Homeಕರ್ನಾಟಕಹಿಂದಿ ಹೇರಿಕೆ ವಿರುದ್ಧ ಭುಗಿಲೆದ್ದ ಆಕ್ರೋಶ: ಬಿಎಸ್‌ವೈ, ಅಮಿತ್‌ ಶಾ ವಿರುದ್ಧ ಕಿಡಿ

ಹಿಂದಿ ಹೇರಿಕೆ ವಿರುದ್ಧ ಭುಗಿಲೆದ್ದ ಆಕ್ರೋಶ: ಬಿಎಸ್‌ವೈ, ಅಮಿತ್‌ ಶಾ ವಿರುದ್ಧ ಕಿಡಿ

ಕನ್ನಡಿಗರೆಲ್ಲರೂ ಈ ದುಷ್ಟ ಹುನ್ನಾರಗಳ ವಿರುದ್ಧ ಹೋರಾಡೋಣ. ನಾವು ಹಿಂದಿ ಗುಲಾಮರಲ್ಲ‌ ಎಂದು ಸಾರೋಣ. ಹಿಂದಿ ಸಾಮ್ರಾಜ್ಯಶಾಹಿಯ ರಣಕೇಕೆಯನ್ನು ಹಿಮ್ಮೆಟ್ಟಿಸೋಣ ಟಿ.ಎ.ನಾರಾಯಣಗೌಡ ಕರೆ ನೀಡಿದ್ದಾರೆ.

- Advertisement -
- Advertisement -

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಸಮೀಪ ರಾಜ್ಯ ಸರ್ಕಾರದ ವತಿಯಿಂದ ನಡೆದ ಕ್ಷಿಪ್ರ ಕಾರ್ಯಪಡೆ ಬೆಟಾಲಿಯನ್ ಸ್ಥಾಪನೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣಿಸಿ ಹಿಂದಿಯಲ್ಲಿ ಬ್ಯಾನರ್, ನಿರೂಪಣೆ ಸೇರಿದಂತೆ ಇಡೀ ಕಾರ್ಯಕ್ರಮ ನಡೆಸಿದ್ದಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.

ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ. ಅಶ್ವತ್ಥ್ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಸಂಗಮೇಶ್ ಭಾಗವಹಿಸಿದ್ದು ಅಮಿತ್‌ ಶಾರನ್ನು ಒಲೈಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ಹಿಂದಿಯಲ್ಲಿ ಕಾರ್ಯಕ್ರಮ ನಡೆಸಲಾಗಿದೆ ಎಂದು ಕನ್ನಡಿಗರು ಕಿಡಿಕಾರಿದ್ದಾರೆ.

ಬಹಳ ವರ್ಷಗಳಿಂದಲೂ ಕರ್ನಾಟಕದಲ್ಲಿ ಹಿಂದಿ ಹೇರಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಆದರೆ ವಿಶೇಷವಾಗಿ ಬಿಜೆಪಿ ಪಕ್ಷವು ಕನ್ನಡಿಗರ ತೀವ್ರ ವಿರೋಧವನ್ನು ಲೆಕ್ಕಿಸದೇ ಪದೇ ಪದೇ ಹಿಂದಿ ಹೇರಿಕೆ ಮಾಡುತ್ತಿದೆ. ನಿನ್ನೆಯ ಕಾರ್ಯಕ್ರಮವು ಅದರ ಮುಂದುವರೆದ ಭಾಗವಾಗಿದೆ. ಇದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಇಂದು ಸಂಜೆ 5 ಗಂಟೆಗೆ #ಹಿಂದಿಗುಲಾಮಗಿರಿಬೇಡ #No‌ToHindiSlavery ಹ್ಯಾಷ್‌ಟ್ಯಾಗ್ ಹೆಸರಿನಲ್ಲಿ ಟ್ವಿಟರ್ ಟ್ರೆಂಡಿಂಗ್‌ಗೆ ಕರೆ ಕೊಡಲಾಗಿದೆ.

ಶಿವಮೊಗ್ಗದಲ್ಲಿ ನಡೆದ ಸಿಆರ್‌ಪಿಎಫ್ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಸಂಪೂರ್ಣ ಹಿಂದಿ ಬ್ಯಾನರುಗಳನ್ನು ಬಳಸಿ, ಹಿಂದಿಯಲ್ಲೇ ನಿರೂಪಣೆ ಮಾಡಿರುವುದನ್ನು ಗಮನಿಸಿದೆ. ಇದು ಬೇರೇನೂ ಅಲ್ಲ, ಕನ್ನಡಿಗರ ಮೇಲೆ ಹಿಂದಿ ಸಾಮ್ರಾಜ್ಯಶಾಹಿಗಳು ಹೂಡಿರುವ ಪರೋಕ್ಷ ಯುದ್ಧ. ಕನ್ನಡತನವನ್ನು ನಾಶಗೊಳಿಸುವ ವ್ಯವಸ್ಥಿತ ದಾಳಿ. ಇದನ್ನು ಕನ್ನಡಿಗರೆಲ್ಲರೂ ಒಟ್ಟಾಗಿ ಖಂಡಿಸಬೇಕಿದೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ತಿಳಿಸಿದ್ದಾರೆ.

ಕನ್ನಡನಾಡಲ್ಲಿ ಕನ್ನಡವನ್ನೇ ಬಳಸಬೇಕೆಂಬುದು ಯಾವುದೇ ಸರ್ಕಾರಕ್ಕೆ ಇರಬೇಕಾದ ಸಾಮಾನ್ಯ ಪ್ರಜ್ಞೆ. ಇದು ಅವರಿಗೆ ಗೊತ್ತಿಲ್ಲವೆಂದೇನಿಲ್ಲ. ಉದ್ದೇಶಪೂರ್ವಕವಾಗಿಯೇ ಕನ್ನಡಿಗರ ಮೇಲೆ ಹಿಂದಿಯನ್ನು ಹೇರುತ್ತಿರುವ ಈ ದುರಹಂಕಾರವನ್ನು ಕನ್ನಡಿಗರು ಸಹಿಸಬೇಕಿಲ್ಲ. ನಾವು ಸಹಸ್ರಾರು ವರ್ಷಗಳಿಂದ ಕನ್ನಡಿಗರು, ಇಂಥ ಹುನ್ನಾರಗಳಿಗೆ ತಲೆಬಾಗುವುದಿಲ್ಲ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಕನ್ನಡಿಗರು ಜಾತಿ, ಮತ, ಧರ್ಮ, ಪಂಥ, ಪಕ್ಷಗಳನ್ನು ಬದಿಗಿಟ್ಟು ಒಂದಾಗಬೇಕಾದ ಕಾಲವಿದು. ಈಗ ನಾವು ಮೈಮರೆತು ಕುಳಿತರೆ ನಮಗೆ ಉಳಿಗಾಲವಿಲ್ಲ. ಕನ್ನಡಿಗರೆಲ್ಲರೂ ಈ ದುಷ್ಟ ಹುನ್ನಾರಗಳ ವಿರುದ್ಧ ಹೋರಾಡೋಣ. ನಾವು ಹಿಂದಿ ಗುಲಾಮರಲ್ಲ‌ ಎಂದು ಸಾರೋಣ. ಹಿಂದಿ ಸಾಮ್ರಾಜ್ಯಶಾಹಿಯ ರಣಕೇಕೆಯನ್ನು ಹಿಮ್ಮೆಟ್ಟಿಸೋಣ ಟಿ.ಎ.ನಾರಾಯಣಗೌಡ ಕರೆ ನೀಡಿದ್ದಾರೆ.

ಮಾಜಿ ಸಿಎಂ ಎಚ್.‌ಡಿ ಕುಮಾರಸ್ವಾಮಿ ಸಹ ರಾಜ್ಯ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಗೃಹಸಚಿವರಾದ ಅಮಿತ್ ಷಾ ಅವರು ಶಂಕುಸ್ಥಾಪನೆ ನೆರವೇರಿಸಿದ ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿವೆ. ಇಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ. ವೈವಿಧ್ಯಮಯ ಭಾರತ ತ್ರಿಭಾಷಾ ಸೂತ್ರ ಅಳವಡಿಸಿಕೊಂಡಿದ್ದು, ಆಯಾ ರಾಜ್ಯ ಭಾಷೆ ಗೌರವಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಗೃಹ ಸಚಿವರೆ ತ್ರಿಭಾಷಾ ಸೂತ್ರವನ್ನು ಧಿಕ್ಕರಿಸಿರುವುದು ಕನ್ನಡಕ್ಕೆ, ಕನ್ನಡಿಗರಿಗೆ ಮಾಡಿದ ಅಗೌರವ. ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ನಾಡು-ನುಡಿಯ ಘನತೆಯನ್ನು ಮರೆತದ್ದು ಅತ್ಯಂತ ಖಂಡನೀಯ ಎಂದು ಹಿಂದಿ-ಆಂಗ್ಲ ಭಾಷೆಯ ನಿಷ್ಠ ಧೋರಣೆಯಲ್ಲಿ ಕನ್ನಡ ಭಾಷೆಯನ್ನು ಅವಗಣನೆ ಮಾಡಿರುವ ಅಮಿತ್ ಷಾ ಅವರ ಧೋರಣೆ ಕನ್ನಡ ವಿರೋಧಿತನವನ್ನು ತೋರಿಸುತ್ತದೆ. ಇದು ಕನ್ನಡಿಗರ ಸ್ವಾಭಿಮಾನಕ್ಕೆ ಮಾಡಿದ ಅವಮಾನ” ಎಂದು ಎಚ್‌ಡಿಕೆ ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರದ ಅಧೀನದಲ್ಲಿರುವ RAF ಘಟಕ ಸ್ಥಾಪನೆಗೆ ಕನ್ನಡದ ನೆಲವನ್ನೆ ಕೊಟ್ಟಿದ್ದು, ಈ ಪರಿಜ್ಞಾನವಿಲ್ಲದೆ ಕನ್ನಡದಲ್ಲಿ ಅಡಿಗಲ್ಲು ಫಲಕ ಇಲ್ಲದಿರುವುದು ಅಕ್ಷಮ್ಯ. ಅಮಿತ್ ಷಾ ಅವರು ತ್ರಿಭಾಷಾ ಸೂತ್ರ ಉಲ್ಲಂಘಿಸಿರುವುದಕ್ಕೆ ಕನ್ನಡಿಗರಿಗೆ ಸ್ಪಷ್ಟನೆ ನೀಡಬೇಕು. ನಾಡು-ನುಡಿಯ ಘನತೆಗೆ ಚ್ಯುತಿ ಬಂದಾಗ ಸಹಿಸಿಕೊಳ್ಳುವವರಿಗೆ ಈ ರಾಜ್ಯದ ಆಡಳಿತ ನಡೆಸುವ ಅರ್ಹತೆ ಇಲ್ಲ. ಕೇಂದ್ರದ ಗೃಹಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡೆ ಕನ್ನಡಕ್ಕೆ ಬಗೆದ ದ್ರೋಹವಾಗಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಹಿಂದಿ ಹೇರಿಕೆಗೆ ವಿಭಿನ್ನ ವಿರೋಧ: ಪವನ್ ಕುಮಾರ್ ನಿರ್ದೇಶನದ ’ಏನ್ ಮಾಡೋದು..?’ ಕಿರುಚಿತ್ರ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...