Homeಕರ್ನಾಟಕಹಿಂದಿ ಹೇರಿಕೆ ವಿರುದ್ಧ ಭುಗಿಲೆದ್ದ ಆಕ್ರೋಶ: ಬಿಎಸ್‌ವೈ, ಅಮಿತ್‌ ಶಾ ವಿರುದ್ಧ ಕಿಡಿ

ಹಿಂದಿ ಹೇರಿಕೆ ವಿರುದ್ಧ ಭುಗಿಲೆದ್ದ ಆಕ್ರೋಶ: ಬಿಎಸ್‌ವೈ, ಅಮಿತ್‌ ಶಾ ವಿರುದ್ಧ ಕಿಡಿ

ಕನ್ನಡಿಗರೆಲ್ಲರೂ ಈ ದುಷ್ಟ ಹುನ್ನಾರಗಳ ವಿರುದ್ಧ ಹೋರಾಡೋಣ. ನಾವು ಹಿಂದಿ ಗುಲಾಮರಲ್ಲ‌ ಎಂದು ಸಾರೋಣ. ಹಿಂದಿ ಸಾಮ್ರಾಜ್ಯಶಾಹಿಯ ರಣಕೇಕೆಯನ್ನು ಹಿಮ್ಮೆಟ್ಟಿಸೋಣ ಟಿ.ಎ.ನಾರಾಯಣಗೌಡ ಕರೆ ನೀಡಿದ್ದಾರೆ.

- Advertisement -
- Advertisement -

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಸಮೀಪ ರಾಜ್ಯ ಸರ್ಕಾರದ ವತಿಯಿಂದ ನಡೆದ ಕ್ಷಿಪ್ರ ಕಾರ್ಯಪಡೆ ಬೆಟಾಲಿಯನ್ ಸ್ಥಾಪನೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣಿಸಿ ಹಿಂದಿಯಲ್ಲಿ ಬ್ಯಾನರ್, ನಿರೂಪಣೆ ಸೇರಿದಂತೆ ಇಡೀ ಕಾರ್ಯಕ್ರಮ ನಡೆಸಿದ್ದಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.

ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ. ಅಶ್ವತ್ಥ್ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಸಂಗಮೇಶ್ ಭಾಗವಹಿಸಿದ್ದು ಅಮಿತ್‌ ಶಾರನ್ನು ಒಲೈಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ಹಿಂದಿಯಲ್ಲಿ ಕಾರ್ಯಕ್ರಮ ನಡೆಸಲಾಗಿದೆ ಎಂದು ಕನ್ನಡಿಗರು ಕಿಡಿಕಾರಿದ್ದಾರೆ.

ಬಹಳ ವರ್ಷಗಳಿಂದಲೂ ಕರ್ನಾಟಕದಲ್ಲಿ ಹಿಂದಿ ಹೇರಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಆದರೆ ವಿಶೇಷವಾಗಿ ಬಿಜೆಪಿ ಪಕ್ಷವು ಕನ್ನಡಿಗರ ತೀವ್ರ ವಿರೋಧವನ್ನು ಲೆಕ್ಕಿಸದೇ ಪದೇ ಪದೇ ಹಿಂದಿ ಹೇರಿಕೆ ಮಾಡುತ್ತಿದೆ. ನಿನ್ನೆಯ ಕಾರ್ಯಕ್ರಮವು ಅದರ ಮುಂದುವರೆದ ಭಾಗವಾಗಿದೆ. ಇದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಇಂದು ಸಂಜೆ 5 ಗಂಟೆಗೆ #ಹಿಂದಿಗುಲಾಮಗಿರಿಬೇಡ #No‌ToHindiSlavery ಹ್ಯಾಷ್‌ಟ್ಯಾಗ್ ಹೆಸರಿನಲ್ಲಿ ಟ್ವಿಟರ್ ಟ್ರೆಂಡಿಂಗ್‌ಗೆ ಕರೆ ಕೊಡಲಾಗಿದೆ.

ಶಿವಮೊಗ್ಗದಲ್ಲಿ ನಡೆದ ಸಿಆರ್‌ಪಿಎಫ್ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಸಂಪೂರ್ಣ ಹಿಂದಿ ಬ್ಯಾನರುಗಳನ್ನು ಬಳಸಿ, ಹಿಂದಿಯಲ್ಲೇ ನಿರೂಪಣೆ ಮಾಡಿರುವುದನ್ನು ಗಮನಿಸಿದೆ. ಇದು ಬೇರೇನೂ ಅಲ್ಲ, ಕನ್ನಡಿಗರ ಮೇಲೆ ಹಿಂದಿ ಸಾಮ್ರಾಜ್ಯಶಾಹಿಗಳು ಹೂಡಿರುವ ಪರೋಕ್ಷ ಯುದ್ಧ. ಕನ್ನಡತನವನ್ನು ನಾಶಗೊಳಿಸುವ ವ್ಯವಸ್ಥಿತ ದಾಳಿ. ಇದನ್ನು ಕನ್ನಡಿಗರೆಲ್ಲರೂ ಒಟ್ಟಾಗಿ ಖಂಡಿಸಬೇಕಿದೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ತಿಳಿಸಿದ್ದಾರೆ.

ಕನ್ನಡನಾಡಲ್ಲಿ ಕನ್ನಡವನ್ನೇ ಬಳಸಬೇಕೆಂಬುದು ಯಾವುದೇ ಸರ್ಕಾರಕ್ಕೆ ಇರಬೇಕಾದ ಸಾಮಾನ್ಯ ಪ್ರಜ್ಞೆ. ಇದು ಅವರಿಗೆ ಗೊತ್ತಿಲ್ಲವೆಂದೇನಿಲ್ಲ. ಉದ್ದೇಶಪೂರ್ವಕವಾಗಿಯೇ ಕನ್ನಡಿಗರ ಮೇಲೆ ಹಿಂದಿಯನ್ನು ಹೇರುತ್ತಿರುವ ಈ ದುರಹಂಕಾರವನ್ನು ಕನ್ನಡಿಗರು ಸಹಿಸಬೇಕಿಲ್ಲ. ನಾವು ಸಹಸ್ರಾರು ವರ್ಷಗಳಿಂದ ಕನ್ನಡಿಗರು, ಇಂಥ ಹುನ್ನಾರಗಳಿಗೆ ತಲೆಬಾಗುವುದಿಲ್ಲ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಕನ್ನಡಿಗರು ಜಾತಿ, ಮತ, ಧರ್ಮ, ಪಂಥ, ಪಕ್ಷಗಳನ್ನು ಬದಿಗಿಟ್ಟು ಒಂದಾಗಬೇಕಾದ ಕಾಲವಿದು. ಈಗ ನಾವು ಮೈಮರೆತು ಕುಳಿತರೆ ನಮಗೆ ಉಳಿಗಾಲವಿಲ್ಲ. ಕನ್ನಡಿಗರೆಲ್ಲರೂ ಈ ದುಷ್ಟ ಹುನ್ನಾರಗಳ ವಿರುದ್ಧ ಹೋರಾಡೋಣ. ನಾವು ಹಿಂದಿ ಗುಲಾಮರಲ್ಲ‌ ಎಂದು ಸಾರೋಣ. ಹಿಂದಿ ಸಾಮ್ರಾಜ್ಯಶಾಹಿಯ ರಣಕೇಕೆಯನ್ನು ಹಿಮ್ಮೆಟ್ಟಿಸೋಣ ಟಿ.ಎ.ನಾರಾಯಣಗೌಡ ಕರೆ ನೀಡಿದ್ದಾರೆ.

ಮಾಜಿ ಸಿಎಂ ಎಚ್.‌ಡಿ ಕುಮಾರಸ್ವಾಮಿ ಸಹ ರಾಜ್ಯ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಗೃಹಸಚಿವರಾದ ಅಮಿತ್ ಷಾ ಅವರು ಶಂಕುಸ್ಥಾಪನೆ ನೆರವೇರಿಸಿದ ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿವೆ. ಇಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ. ವೈವಿಧ್ಯಮಯ ಭಾರತ ತ್ರಿಭಾಷಾ ಸೂತ್ರ ಅಳವಡಿಸಿಕೊಂಡಿದ್ದು, ಆಯಾ ರಾಜ್ಯ ಭಾಷೆ ಗೌರವಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಗೃಹ ಸಚಿವರೆ ತ್ರಿಭಾಷಾ ಸೂತ್ರವನ್ನು ಧಿಕ್ಕರಿಸಿರುವುದು ಕನ್ನಡಕ್ಕೆ, ಕನ್ನಡಿಗರಿಗೆ ಮಾಡಿದ ಅಗೌರವ. ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ನಾಡು-ನುಡಿಯ ಘನತೆಯನ್ನು ಮರೆತದ್ದು ಅತ್ಯಂತ ಖಂಡನೀಯ ಎಂದು ಹಿಂದಿ-ಆಂಗ್ಲ ಭಾಷೆಯ ನಿಷ್ಠ ಧೋರಣೆಯಲ್ಲಿ ಕನ್ನಡ ಭಾಷೆಯನ್ನು ಅವಗಣನೆ ಮಾಡಿರುವ ಅಮಿತ್ ಷಾ ಅವರ ಧೋರಣೆ ಕನ್ನಡ ವಿರೋಧಿತನವನ್ನು ತೋರಿಸುತ್ತದೆ. ಇದು ಕನ್ನಡಿಗರ ಸ್ವಾಭಿಮಾನಕ್ಕೆ ಮಾಡಿದ ಅವಮಾನ” ಎಂದು ಎಚ್‌ಡಿಕೆ ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರದ ಅಧೀನದಲ್ಲಿರುವ RAF ಘಟಕ ಸ್ಥಾಪನೆಗೆ ಕನ್ನಡದ ನೆಲವನ್ನೆ ಕೊಟ್ಟಿದ್ದು, ಈ ಪರಿಜ್ಞಾನವಿಲ್ಲದೆ ಕನ್ನಡದಲ್ಲಿ ಅಡಿಗಲ್ಲು ಫಲಕ ಇಲ್ಲದಿರುವುದು ಅಕ್ಷಮ್ಯ. ಅಮಿತ್ ಷಾ ಅವರು ತ್ರಿಭಾಷಾ ಸೂತ್ರ ಉಲ್ಲಂಘಿಸಿರುವುದಕ್ಕೆ ಕನ್ನಡಿಗರಿಗೆ ಸ್ಪಷ್ಟನೆ ನೀಡಬೇಕು. ನಾಡು-ನುಡಿಯ ಘನತೆಗೆ ಚ್ಯುತಿ ಬಂದಾಗ ಸಹಿಸಿಕೊಳ್ಳುವವರಿಗೆ ಈ ರಾಜ್ಯದ ಆಡಳಿತ ನಡೆಸುವ ಅರ್ಹತೆ ಇಲ್ಲ. ಕೇಂದ್ರದ ಗೃಹಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡೆ ಕನ್ನಡಕ್ಕೆ ಬಗೆದ ದ್ರೋಹವಾಗಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಹಿಂದಿ ಹೇರಿಕೆಗೆ ವಿಭಿನ್ನ ವಿರೋಧ: ಪವನ್ ಕುಮಾರ್ ನಿರ್ದೇಶನದ ’ಏನ್ ಮಾಡೋದು..?’ ಕಿರುಚಿತ್ರ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...