Homeಕರ್ನಾಟಕನಟಿ ಅಮೂಲ್ಯಾ ಗರ್ಭಿಣಿಯಾಗಿದ್ದು ‘ರಾಜ್ಯಕ್ಕೆ ಶುಭಸುದ್ದಿ’ ಎಂದ BTV; ಆಕ್ರೋಶ-ಟ್ರೋಲ್

ನಟಿ ಅಮೂಲ್ಯಾ ಗರ್ಭಿಣಿಯಾಗಿದ್ದು ‘ರಾಜ್ಯಕ್ಕೆ ಶುಭಸುದ್ದಿ’ ಎಂದ BTV; ಆಕ್ರೋಶ-ಟ್ರೋಲ್

- Advertisement -
- Advertisement -

ಕನ್ನಡ ಮಾಧ್ಯಮಗಳು ಸಿನಿಮಾ ನಟ-ನಟಿಯರ ಪ್ರತಿ ವಿಚಾರದಲ್ಲಿ ‘ಮಾಧ್ಯಮ ಕರ್ತವ್ಯ’ವನ್ನು ಮರೆತು ಕೆಟ್ಟದಾಗಿ ವರ್ತಿಸುತ್ತವೆ. ಜನಪ್ರಿಯ ನಟ-ನಟಿಯರ ಸಾವು, ಅಪಘಾತ, ಅನಾರೋಗ್ಯ, ಪ್ರೀತಿ-ಪ್ರಣಯ ಮತ್ತು ಅವರ ಖುಷಿಯ ಘಳಿಗೆಯನ್ನು ಭಾವನಾತ್ಮಕವಾಗಿ ವೀಕ್ಷಕರ ಮೇಲೆ ಹೇರಿ ಬಿಡುತ್ತದೆ. ಜೊತೆಗೆ ಬೇರೆ ಅಂತಹದ್ದೇ ಸುದ್ದಿಗಳು ಸಿಗುವವರೆಗೂ ಅವುಗಳ ಸುತ್ತ ಗಿರಕಿ ಹೊಡೆಯುತ್ತಲೆ ಇರುತ್ತವೆ.

ಈ ವೇಳೆ ಅವು ನಟ ನಟಿಯರ ಖುಷಿ-ದುಃಖಗಳಷ್ಟೇ ರಾಜ್ಯದ ಸಮಸ್ಯೆ ಎಂದು ಬಿಂಬಿಸಿ ಉಳಿದ ಬಹುಮುಖ್ಯವಾದ ಸುದ್ದಿಗಳನ್ನು ತೆರೆಮರೆಯಲ್ಲಿ ಹುದುಗಿಸಿ ಬಿಡುತ್ತದೆ. ಕನ್ನಡದ ಸುದ್ದಿ ವಾಹಿನಿ ಬಿಟಿವಿ ಕೂಡಾ ಗುರುವಾರ ಅದೇ ರೀತಿಯಲ್ಲಿ ವರ್ತಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಕ್ಕೆ ಗುರಿಯಾಗಿದೆ. ಹಲವಾರು ನೆಟ್ಟಿಗರು ಈ ಬಗ್ಗೆ ಬಿಟಿವಿಯನ್ನು ಟ್ರೋಲ್ ಮಾಡುತ್ತಿದ್ದಾರೆ.

ಈ ಬಾರಿ ಕನ್ನಡದ ನಟಿ ಅಮೂಲ್ಯಾ ಅವರು ಗರ್ಭಿಣಿಯಾಗಿರುವುದನ್ನು ಬಿಟಿವಿ ‘ರಾಜ್ಯಕ್ಕೆ ಶುಭ ಸುದ್ದಿ’ ಎಂದು ವರದಿ ಮಾಡಿದೆ. ಅಮೂಲ್ಯಾ ಅವರು ಗರ್ಭಿಣಿ ಆಗಿರುವುದನ್ನು ‘ಮೆಘಾ ಬ್ರೇಕಿಂಗ್’ ಸುದ್ದಿ ಎಂದು ಉಲ್ಲೇಖಿಸಿರುವ ಬಿಟಿವಿ, “ಉಲ್ಲಾಸದ ಹೂಮಳೆ ಸುರಿಸುವ ಖುಷಿಖುಷಿಯ ಸುದ್ದಿ, ಸ್ಯಾಂಡಲ್‌ವುಡ್‌ ಅಭಿಮಾನಿಗಳಿಗೆ ಭರ್ಜರಿ ಗುಡ್‌ ನ್ಯೂಸ್, ಇಡೀ ರಾಜ್ಯ ಖುಷಿ ಪಡುವ ಸುದ್ದಿ-ನಟಿ ಅಮೂಲ್ಯಾ ಪ್ರಗ್ನೆಂಟ್‌” ಎಂದು ಸ್ಕ್ರೀನ್‌ನಲ್ಲಿ ಬರೆದು ವೀಕ್ಷಕರಿಗೆ ಸುದ್ದಿಯನ್ನು ತಿಳಿಸಿದೆ.

 ಇದನ್ನೂ ಓದಿ:ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರ ಬಂಧನ: ರಾಹುಲ್ ಗಾಂಧಿ, ಮಾಧ್ಯಮ ಸಂಸ್ಥೆಗಳಿಂದ ಖಂಡನೆ

ಆದರೆ ಪ್ರಜ್ಞಾವಂತರು ಬಿಟಿವಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಟ್ರೋಲ್ ಕೂಡಾ ಮಾಡಲಾಗುತ್ತಿದೆ.

ಇರ್ಶಾದ್ ಯುಟಿ ಅವರು, ‘ಈ ಮಟ್ಟಕ್ಕೆ ನಮ್ಮ ಕನ್ನಡದ ಸುದ್ದಿಮಾಧ್ಯಮಗಳು ಇಳಿದಿರುವುದು ನಾಚಿಕೆಯಿಲ್ಲವೇ…???’

ಚಿಂತಕ ಡಾ.ವಡ್ಡಗೆರೆ ನಾಗರಾಜಯ್ಯ ಅವರು, “ಕೇವಲ ಕರ್ನಾಟಕ ರಾಜ್ಯವಷ್ಟೇ ಅಲ್ಲದೆ ಇಡೀ ವಿಶ್ವದ ಕನ್ನಡಿಗರು ಖುಶಿಪಡಬೇಕಾದ ಸುದ್ದಿ ಇದು!. Btv ಕಂಜೂಸುಗಳು ಅಮೂಲ್ಯ ಬಸಿರಾಗಿರುವ ಖುಶಿಯ ಸುದ್ದಿಯನ್ನು ಕೇವಲ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತಗೊಳಿಸಿದ್ದಾರೆ!!” ಎಂದು ವ್ಯಂಗ್ಯವಾಡಿದ್ದಾರೆ.

“ಮಾನವನ ಜನ್ಮದಲ್ಲಿ ಹಿಂದೆಯೂ ಆಗಲಿಲ್ಲ ಮುಂದೆಯೂ ಆಗುವುದಿಲ್ಲ ಇಂದು ಇತಿಹಾಸ ಸೃಷ್ಟಿಸುವ ನಟಿ ಅಮೂಲ್ಯ ಅವರ ತಾಯಿತನ. ಬಿಟಿವಿ ಗೆ ಬೇರೆ ಸುದ್ದಿ ಸಿಕ್ಕಿಲ್ಲ”

ಪತ್ರಕರ್ತ ನಿಖಿಲ್ ಕೊಲ್ಪೆ, “ಬಿಟಿವಿಯ ಅತ್ಯಂತ ಮಹತ್ವದ ಸ್ಫೋಟಕ “ಪ್ರೆಗ್ನೆಂಟ್ ಸುದ್ದಿ”ಯ ಬಗ್ಗೆ ತನಿಖಾ ವರದಿ ಪ್ರಸಾರವಾಗಲಿ! ಈ ಅಧಿವೇಶನದಲ್ಲಿ ಗಂಭೀರ ಚರ್ಚೆಯಾಗಲಿ!” ಎಂದು ವ್ಯಂಗ್ಯವಾಡಿದ್ದಾರೆ.

“ಕರ್ನಾಟಕದ ಸುತ್ತಮುತ್ತಲಿನ ರಾಜ್ಯಗಳ ಪತ್ರಕರ್ತರು, ನಮ್ಮ ರಾಜ್ಯದ ಕೆಲ! ‘ಮೂರೂ ಬಿಟ್ಟ ಮಾಧ್ಯಮಗಳ’ ವರದಿಗಳನ್ನು ನೋಡಬೇಕು. ನಾವು ಅವರಿಗೆ ತಿಳಿಸಬೇಕು. ಇವರು ಮಾಡುವ ನಾಲಾಯಕ್ ವರದಿಗಳನ್ನು ನೋಡಿ ಆವರ ಚಾನಲ್‌ಗಳಲ್ಲಿ ಇವರಿಗೆ ಉಗಿಯಬೇಕು… ಮಲಯಾಳಿಗಳಿಗೆ ತಿಳಿದರೆ ಖಂಡಿತವಾಗಿಯೂ ಟ್ರೋಲ್ ಮಾಡಿ ಇವರನ್ನು ಬೆನ್ನಟ್ಟಿ ಕೊಲ್ಲುತ್ತಾರೆ”

ಇದನ್ನೂ ಓದಿ:ಲಖೀಂಪುರ್ ರೈತ ಹತ್ಯೆ; ಅಧಿಕಾರದ ಪರವಾಗಿ ನಿಂತ ಮಾಧ್ಯಮಗಳ ದುರುಳತನ

ಇದನ್ನೂ ಓದಿ:ಭಾರತ್ ಬಂದ್ ಕುರಿತು ವರದಿ; ಮಾಧ್ಯಮಗಳಿಗೆ ನೈತಿಕ ಜವಾಬ್ದಾರಿ ಇಲ್ಲವೇ?

ಇದನ್ನೂ ಓದಿ:ಮೋದಿ ಮುಂದೆಯೆ ಭಾರತೀಯ ಮಾಧ್ಯಮಗಳ ಬಗ್ಗೆ ಬಿಡೆನ್ ವ್ಯಂಗ್ಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...