Homeಕರ್ನಾಟಕ‘ಇದೊಂತರ ಎಗ್‌ರೈಸ್‌ ಸರ್ಕಾರ!’: #ನುಂಗಬೇಡಿಮಕ್ಕಳಮೊಟ್ಟೆ ಟ್ವಿಟರ್‌ ಟ್ರೆಂಡ್‌

‘ಇದೊಂತರ ಎಗ್‌ರೈಸ್‌ ಸರ್ಕಾರ!’: #ನುಂಗಬೇಡಿಮಕ್ಕಳಮೊಟ್ಟೆ ಟ್ವಿಟರ್‌ ಟ್ರೆಂಡ್‌

ಸಚಿವೆ ಶಶಿಕಲಾ ಜೊಲ್ಲೆ ವಿರುದ್ದದ ಆಕ್ರೋಶ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ

- Advertisement -
- Advertisement -

ಗರ್ಭಿಣಿಯರು ಮತ್ತು ಮಕ್ಕಳಿಗೆ ನೀಡುವ ಮಾತೃಪೂರ್ಣ ಯೋಜನೆಯ ಮೊಟ್ಟೆ ಖರೀದಿಯ ಟೆಂಡರ್ ನೀಡಲು ಸಚಿವೆ ಶಶಿಕಲಾ ಜೊಲ್ಲೆ ಮತ್ತು ಗಂಗಾವತಿಯ ಶಾಸಕ ಪರಣ್ಣ ಮುನವಳ್ಳಿ ಲಂಚ ಪಡೆದಿದ್ದಾರೆ ಎಂದು ಖಾಸಗಿ ವಾಹಿನಿಯೊಂದು ಶುಕ್ರವಾರ ಆರೋಪಿಸಿತ್ತು. ಇದನ್ನು ವಿರೋಧಿಸಿ ಭಾನುವಾರ(ಇಂದು) ಟ್ವಿಟರ್‌ನಲ್ಲಿ ‘#ನುಂಗಬೇಡಿಮಕ್ಕಳಮೊಟ್ಟೆ’ ಎಂಬ ಹ್ಯಾಶ್‌ಟ್ಯಾಗ್‌ ಚಳುವಳಿ ನಡೆಯುತ್ತಿದ್ದು, ಹಲವಾರು ಜನರು ಸಚಿವೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖಾಸಗಿ ವಾಹಿನಿ ನ್ಯೂಸ್‌ ಫಸ್ಟ್ ಮಾಡಿದ ವರದಿಯಲ್ಲಿ, “ಈ ಮುಂಚೆ ನೇರವಾಗಿ ಅಂಗನವಾಡಿ ಕೇಂದ್ರಗಳು ಮೊಟ್ಟೆ ಖರೀದಿ ಮಾಡುತ್ತಿದ್ದವು. ಆದರೆ ಈಗ ಕೇಂದ್ರೀಕೃತವಾಗಿ ಮೊಟ್ಟೆ ಪೂರೈಕೆಗೆ ಟೆಂಡರ್ ಕರೆದಿದ್ದೇವೆ. ನಿಮಗೆ ಟೆಂಡರ್ ಸಿಗುವಂತೆ ಮಾಡುತ್ತೇವೆ” ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಅದೇ ರೀತಿಯಲ್ಲಿ ಸಚಿವೆಯ ಸಂಪರ್ಕ ಕೊಟ್ಟ ಶಾಸಕ ಪರಣ್ಣ ಮುನವಳ್ಳಿ “ಟೆಂಡರ್ ನಿಮಗೆ ಆಗಬೇಕಾದರೆ ಪ್ರತಿ ತಿಂಗಳು ಸಚಿವರಿಗೆ ಒಂದು ಕೋಟಿ ಮತ್ತು ತನಗೆ 30 ಲಕ್ಷ ಹಣ ನೀಡಬೇಕು” ಎಂದು ಬೇಡಿಕೆಯಿಟ್ಟಿರುವುದು ಸಹ ರಹಸ್ಯ ಕಾರ್ಯಾಚರಣೆಯಲ್ಲಿ ದಾಖಲಾಗಿತ್ತು.

ಇದನ್ನೂ ಓದಿ: ಮೊಟ್ಟೆ ಖರೀದಿ ಟೆಂಡರ್ ಹಗರಣ: ಸಚಿವೆ ಶಶಿಕಲಾ ಜೊಲ್ಲೆ ನಿವಾಸಕ್ಕೆ ಮೊಟ್ಟೆ ಎಸೆದು ಪ್ರತಿಭಟನೆ

ಟೆಂಡರ್‌ಗಾಗಿ ಸಚಿವೆಯ ಸೂಚನೆಯಂತೆ ಚಿಕ್ಕೋಡಿಯ ಸಂಜಯ್ ಅರಗಿ ಎಂಬುವವರು 25 ಲಕ್ಷ ಅಡ್ವಾನ್ಸ್ ಹಣ ಪಡೆದಿದ್ದಾರೆ ಎಂದು ನ್ಯೂಸ್‌ಫಸ್ಟ್ ತಂಡ ತಿಳಿಸಿದೆ. ಪಾರದರ್ಶಕವಾಗಿ ಮತ್ತು ಪಕ್ಷಪಾತರಹಿತವಾಗಿ ಟೆಂಡರ್ ನಡೆಸಬೇಕಾದ ಸಚಿವರು, ಲಂಚ ಪಡೆದು ಅಕ್ರಮವಾಗಿ ಟೆಂಟರ್ ಕೊಡಲು ಮುಂದಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇದು ಮಕ್ಕಳಿಗೆ, ಗರ್ಭಿಣಿಯರಿಗೆ ತಲುಪಬೇಕಾದ ಹಣದ ವ್ಯವಸ್ಥಿತ ಲೂಟಿಯಾಗಿದೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ವಿರೋಧಿಸಿ ಟ್ವಿಟರ್‌‌ನಲ್ಲಿ ಹ್ಯಾಶ್‌ಟ್ಯಾಗ್ ಚಳುವಳಿ ನಡೆಯುತ್ತಿದ್ದು, ಖ್ಯಾತ ನಟ ಚೇತನ್ ಅಹಿಂಸಾ ಸೇರಿದಂತೆ ಹಲವಾರು ಜನರು ಸಚಿವೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಟ ಚೇತನ್‌ ಅವರು, “ಮಕ್ಕಳ ಮೂಲಭೂತ ಆಹಾರ ಮತ್ತು ಪೋಷಣೆಯನ್ನು ಕಸಿದುಕೊಳ್ಳುವ ಭ್ರಷ್ಟಾಚಾರವು ಸಹಿಸಲು ಅಸಾಧ್ಯವಾದುದಾಗಿದೆ. ಇದರ ವಿರುದ್ದ ಸಂಪೂರ್ಣ ತನಿಖೆ ನಡೆದು, ಅವರನ್ನು ಕಡ್ಡಾಯವಾಗಿ ಶಿಕ್ಷಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸಿದ್ದಗಂಗಾ ಮಠಕ್ಕೆ ಸಚಿವೆ ಜೊಲ್ಲೆ ಭೇಟಿ : ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನ!

ಕಾಂಗ್ರಸ್ ಸದಸ್ಯೆ, ಲಾವಣ್ಯ ಬಲ್ಲಾಲ್ ಅವರು, “ಮಾಧ್ಯಮವೊಂದು ನಡೆಸಿದ ಕುಟುಕು ಕಾರ್ಯಾಚರಣೆಯಿಂದ ಶಶಿಕಲಾ ಜೊಲ್ಲೆ ವಿರುದ್ಧ ಆರೋಪ ಕೇಳಿ ಬಂದಿದೆ. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯಿಸಬೇಕಾಗಿದೆ” ಎಂದು ಆಗ್ರಹಿಸಿದ್ದಾರೆ.

ಶರತ್‌ ಬೀರಂಬಳ್ಳಿ ಅವರು, “ಅಪೌಷ್ಟಿಕತೆ ‌ತಪ್ಪಿಸಲು ನಾನಾ ಯೋಜನೆಗಳು. ಗರ್ಭಿಣಿಯರಿಗೆ ಮಾತೃಪೂರ್ಣ, ಶಿಶು ವಿಹಾರದಿಂದ ಬಾಣಂತಿ ಕಿಟ್, ನಂತರ ಶಾಲೆಗಳಲ್ಲಿ ‌ಮೊಟ್ಟೆ, ಹಾಲು ಬಿಸಿಯೂಟ. ಇದು ಕೇವಲ ಯೋಜನೆಗಳಲ್ಲ ಮಕ್ಕಳ‌ ಆರೋಗ್ಯ, ಭವಿಷ್ಯ. ಇದರ ಮೇಲು ಹಗರಣ ಅಂದ್ರೆ ಅಸಹ್ಯ ಅನ್ನಿಸುವಂತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡ ಪರ ಹೋರಾಟಗಾರ ಅರುಣ್ ಜಾವಗಲ್ ಅವರು, “ರಾಷ್ಟ್ರೀಯ ಪಕ್ಷದಲ್ಲಿ ದೆಹಲಿಯ ಹೈಕಮಾಂಡ್‌ನ ಅನುಮತಿಯಿಲ್ಲದೆ ಒಂದು ಹುಲ್ಲು ಕೂಡ ಅಲುಗಾಡೊಲ್ಲಾ. ಹಾಗಿರುವಾಗ ಮೊಟ್ಟೆಯ ವಿಚಾರದಲ್ಲಿ ಕೇಳಿಬರುತ್ತಿರೋ ಭ್ರಷ್ಟಾಚಾರದಲ್ಲಿ ದೆಹಲಿಯ ಹೈಕಮಾಂಡ್ ಪಾಲೆಷ್ಟು?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜೆಡಿಎಸ್‌ನವರಿಗಿಂತಲೂ ಹೆಚ್ಚು ಬಿಜೆಪಿಗರಿಂದ ಹುಟ್ಟುಹಬ್ಬದ ಅಭಿನಂದನೆ ಪಡೆದುಕೊಂಡ ಎಚ್‌ ಡಿ ಕುಮಾರಸ್ವಾಮಿ! ಏನಿದರ ಮರ್ಮ?

ಪ್ರೊಫಸರ್‌ ಎಂಬ ಟ್ವಿಟರ್‌ ಖಾತೆ, “ಆ ಕಡೆಯಿಂದ ಅಕ್ಕಿ ಕದಿಯೋದು. ಈ ಕಡೆ ಮೊಟ್ಟೆ ಕದಿಯೋದು. ಇದೊಂತರ ಎಗ್‌ರೈಸ್‌ ಸರ್ಕಾರ!!” ಎಂದು ಹೇಳಿದ್ದಾರೆ.

ಸ್ಯಾಮುಯೆಲ್‌ ಶೈನ್ ಎಂಬವರು, “ಏನ್ರೀ ಜೊಲ್ಲೆ, ಮೊಟ್ಟೆ ಕಾಸಲ್ಲಿ ಭಲ್ಲೆ ಭಲ್ಲೆ? #ನುಂಗಬೇಡಿಮಕ್ಕಳಮೊಟ್ಟೆ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಉಸ್ತುವಾರಿ ಸಚಿವರುಗಳೇ ಎಲ್ಲಿದ್ದೀರಿ? ಇತ್ತ ಸ್ವಲ್ಪ ಗಮನಿಸಿ ಪ್ಲೀಸ್!

ಇದನ್ನೂ ಓದಿ: ತೆರದಾಳ ಪ್ರಕರಣ: ಮುಖ್ಯಮಂತ್ರಿಗಳೇ ನಿಮ್ಮ ಮನೆ ಹೆಣ್ಣು ಮಕ್ಕಳಿಗೆ ಈ ಪರಿಸ್ಥಿತಿ ಬಂದಿದ್ದರೆ ಏನು ಮಾಡುತ್ತಿದ್ದಿರಿ-ಡಿಕೆಶಿ ಪ್ರಶ್ನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...