Homeಕರ್ನಾಟಕ‘ಇದೊಂತರ ಎಗ್‌ರೈಸ್‌ ಸರ್ಕಾರ!’: #ನುಂಗಬೇಡಿಮಕ್ಕಳಮೊಟ್ಟೆ ಟ್ವಿಟರ್‌ ಟ್ರೆಂಡ್‌

‘ಇದೊಂತರ ಎಗ್‌ರೈಸ್‌ ಸರ್ಕಾರ!’: #ನುಂಗಬೇಡಿಮಕ್ಕಳಮೊಟ್ಟೆ ಟ್ವಿಟರ್‌ ಟ್ರೆಂಡ್‌

ಸಚಿವೆ ಶಶಿಕಲಾ ಜೊಲ್ಲೆ ವಿರುದ್ದದ ಆಕ್ರೋಶ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ

- Advertisement -
- Advertisement -

ಗರ್ಭಿಣಿಯರು ಮತ್ತು ಮಕ್ಕಳಿಗೆ ನೀಡುವ ಮಾತೃಪೂರ್ಣ ಯೋಜನೆಯ ಮೊಟ್ಟೆ ಖರೀದಿಯ ಟೆಂಡರ್ ನೀಡಲು ಸಚಿವೆ ಶಶಿಕಲಾ ಜೊಲ್ಲೆ ಮತ್ತು ಗಂಗಾವತಿಯ ಶಾಸಕ ಪರಣ್ಣ ಮುನವಳ್ಳಿ ಲಂಚ ಪಡೆದಿದ್ದಾರೆ ಎಂದು ಖಾಸಗಿ ವಾಹಿನಿಯೊಂದು ಶುಕ್ರವಾರ ಆರೋಪಿಸಿತ್ತು. ಇದನ್ನು ವಿರೋಧಿಸಿ ಭಾನುವಾರ(ಇಂದು) ಟ್ವಿಟರ್‌ನಲ್ಲಿ ‘#ನುಂಗಬೇಡಿಮಕ್ಕಳಮೊಟ್ಟೆ’ ಎಂಬ ಹ್ಯಾಶ್‌ಟ್ಯಾಗ್‌ ಚಳುವಳಿ ನಡೆಯುತ್ತಿದ್ದು, ಹಲವಾರು ಜನರು ಸಚಿವೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖಾಸಗಿ ವಾಹಿನಿ ನ್ಯೂಸ್‌ ಫಸ್ಟ್ ಮಾಡಿದ ವರದಿಯಲ್ಲಿ, “ಈ ಮುಂಚೆ ನೇರವಾಗಿ ಅಂಗನವಾಡಿ ಕೇಂದ್ರಗಳು ಮೊಟ್ಟೆ ಖರೀದಿ ಮಾಡುತ್ತಿದ್ದವು. ಆದರೆ ಈಗ ಕೇಂದ್ರೀಕೃತವಾಗಿ ಮೊಟ್ಟೆ ಪೂರೈಕೆಗೆ ಟೆಂಡರ್ ಕರೆದಿದ್ದೇವೆ. ನಿಮಗೆ ಟೆಂಡರ್ ಸಿಗುವಂತೆ ಮಾಡುತ್ತೇವೆ” ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಅದೇ ರೀತಿಯಲ್ಲಿ ಸಚಿವೆಯ ಸಂಪರ್ಕ ಕೊಟ್ಟ ಶಾಸಕ ಪರಣ್ಣ ಮುನವಳ್ಳಿ “ಟೆಂಡರ್ ನಿಮಗೆ ಆಗಬೇಕಾದರೆ ಪ್ರತಿ ತಿಂಗಳು ಸಚಿವರಿಗೆ ಒಂದು ಕೋಟಿ ಮತ್ತು ತನಗೆ 30 ಲಕ್ಷ ಹಣ ನೀಡಬೇಕು” ಎಂದು ಬೇಡಿಕೆಯಿಟ್ಟಿರುವುದು ಸಹ ರಹಸ್ಯ ಕಾರ್ಯಾಚರಣೆಯಲ್ಲಿ ದಾಖಲಾಗಿತ್ತು.

ಇದನ್ನೂ ಓದಿ: ಮೊಟ್ಟೆ ಖರೀದಿ ಟೆಂಡರ್ ಹಗರಣ: ಸಚಿವೆ ಶಶಿಕಲಾ ಜೊಲ್ಲೆ ನಿವಾಸಕ್ಕೆ ಮೊಟ್ಟೆ ಎಸೆದು ಪ್ರತಿಭಟನೆ

ಟೆಂಡರ್‌ಗಾಗಿ ಸಚಿವೆಯ ಸೂಚನೆಯಂತೆ ಚಿಕ್ಕೋಡಿಯ ಸಂಜಯ್ ಅರಗಿ ಎಂಬುವವರು 25 ಲಕ್ಷ ಅಡ್ವಾನ್ಸ್ ಹಣ ಪಡೆದಿದ್ದಾರೆ ಎಂದು ನ್ಯೂಸ್‌ಫಸ್ಟ್ ತಂಡ ತಿಳಿಸಿದೆ. ಪಾರದರ್ಶಕವಾಗಿ ಮತ್ತು ಪಕ್ಷಪಾತರಹಿತವಾಗಿ ಟೆಂಡರ್ ನಡೆಸಬೇಕಾದ ಸಚಿವರು, ಲಂಚ ಪಡೆದು ಅಕ್ರಮವಾಗಿ ಟೆಂಟರ್ ಕೊಡಲು ಮುಂದಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇದು ಮಕ್ಕಳಿಗೆ, ಗರ್ಭಿಣಿಯರಿಗೆ ತಲುಪಬೇಕಾದ ಹಣದ ವ್ಯವಸ್ಥಿತ ಲೂಟಿಯಾಗಿದೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ವಿರೋಧಿಸಿ ಟ್ವಿಟರ್‌‌ನಲ್ಲಿ ಹ್ಯಾಶ್‌ಟ್ಯಾಗ್ ಚಳುವಳಿ ನಡೆಯುತ್ತಿದ್ದು, ಖ್ಯಾತ ನಟ ಚೇತನ್ ಅಹಿಂಸಾ ಸೇರಿದಂತೆ ಹಲವಾರು ಜನರು ಸಚಿವೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಟ ಚೇತನ್‌ ಅವರು, “ಮಕ್ಕಳ ಮೂಲಭೂತ ಆಹಾರ ಮತ್ತು ಪೋಷಣೆಯನ್ನು ಕಸಿದುಕೊಳ್ಳುವ ಭ್ರಷ್ಟಾಚಾರವು ಸಹಿಸಲು ಅಸಾಧ್ಯವಾದುದಾಗಿದೆ. ಇದರ ವಿರುದ್ದ ಸಂಪೂರ್ಣ ತನಿಖೆ ನಡೆದು, ಅವರನ್ನು ಕಡ್ಡಾಯವಾಗಿ ಶಿಕ್ಷಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸಿದ್ದಗಂಗಾ ಮಠಕ್ಕೆ ಸಚಿವೆ ಜೊಲ್ಲೆ ಭೇಟಿ : ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನ!

ಕಾಂಗ್ರಸ್ ಸದಸ್ಯೆ, ಲಾವಣ್ಯ ಬಲ್ಲಾಲ್ ಅವರು, “ಮಾಧ್ಯಮವೊಂದು ನಡೆಸಿದ ಕುಟುಕು ಕಾರ್ಯಾಚರಣೆಯಿಂದ ಶಶಿಕಲಾ ಜೊಲ್ಲೆ ವಿರುದ್ಧ ಆರೋಪ ಕೇಳಿ ಬಂದಿದೆ. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯಿಸಬೇಕಾಗಿದೆ” ಎಂದು ಆಗ್ರಹಿಸಿದ್ದಾರೆ.

ಶರತ್‌ ಬೀರಂಬಳ್ಳಿ ಅವರು, “ಅಪೌಷ್ಟಿಕತೆ ‌ತಪ್ಪಿಸಲು ನಾನಾ ಯೋಜನೆಗಳು. ಗರ್ಭಿಣಿಯರಿಗೆ ಮಾತೃಪೂರ್ಣ, ಶಿಶು ವಿಹಾರದಿಂದ ಬಾಣಂತಿ ಕಿಟ್, ನಂತರ ಶಾಲೆಗಳಲ್ಲಿ ‌ಮೊಟ್ಟೆ, ಹಾಲು ಬಿಸಿಯೂಟ. ಇದು ಕೇವಲ ಯೋಜನೆಗಳಲ್ಲ ಮಕ್ಕಳ‌ ಆರೋಗ್ಯ, ಭವಿಷ್ಯ. ಇದರ ಮೇಲು ಹಗರಣ ಅಂದ್ರೆ ಅಸಹ್ಯ ಅನ್ನಿಸುವಂತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡ ಪರ ಹೋರಾಟಗಾರ ಅರುಣ್ ಜಾವಗಲ್ ಅವರು, “ರಾಷ್ಟ್ರೀಯ ಪಕ್ಷದಲ್ಲಿ ದೆಹಲಿಯ ಹೈಕಮಾಂಡ್‌ನ ಅನುಮತಿಯಿಲ್ಲದೆ ಒಂದು ಹುಲ್ಲು ಕೂಡ ಅಲುಗಾಡೊಲ್ಲಾ. ಹಾಗಿರುವಾಗ ಮೊಟ್ಟೆಯ ವಿಚಾರದಲ್ಲಿ ಕೇಳಿಬರುತ್ತಿರೋ ಭ್ರಷ್ಟಾಚಾರದಲ್ಲಿ ದೆಹಲಿಯ ಹೈಕಮಾಂಡ್ ಪಾಲೆಷ್ಟು?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜೆಡಿಎಸ್‌ನವರಿಗಿಂತಲೂ ಹೆಚ್ಚು ಬಿಜೆಪಿಗರಿಂದ ಹುಟ್ಟುಹಬ್ಬದ ಅಭಿನಂದನೆ ಪಡೆದುಕೊಂಡ ಎಚ್‌ ಡಿ ಕುಮಾರಸ್ವಾಮಿ! ಏನಿದರ ಮರ್ಮ?

ಪ್ರೊಫಸರ್‌ ಎಂಬ ಟ್ವಿಟರ್‌ ಖಾತೆ, “ಆ ಕಡೆಯಿಂದ ಅಕ್ಕಿ ಕದಿಯೋದು. ಈ ಕಡೆ ಮೊಟ್ಟೆ ಕದಿಯೋದು. ಇದೊಂತರ ಎಗ್‌ರೈಸ್‌ ಸರ್ಕಾರ!!” ಎಂದು ಹೇಳಿದ್ದಾರೆ.

ಸ್ಯಾಮುಯೆಲ್‌ ಶೈನ್ ಎಂಬವರು, “ಏನ್ರೀ ಜೊಲ್ಲೆ, ಮೊಟ್ಟೆ ಕಾಸಲ್ಲಿ ಭಲ್ಲೆ ಭಲ್ಲೆ? #ನುಂಗಬೇಡಿಮಕ್ಕಳಮೊಟ್ಟೆ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಉಸ್ತುವಾರಿ ಸಚಿವರುಗಳೇ ಎಲ್ಲಿದ್ದೀರಿ? ಇತ್ತ ಸ್ವಲ್ಪ ಗಮನಿಸಿ ಪ್ಲೀಸ್!

ಇದನ್ನೂ ಓದಿ: ತೆರದಾಳ ಪ್ರಕರಣ: ಮುಖ್ಯಮಂತ್ರಿಗಳೇ ನಿಮ್ಮ ಮನೆ ಹೆಣ್ಣು ಮಕ್ಕಳಿಗೆ ಈ ಪರಿಸ್ಥಿತಿ ಬಂದಿದ್ದರೆ ಏನು ಮಾಡುತ್ತಿದ್ದಿರಿ-ಡಿಕೆಶಿ ಪ್ರಶ್ನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....