Homeಕರ್ನಾಟಕಹಿಂಗೆ ಸಹಿಸ್ಕೊಂಡರೆ, ನಾವು ಸತ್ತ ಜನ ಎಂದು ಪ್ರೂವ್‌ ಮಾಡದ್ಹಂಗೆ - ಮೆಟ್ರೋ ದರ ಏರಿಕೆ...

ಹಿಂಗೆ ಸಹಿಸ್ಕೊಂಡರೆ, ನಾವು ಸತ್ತ ಜನ ಎಂದು ಪ್ರೂವ್‌ ಮಾಡದ್ಹಂಗೆ – ಮೆಟ್ರೋ ದರ ಏರಿಕೆ ವಿರುದ್ಧ ಆಕ್ರೋಶ

- Advertisement -
- Advertisement -

ಬೆಂಗಳೂರು ‘ನಮ್ಮ ಮೆಟ್ರೋ’ ರೈಲು ಪ್ರಯಾಣಿಕರ ದರ ಗರಿಷ್ಠ 50%ರಷ್ಟು ಏರಿಕೆಯಾಗಿದ್ದು ಸರ್ಕಾರಗಳ ವಿರುದ್ಧ ಸಾರ್ವಜನಿಕರು ಸೇರಿದಂತೆ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಮಾರು ಎಂಟು ವರ್ಷಗಳ ನಂತರ ದರ ನಿಗದಿ ಸಮಿತಿಯ (ಎಫ್‌ಎಫ್‌ಸಿ) ಶಿಫಾರಸುಗಳ ಆಧಾರದ ಮೇಲೆ ನಮ್ಮ ಮೆಟ್ರೋವನ್ನು ನಿರ್ವಹಿಸುವ ಬಿಎಂಆರ್‌ಸಿಎಲ್ ದರಗಳನ್ನು ಪರಿಷ್ಕರಿಸಿದೆ. ದರ ಪರಿಷ್ಕರಣೆಯ ನಂತರ 60 ರೂ.ಗಳ ಹಿಂದಿನ ದರವೂ ಈಗ 90 ರೂ.ಗೆ ತಲುಪಿದೆ. ಹಿಂಗೆ ಸಹಿಸ್ಕೊಂಡರೆ

ಬೆಂಗಳೂರು ನಮ್ಮ ಮೆಟ್ರೋ ರೈಲು ಸೇವೆಯು ಕೇಂದ್ರ ಮತ್ತು ಕರ್ನಾಟಕ ಸರ್ಕಾರದ ಜಂಟಿ ಉದ್ಯಮವಾಗಿದ್ದು, “ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್” (BMRCL) ಇದನ್ನು ನಿರ್ವಹಿಸುತ್ತದೆ. ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ, ದರ ನಿಗದಿ ಸಮಿತಿ (FFC) ಯ ಶಿಫಾರಸುಗಳ ಆಧಾರದ ಮೇಲೆ BMRCL ಮಂಡಳಿಯು ಪರಿಷ್ಕೃತ ದರ ರಚನೆಯನ್ನು ಅನುಮೋದಿಸಿದೆ.

ಫೆಬ್ರವರಿ 9, 2025 ರಿಂದ, ಗರಿಷ್ಠ ದರವನ್ನು ₹60 ರಿಂದ ₹90ಕ್ಕೆ ಹೆಚ್ಚಿಸಲಾಗಿದೆ. ಈ ದರ ಹೆಚ್ಚಳವು ಬಿಎಂಆರ್‌ಸಿಎಲ್‌ಗೆ ಹೆಚ್ಚುವರಿ ಆದಾಯವನ್ನು ಗಳಿಸುವ ನಿರೀಕ್ಷೆಯಿದ್ದು, ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆಗೆ ಕಾರಣವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಈ ನಡುವೆ, ಮೆಟ್ರೋ ದರ ಏರಿಕೆ ವಿರುದ್ಧ ಹೋರಾಟಗಾರರು ಸೇರಿದಂತೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಉಭಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಮಾಜಿಕ ಹೋರಾಟಗಾರ ನಾಗೇಗೌಡ ಕೀಲಾರ ಅವರು, “ಮೆಟ್ರೊ ದರ ಏರಿಕೆ ವಿರುದ್ಧ ಬೆಂಗಳೂರು ನಾಗರಿಕರು ಬೆಂಗಳೂರು ನಗರಾಬಿವೃದ್ಧಿ ಸಚಿವ ಡಿಕೆ ಶಿವಕುಮಾರ್, ಬೆಂಗಳೂರಿನ 4 ಜನ ಲೋಕಸಭಾ ಸದಸ್ಯರಾದ ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್, ಡಾ.ಮಂಜುನಾಥ್ ಮತ್ತು ಶೋಭ, ಜೊತೆಗೆ ಬೆಂಗಳೂರಿನ 28 MLA ಗಳನ್ನು ಹೊಣೆ ಮಾಡಬೇಕು” ಎಂದು ಹೇಳಿದ್ದಾರೆ.

“ಇವರುಗಳ ಕೈಯಲ್ಲಿ ದರ ಏರಿಕೆ ನಿಲ್ಲಿಸಲು ಆಗಲಿಲ್ಲ ಅಂದರೆ ರಾಜೀನಾಮೆ ನೀಡುವಂತೆ ಒತ್ತಾಯಿಸುವುದರ ಜೊತೆಗೆ ಇನ್ನೆರಡು ದಿನಗಳಲ್ಲಿ ರಾಜೀನಾಮೆ ಕೊಡಿಸಬೇಕು. ಅದರಲ್ಲೂ ನಾಲ್ಕು ಜನ ಸಂಸದರು ರಾಜೀನಾಮೆ ಪತ್ರವನ್ನು ತಕ್ಶಣವೇ ಲೋಕಸಬಾ ಸ್ಪಿಕರ್‌ಗೆ ಕಳಿಸಬೇಕು. ಸಂಘಟಿತರಾಗಿ ಬೆಂಗಳೂರಿನ ನಾಗರಿಕರಿಗೆ ಇಷ್ಟು ಮಾಡಿಸಲು ಆಗಲಿಲ್ಲ ಅಂದರೆ ಈ ಜನ್ಮದಲ್ಲಿ ಇವರ ಬೆಲೆ ಏರಿಕೆ ಲೂಟಿಯಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಸಾಧ್ಯವಿಲ್ಲ” ಎಂದು  ಅವರು ಹೇಳಿದ್ದಾರೆ.

“ನಮ್ಮ ಹಕ್ಕೋತ್ತಾಯ ಈಗ ಇರುವ ಟಿಕೆಟ್ ಬೆಲೆಯನ್ನು ಮುಂದುವರೆಸಿ ಅನ್ನುವುದು ಆಗಿರಬೇಕು. 5-10% ದರ ಏರಿಕೆಗೂ ಒಪ್ಪಬಾರದು. ದರ ಏರಿಕೆ ಅನಿವಾರ್ಯ ಇಲ್ಲ ಮೆಟ್ರೊ ನಷ್ಟ ಅನುಭವಿಸುತ್ತೆ ಅಂದರೆ ಆ ನಷ್ಟವನ್ನು ಒಕ್ಕೂಟ ಸರ್ಕಾರ ಬರಿಸಲಿ” ಕೀಲಾರ ನಾಗೇಗೌಡ ಅವರು ಹೇಳಿದ್ದಾರೆ.

ಪತ್ರಕರ್ತೆ ಮಮತಾ ಎಂ. ಅವರು, “ಮೆಟ್ರೋ ದರ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ದೇಶದಲ್ಲೇ ಅತಿ ಹೆಚ್ಚು ದರ ಪಾವತಿ ಮಾಡಬೇಕಾದ ಸ್ಥಿತಿ. ಆದರೆ, ಆಶ್ಚರ್ಯದ ವಿಷಯವೆಂದರೆ ಈ ಬಗ್ಗೆ ಎಲ್ಲೂ ಪ್ರತಿಭಟನೆ, ಆಕ್ಷೇಪದ ದನಿ ಇಲ್ಲದಿರುವುದು. ಕೆಎಸ್‌ಆರ್‌ಟಿಸಿಯಲ್ಲಿ ಹತ್ತು, ಹದಿನೈದು ಪರ್ಸೆಂಟ್‌ ಟಿಕೆಟ್‌ ದರ ಏರಿಕೆಯಾದಾಗ ಕೇಳಿಬರುವ ಆಕ್ಷೇಪ ಕೂಡ ಇಲ್ಲಿ ಕಾಣಿಸುತ್ತಿಲ್ಲ. ಇದು ನಗರ ಪ್ರದೇಶಗಳ ಸಮಸ್ಯೆಯೇ? ಅಥವಾ ಜನರ ಬಳಿ ಹಣ ಇಷ್ಟೊಂದು ಹೆಚ್ಚಿದೆಯೇ?…. ಪ್ರತಿಭಟಿಸುವ ಕ್ಷಿಣ ದನಿ ಕೂಡ ಸಾರ್ವಜನಿಕರಿಂದ ಇಲ್ಲವಲ್ಲ…ವಿರೋಧದ ದನಿಗಳು ಕಡಿಮೆಯಾದಷ್ಟು ಬಂಡವಾಳಶಾಹಿಗಳು, ಸರ್ಕಾರಗಳ ದರ್ಪ ಹೆಚ್ಚಾಗುತ್ತದೆ ಎಂಬುದನ್ನು ನಮ್ಮ ಸಮಾಜ ಎಂದಿಗೂ ಮರೆಯಬಾರದು” ಎಂದು ಅವರು ಹೇಳಿದ್ದಾರೆ.

“ಬೀದಿಗಿಳಿದು ಹೋರಾಡಲು ಆಗದಿದ್ದರೇ ಕನಿಷ್ಟ ಸಾಮಾಜಿಕ ಜಾಲತಾಣಗಳಲ್ಲಿಯಾದರೂ ಈ ಬಗ್ಗೆ ವಿರೋಧ ಕೇಳಿಬರಲಿ. ಸರ್ಕಾರ ಯಾವುದಾದರೂ ಆಗಿರಲಿ ನಮ್ಮ ಮೇಲಾಗುವ ದೌರ್ಜನ್ಯಗಳನ್ನು ಒಕ್ಕೂರಲಿನಿಂದ ಪ್ರತಿಭಟಿಸಬೇಕಿರುವುದು ನಮ್ಮ ಕರ್ತವ್ಯ” ಎಂದು ಮಮತಾ ಅವರು ಹೇಳಿದ್ದಾರೆ.

ಸಾಮಾಜಿಕ ಹೋರಾಟಗಾರ ರಾಜಶೇಖರ್ ಅಕ್ಕಿ ಅವರು, “ನನ್ನ ಮನೆಯು ಕಚೇರಿಯಿಂದ ಸುಮಾರು ಹತ್ತು ಕಿಲೋಮೀಟರ್‌ ದೂರದಲ್ಲಿದೆ. ಈಗ ಮೆಟ್ರೊ ಬಳಿಸಿದರೆ 92 ರೂ. ಆಗುತ್ತೆ, ಸ್ಕೂಟರ್‌ ಬಳಸಿದರೆ ಗರಿಷ್ಟ 50 ರೂ. ʼಏಯ್‌ ಜನರೇ, ಮೆಟ್ರೋ ಬಿಡಿ. ಸ್ಕೂಟರ್‌, ಕಾರ್‌ ಬಳಸಿ,ʼ ಎಂದು ಸರಕಾರ ನಮಗೆ ಹೇಳ್ತಿದೆ. ಇದನ್ನು ಹಿಂಗೆ ಸಹಿಸ್ಕೊಂಡರೆ, ನಾವು ಸತ್ತ ಜನ ಎಂದು ಪ್ರೂವ್‌ ಮಾಡದ್ಹಂಗೆ.” ಎಂದು ಹೇಳಿದ್ದಾರೆ.

ಪತ್ರಕರ್ತ ಮುತ್ತರಾಜು ಅವರು, “ದೇಶದಲ್ಲಿಯೇ ದುಬಾರಿ ಯಾವ ಕಾರಣಕ್ಕೆ? ಜನಸಾಮಾನ್ಯರಿಂದ ಸುಲಿಯುವ ಸರ್ಕಾರ ಜನವಿರೋಧಿ ಸರ್ಕಾರವೇ ಆಗಿರುತ್ತದೆ. ಈ ಜನ ವಿರೋಧಿ ಸರ್ಕಾರ ಕೂಡಲೇ ಮೆಟ್ರೊ ದರ ಹೆಚ್ಚಳವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸೋಣ.. ಇದರ ವಿರುದ್ದ ಪ್ರತಿಭಟಿಸೋಣ” ಎಂದು ಹೇಳಿದ್ದಾರೆ.

ವರುಣ್ ಅವರು, “ಮೆಟ್ರೋ ದರ ಹೇರಿಕೆ ಮಾಡಿದ್ದು ಯಾರು? ಮೊದಲಿಗೆ ನಮ್ಮ ಮೆಟ್ರೋ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಂಟಿ ಪ್ರಾಜೆಕ್ಟ್. ಇದಕ್ಕೆ M.D. (Managing Director) ಅವರನ್ನು ನೇಮಕ ಮಾಡೋದು ರಾಜ್ಯ ಸರ್ಕಾರ ಮತ್ತು MD ರಿಪೋರ್ಟ್ ಮಾಡಿಕೊಳ್ಳಬೇಕಿರೋದು ರಾಜ್ಯದ ಮುಖ್ಯಮಂತ್ರಿ ಅವರಿಗೆ. ಕೆಲ ತಿಂಗಳ ಹಿಂದೆ ರಾಜ್ಯ ಸರ್ಕಾರ ಟಿಕೆಟ್ ದರ ಏರಿಸಬೇಕು ಅಂತ ಕೇಂದ್ರದ ಅಧೀನದಲ್ಲಿರುವ ಮೆಟ್ರೋ ಸಮಿತಿಗೆ ಶಿಫಾರಸ್ಸು ಮಾಡಿದೆ. ಅದಕ್ಕೆ ಈಗ ಕೇಂದ್ರ ಒಪ್ಪಿ ಸಮಿತಿಗೆ ಕಳುಹಿಸಿದೆ ಮತ್ತು ಸಮಿತಿ ಹೊಸ ದರವನ್ನು ಜಾರಿಗೆ ತಂದಿದೆ. ಒಬ್ಬರ ಮೇಲೆ ಒಬ್ಬರು ಗೂಬೆ ಕೂರಿಸೋದು ಬಿಟ್ಟು ಎಲ್ಲರೂ ಒಗ್ಗಟ್ಟಾಗಿ ಈ ಜನ ವಿರೋಧಿ ಹೊಸ ದರದ ವಿರುದ್ಧ ಮಾತಾಡಿ.” ಎಂದು ಹೇಳಿದ್ದಾರೆ.

“ಹೋರಾಟಗಾರ ಅನಿಲ್ ಕುಮಾರ್ ಚಿಕ್ಕದಾಳವಟ್ಟ ಅವರು, “ಸಾರ್ವಜನಿಕ ಸೇವೆಗಳನ್ನು ಹೆಚ್ಚು ಹೆಚ್ಚು ಬಳಸಿ ಅಂಥ ಪುಕ್ಸಟ್ಟೆ ಭಾಷಣ ಹೊಡೆಯುವ ಅಯೋಗ್ಯರು ಈ ರೀತಿ ದರ ಏರಿಸಿದರೆ ಬಡವರ ಓಡಾಡೋದು ಹೇಗೆ..? ರಾಜ್ಯ ಸರ್ಕಾರನೋ, ಕೇಂದ್ರ ಸರ್ಕಾರನೋ ಯಾವಾನಾದರೂ ಆಗಲಿ ದರ ಇಳಿಸಲೇಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂಓದಿ:  ಎಎಪಿ-ಕಾಂಗ್ರೆಸ್ ಪರಸ್ಪರ ಕಿತ್ತಾಟ ಮುಂದುವರಿಸುವುದಾದರೆ ಇಂಡಿಯಾ ಒಕ್ಕೂಟದ ಅಗತ್ಯವೇನಿದೆ? ಶಿವಸೇನೆ (ಯುಬಿಟಿ) ಕಿಡಿ

ಎಎಪಿ-ಕಾಂಗ್ರೆಸ್ ಪರಸ್ಪರ ಕಿತ್ತಾಟ ಮುಂದುವರಿಸುವುದಾದರೆ ಇಂಡಿಯಾ ಒಕ್ಕೂಟದ ಅಗತ್ಯವೇನಿದೆ? ಶಿವಸೇನೆ (ಯುಬಿಟಿ) ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...