ ಶಂಕುಸ್ಥಾಪನೆಯನ್ನು ಕೇಂದ್ರ ಗೃಹ ಸಚಿವರಾದ ಶ್ರೀ @AmitShah ರವರು ನೆರವೇರಿಸಿದರು. ಕೇಂದ್ರ ಸಚಿವ @JoshiPralhad, ಸಚಿವರು, ಸಂಸದರು, ಶಾಸಕರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. pic.twitter.com/f0pNKQcOsO
— B.S. Yediyurappa (@BSYBJP) January 16, 2021
ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ. ಅಶ್ವತ್ಥ್ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಸಂಗಮೇಶ್ ಭಾಗವಹಿಸಿದ್ದು ಅಮಿತ್ ಶಾರನ್ನು ಒಲೈಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ಹಿಂದಿಯಲ್ಲಿ ಕಾರ್ಯಕ್ರಮ ನಡೆಸಲಾಗಿದೆ ಎಂದು ಕನ್ನಡಿಗರು ಕಿಡಿಕಾರಿದ್ದಾರೆ.
ಬಹಳ ವರ್ಷಗಳಿಂದಲೂ ಕರ್ನಾಟಕದಲ್ಲಿ ಹಿಂದಿ ಹೇರಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಆದರೆ ವಿಶೇಷವಾಗಿ ಬಿಜೆಪಿ ಪಕ್ಷವು ಕನ್ನಡಿಗರ ತೀವ್ರ ವಿರೋಧವನ್ನು ಲೆಕ್ಕಿಸದೇ ಪದೇ ಪದೇ ಹಿಂದಿ ಹೇರಿಕೆ ಮಾಡುತ್ತಿದೆ. ನಿನ್ನೆಯ ಕಾರ್ಯಕ್ರಮವು ಅದರ ಮುಂದುವರೆದ ಭಾಗವಾಗಿದೆ. ಇದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಇಂದು ಸಂಜೆ 5 ಗಂಟೆಗೆ #ಹಿಂದಿಗುಲಾಮಗಿರಿಬೇಡ #NoToHindiSlavery ಹ್ಯಾಷ್ಟ್ಯಾಗ್ ಹೆಸರಿನಲ್ಲಿ ಟ್ವಿಟರ್ ಟ್ರೆಂಡಿಂಗ್ಗೆ ಕರೆ ಕೊಡಲಾಗಿದೆ.
ಹಿಂದಿ ಸಾಮ್ರಾಜ್ಯಶಾಹಿಯಿಂದಾಗಿ ಮುಂದೊಂದು ದಿನ ಕನ್ನಡವನ್ನು ಬಳಸುವುದೇ ಅಪರಾಧ ಎನ್ನುವಂತಾದರೆ ಆಶ್ಚರ್ಯವಿಲ್ಲ. ಈ ನಿಟ್ಟಿನಲ್ಲಿ ನಾಡಿನ ಎಲ್ಲರನ್ನೂ ಎಚ್ಚರಿಸಲು ಇಂದು ಸಂಜೆ 5 ಗಂಟೆಗೆ ಟ್ವಿಟರ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. #ಹಿಂದಿಗುಲಾಮಗಿರಿಬೇಡ #NoToHindiSlavery ಹ್ಯಾಶ್ ಟ್ಯಾಗ್ ಗಳೊಂದಿಗೆ ಈ ಟ್ವಿಟರ್ ಅಭಿಯಾನದಲ್ಲಿ ಭಾಗವಹಿಸಿ.
— ನಾರಾಯಣಗೌಡ್ರು.ಟಿ.ಎ | Narayanagowdru T.A. (@narayanagowdru) January 17, 2021
ಶಿವಮೊಗ್ಗದಲ್ಲಿ ನಡೆದ ಸಿಆರ್ಪಿಎಫ್ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಸಂಪೂರ್ಣ ಹಿಂದಿ ಬ್ಯಾನರುಗಳನ್ನು ಬಳಸಿ, ಹಿಂದಿಯಲ್ಲೇ ನಿರೂಪಣೆ ಮಾಡಿರುವುದನ್ನು ಗಮನಿಸಿದೆ. ಇದು ಬೇರೇನೂ ಅಲ್ಲ, ಕನ್ನಡಿಗರ ಮೇಲೆ ಹಿಂದಿ ಸಾಮ್ರಾಜ್ಯಶಾಹಿಗಳು ಹೂಡಿರುವ ಪರೋಕ್ಷ ಯುದ್ಧ. ಕನ್ನಡತನವನ್ನು ನಾಶಗೊಳಿಸುವ ವ್ಯವಸ್ಥಿತ ದಾಳಿ. ಇದನ್ನು ಕನ್ನಡಿಗರೆಲ್ಲರೂ ಒಟ್ಟಾಗಿ ಖಂಡಿಸಬೇಕಿದೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ತಿಳಿಸಿದ್ದಾರೆ.
ಕನ್ನಡನಾಡಲ್ಲಿ ಕನ್ನಡವನ್ನೇ ಬಳಸಬೇಕೆಂಬುದು ಯಾವುದೇ ಸರ್ಕಾರಕ್ಕೆ ಇರಬೇಕಾದ ಸಾಮಾನ್ಯ ಪ್ರಜ್ಞೆ. ಇದು ಅವರಿಗೆ ಗೊತ್ತಿಲ್ಲವೆಂದೇನಿಲ್ಲ. ಉದ್ದೇಶಪೂರ್ವಕವಾಗಿಯೇ ಕನ್ನಡಿಗರ ಮೇಲೆ ಹಿಂದಿಯನ್ನು ಹೇರುತ್ತಿರುವ ಈ ದುರಹಂಕಾರವನ್ನು ಕನ್ನಡಿಗರು ಸಹಿಸಬೇಕಿಲ್ಲ. ನಾವು ಸಹಸ್ರಾರು ವರ್ಷಗಳಿಂದ ಕನ್ನಡಿಗರು, ಇಂಥ ಹುನ್ನಾರಗಳಿಗೆ ತಲೆಬಾಗುವುದಿಲ್ಲ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಕನ್ನಡಿಗರು ಜಾತಿ, ಮತ, ಧರ್ಮ, ಪಂಥ, ಪಕ್ಷಗಳನ್ನು ಬದಿಗಿಟ್ಟು ಒಂದಾಗಬೇಕಾದ ಕಾಲವಿದು. ಈಗ ನಾವು ಮೈಮರೆತು ಕುಳಿತರೆ ನಮಗೆ ಉಳಿಗಾಲವಿಲ್ಲ. ಕನ್ನಡಿಗರೆಲ್ಲರೂ ಈ ದುಷ್ಟ ಹುನ್ನಾರಗಳ ವಿರುದ್ಧ ಹೋರಾಡೋಣ. ನಾವು ಹಿಂದಿ ಗುಲಾಮರಲ್ಲ ಎಂದು ಸಾರೋಣ. ಹಿಂದಿ ಸಾಮ್ರಾಜ್ಯಶಾಹಿಯ ರಣಕೇಕೆಯನ್ನು ಹಿಮ್ಮೆಟ್ಟಿಸೋಣ ಟಿ.ಎ.ನಾರಾಯಣಗೌಡ ಕರೆ ನೀಡಿದ್ದಾರೆ.
ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಸಹ ರಾಜ್ಯ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಗೃಹಸಚಿವರಾದ ಅಮಿತ್ ಷಾ ಅವರು ಶಂಕುಸ್ಥಾಪನೆ ನೆರವೇರಿಸಿದ ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿವೆ. ಇಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ. ವೈವಿಧ್ಯಮಯ ಭಾರತ ತ್ರಿಭಾಷಾ ಸೂತ್ರ ಅಳವಡಿಸಿಕೊಂಡಿದ್ದು, ಆಯಾ ರಾಜ್ಯ ಭಾಷೆ ಗೌರವಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಗೃಹ ಸಚಿವರೆ ತ್ರಿಭಾಷಾ ಸೂತ್ರವನ್ನು ಧಿಕ್ಕರಿಸಿರುವುದು ಕನ್ನಡಕ್ಕೆ, ಕನ್ನಡಿಗರಿಗೆ ಮಾಡಿದ ಅಗೌರವ. ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ನಾಡು-ನುಡಿಯ ಘನತೆಯನ್ನು ಮರೆತದ್ದು ಅತ್ಯಂತ ಖಂಡನೀಯ ಎಂದು ಹಿಂದಿ-ಆಂಗ್ಲ ಭಾಷೆಯ ನಿಷ್ಠ ಧೋರಣೆಯಲ್ಲಿ ಕನ್ನಡ ಭಾಷೆಯನ್ನು ಅವಗಣನೆ ಮಾಡಿರುವ ಅಮಿತ್ ಷಾ ಅವರ ಧೋರಣೆ ಕನ್ನಡ ವಿರೋಧಿತನವನ್ನು ತೋರಿಸುತ್ತದೆ. ಇದು ಕನ್ನಡಿಗರ ಸ್ವಾಭಿಮಾನಕ್ಕೆ ಮಾಡಿದ ಅವಮಾನ” ಎಂದು ಎಚ್ಡಿಕೆ ಕಿಡಿಕಾರಿದ್ದಾರೆ.
ಕೇಂದ್ರ ಸರ್ಕಾರದ ಅಧೀನದಲ್ಲಿರುವ RAF ಘಟಕ ಸ್ಥಾಪನೆಗೆ ಕನ್ನಡದ ನೆಲವನ್ನೆ ಕೊಟ್ಟಿದ್ದು, ಈ ಪರಿಜ್ಞಾನವಿಲ್ಲದೆ ಕನ್ನಡದಲ್ಲಿ ಅಡಿಗಲ್ಲು ಫಲಕ ಇಲ್ಲದಿರುವುದು ಅಕ್ಷಮ್ಯ.
ಅಮಿತ್ ಷಾ ಅವರು ತ್ರಿಭಾಷಾ ಸೂತ್ರ ಉಲ್ಲಂಘಿಸಿರುವುದಕ್ಕೆ ಕನ್ನಡಿಗರಿಗೆ ಸ್ಪಷ್ಟನೆ ನೀಡಬೇಕು.
4/5— H D Kumaraswamy (@hd_kumaraswamy) January 16, 2021
ಕೇಂದ್ರ ಸರ್ಕಾರದ ಅಧೀನದಲ್ಲಿರುವ RAF ಘಟಕ ಸ್ಥಾಪನೆಗೆ ಕನ್ನಡದ ನೆಲವನ್ನೆ ಕೊಟ್ಟಿದ್ದು, ಈ ಪರಿಜ್ಞಾನವಿಲ್ಲದೆ ಕನ್ನಡದಲ್ಲಿ ಅಡಿಗಲ್ಲು ಫಲಕ ಇಲ್ಲದಿರುವುದು ಅಕ್ಷಮ್ಯ. ಅಮಿತ್ ಷಾ ಅವರು ತ್ರಿಭಾಷಾ ಸೂತ್ರ ಉಲ್ಲಂಘಿಸಿರುವುದಕ್ಕೆ ಕನ್ನಡಿಗರಿಗೆ ಸ್ಪಷ್ಟನೆ ನೀಡಬೇಕು. ನಾಡು-ನುಡಿಯ ಘನತೆಗೆ ಚ್ಯುತಿ ಬಂದಾಗ ಸಹಿಸಿಕೊಳ್ಳುವವರಿಗೆ ಈ ರಾಜ್ಯದ ಆಡಳಿತ ನಡೆಸುವ ಅರ್ಹತೆ ಇಲ್ಲ. ಕೇಂದ್ರದ ಗೃಹಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡೆ ಕನ್ನಡಕ್ಕೆ ಬಗೆದ ದ್ರೋಹವಾಗಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಹಿಂದಿ ಹೇರಿಕೆಗೆ ವಿಭಿನ್ನ ವಿರೋಧ: ಪವನ್ ಕುಮಾರ್ ನಿರ್ದೇಶನದ ’ಏನ್ ಮಾಡೋದು..?’ ಕಿರುಚಿತ್ರ ವೈರಲ್!
ಕನ್ನಡ ವಿರೋಧಿ ಮನುವಾದಿಗಳಿಗೆ ದಿಕ್ಕಾರವಿರಲಿ.