Homeಕರ್ನಾಟಕನಟಿ ಅಮೂಲ್ಯಾ ಗರ್ಭಿಣಿಯಾಗಿದ್ದು ‘ರಾಜ್ಯಕ್ಕೆ ಶುಭಸುದ್ದಿ’ ಎಂದ BTV; ಆಕ್ರೋಶ-ಟ್ರೋಲ್

ನಟಿ ಅಮೂಲ್ಯಾ ಗರ್ಭಿಣಿಯಾಗಿದ್ದು ‘ರಾಜ್ಯಕ್ಕೆ ಶುಭಸುದ್ದಿ’ ಎಂದ BTV; ಆಕ್ರೋಶ-ಟ್ರೋಲ್

- Advertisement -
- Advertisement -

ಕನ್ನಡ ಮಾಧ್ಯಮಗಳು ಸಿನಿಮಾ ನಟ-ನಟಿಯರ ಪ್ರತಿ ವಿಚಾರದಲ್ಲಿ ‘ಮಾಧ್ಯಮ ಕರ್ತವ್ಯ’ವನ್ನು ಮರೆತು ಕೆಟ್ಟದಾಗಿ ವರ್ತಿಸುತ್ತವೆ. ಜನಪ್ರಿಯ ನಟ-ನಟಿಯರ ಸಾವು, ಅಪಘಾತ, ಅನಾರೋಗ್ಯ, ಪ್ರೀತಿ-ಪ್ರಣಯ ಮತ್ತು ಅವರ ಖುಷಿಯ ಘಳಿಗೆಯನ್ನು ಭಾವನಾತ್ಮಕವಾಗಿ ವೀಕ್ಷಕರ ಮೇಲೆ ಹೇರಿ ಬಿಡುತ್ತದೆ. ಜೊತೆಗೆ ಬೇರೆ ಅಂತಹದ್ದೇ ಸುದ್ದಿಗಳು ಸಿಗುವವರೆಗೂ ಅವುಗಳ ಸುತ್ತ ಗಿರಕಿ ಹೊಡೆಯುತ್ತಲೆ ಇರುತ್ತವೆ.

ಈ ವೇಳೆ ಅವು ನಟ ನಟಿಯರ ಖುಷಿ-ದುಃಖಗಳಷ್ಟೇ ರಾಜ್ಯದ ಸಮಸ್ಯೆ ಎಂದು ಬಿಂಬಿಸಿ ಉಳಿದ ಬಹುಮುಖ್ಯವಾದ ಸುದ್ದಿಗಳನ್ನು ತೆರೆಮರೆಯಲ್ಲಿ ಹುದುಗಿಸಿ ಬಿಡುತ್ತದೆ. ಕನ್ನಡದ ಸುದ್ದಿ ವಾಹಿನಿ ಬಿಟಿವಿ ಕೂಡಾ ಗುರುವಾರ ಅದೇ ರೀತಿಯಲ್ಲಿ ವರ್ತಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಕ್ಕೆ ಗುರಿಯಾಗಿದೆ. ಹಲವಾರು ನೆಟ್ಟಿಗರು ಈ ಬಗ್ಗೆ ಬಿಟಿವಿಯನ್ನು ಟ್ರೋಲ್ ಮಾಡುತ್ತಿದ್ದಾರೆ.

ಈ ಬಾರಿ ಕನ್ನಡದ ನಟಿ ಅಮೂಲ್ಯಾ ಅವರು ಗರ್ಭಿಣಿಯಾಗಿರುವುದನ್ನು ಬಿಟಿವಿ ‘ರಾಜ್ಯಕ್ಕೆ ಶುಭ ಸುದ್ದಿ’ ಎಂದು ವರದಿ ಮಾಡಿದೆ. ಅಮೂಲ್ಯಾ ಅವರು ಗರ್ಭಿಣಿ ಆಗಿರುವುದನ್ನು ‘ಮೆಘಾ ಬ್ರೇಕಿಂಗ್’ ಸುದ್ದಿ ಎಂದು ಉಲ್ಲೇಖಿಸಿರುವ ಬಿಟಿವಿ, “ಉಲ್ಲಾಸದ ಹೂಮಳೆ ಸುರಿಸುವ ಖುಷಿಖುಷಿಯ ಸುದ್ದಿ, ಸ್ಯಾಂಡಲ್‌ವುಡ್‌ ಅಭಿಮಾನಿಗಳಿಗೆ ಭರ್ಜರಿ ಗುಡ್‌ ನ್ಯೂಸ್, ಇಡೀ ರಾಜ್ಯ ಖುಷಿ ಪಡುವ ಸುದ್ದಿ-ನಟಿ ಅಮೂಲ್ಯಾ ಪ್ರಗ್ನೆಂಟ್‌” ಎಂದು ಸ್ಕ್ರೀನ್‌ನಲ್ಲಿ ಬರೆದು ವೀಕ್ಷಕರಿಗೆ ಸುದ್ದಿಯನ್ನು ತಿಳಿಸಿದೆ.

 ಇದನ್ನೂ ಓದಿ:ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರ ಬಂಧನ: ರಾಹುಲ್ ಗಾಂಧಿ, ಮಾಧ್ಯಮ ಸಂಸ್ಥೆಗಳಿಂದ ಖಂಡನೆ

ಆದರೆ ಪ್ರಜ್ಞಾವಂತರು ಬಿಟಿವಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಟ್ರೋಲ್ ಕೂಡಾ ಮಾಡಲಾಗುತ್ತಿದೆ.

ಇರ್ಶಾದ್ ಯುಟಿ ಅವರು, ‘ಈ ಮಟ್ಟಕ್ಕೆ ನಮ್ಮ ಕನ್ನಡದ ಸುದ್ದಿಮಾಧ್ಯಮಗಳು ಇಳಿದಿರುವುದು ನಾಚಿಕೆಯಿಲ್ಲವೇ…???’

ಚಿಂತಕ ಡಾ.ವಡ್ಡಗೆರೆ ನಾಗರಾಜಯ್ಯ ಅವರು, “ಕೇವಲ ಕರ್ನಾಟಕ ರಾಜ್ಯವಷ್ಟೇ ಅಲ್ಲದೆ ಇಡೀ ವಿಶ್ವದ ಕನ್ನಡಿಗರು ಖುಶಿಪಡಬೇಕಾದ ಸುದ್ದಿ ಇದು!. Btv ಕಂಜೂಸುಗಳು ಅಮೂಲ್ಯ ಬಸಿರಾಗಿರುವ ಖುಶಿಯ ಸುದ್ದಿಯನ್ನು ಕೇವಲ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತಗೊಳಿಸಿದ್ದಾರೆ!!” ಎಂದು ವ್ಯಂಗ್ಯವಾಡಿದ್ದಾರೆ.

“ಮಾನವನ ಜನ್ಮದಲ್ಲಿ ಹಿಂದೆಯೂ ಆಗಲಿಲ್ಲ ಮುಂದೆಯೂ ಆಗುವುದಿಲ್ಲ ಇಂದು ಇತಿಹಾಸ ಸೃಷ್ಟಿಸುವ ನಟಿ ಅಮೂಲ್ಯ ಅವರ ತಾಯಿತನ. ಬಿಟಿವಿ ಗೆ ಬೇರೆ ಸುದ್ದಿ ಸಿಕ್ಕಿಲ್ಲ”

ಪತ್ರಕರ್ತ ನಿಖಿಲ್ ಕೊಲ್ಪೆ, “ಬಿಟಿವಿಯ ಅತ್ಯಂತ ಮಹತ್ವದ ಸ್ಫೋಟಕ “ಪ್ರೆಗ್ನೆಂಟ್ ಸುದ್ದಿ”ಯ ಬಗ್ಗೆ ತನಿಖಾ ವರದಿ ಪ್ರಸಾರವಾಗಲಿ! ಈ ಅಧಿವೇಶನದಲ್ಲಿ ಗಂಭೀರ ಚರ್ಚೆಯಾಗಲಿ!” ಎಂದು ವ್ಯಂಗ್ಯವಾಡಿದ್ದಾರೆ.

“ಕರ್ನಾಟಕದ ಸುತ್ತಮುತ್ತಲಿನ ರಾಜ್ಯಗಳ ಪತ್ರಕರ್ತರು, ನಮ್ಮ ರಾಜ್ಯದ ಕೆಲ! ‘ಮೂರೂ ಬಿಟ್ಟ ಮಾಧ್ಯಮಗಳ’ ವರದಿಗಳನ್ನು ನೋಡಬೇಕು. ನಾವು ಅವರಿಗೆ ತಿಳಿಸಬೇಕು. ಇವರು ಮಾಡುವ ನಾಲಾಯಕ್ ವರದಿಗಳನ್ನು ನೋಡಿ ಆವರ ಚಾನಲ್‌ಗಳಲ್ಲಿ ಇವರಿಗೆ ಉಗಿಯಬೇಕು… ಮಲಯಾಳಿಗಳಿಗೆ ತಿಳಿದರೆ ಖಂಡಿತವಾಗಿಯೂ ಟ್ರೋಲ್ ಮಾಡಿ ಇವರನ್ನು ಬೆನ್ನಟ್ಟಿ ಕೊಲ್ಲುತ್ತಾರೆ”

ಇದನ್ನೂ ಓದಿ:ಲಖೀಂಪುರ್ ರೈತ ಹತ್ಯೆ; ಅಧಿಕಾರದ ಪರವಾಗಿ ನಿಂತ ಮಾಧ್ಯಮಗಳ ದುರುಳತನ

ಇದನ್ನೂ ಓದಿ:ಭಾರತ್ ಬಂದ್ ಕುರಿತು ವರದಿ; ಮಾಧ್ಯಮಗಳಿಗೆ ನೈತಿಕ ಜವಾಬ್ದಾರಿ ಇಲ್ಲವೇ?

ಇದನ್ನೂ ಓದಿ:ಮೋದಿ ಮುಂದೆಯೆ ಭಾರತೀಯ ಮಾಧ್ಯಮಗಳ ಬಗ್ಗೆ ಬಿಡೆನ್ ವ್ಯಂಗ್ಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...