Homeಕರ್ನಾಟಕಹಿಂಗೆ ಸಹಿಸ್ಕೊಂಡರೆ, ನಾವು ಸತ್ತ ಜನ ಎಂದು ಪ್ರೂವ್‌ ಮಾಡದ್ಹಂಗೆ - ಮೆಟ್ರೋ ದರ ಏರಿಕೆ...

ಹಿಂಗೆ ಸಹಿಸ್ಕೊಂಡರೆ, ನಾವು ಸತ್ತ ಜನ ಎಂದು ಪ್ರೂವ್‌ ಮಾಡದ್ಹಂಗೆ – ಮೆಟ್ರೋ ದರ ಏರಿಕೆ ವಿರುದ್ಧ ಆಕ್ರೋಶ

- Advertisement -
- Advertisement -

ಬೆಂಗಳೂರು ‘ನಮ್ಮ ಮೆಟ್ರೋ’ ರೈಲು ಪ್ರಯಾಣಿಕರ ದರ ಗರಿಷ್ಠ 50%ರಷ್ಟು ಏರಿಕೆಯಾಗಿದ್ದು ಸರ್ಕಾರಗಳ ವಿರುದ್ಧ ಸಾರ್ವಜನಿಕರು ಸೇರಿದಂತೆ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಮಾರು ಎಂಟು ವರ್ಷಗಳ ನಂತರ ದರ ನಿಗದಿ ಸಮಿತಿಯ (ಎಫ್‌ಎಫ್‌ಸಿ) ಶಿಫಾರಸುಗಳ ಆಧಾರದ ಮೇಲೆ ನಮ್ಮ ಮೆಟ್ರೋವನ್ನು ನಿರ್ವಹಿಸುವ ಬಿಎಂಆರ್‌ಸಿಎಲ್ ದರಗಳನ್ನು ಪರಿಷ್ಕರಿಸಿದೆ. ದರ ಪರಿಷ್ಕರಣೆಯ ನಂತರ 60 ರೂ.ಗಳ ಹಿಂದಿನ ದರವೂ ಈಗ 90 ರೂ.ಗೆ ತಲುಪಿದೆ. ಹಿಂಗೆ ಸಹಿಸ್ಕೊಂಡರೆ

ಬೆಂಗಳೂರು ನಮ್ಮ ಮೆಟ್ರೋ ರೈಲು ಸೇವೆಯು ಕೇಂದ್ರ ಮತ್ತು ಕರ್ನಾಟಕ ಸರ್ಕಾರದ ಜಂಟಿ ಉದ್ಯಮವಾಗಿದ್ದು, “ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್” (BMRCL) ಇದನ್ನು ನಿರ್ವಹಿಸುತ್ತದೆ. ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ, ದರ ನಿಗದಿ ಸಮಿತಿ (FFC) ಯ ಶಿಫಾರಸುಗಳ ಆಧಾರದ ಮೇಲೆ BMRCL ಮಂಡಳಿಯು ಪರಿಷ್ಕೃತ ದರ ರಚನೆಯನ್ನು ಅನುಮೋದಿಸಿದೆ.

ಫೆಬ್ರವರಿ 9, 2025 ರಿಂದ, ಗರಿಷ್ಠ ದರವನ್ನು ₹60 ರಿಂದ ₹90ಕ್ಕೆ ಹೆಚ್ಚಿಸಲಾಗಿದೆ. ಈ ದರ ಹೆಚ್ಚಳವು ಬಿಎಂಆರ್‌ಸಿಎಲ್‌ಗೆ ಹೆಚ್ಚುವರಿ ಆದಾಯವನ್ನು ಗಳಿಸುವ ನಿರೀಕ್ಷೆಯಿದ್ದು, ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆಗೆ ಕಾರಣವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಈ ನಡುವೆ, ಮೆಟ್ರೋ ದರ ಏರಿಕೆ ವಿರುದ್ಧ ಹೋರಾಟಗಾರರು ಸೇರಿದಂತೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಉಭಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಮಾಜಿಕ ಹೋರಾಟಗಾರ ನಾಗೇಗೌಡ ಕೀಲಾರ ಅವರು, “ಮೆಟ್ರೊ ದರ ಏರಿಕೆ ವಿರುದ್ಧ ಬೆಂಗಳೂರು ನಾಗರಿಕರು ಬೆಂಗಳೂರು ನಗರಾಬಿವೃದ್ಧಿ ಸಚಿವ ಡಿಕೆ ಶಿವಕುಮಾರ್, ಬೆಂಗಳೂರಿನ 4 ಜನ ಲೋಕಸಭಾ ಸದಸ್ಯರಾದ ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್, ಡಾ.ಮಂಜುನಾಥ್ ಮತ್ತು ಶೋಭ, ಜೊತೆಗೆ ಬೆಂಗಳೂರಿನ 28 MLA ಗಳನ್ನು ಹೊಣೆ ಮಾಡಬೇಕು” ಎಂದು ಹೇಳಿದ್ದಾರೆ.

“ಇವರುಗಳ ಕೈಯಲ್ಲಿ ದರ ಏರಿಕೆ ನಿಲ್ಲಿಸಲು ಆಗಲಿಲ್ಲ ಅಂದರೆ ರಾಜೀನಾಮೆ ನೀಡುವಂತೆ ಒತ್ತಾಯಿಸುವುದರ ಜೊತೆಗೆ ಇನ್ನೆರಡು ದಿನಗಳಲ್ಲಿ ರಾಜೀನಾಮೆ ಕೊಡಿಸಬೇಕು. ಅದರಲ್ಲೂ ನಾಲ್ಕು ಜನ ಸಂಸದರು ರಾಜೀನಾಮೆ ಪತ್ರವನ್ನು ತಕ್ಶಣವೇ ಲೋಕಸಬಾ ಸ್ಪಿಕರ್‌ಗೆ ಕಳಿಸಬೇಕು. ಸಂಘಟಿತರಾಗಿ ಬೆಂಗಳೂರಿನ ನಾಗರಿಕರಿಗೆ ಇಷ್ಟು ಮಾಡಿಸಲು ಆಗಲಿಲ್ಲ ಅಂದರೆ ಈ ಜನ್ಮದಲ್ಲಿ ಇವರ ಬೆಲೆ ಏರಿಕೆ ಲೂಟಿಯಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಸಾಧ್ಯವಿಲ್ಲ” ಎಂದು  ಅವರು ಹೇಳಿದ್ದಾರೆ.

“ನಮ್ಮ ಹಕ್ಕೋತ್ತಾಯ ಈಗ ಇರುವ ಟಿಕೆಟ್ ಬೆಲೆಯನ್ನು ಮುಂದುವರೆಸಿ ಅನ್ನುವುದು ಆಗಿರಬೇಕು. 5-10% ದರ ಏರಿಕೆಗೂ ಒಪ್ಪಬಾರದು. ದರ ಏರಿಕೆ ಅನಿವಾರ್ಯ ಇಲ್ಲ ಮೆಟ್ರೊ ನಷ್ಟ ಅನುಭವಿಸುತ್ತೆ ಅಂದರೆ ಆ ನಷ್ಟವನ್ನು ಒಕ್ಕೂಟ ಸರ್ಕಾರ ಬರಿಸಲಿ” ಕೀಲಾರ ನಾಗೇಗೌಡ ಅವರು ಹೇಳಿದ್ದಾರೆ.

ಪತ್ರಕರ್ತೆ ಮಮತಾ ಎಂ. ಅವರು, “ಮೆಟ್ರೋ ದರ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ದೇಶದಲ್ಲೇ ಅತಿ ಹೆಚ್ಚು ದರ ಪಾವತಿ ಮಾಡಬೇಕಾದ ಸ್ಥಿತಿ. ಆದರೆ, ಆಶ್ಚರ್ಯದ ವಿಷಯವೆಂದರೆ ಈ ಬಗ್ಗೆ ಎಲ್ಲೂ ಪ್ರತಿಭಟನೆ, ಆಕ್ಷೇಪದ ದನಿ ಇಲ್ಲದಿರುವುದು. ಕೆಎಸ್‌ಆರ್‌ಟಿಸಿಯಲ್ಲಿ ಹತ್ತು, ಹದಿನೈದು ಪರ್ಸೆಂಟ್‌ ಟಿಕೆಟ್‌ ದರ ಏರಿಕೆಯಾದಾಗ ಕೇಳಿಬರುವ ಆಕ್ಷೇಪ ಕೂಡ ಇಲ್ಲಿ ಕಾಣಿಸುತ್ತಿಲ್ಲ. ಇದು ನಗರ ಪ್ರದೇಶಗಳ ಸಮಸ್ಯೆಯೇ? ಅಥವಾ ಜನರ ಬಳಿ ಹಣ ಇಷ್ಟೊಂದು ಹೆಚ್ಚಿದೆಯೇ?…. ಪ್ರತಿಭಟಿಸುವ ಕ್ಷಿಣ ದನಿ ಕೂಡ ಸಾರ್ವಜನಿಕರಿಂದ ಇಲ್ಲವಲ್ಲ…ವಿರೋಧದ ದನಿಗಳು ಕಡಿಮೆಯಾದಷ್ಟು ಬಂಡವಾಳಶಾಹಿಗಳು, ಸರ್ಕಾರಗಳ ದರ್ಪ ಹೆಚ್ಚಾಗುತ್ತದೆ ಎಂಬುದನ್ನು ನಮ್ಮ ಸಮಾಜ ಎಂದಿಗೂ ಮರೆಯಬಾರದು” ಎಂದು ಅವರು ಹೇಳಿದ್ದಾರೆ.

“ಬೀದಿಗಿಳಿದು ಹೋರಾಡಲು ಆಗದಿದ್ದರೇ ಕನಿಷ್ಟ ಸಾಮಾಜಿಕ ಜಾಲತಾಣಗಳಲ್ಲಿಯಾದರೂ ಈ ಬಗ್ಗೆ ವಿರೋಧ ಕೇಳಿಬರಲಿ. ಸರ್ಕಾರ ಯಾವುದಾದರೂ ಆಗಿರಲಿ ನಮ್ಮ ಮೇಲಾಗುವ ದೌರ್ಜನ್ಯಗಳನ್ನು ಒಕ್ಕೂರಲಿನಿಂದ ಪ್ರತಿಭಟಿಸಬೇಕಿರುವುದು ನಮ್ಮ ಕರ್ತವ್ಯ” ಎಂದು ಮಮತಾ ಅವರು ಹೇಳಿದ್ದಾರೆ.

ಸಾಮಾಜಿಕ ಹೋರಾಟಗಾರ ರಾಜಶೇಖರ್ ಅಕ್ಕಿ ಅವರು, “ನನ್ನ ಮನೆಯು ಕಚೇರಿಯಿಂದ ಸುಮಾರು ಹತ್ತು ಕಿಲೋಮೀಟರ್‌ ದೂರದಲ್ಲಿದೆ. ಈಗ ಮೆಟ್ರೊ ಬಳಿಸಿದರೆ 92 ರೂ. ಆಗುತ್ತೆ, ಸ್ಕೂಟರ್‌ ಬಳಸಿದರೆ ಗರಿಷ್ಟ 50 ರೂ. ʼಏಯ್‌ ಜನರೇ, ಮೆಟ್ರೋ ಬಿಡಿ. ಸ್ಕೂಟರ್‌, ಕಾರ್‌ ಬಳಸಿ,ʼ ಎಂದು ಸರಕಾರ ನಮಗೆ ಹೇಳ್ತಿದೆ. ಇದನ್ನು ಹಿಂಗೆ ಸಹಿಸ್ಕೊಂಡರೆ, ನಾವು ಸತ್ತ ಜನ ಎಂದು ಪ್ರೂವ್‌ ಮಾಡದ್ಹಂಗೆ.” ಎಂದು ಹೇಳಿದ್ದಾರೆ.

ಪತ್ರಕರ್ತ ಮುತ್ತರಾಜು ಅವರು, “ದೇಶದಲ್ಲಿಯೇ ದುಬಾರಿ ಯಾವ ಕಾರಣಕ್ಕೆ? ಜನಸಾಮಾನ್ಯರಿಂದ ಸುಲಿಯುವ ಸರ್ಕಾರ ಜನವಿರೋಧಿ ಸರ್ಕಾರವೇ ಆಗಿರುತ್ತದೆ. ಈ ಜನ ವಿರೋಧಿ ಸರ್ಕಾರ ಕೂಡಲೇ ಮೆಟ್ರೊ ದರ ಹೆಚ್ಚಳವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸೋಣ.. ಇದರ ವಿರುದ್ದ ಪ್ರತಿಭಟಿಸೋಣ” ಎಂದು ಹೇಳಿದ್ದಾರೆ.

ವರುಣ್ ಅವರು, “ಮೆಟ್ರೋ ದರ ಹೇರಿಕೆ ಮಾಡಿದ್ದು ಯಾರು? ಮೊದಲಿಗೆ ನಮ್ಮ ಮೆಟ್ರೋ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಂಟಿ ಪ್ರಾಜೆಕ್ಟ್. ಇದಕ್ಕೆ M.D. (Managing Director) ಅವರನ್ನು ನೇಮಕ ಮಾಡೋದು ರಾಜ್ಯ ಸರ್ಕಾರ ಮತ್ತು MD ರಿಪೋರ್ಟ್ ಮಾಡಿಕೊಳ್ಳಬೇಕಿರೋದು ರಾಜ್ಯದ ಮುಖ್ಯಮಂತ್ರಿ ಅವರಿಗೆ. ಕೆಲ ತಿಂಗಳ ಹಿಂದೆ ರಾಜ್ಯ ಸರ್ಕಾರ ಟಿಕೆಟ್ ದರ ಏರಿಸಬೇಕು ಅಂತ ಕೇಂದ್ರದ ಅಧೀನದಲ್ಲಿರುವ ಮೆಟ್ರೋ ಸಮಿತಿಗೆ ಶಿಫಾರಸ್ಸು ಮಾಡಿದೆ. ಅದಕ್ಕೆ ಈಗ ಕೇಂದ್ರ ಒಪ್ಪಿ ಸಮಿತಿಗೆ ಕಳುಹಿಸಿದೆ ಮತ್ತು ಸಮಿತಿ ಹೊಸ ದರವನ್ನು ಜಾರಿಗೆ ತಂದಿದೆ. ಒಬ್ಬರ ಮೇಲೆ ಒಬ್ಬರು ಗೂಬೆ ಕೂರಿಸೋದು ಬಿಟ್ಟು ಎಲ್ಲರೂ ಒಗ್ಗಟ್ಟಾಗಿ ಈ ಜನ ವಿರೋಧಿ ಹೊಸ ದರದ ವಿರುದ್ಧ ಮಾತಾಡಿ.” ಎಂದು ಹೇಳಿದ್ದಾರೆ.

“ಹೋರಾಟಗಾರ ಅನಿಲ್ ಕುಮಾರ್ ಚಿಕ್ಕದಾಳವಟ್ಟ ಅವರು, “ಸಾರ್ವಜನಿಕ ಸೇವೆಗಳನ್ನು ಹೆಚ್ಚು ಹೆಚ್ಚು ಬಳಸಿ ಅಂಥ ಪುಕ್ಸಟ್ಟೆ ಭಾಷಣ ಹೊಡೆಯುವ ಅಯೋಗ್ಯರು ಈ ರೀತಿ ದರ ಏರಿಸಿದರೆ ಬಡವರ ಓಡಾಡೋದು ಹೇಗೆ..? ರಾಜ್ಯ ಸರ್ಕಾರನೋ, ಕೇಂದ್ರ ಸರ್ಕಾರನೋ ಯಾವಾನಾದರೂ ಆಗಲಿ ದರ ಇಳಿಸಲೇಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂಓದಿ:  ಎಎಪಿ-ಕಾಂಗ್ರೆಸ್ ಪರಸ್ಪರ ಕಿತ್ತಾಟ ಮುಂದುವರಿಸುವುದಾದರೆ ಇಂಡಿಯಾ ಒಕ್ಕೂಟದ ಅಗತ್ಯವೇನಿದೆ? ಶಿವಸೇನೆ (ಯುಬಿಟಿ) ಕಿಡಿ

ಎಎಪಿ-ಕಾಂಗ್ರೆಸ್ ಪರಸ್ಪರ ಕಿತ್ತಾಟ ಮುಂದುವರಿಸುವುದಾದರೆ ಇಂಡಿಯಾ ಒಕ್ಕೂಟದ ಅಗತ್ಯವೇನಿದೆ? ಶಿವಸೇನೆ (ಯುಬಿಟಿ) ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...