Homeಕರ್ನಾಟಕಹಿಂಗೆ ಸಹಿಸ್ಕೊಂಡರೆ, ನಾವು ಸತ್ತ ಜನ ಎಂದು ಪ್ರೂವ್‌ ಮಾಡದ್ಹಂಗೆ - ಮೆಟ್ರೋ ದರ ಏರಿಕೆ...

ಹಿಂಗೆ ಸಹಿಸ್ಕೊಂಡರೆ, ನಾವು ಸತ್ತ ಜನ ಎಂದು ಪ್ರೂವ್‌ ಮಾಡದ್ಹಂಗೆ – ಮೆಟ್ರೋ ದರ ಏರಿಕೆ ವಿರುದ್ಧ ಆಕ್ರೋಶ

- Advertisement -
- Advertisement -

ಬೆಂಗಳೂರು ‘ನಮ್ಮ ಮೆಟ್ರೋ’ ರೈಲು ಪ್ರಯಾಣಿಕರ ದರ ಗರಿಷ್ಠ 50%ರಷ್ಟು ಏರಿಕೆಯಾಗಿದ್ದು ಸರ್ಕಾರಗಳ ವಿರುದ್ಧ ಸಾರ್ವಜನಿಕರು ಸೇರಿದಂತೆ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಮಾರು ಎಂಟು ವರ್ಷಗಳ ನಂತರ ದರ ನಿಗದಿ ಸಮಿತಿಯ (ಎಫ್‌ಎಫ್‌ಸಿ) ಶಿಫಾರಸುಗಳ ಆಧಾರದ ಮೇಲೆ ನಮ್ಮ ಮೆಟ್ರೋವನ್ನು ನಿರ್ವಹಿಸುವ ಬಿಎಂಆರ್‌ಸಿಎಲ್ ದರಗಳನ್ನು ಪರಿಷ್ಕರಿಸಿದೆ. ದರ ಪರಿಷ್ಕರಣೆಯ ನಂತರ 60 ರೂ.ಗಳ ಹಿಂದಿನ ದರವೂ ಈಗ 90 ರೂ.ಗೆ ತಲುಪಿದೆ. ಹಿಂಗೆ ಸಹಿಸ್ಕೊಂಡರೆ

ಬೆಂಗಳೂರು ನಮ್ಮ ಮೆಟ್ರೋ ರೈಲು ಸೇವೆಯು ಕೇಂದ್ರ ಮತ್ತು ಕರ್ನಾಟಕ ಸರ್ಕಾರದ ಜಂಟಿ ಉದ್ಯಮವಾಗಿದ್ದು, “ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್” (BMRCL) ಇದನ್ನು ನಿರ್ವಹಿಸುತ್ತದೆ. ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ, ದರ ನಿಗದಿ ಸಮಿತಿ (FFC) ಯ ಶಿಫಾರಸುಗಳ ಆಧಾರದ ಮೇಲೆ BMRCL ಮಂಡಳಿಯು ಪರಿಷ್ಕೃತ ದರ ರಚನೆಯನ್ನು ಅನುಮೋದಿಸಿದೆ.

ಫೆಬ್ರವರಿ 9, 2025 ರಿಂದ, ಗರಿಷ್ಠ ದರವನ್ನು ₹60 ರಿಂದ ₹90ಕ್ಕೆ ಹೆಚ್ಚಿಸಲಾಗಿದೆ. ಈ ದರ ಹೆಚ್ಚಳವು ಬಿಎಂಆರ್‌ಸಿಎಲ್‌ಗೆ ಹೆಚ್ಚುವರಿ ಆದಾಯವನ್ನು ಗಳಿಸುವ ನಿರೀಕ್ಷೆಯಿದ್ದು, ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆಗೆ ಕಾರಣವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಈ ನಡುವೆ, ಮೆಟ್ರೋ ದರ ಏರಿಕೆ ವಿರುದ್ಧ ಹೋರಾಟಗಾರರು ಸೇರಿದಂತೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಉಭಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಮಾಜಿಕ ಹೋರಾಟಗಾರ ನಾಗೇಗೌಡ ಕೀಲಾರ ಅವರು, “ಮೆಟ್ರೊ ದರ ಏರಿಕೆ ವಿರುದ್ಧ ಬೆಂಗಳೂರು ನಾಗರಿಕರು ಬೆಂಗಳೂರು ನಗರಾಬಿವೃದ್ಧಿ ಸಚಿವ ಡಿಕೆ ಶಿವಕುಮಾರ್, ಬೆಂಗಳೂರಿನ 4 ಜನ ಲೋಕಸಭಾ ಸದಸ್ಯರಾದ ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್, ಡಾ.ಮಂಜುನಾಥ್ ಮತ್ತು ಶೋಭ, ಜೊತೆಗೆ ಬೆಂಗಳೂರಿನ 28 MLA ಗಳನ್ನು ಹೊಣೆ ಮಾಡಬೇಕು” ಎಂದು ಹೇಳಿದ್ದಾರೆ.

“ಇವರುಗಳ ಕೈಯಲ್ಲಿ ದರ ಏರಿಕೆ ನಿಲ್ಲಿಸಲು ಆಗಲಿಲ್ಲ ಅಂದರೆ ರಾಜೀನಾಮೆ ನೀಡುವಂತೆ ಒತ್ತಾಯಿಸುವುದರ ಜೊತೆಗೆ ಇನ್ನೆರಡು ದಿನಗಳಲ್ಲಿ ರಾಜೀನಾಮೆ ಕೊಡಿಸಬೇಕು. ಅದರಲ್ಲೂ ನಾಲ್ಕು ಜನ ಸಂಸದರು ರಾಜೀನಾಮೆ ಪತ್ರವನ್ನು ತಕ್ಶಣವೇ ಲೋಕಸಬಾ ಸ್ಪಿಕರ್‌ಗೆ ಕಳಿಸಬೇಕು. ಸಂಘಟಿತರಾಗಿ ಬೆಂಗಳೂರಿನ ನಾಗರಿಕರಿಗೆ ಇಷ್ಟು ಮಾಡಿಸಲು ಆಗಲಿಲ್ಲ ಅಂದರೆ ಈ ಜನ್ಮದಲ್ಲಿ ಇವರ ಬೆಲೆ ಏರಿಕೆ ಲೂಟಿಯಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಸಾಧ್ಯವಿಲ್ಲ” ಎಂದು  ಅವರು ಹೇಳಿದ್ದಾರೆ.

“ನಮ್ಮ ಹಕ್ಕೋತ್ತಾಯ ಈಗ ಇರುವ ಟಿಕೆಟ್ ಬೆಲೆಯನ್ನು ಮುಂದುವರೆಸಿ ಅನ್ನುವುದು ಆಗಿರಬೇಕು. 5-10% ದರ ಏರಿಕೆಗೂ ಒಪ್ಪಬಾರದು. ದರ ಏರಿಕೆ ಅನಿವಾರ್ಯ ಇಲ್ಲ ಮೆಟ್ರೊ ನಷ್ಟ ಅನುಭವಿಸುತ್ತೆ ಅಂದರೆ ಆ ನಷ್ಟವನ್ನು ಒಕ್ಕೂಟ ಸರ್ಕಾರ ಬರಿಸಲಿ” ಕೀಲಾರ ನಾಗೇಗೌಡ ಅವರು ಹೇಳಿದ್ದಾರೆ.

ಪತ್ರಕರ್ತೆ ಮಮತಾ ಎಂ. ಅವರು, “ಮೆಟ್ರೋ ದರ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ದೇಶದಲ್ಲೇ ಅತಿ ಹೆಚ್ಚು ದರ ಪಾವತಿ ಮಾಡಬೇಕಾದ ಸ್ಥಿತಿ. ಆದರೆ, ಆಶ್ಚರ್ಯದ ವಿಷಯವೆಂದರೆ ಈ ಬಗ್ಗೆ ಎಲ್ಲೂ ಪ್ರತಿಭಟನೆ, ಆಕ್ಷೇಪದ ದನಿ ಇಲ್ಲದಿರುವುದು. ಕೆಎಸ್‌ಆರ್‌ಟಿಸಿಯಲ್ಲಿ ಹತ್ತು, ಹದಿನೈದು ಪರ್ಸೆಂಟ್‌ ಟಿಕೆಟ್‌ ದರ ಏರಿಕೆಯಾದಾಗ ಕೇಳಿಬರುವ ಆಕ್ಷೇಪ ಕೂಡ ಇಲ್ಲಿ ಕಾಣಿಸುತ್ತಿಲ್ಲ. ಇದು ನಗರ ಪ್ರದೇಶಗಳ ಸಮಸ್ಯೆಯೇ? ಅಥವಾ ಜನರ ಬಳಿ ಹಣ ಇಷ್ಟೊಂದು ಹೆಚ್ಚಿದೆಯೇ?…. ಪ್ರತಿಭಟಿಸುವ ಕ್ಷಿಣ ದನಿ ಕೂಡ ಸಾರ್ವಜನಿಕರಿಂದ ಇಲ್ಲವಲ್ಲ…ವಿರೋಧದ ದನಿಗಳು ಕಡಿಮೆಯಾದಷ್ಟು ಬಂಡವಾಳಶಾಹಿಗಳು, ಸರ್ಕಾರಗಳ ದರ್ಪ ಹೆಚ್ಚಾಗುತ್ತದೆ ಎಂಬುದನ್ನು ನಮ್ಮ ಸಮಾಜ ಎಂದಿಗೂ ಮರೆಯಬಾರದು” ಎಂದು ಅವರು ಹೇಳಿದ್ದಾರೆ.

“ಬೀದಿಗಿಳಿದು ಹೋರಾಡಲು ಆಗದಿದ್ದರೇ ಕನಿಷ್ಟ ಸಾಮಾಜಿಕ ಜಾಲತಾಣಗಳಲ್ಲಿಯಾದರೂ ಈ ಬಗ್ಗೆ ವಿರೋಧ ಕೇಳಿಬರಲಿ. ಸರ್ಕಾರ ಯಾವುದಾದರೂ ಆಗಿರಲಿ ನಮ್ಮ ಮೇಲಾಗುವ ದೌರ್ಜನ್ಯಗಳನ್ನು ಒಕ್ಕೂರಲಿನಿಂದ ಪ್ರತಿಭಟಿಸಬೇಕಿರುವುದು ನಮ್ಮ ಕರ್ತವ್ಯ” ಎಂದು ಮಮತಾ ಅವರು ಹೇಳಿದ್ದಾರೆ.

ಸಾಮಾಜಿಕ ಹೋರಾಟಗಾರ ರಾಜಶೇಖರ್ ಅಕ್ಕಿ ಅವರು, “ನನ್ನ ಮನೆಯು ಕಚೇರಿಯಿಂದ ಸುಮಾರು ಹತ್ತು ಕಿಲೋಮೀಟರ್‌ ದೂರದಲ್ಲಿದೆ. ಈಗ ಮೆಟ್ರೊ ಬಳಿಸಿದರೆ 92 ರೂ. ಆಗುತ್ತೆ, ಸ್ಕೂಟರ್‌ ಬಳಸಿದರೆ ಗರಿಷ್ಟ 50 ರೂ. ʼಏಯ್‌ ಜನರೇ, ಮೆಟ್ರೋ ಬಿಡಿ. ಸ್ಕೂಟರ್‌, ಕಾರ್‌ ಬಳಸಿ,ʼ ಎಂದು ಸರಕಾರ ನಮಗೆ ಹೇಳ್ತಿದೆ. ಇದನ್ನು ಹಿಂಗೆ ಸಹಿಸ್ಕೊಂಡರೆ, ನಾವು ಸತ್ತ ಜನ ಎಂದು ಪ್ರೂವ್‌ ಮಾಡದ್ಹಂಗೆ.” ಎಂದು ಹೇಳಿದ್ದಾರೆ.

ಪತ್ರಕರ್ತ ಮುತ್ತರಾಜು ಅವರು, “ದೇಶದಲ್ಲಿಯೇ ದುಬಾರಿ ಯಾವ ಕಾರಣಕ್ಕೆ? ಜನಸಾಮಾನ್ಯರಿಂದ ಸುಲಿಯುವ ಸರ್ಕಾರ ಜನವಿರೋಧಿ ಸರ್ಕಾರವೇ ಆಗಿರುತ್ತದೆ. ಈ ಜನ ವಿರೋಧಿ ಸರ್ಕಾರ ಕೂಡಲೇ ಮೆಟ್ರೊ ದರ ಹೆಚ್ಚಳವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸೋಣ.. ಇದರ ವಿರುದ್ದ ಪ್ರತಿಭಟಿಸೋಣ” ಎಂದು ಹೇಳಿದ್ದಾರೆ.

ವರುಣ್ ಅವರು, “ಮೆಟ್ರೋ ದರ ಹೇರಿಕೆ ಮಾಡಿದ್ದು ಯಾರು? ಮೊದಲಿಗೆ ನಮ್ಮ ಮೆಟ್ರೋ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಂಟಿ ಪ್ರಾಜೆಕ್ಟ್. ಇದಕ್ಕೆ M.D. (Managing Director) ಅವರನ್ನು ನೇಮಕ ಮಾಡೋದು ರಾಜ್ಯ ಸರ್ಕಾರ ಮತ್ತು MD ರಿಪೋರ್ಟ್ ಮಾಡಿಕೊಳ್ಳಬೇಕಿರೋದು ರಾಜ್ಯದ ಮುಖ್ಯಮಂತ್ರಿ ಅವರಿಗೆ. ಕೆಲ ತಿಂಗಳ ಹಿಂದೆ ರಾಜ್ಯ ಸರ್ಕಾರ ಟಿಕೆಟ್ ದರ ಏರಿಸಬೇಕು ಅಂತ ಕೇಂದ್ರದ ಅಧೀನದಲ್ಲಿರುವ ಮೆಟ್ರೋ ಸಮಿತಿಗೆ ಶಿಫಾರಸ್ಸು ಮಾಡಿದೆ. ಅದಕ್ಕೆ ಈಗ ಕೇಂದ್ರ ಒಪ್ಪಿ ಸಮಿತಿಗೆ ಕಳುಹಿಸಿದೆ ಮತ್ತು ಸಮಿತಿ ಹೊಸ ದರವನ್ನು ಜಾರಿಗೆ ತಂದಿದೆ. ಒಬ್ಬರ ಮೇಲೆ ಒಬ್ಬರು ಗೂಬೆ ಕೂರಿಸೋದು ಬಿಟ್ಟು ಎಲ್ಲರೂ ಒಗ್ಗಟ್ಟಾಗಿ ಈ ಜನ ವಿರೋಧಿ ಹೊಸ ದರದ ವಿರುದ್ಧ ಮಾತಾಡಿ.” ಎಂದು ಹೇಳಿದ್ದಾರೆ.

“ಹೋರಾಟಗಾರ ಅನಿಲ್ ಕುಮಾರ್ ಚಿಕ್ಕದಾಳವಟ್ಟ ಅವರು, “ಸಾರ್ವಜನಿಕ ಸೇವೆಗಳನ್ನು ಹೆಚ್ಚು ಹೆಚ್ಚು ಬಳಸಿ ಅಂಥ ಪುಕ್ಸಟ್ಟೆ ಭಾಷಣ ಹೊಡೆಯುವ ಅಯೋಗ್ಯರು ಈ ರೀತಿ ದರ ಏರಿಸಿದರೆ ಬಡವರ ಓಡಾಡೋದು ಹೇಗೆ..? ರಾಜ್ಯ ಸರ್ಕಾರನೋ, ಕೇಂದ್ರ ಸರ್ಕಾರನೋ ಯಾವಾನಾದರೂ ಆಗಲಿ ದರ ಇಳಿಸಲೇಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂಓದಿ:  ಎಎಪಿ-ಕಾಂಗ್ರೆಸ್ ಪರಸ್ಪರ ಕಿತ್ತಾಟ ಮುಂದುವರಿಸುವುದಾದರೆ ಇಂಡಿಯಾ ಒಕ್ಕೂಟದ ಅಗತ್ಯವೇನಿದೆ? ಶಿವಸೇನೆ (ಯುಬಿಟಿ) ಕಿಡಿ

ಎಎಪಿ-ಕಾಂಗ್ರೆಸ್ ಪರಸ್ಪರ ಕಿತ್ತಾಟ ಮುಂದುವರಿಸುವುದಾದರೆ ಇಂಡಿಯಾ ಒಕ್ಕೂಟದ ಅಗತ್ಯವೇನಿದೆ? ಶಿವಸೇನೆ (ಯುಬಿಟಿ) ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...