Homeಕರ್ನಾಟಕಹಿಂಗೆ ಸಹಿಸ್ಕೊಂಡರೆ, ನಾವು ಸತ್ತ ಜನ ಎಂದು ಪ್ರೂವ್‌ ಮಾಡದ್ಹಂಗೆ - ಮೆಟ್ರೋ ದರ ಏರಿಕೆ...

ಹಿಂಗೆ ಸಹಿಸ್ಕೊಂಡರೆ, ನಾವು ಸತ್ತ ಜನ ಎಂದು ಪ್ರೂವ್‌ ಮಾಡದ್ಹಂಗೆ – ಮೆಟ್ರೋ ದರ ಏರಿಕೆ ವಿರುದ್ಧ ಆಕ್ರೋಶ

- Advertisement -
- Advertisement -

ಬೆಂಗಳೂರು ‘ನಮ್ಮ ಮೆಟ್ರೋ’ ರೈಲು ಪ್ರಯಾಣಿಕರ ದರ ಗರಿಷ್ಠ 50%ರಷ್ಟು ಏರಿಕೆಯಾಗಿದ್ದು ಸರ್ಕಾರಗಳ ವಿರುದ್ಧ ಸಾರ್ವಜನಿಕರು ಸೇರಿದಂತೆ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಮಾರು ಎಂಟು ವರ್ಷಗಳ ನಂತರ ದರ ನಿಗದಿ ಸಮಿತಿಯ (ಎಫ್‌ಎಫ್‌ಸಿ) ಶಿಫಾರಸುಗಳ ಆಧಾರದ ಮೇಲೆ ನಮ್ಮ ಮೆಟ್ರೋವನ್ನು ನಿರ್ವಹಿಸುವ ಬಿಎಂಆರ್‌ಸಿಎಲ್ ದರಗಳನ್ನು ಪರಿಷ್ಕರಿಸಿದೆ. ದರ ಪರಿಷ್ಕರಣೆಯ ನಂತರ 60 ರೂ.ಗಳ ಹಿಂದಿನ ದರವೂ ಈಗ 90 ರೂ.ಗೆ ತಲುಪಿದೆ. ಹಿಂಗೆ ಸಹಿಸ್ಕೊಂಡರೆ

ಬೆಂಗಳೂರು ನಮ್ಮ ಮೆಟ್ರೋ ರೈಲು ಸೇವೆಯು ಕೇಂದ್ರ ಮತ್ತು ಕರ್ನಾಟಕ ಸರ್ಕಾರದ ಜಂಟಿ ಉದ್ಯಮವಾಗಿದ್ದು, “ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್” (BMRCL) ಇದನ್ನು ನಿರ್ವಹಿಸುತ್ತದೆ. ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ, ದರ ನಿಗದಿ ಸಮಿತಿ (FFC) ಯ ಶಿಫಾರಸುಗಳ ಆಧಾರದ ಮೇಲೆ BMRCL ಮಂಡಳಿಯು ಪರಿಷ್ಕೃತ ದರ ರಚನೆಯನ್ನು ಅನುಮೋದಿಸಿದೆ.

ಫೆಬ್ರವರಿ 9, 2025 ರಿಂದ, ಗರಿಷ್ಠ ದರವನ್ನು ₹60 ರಿಂದ ₹90ಕ್ಕೆ ಹೆಚ್ಚಿಸಲಾಗಿದೆ. ಈ ದರ ಹೆಚ್ಚಳವು ಬಿಎಂಆರ್‌ಸಿಎಲ್‌ಗೆ ಹೆಚ್ಚುವರಿ ಆದಾಯವನ್ನು ಗಳಿಸುವ ನಿರೀಕ್ಷೆಯಿದ್ದು, ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆಗೆ ಕಾರಣವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಈ ನಡುವೆ, ಮೆಟ್ರೋ ದರ ಏರಿಕೆ ವಿರುದ್ಧ ಹೋರಾಟಗಾರರು ಸೇರಿದಂತೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಉಭಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಮಾಜಿಕ ಹೋರಾಟಗಾರ ನಾಗೇಗೌಡ ಕೀಲಾರ ಅವರು, “ಮೆಟ್ರೊ ದರ ಏರಿಕೆ ವಿರುದ್ಧ ಬೆಂಗಳೂರು ನಾಗರಿಕರು ಬೆಂಗಳೂರು ನಗರಾಬಿವೃದ್ಧಿ ಸಚಿವ ಡಿಕೆ ಶಿವಕುಮಾರ್, ಬೆಂಗಳೂರಿನ 4 ಜನ ಲೋಕಸಭಾ ಸದಸ್ಯರಾದ ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್, ಡಾ.ಮಂಜುನಾಥ್ ಮತ್ತು ಶೋಭ, ಜೊತೆಗೆ ಬೆಂಗಳೂರಿನ 28 MLA ಗಳನ್ನು ಹೊಣೆ ಮಾಡಬೇಕು” ಎಂದು ಹೇಳಿದ್ದಾರೆ.

“ಇವರುಗಳ ಕೈಯಲ್ಲಿ ದರ ಏರಿಕೆ ನಿಲ್ಲಿಸಲು ಆಗಲಿಲ್ಲ ಅಂದರೆ ರಾಜೀನಾಮೆ ನೀಡುವಂತೆ ಒತ್ತಾಯಿಸುವುದರ ಜೊತೆಗೆ ಇನ್ನೆರಡು ದಿನಗಳಲ್ಲಿ ರಾಜೀನಾಮೆ ಕೊಡಿಸಬೇಕು. ಅದರಲ್ಲೂ ನಾಲ್ಕು ಜನ ಸಂಸದರು ರಾಜೀನಾಮೆ ಪತ್ರವನ್ನು ತಕ್ಶಣವೇ ಲೋಕಸಬಾ ಸ್ಪಿಕರ್‌ಗೆ ಕಳಿಸಬೇಕು. ಸಂಘಟಿತರಾಗಿ ಬೆಂಗಳೂರಿನ ನಾಗರಿಕರಿಗೆ ಇಷ್ಟು ಮಾಡಿಸಲು ಆಗಲಿಲ್ಲ ಅಂದರೆ ಈ ಜನ್ಮದಲ್ಲಿ ಇವರ ಬೆಲೆ ಏರಿಕೆ ಲೂಟಿಯಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಸಾಧ್ಯವಿಲ್ಲ” ಎಂದು  ಅವರು ಹೇಳಿದ್ದಾರೆ.

“ನಮ್ಮ ಹಕ್ಕೋತ್ತಾಯ ಈಗ ಇರುವ ಟಿಕೆಟ್ ಬೆಲೆಯನ್ನು ಮುಂದುವರೆಸಿ ಅನ್ನುವುದು ಆಗಿರಬೇಕು. 5-10% ದರ ಏರಿಕೆಗೂ ಒಪ್ಪಬಾರದು. ದರ ಏರಿಕೆ ಅನಿವಾರ್ಯ ಇಲ್ಲ ಮೆಟ್ರೊ ನಷ್ಟ ಅನುಭವಿಸುತ್ತೆ ಅಂದರೆ ಆ ನಷ್ಟವನ್ನು ಒಕ್ಕೂಟ ಸರ್ಕಾರ ಬರಿಸಲಿ” ಕೀಲಾರ ನಾಗೇಗೌಡ ಅವರು ಹೇಳಿದ್ದಾರೆ.

ಪತ್ರಕರ್ತೆ ಮಮತಾ ಎಂ. ಅವರು, “ಮೆಟ್ರೋ ದರ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ದೇಶದಲ್ಲೇ ಅತಿ ಹೆಚ್ಚು ದರ ಪಾವತಿ ಮಾಡಬೇಕಾದ ಸ್ಥಿತಿ. ಆದರೆ, ಆಶ್ಚರ್ಯದ ವಿಷಯವೆಂದರೆ ಈ ಬಗ್ಗೆ ಎಲ್ಲೂ ಪ್ರತಿಭಟನೆ, ಆಕ್ಷೇಪದ ದನಿ ಇಲ್ಲದಿರುವುದು. ಕೆಎಸ್‌ಆರ್‌ಟಿಸಿಯಲ್ಲಿ ಹತ್ತು, ಹದಿನೈದು ಪರ್ಸೆಂಟ್‌ ಟಿಕೆಟ್‌ ದರ ಏರಿಕೆಯಾದಾಗ ಕೇಳಿಬರುವ ಆಕ್ಷೇಪ ಕೂಡ ಇಲ್ಲಿ ಕಾಣಿಸುತ್ತಿಲ್ಲ. ಇದು ನಗರ ಪ್ರದೇಶಗಳ ಸಮಸ್ಯೆಯೇ? ಅಥವಾ ಜನರ ಬಳಿ ಹಣ ಇಷ್ಟೊಂದು ಹೆಚ್ಚಿದೆಯೇ?…. ಪ್ರತಿಭಟಿಸುವ ಕ್ಷಿಣ ದನಿ ಕೂಡ ಸಾರ್ವಜನಿಕರಿಂದ ಇಲ್ಲವಲ್ಲ…ವಿರೋಧದ ದನಿಗಳು ಕಡಿಮೆಯಾದಷ್ಟು ಬಂಡವಾಳಶಾಹಿಗಳು, ಸರ್ಕಾರಗಳ ದರ್ಪ ಹೆಚ್ಚಾಗುತ್ತದೆ ಎಂಬುದನ್ನು ನಮ್ಮ ಸಮಾಜ ಎಂದಿಗೂ ಮರೆಯಬಾರದು” ಎಂದು ಅವರು ಹೇಳಿದ್ದಾರೆ.

“ಬೀದಿಗಿಳಿದು ಹೋರಾಡಲು ಆಗದಿದ್ದರೇ ಕನಿಷ್ಟ ಸಾಮಾಜಿಕ ಜಾಲತಾಣಗಳಲ್ಲಿಯಾದರೂ ಈ ಬಗ್ಗೆ ವಿರೋಧ ಕೇಳಿಬರಲಿ. ಸರ್ಕಾರ ಯಾವುದಾದರೂ ಆಗಿರಲಿ ನಮ್ಮ ಮೇಲಾಗುವ ದೌರ್ಜನ್ಯಗಳನ್ನು ಒಕ್ಕೂರಲಿನಿಂದ ಪ್ರತಿಭಟಿಸಬೇಕಿರುವುದು ನಮ್ಮ ಕರ್ತವ್ಯ” ಎಂದು ಮಮತಾ ಅವರು ಹೇಳಿದ್ದಾರೆ.

ಸಾಮಾಜಿಕ ಹೋರಾಟಗಾರ ರಾಜಶೇಖರ್ ಅಕ್ಕಿ ಅವರು, “ನನ್ನ ಮನೆಯು ಕಚೇರಿಯಿಂದ ಸುಮಾರು ಹತ್ತು ಕಿಲೋಮೀಟರ್‌ ದೂರದಲ್ಲಿದೆ. ಈಗ ಮೆಟ್ರೊ ಬಳಿಸಿದರೆ 92 ರೂ. ಆಗುತ್ತೆ, ಸ್ಕೂಟರ್‌ ಬಳಸಿದರೆ ಗರಿಷ್ಟ 50 ರೂ. ʼಏಯ್‌ ಜನರೇ, ಮೆಟ್ರೋ ಬಿಡಿ. ಸ್ಕೂಟರ್‌, ಕಾರ್‌ ಬಳಸಿ,ʼ ಎಂದು ಸರಕಾರ ನಮಗೆ ಹೇಳ್ತಿದೆ. ಇದನ್ನು ಹಿಂಗೆ ಸಹಿಸ್ಕೊಂಡರೆ, ನಾವು ಸತ್ತ ಜನ ಎಂದು ಪ್ರೂವ್‌ ಮಾಡದ್ಹಂಗೆ.” ಎಂದು ಹೇಳಿದ್ದಾರೆ.

ಪತ್ರಕರ್ತ ಮುತ್ತರಾಜು ಅವರು, “ದೇಶದಲ್ಲಿಯೇ ದುಬಾರಿ ಯಾವ ಕಾರಣಕ್ಕೆ? ಜನಸಾಮಾನ್ಯರಿಂದ ಸುಲಿಯುವ ಸರ್ಕಾರ ಜನವಿರೋಧಿ ಸರ್ಕಾರವೇ ಆಗಿರುತ್ತದೆ. ಈ ಜನ ವಿರೋಧಿ ಸರ್ಕಾರ ಕೂಡಲೇ ಮೆಟ್ರೊ ದರ ಹೆಚ್ಚಳವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸೋಣ.. ಇದರ ವಿರುದ್ದ ಪ್ರತಿಭಟಿಸೋಣ” ಎಂದು ಹೇಳಿದ್ದಾರೆ.

ವರುಣ್ ಅವರು, “ಮೆಟ್ರೋ ದರ ಹೇರಿಕೆ ಮಾಡಿದ್ದು ಯಾರು? ಮೊದಲಿಗೆ ನಮ್ಮ ಮೆಟ್ರೋ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಂಟಿ ಪ್ರಾಜೆಕ್ಟ್. ಇದಕ್ಕೆ M.D. (Managing Director) ಅವರನ್ನು ನೇಮಕ ಮಾಡೋದು ರಾಜ್ಯ ಸರ್ಕಾರ ಮತ್ತು MD ರಿಪೋರ್ಟ್ ಮಾಡಿಕೊಳ್ಳಬೇಕಿರೋದು ರಾಜ್ಯದ ಮುಖ್ಯಮಂತ್ರಿ ಅವರಿಗೆ. ಕೆಲ ತಿಂಗಳ ಹಿಂದೆ ರಾಜ್ಯ ಸರ್ಕಾರ ಟಿಕೆಟ್ ದರ ಏರಿಸಬೇಕು ಅಂತ ಕೇಂದ್ರದ ಅಧೀನದಲ್ಲಿರುವ ಮೆಟ್ರೋ ಸಮಿತಿಗೆ ಶಿಫಾರಸ್ಸು ಮಾಡಿದೆ. ಅದಕ್ಕೆ ಈಗ ಕೇಂದ್ರ ಒಪ್ಪಿ ಸಮಿತಿಗೆ ಕಳುಹಿಸಿದೆ ಮತ್ತು ಸಮಿತಿ ಹೊಸ ದರವನ್ನು ಜಾರಿಗೆ ತಂದಿದೆ. ಒಬ್ಬರ ಮೇಲೆ ಒಬ್ಬರು ಗೂಬೆ ಕೂರಿಸೋದು ಬಿಟ್ಟು ಎಲ್ಲರೂ ಒಗ್ಗಟ್ಟಾಗಿ ಈ ಜನ ವಿರೋಧಿ ಹೊಸ ದರದ ವಿರುದ್ಧ ಮಾತಾಡಿ.” ಎಂದು ಹೇಳಿದ್ದಾರೆ.

“ಹೋರಾಟಗಾರ ಅನಿಲ್ ಕುಮಾರ್ ಚಿಕ್ಕದಾಳವಟ್ಟ ಅವರು, “ಸಾರ್ವಜನಿಕ ಸೇವೆಗಳನ್ನು ಹೆಚ್ಚು ಹೆಚ್ಚು ಬಳಸಿ ಅಂಥ ಪುಕ್ಸಟ್ಟೆ ಭಾಷಣ ಹೊಡೆಯುವ ಅಯೋಗ್ಯರು ಈ ರೀತಿ ದರ ಏರಿಸಿದರೆ ಬಡವರ ಓಡಾಡೋದು ಹೇಗೆ..? ರಾಜ್ಯ ಸರ್ಕಾರನೋ, ಕೇಂದ್ರ ಸರ್ಕಾರನೋ ಯಾವಾನಾದರೂ ಆಗಲಿ ದರ ಇಳಿಸಲೇಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂಓದಿ:  ಎಎಪಿ-ಕಾಂಗ್ರೆಸ್ ಪರಸ್ಪರ ಕಿತ್ತಾಟ ಮುಂದುವರಿಸುವುದಾದರೆ ಇಂಡಿಯಾ ಒಕ್ಕೂಟದ ಅಗತ್ಯವೇನಿದೆ? ಶಿವಸೇನೆ (ಯುಬಿಟಿ) ಕಿಡಿ

ಎಎಪಿ-ಕಾಂಗ್ರೆಸ್ ಪರಸ್ಪರ ಕಿತ್ತಾಟ ಮುಂದುವರಿಸುವುದಾದರೆ ಇಂಡಿಯಾ ಒಕ್ಕೂಟದ ಅಗತ್ಯವೇನಿದೆ? ಶಿವಸೇನೆ (ಯುಬಿಟಿ) ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...