Homeಕರ್ನಾಟಕ‘ಇದೊಂತರ ಎಗ್‌ರೈಸ್‌ ಸರ್ಕಾರ!’: #ನುಂಗಬೇಡಿಮಕ್ಕಳಮೊಟ್ಟೆ ಟ್ವಿಟರ್‌ ಟ್ರೆಂಡ್‌

‘ಇದೊಂತರ ಎಗ್‌ರೈಸ್‌ ಸರ್ಕಾರ!’: #ನುಂಗಬೇಡಿಮಕ್ಕಳಮೊಟ್ಟೆ ಟ್ವಿಟರ್‌ ಟ್ರೆಂಡ್‌

ಸಚಿವೆ ಶಶಿಕಲಾ ಜೊಲ್ಲೆ ವಿರುದ್ದದ ಆಕ್ರೋಶ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ

- Advertisement -
- Advertisement -

ಗರ್ಭಿಣಿಯರು ಮತ್ತು ಮಕ್ಕಳಿಗೆ ನೀಡುವ ಮಾತೃಪೂರ್ಣ ಯೋಜನೆಯ ಮೊಟ್ಟೆ ಖರೀದಿಯ ಟೆಂಡರ್ ನೀಡಲು ಸಚಿವೆ ಶಶಿಕಲಾ ಜೊಲ್ಲೆ ಮತ್ತು ಗಂಗಾವತಿಯ ಶಾಸಕ ಪರಣ್ಣ ಮುನವಳ್ಳಿ ಲಂಚ ಪಡೆದಿದ್ದಾರೆ ಎಂದು ಖಾಸಗಿ ವಾಹಿನಿಯೊಂದು ಶುಕ್ರವಾರ ಆರೋಪಿಸಿತ್ತು. ಇದನ್ನು ವಿರೋಧಿಸಿ ಭಾನುವಾರ(ಇಂದು) ಟ್ವಿಟರ್‌ನಲ್ಲಿ ‘#ನುಂಗಬೇಡಿಮಕ್ಕಳಮೊಟ್ಟೆ’ ಎಂಬ ಹ್ಯಾಶ್‌ಟ್ಯಾಗ್‌ ಚಳುವಳಿ ನಡೆಯುತ್ತಿದ್ದು, ಹಲವಾರು ಜನರು ಸಚಿವೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖಾಸಗಿ ವಾಹಿನಿ ನ್ಯೂಸ್‌ ಫಸ್ಟ್ ಮಾಡಿದ ವರದಿಯಲ್ಲಿ, “ಈ ಮುಂಚೆ ನೇರವಾಗಿ ಅಂಗನವಾಡಿ ಕೇಂದ್ರಗಳು ಮೊಟ್ಟೆ ಖರೀದಿ ಮಾಡುತ್ತಿದ್ದವು. ಆದರೆ ಈಗ ಕೇಂದ್ರೀಕೃತವಾಗಿ ಮೊಟ್ಟೆ ಪೂರೈಕೆಗೆ ಟೆಂಡರ್ ಕರೆದಿದ್ದೇವೆ. ನಿಮಗೆ ಟೆಂಡರ್ ಸಿಗುವಂತೆ ಮಾಡುತ್ತೇವೆ” ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಅದೇ ರೀತಿಯಲ್ಲಿ ಸಚಿವೆಯ ಸಂಪರ್ಕ ಕೊಟ್ಟ ಶಾಸಕ ಪರಣ್ಣ ಮುನವಳ್ಳಿ “ಟೆಂಡರ್ ನಿಮಗೆ ಆಗಬೇಕಾದರೆ ಪ್ರತಿ ತಿಂಗಳು ಸಚಿವರಿಗೆ ಒಂದು ಕೋಟಿ ಮತ್ತು ತನಗೆ 30 ಲಕ್ಷ ಹಣ ನೀಡಬೇಕು” ಎಂದು ಬೇಡಿಕೆಯಿಟ್ಟಿರುವುದು ಸಹ ರಹಸ್ಯ ಕಾರ್ಯಾಚರಣೆಯಲ್ಲಿ ದಾಖಲಾಗಿತ್ತು.

ಇದನ್ನೂ ಓದಿ: ಮೊಟ್ಟೆ ಖರೀದಿ ಟೆಂಡರ್ ಹಗರಣ: ಸಚಿವೆ ಶಶಿಕಲಾ ಜೊಲ್ಲೆ ನಿವಾಸಕ್ಕೆ ಮೊಟ್ಟೆ ಎಸೆದು ಪ್ರತಿಭಟನೆ

ಟೆಂಡರ್‌ಗಾಗಿ ಸಚಿವೆಯ ಸೂಚನೆಯಂತೆ ಚಿಕ್ಕೋಡಿಯ ಸಂಜಯ್ ಅರಗಿ ಎಂಬುವವರು 25 ಲಕ್ಷ ಅಡ್ವಾನ್ಸ್ ಹಣ ಪಡೆದಿದ್ದಾರೆ ಎಂದು ನ್ಯೂಸ್‌ಫಸ್ಟ್ ತಂಡ ತಿಳಿಸಿದೆ. ಪಾರದರ್ಶಕವಾಗಿ ಮತ್ತು ಪಕ್ಷಪಾತರಹಿತವಾಗಿ ಟೆಂಡರ್ ನಡೆಸಬೇಕಾದ ಸಚಿವರು, ಲಂಚ ಪಡೆದು ಅಕ್ರಮವಾಗಿ ಟೆಂಟರ್ ಕೊಡಲು ಮುಂದಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇದು ಮಕ್ಕಳಿಗೆ, ಗರ್ಭಿಣಿಯರಿಗೆ ತಲುಪಬೇಕಾದ ಹಣದ ವ್ಯವಸ್ಥಿತ ಲೂಟಿಯಾಗಿದೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ವಿರೋಧಿಸಿ ಟ್ವಿಟರ್‌‌ನಲ್ಲಿ ಹ್ಯಾಶ್‌ಟ್ಯಾಗ್ ಚಳುವಳಿ ನಡೆಯುತ್ತಿದ್ದು, ಖ್ಯಾತ ನಟ ಚೇತನ್ ಅಹಿಂಸಾ ಸೇರಿದಂತೆ ಹಲವಾರು ಜನರು ಸಚಿವೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಟ ಚೇತನ್‌ ಅವರು, “ಮಕ್ಕಳ ಮೂಲಭೂತ ಆಹಾರ ಮತ್ತು ಪೋಷಣೆಯನ್ನು ಕಸಿದುಕೊಳ್ಳುವ ಭ್ರಷ್ಟಾಚಾರವು ಸಹಿಸಲು ಅಸಾಧ್ಯವಾದುದಾಗಿದೆ. ಇದರ ವಿರುದ್ದ ಸಂಪೂರ್ಣ ತನಿಖೆ ನಡೆದು, ಅವರನ್ನು ಕಡ್ಡಾಯವಾಗಿ ಶಿಕ್ಷಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸಿದ್ದಗಂಗಾ ಮಠಕ್ಕೆ ಸಚಿವೆ ಜೊಲ್ಲೆ ಭೇಟಿ : ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನ!

ಕಾಂಗ್ರಸ್ ಸದಸ್ಯೆ, ಲಾವಣ್ಯ ಬಲ್ಲಾಲ್ ಅವರು, “ಮಾಧ್ಯಮವೊಂದು ನಡೆಸಿದ ಕುಟುಕು ಕಾರ್ಯಾಚರಣೆಯಿಂದ ಶಶಿಕಲಾ ಜೊಲ್ಲೆ ವಿರುದ್ಧ ಆರೋಪ ಕೇಳಿ ಬಂದಿದೆ. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯಿಸಬೇಕಾಗಿದೆ” ಎಂದು ಆಗ್ರಹಿಸಿದ್ದಾರೆ.

ಶರತ್‌ ಬೀರಂಬಳ್ಳಿ ಅವರು, “ಅಪೌಷ್ಟಿಕತೆ ‌ತಪ್ಪಿಸಲು ನಾನಾ ಯೋಜನೆಗಳು. ಗರ್ಭಿಣಿಯರಿಗೆ ಮಾತೃಪೂರ್ಣ, ಶಿಶು ವಿಹಾರದಿಂದ ಬಾಣಂತಿ ಕಿಟ್, ನಂತರ ಶಾಲೆಗಳಲ್ಲಿ ‌ಮೊಟ್ಟೆ, ಹಾಲು ಬಿಸಿಯೂಟ. ಇದು ಕೇವಲ ಯೋಜನೆಗಳಲ್ಲ ಮಕ್ಕಳ‌ ಆರೋಗ್ಯ, ಭವಿಷ್ಯ. ಇದರ ಮೇಲು ಹಗರಣ ಅಂದ್ರೆ ಅಸಹ್ಯ ಅನ್ನಿಸುವಂತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡ ಪರ ಹೋರಾಟಗಾರ ಅರುಣ್ ಜಾವಗಲ್ ಅವರು, “ರಾಷ್ಟ್ರೀಯ ಪಕ್ಷದಲ್ಲಿ ದೆಹಲಿಯ ಹೈಕಮಾಂಡ್‌ನ ಅನುಮತಿಯಿಲ್ಲದೆ ಒಂದು ಹುಲ್ಲು ಕೂಡ ಅಲುಗಾಡೊಲ್ಲಾ. ಹಾಗಿರುವಾಗ ಮೊಟ್ಟೆಯ ವಿಚಾರದಲ್ಲಿ ಕೇಳಿಬರುತ್ತಿರೋ ಭ್ರಷ್ಟಾಚಾರದಲ್ಲಿ ದೆಹಲಿಯ ಹೈಕಮಾಂಡ್ ಪಾಲೆಷ್ಟು?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜೆಡಿಎಸ್‌ನವರಿಗಿಂತಲೂ ಹೆಚ್ಚು ಬಿಜೆಪಿಗರಿಂದ ಹುಟ್ಟುಹಬ್ಬದ ಅಭಿನಂದನೆ ಪಡೆದುಕೊಂಡ ಎಚ್‌ ಡಿ ಕುಮಾರಸ್ವಾಮಿ! ಏನಿದರ ಮರ್ಮ?

ಪ್ರೊಫಸರ್‌ ಎಂಬ ಟ್ವಿಟರ್‌ ಖಾತೆ, “ಆ ಕಡೆಯಿಂದ ಅಕ್ಕಿ ಕದಿಯೋದು. ಈ ಕಡೆ ಮೊಟ್ಟೆ ಕದಿಯೋದು. ಇದೊಂತರ ಎಗ್‌ರೈಸ್‌ ಸರ್ಕಾರ!!” ಎಂದು ಹೇಳಿದ್ದಾರೆ.

ಸ್ಯಾಮುಯೆಲ್‌ ಶೈನ್ ಎಂಬವರು, “ಏನ್ರೀ ಜೊಲ್ಲೆ, ಮೊಟ್ಟೆ ಕಾಸಲ್ಲಿ ಭಲ್ಲೆ ಭಲ್ಲೆ? #ನುಂಗಬೇಡಿಮಕ್ಕಳಮೊಟ್ಟೆ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಉಸ್ತುವಾರಿ ಸಚಿವರುಗಳೇ ಎಲ್ಲಿದ್ದೀರಿ? ಇತ್ತ ಸ್ವಲ್ಪ ಗಮನಿಸಿ ಪ್ಲೀಸ್!

ಇದನ್ನೂ ಓದಿ: ತೆರದಾಳ ಪ್ರಕರಣ: ಮುಖ್ಯಮಂತ್ರಿಗಳೇ ನಿಮ್ಮ ಮನೆ ಹೆಣ್ಣು ಮಕ್ಕಳಿಗೆ ಈ ಪರಿಸ್ಥಿತಿ ಬಂದಿದ್ದರೆ ಏನು ಮಾಡುತ್ತಿದ್ದಿರಿ-ಡಿಕೆಶಿ ಪ್ರಶ್ನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...